Homeಮುಖಪುಟಎರಡನೇ ಸುತ್ತಿನ ಜಾತಿ ಸಮೀಕ್ಷೆಗೆ ಮುಂದಾದ ತೆಲಂಗಾಣದ ಕಾಂಗ್ರೆಸ್ ಸರ್ಕಾರ!

ಎರಡನೇ ಸುತ್ತಿನ ಜಾತಿ ಸಮೀಕ್ಷೆಗೆ ಮುಂದಾದ ತೆಲಂಗಾಣದ ಕಾಂಗ್ರೆಸ್ ಸರ್ಕಾರ!

- Advertisement -
- Advertisement -

ಫೆಬ್ರವರಿ 16 ರಿಂದ ಫೆಬ್ರವರಿ 28 ರವರೆಗೆ ಎರಡನೇ ಸುತ್ತಿನ ಜಾತಿ ಸಮೀಕ್ಷೆಯನ್ನು ನಡೆಸುವುದಾಗಿ ತೆಲಂಗಾಣ ಸರ್ಕಾರ ಬುಧವಾರ ಹೇಳಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ನಡೆದ ಸಮೀಕ್ಷೆಯ ಮೊದಲ ಹಂತದಲ್ಲಿ ಭಾಗವಹಿಸದ ರಾಜ್ಯದ ಜನಸಂಖ್ಯೆಯ 3.1% ಜನರನ್ನು ಈ ಸಮೀಕ್ಷೆ ಒಳಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಹೇಳಿದ್ದಾರೆ.

ಈ ವೇಳೆ ನಾಗರಿಕರು ಎರಡನೇ ಸುತ್ತಿನಲ್ಲಿ ತಮ್ಮ ಡೇಟಾವನ್ನು ನವೀಕರಿಸಲು ಪ್ರಯತ್ನಿಸಬಹುದು ಎಂದು ಅವರು ಹೇಳಿದ್ದು, ಜೊತೆಗೆ ಇತರ ಹಿಂದುಳಿದ ಜಾತಿಗಳಿಗೆ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ 42% ಮೀಸಲಾತಿ ನೀಡುವ ತಮ್ಮ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಎರಡನೇ ಸುತ್ತಿನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಫೆಬ್ರವರಿ 4 ರಂದು ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆಯನ್ನು ಮಂಡಿಸಿದ್ದರು. ಮುಸ್ಲಿಮರು ಸೇರಿದಂತೆ ಹಿಂದುಳಿದ ವರ್ಗಗಳು ರಾಜ್ಯದ ಜನಸಂಖ್ಯೆಯಲ್ಲಿ 56.33% ರಷ್ಟಿವೆ ಎಂದು ಸಮೀಕ್ಷೆಯು ಹೇಳಿದೆ. ಮುಸ್ಲಿಮರನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪಾಲು 46.25%ದಷ್ಟು ಇದೆ.

ಜನಸಂಖ್ಯೆಯಲ್ಲಿ ಪರಿಶಿಷ್ಟ ಜಾತಿಗಳು 17.4% ಅಥವಾ 61.8 ಲಕ್ಷ ಜನರನ್ನು ಒಳಗೊಂಡಿವೆ ಮತ್ತು ಪರಿಶಿಷ್ಟ ಪಂಗಡಗಳು 10.4% ಅಥವಾ 37 ಲಕ್ಷ ಜನರನ್ನು ಹೊಂದಿವೆ.

ಅದಾಗ್ಯೂ, ಸಮೀಕ್ಷೆಯ ಫಲಿತಾಂಶಗಳ ಬಗ್ಗೆ ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಭಾರತ ರಾಷ್ಟ್ರ ಸಮಿತಿ ಅಸಮಾಧಾನ ವ್ಯಕ್ತಪಡಿಸಿದ್ದು, ತೀವ್ರವಾಗಿ ವಿರೋಧಿಸುತ್ತಿವೆ.

ಮುಸ್ಲಿಮರನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಎಂದಿಗೂ ಸ್ವೀಕರಿಸಲಾಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಂಡಿ ಸಂಜಯ್ ಗುರುವಾರ ಹೇಳಿದ್ದಾರೆ. “ಬಿಜೆಪಿ ಧಾರ್ಮಿಕ ಆಧಾರಿತ ಮೀಸಲಾತಿಯನ್ನು ನಿಸ್ಸಂದಿಗ್ಧವಾಗಿ ವಿರೋಧಿಸುತ್ತದೆ. ಇದರ ಬಗ್ಗೆ ತಿಳಿದಿದ್ದರೂ, ಕಾಂಗ್ರೆಸ್ ಇನ್ನೂ ಅದನ್ನು ಕೇಂದ್ರದ ಮೇಲೆ ಹೇರಲು ಪ್ರಯತ್ನಿಸುತ್ತಿರುವುದು ಶುದ್ಧ ಮೂರ್ಖತನ.” ಎಂದು ಅವರು ಹೇಳಿದ್ದಾರೆ.

ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಜಾರಿಗೆ ತರುವಲ್ಲಿ ಕಾಂಗ್ರೆಸ್ ಪ್ರಾಮಾಣಿಕವಾಗಿಲ್ಲ ಎಂದು ಸಂಜಯ್ ಆರೋಪಿಸಿದ್ದಾರೆ.

2014 ರಲ್ಲಿ 51% ರಷ್ಟಿದ್ದ ಹಿಂದುಳಿದ ವರ್ಗಗಳ ಪಾಲನ್ನು ಈ ವರ್ಷ 46% ಕ್ಕೆ ಇಳಿಸಿದ್ದಕ್ಕಾಗಿ ಸಿಎಂ ರೇವಂತ್ ರೆಡ್ಡಿ ಬೇಷರತ್ತಾಗಿ ಕ್ಷಮೆಯಾಚಿಸಬೇಕು ಎಂದು ಭಾರತ ರಾಷ್ಟ್ರ ಸಮಿತಿ ಅಧ್ಯಕ್ಷ ಕೆ.ಟಿ. ರಾಮರಾವ್ ಬುಧವಾರ ಒತ್ತಾಯಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಜೊತೆಗೆ, ಎರಡನೇ ಸುತ್ತಿನ ಸಮೀಕ್ಷೆಯನ್ನು ನಡೆಸುವ ನಿರ್ಧಾರವನ್ನು ಅವರು ಸ್ವಾಗತಿಸಿದ್ದಾರೆ.

ಡಿಸೆಂಬರ್ 2023 ರಲ್ಲಿ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಜಾತಿ ಸಮೀಕ್ಷೆಯೂ ಒಂದಾಗಿತ್ತು. ಈ ಚುನಾವಣೆಯಲ್ಲಿ ಭಾರತ ರಾಷ್ಟ್ರ ಸಮಿತಿಯನ್ನು ಕಾಂಗ್ರೆಸ್ ಸೋಲಿಸಿ ಚುನಾವಣೆಯಲ್ಲಿ ಗೆದ್ದಿತು.

ಬಿಹಾರ ಮತ್ತು ಆಂಧ್ರಪ್ರದೇಶದ ನಂತರ ಜಾತಿ ಸಮೀಕ್ಷೆಯನ್ನು ನಡೆಸಿದ ಮೂರನೇ ರಾಜ್ಯ ತೆಲಂಗಾಣವಾಗಿದೆ.

ಇದನ್ನೂಓದಿ:  ಜನಾಕ್ರೋಶಕ್ಕೆ ಮಣಿದ ಬಿಎಂಆರ್‌ಸಿಎಲ್; ನಮ್ಮ ಮೆಟ್ರೋ ದರ ಶೇ. 30 ರಷ್ಟು ಇಳಿಕೆ!

ಜನಾಕ್ರೋಶಕ್ಕೆ ಮಣಿದ ಬಿಎಂಆರ್‌ಸಿಎಲ್; ನಮ್ಮ ಮೆಟ್ರೋ ದರ ಶೇ. 30 ರಷ್ಟು ಇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...