Homeಮುಖಪುಟಎರಡನೇ ಸುತ್ತಿನ ಜಾತಿ ಸಮೀಕ್ಷೆಗೆ ಮುಂದಾದ ತೆಲಂಗಾಣದ ಕಾಂಗ್ರೆಸ್ ಸರ್ಕಾರ!

ಎರಡನೇ ಸುತ್ತಿನ ಜಾತಿ ಸಮೀಕ್ಷೆಗೆ ಮುಂದಾದ ತೆಲಂಗಾಣದ ಕಾಂಗ್ರೆಸ್ ಸರ್ಕಾರ!

- Advertisement -
- Advertisement -

ಫೆಬ್ರವರಿ 16 ರಿಂದ ಫೆಬ್ರವರಿ 28 ರವರೆಗೆ ಎರಡನೇ ಸುತ್ತಿನ ಜಾತಿ ಸಮೀಕ್ಷೆಯನ್ನು ನಡೆಸುವುದಾಗಿ ತೆಲಂಗಾಣ ಸರ್ಕಾರ ಬುಧವಾರ ಹೇಳಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ನಡೆದ ಸಮೀಕ್ಷೆಯ ಮೊದಲ ಹಂತದಲ್ಲಿ ಭಾಗವಹಿಸದ ರಾಜ್ಯದ ಜನಸಂಖ್ಯೆಯ 3.1% ಜನರನ್ನು ಈ ಸಮೀಕ್ಷೆ ಒಳಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಹೇಳಿದ್ದಾರೆ.

ಈ ವೇಳೆ ನಾಗರಿಕರು ಎರಡನೇ ಸುತ್ತಿನಲ್ಲಿ ತಮ್ಮ ಡೇಟಾವನ್ನು ನವೀಕರಿಸಲು ಪ್ರಯತ್ನಿಸಬಹುದು ಎಂದು ಅವರು ಹೇಳಿದ್ದು, ಜೊತೆಗೆ ಇತರ ಹಿಂದುಳಿದ ಜಾತಿಗಳಿಗೆ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ 42% ಮೀಸಲಾತಿ ನೀಡುವ ತಮ್ಮ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಎರಡನೇ ಸುತ್ತಿನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಫೆಬ್ರವರಿ 4 ರಂದು ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆಯನ್ನು ಮಂಡಿಸಿದ್ದರು. ಮುಸ್ಲಿಮರು ಸೇರಿದಂತೆ ಹಿಂದುಳಿದ ವರ್ಗಗಳು ರಾಜ್ಯದ ಜನಸಂಖ್ಯೆಯಲ್ಲಿ 56.33% ರಷ್ಟಿವೆ ಎಂದು ಸಮೀಕ್ಷೆಯು ಹೇಳಿದೆ. ಮುಸ್ಲಿಮರನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪಾಲು 46.25%ದಷ್ಟು ಇದೆ.

ಜನಸಂಖ್ಯೆಯಲ್ಲಿ ಪರಿಶಿಷ್ಟ ಜಾತಿಗಳು 17.4% ಅಥವಾ 61.8 ಲಕ್ಷ ಜನರನ್ನು ಒಳಗೊಂಡಿವೆ ಮತ್ತು ಪರಿಶಿಷ್ಟ ಪಂಗಡಗಳು 10.4% ಅಥವಾ 37 ಲಕ್ಷ ಜನರನ್ನು ಹೊಂದಿವೆ.

ಅದಾಗ್ಯೂ, ಸಮೀಕ್ಷೆಯ ಫಲಿತಾಂಶಗಳ ಬಗ್ಗೆ ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಭಾರತ ರಾಷ್ಟ್ರ ಸಮಿತಿ ಅಸಮಾಧಾನ ವ್ಯಕ್ತಪಡಿಸಿದ್ದು, ತೀವ್ರವಾಗಿ ವಿರೋಧಿಸುತ್ತಿವೆ.

ಮುಸ್ಲಿಮರನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಎಂದಿಗೂ ಸ್ವೀಕರಿಸಲಾಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಂಡಿ ಸಂಜಯ್ ಗುರುವಾರ ಹೇಳಿದ್ದಾರೆ. “ಬಿಜೆಪಿ ಧಾರ್ಮಿಕ ಆಧಾರಿತ ಮೀಸಲಾತಿಯನ್ನು ನಿಸ್ಸಂದಿಗ್ಧವಾಗಿ ವಿರೋಧಿಸುತ್ತದೆ. ಇದರ ಬಗ್ಗೆ ತಿಳಿದಿದ್ದರೂ, ಕಾಂಗ್ರೆಸ್ ಇನ್ನೂ ಅದನ್ನು ಕೇಂದ್ರದ ಮೇಲೆ ಹೇರಲು ಪ್ರಯತ್ನಿಸುತ್ತಿರುವುದು ಶುದ್ಧ ಮೂರ್ಖತನ.” ಎಂದು ಅವರು ಹೇಳಿದ್ದಾರೆ.

ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಜಾರಿಗೆ ತರುವಲ್ಲಿ ಕಾಂಗ್ರೆಸ್ ಪ್ರಾಮಾಣಿಕವಾಗಿಲ್ಲ ಎಂದು ಸಂಜಯ್ ಆರೋಪಿಸಿದ್ದಾರೆ.

2014 ರಲ್ಲಿ 51% ರಷ್ಟಿದ್ದ ಹಿಂದುಳಿದ ವರ್ಗಗಳ ಪಾಲನ್ನು ಈ ವರ್ಷ 46% ಕ್ಕೆ ಇಳಿಸಿದ್ದಕ್ಕಾಗಿ ಸಿಎಂ ರೇವಂತ್ ರೆಡ್ಡಿ ಬೇಷರತ್ತಾಗಿ ಕ್ಷಮೆಯಾಚಿಸಬೇಕು ಎಂದು ಭಾರತ ರಾಷ್ಟ್ರ ಸಮಿತಿ ಅಧ್ಯಕ್ಷ ಕೆ.ಟಿ. ರಾಮರಾವ್ ಬುಧವಾರ ಒತ್ತಾಯಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಜೊತೆಗೆ, ಎರಡನೇ ಸುತ್ತಿನ ಸಮೀಕ್ಷೆಯನ್ನು ನಡೆಸುವ ನಿರ್ಧಾರವನ್ನು ಅವರು ಸ್ವಾಗತಿಸಿದ್ದಾರೆ.

ಡಿಸೆಂಬರ್ 2023 ರಲ್ಲಿ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಜಾತಿ ಸಮೀಕ್ಷೆಯೂ ಒಂದಾಗಿತ್ತು. ಈ ಚುನಾವಣೆಯಲ್ಲಿ ಭಾರತ ರಾಷ್ಟ್ರ ಸಮಿತಿಯನ್ನು ಕಾಂಗ್ರೆಸ್ ಸೋಲಿಸಿ ಚುನಾವಣೆಯಲ್ಲಿ ಗೆದ್ದಿತು.

ಬಿಹಾರ ಮತ್ತು ಆಂಧ್ರಪ್ರದೇಶದ ನಂತರ ಜಾತಿ ಸಮೀಕ್ಷೆಯನ್ನು ನಡೆಸಿದ ಮೂರನೇ ರಾಜ್ಯ ತೆಲಂಗಾಣವಾಗಿದೆ.

ಇದನ್ನೂಓದಿ:  ಜನಾಕ್ರೋಶಕ್ಕೆ ಮಣಿದ ಬಿಎಂಆರ್‌ಸಿಎಲ್; ನಮ್ಮ ಮೆಟ್ರೋ ದರ ಶೇ. 30 ರಷ್ಟು ಇಳಿಕೆ!

ಜನಾಕ್ರೋಶಕ್ಕೆ ಮಣಿದ ಬಿಎಂಆರ್‌ಸಿಎಲ್; ನಮ್ಮ ಮೆಟ್ರೋ ದರ ಶೇ. 30 ರಷ್ಟು ಇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...