Homeಮುಖಪುಟದೆಹಲಿ ವಿಧಾನಸಭೆಯಿಂದ ಕೆಂಪು ಕೋಟೆಗೆ ಸುರಂಗ ಮಾರ್ಗ- 2016 ರಲ್ಲಿ ಬಿಬಿಸಿಯಲ್ಲಿ ವರದಿಯಾಗಿತ್ತು

ದೆಹಲಿ ವಿಧಾನಸಭೆಯಿಂದ ಕೆಂಪು ಕೋಟೆಗೆ ಸುರಂಗ ಮಾರ್ಗ- 2016 ರಲ್ಲಿ ಬಿಬಿಸಿಯಲ್ಲಿ ವರದಿಯಾಗಿತ್ತು

- Advertisement -
- Advertisement -

ದೆಹಲಿ ವಿಧಾನಸಭೆಯಲ್ಲಿ ಸುರಂಗ ಮಾರ್ಗವೊಂದು ಪತ್ತೆಯಾಗಿದ್ದು, ಸ್ವಾತಂತ್ರ್ಯ ಹೋರಾಟ ನಡೆಯುತ್ತಿದ್ದ ಸಂದರ್ಭದಲ್ಲಿ ಬ್ರಿಟಿಷರು ಸ್ವಾತಂತ್ರ್ಯ ಹೋರಾಟಗಾರರನ್ನು ಹತ್ತಿಕ್ಕಲು ಈ ಸುರಂಗವನ್ನು ಬಳಸುತ್ತಿದ್ದರು ಹೇಳಲಾಗಿದೆ. ಆದರೆ ಈ ಸುರಂಗದ ಬಗ್ಗೆ 2016 ರಲ್ಲಿ ಬಿಬಿಸಿ ಸುದ್ದಿ ಮಾಡಿ, ವಿಡಿಯೊ ಬಹಿರಂಗಪಡಿಸಿತ್ತು.

ಈಗ ಮತ್ತೆ ಹಳೆ ಸುದ್ದಿಗೆ ಜೀವ ಬಂದಿದ್ದು, ರಾಷ್ಟ್ರೀಯ ಮಾಧ್ಯಮಗಳು ಈ ಬಗ್ಗೆ ವರದಿ ಮಾಡುತ್ತಿವೆ. ಬಿಬಿಸಿ 2016 ರ ಮಾರ್ಚ್ 26 ರಂದು ಈ ಸುರಂಗ ಮಾರ್ಗದ ಬಗ್ಗೆ ಸುದ್ದಿ ಮಾಡಿ, ವಿಡಿಯೊ ಕೂಡ ಬಹಿರಂಗ ಪಡಿಸಿತ್ತು. ಜೊತೆಗೆ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರು ಮತ್ತು ಇತಿಹಾಸಕಾರ ವಿಲಿಯಂ ಡಾಲ್ರಿಂಪಲ್ ಅವರ ಹೇಳಿಕೆಗಳನ್ನು ದಾಖಲಿಸಿತ್ತು.

“ಈ ಸುರಂಗ ಮಾರ್ಗವು ವಿಧಾನಸಭೆಯಿಂದ ಕೆಂಪು ಕೋಟೆಗೆ ಸಂಪರ್ಕಿಸುತ್ತದೆ. ಬ್ರಿಟಿಷರು ಇದನ್ನು ಬಳಸುತ್ತಿದ್ದರು ಎಂದು ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಹೇಳಿದ್ದಾರೆ.

“ನಾನು 1993ರಲ್ಲಿ ಶಾಸಕರಾಗಿ ಆಯ್ಕೆಯಾದಾಗ ವಿಧಾನಸಭೆಯಿಂದ ಕೆಂಪುಕೋಟೆಗೆ ಸಂಪರ್ಕಿಸುವ ಸುರಂಗದ ಬಗ್ಗೆ ಕೇಳಿದ್ದೆ. ನಾನು ಅದರ ಇತಿಹಾಸವನ್ನು ಹುಡುಕಲು ಪ್ರಯತ್ನಿಸಿದ್ದೆ. ಆದರೆ ಅದರ ಬಗ್ಗೆ ಸ್ಪಷ್ಟತೆ ಇರಲಿಲ್ಲ” ಎಂದು ಈಗ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ಮತ್ತೊಬ್ಬ ಮಹಿಳೆಗಾಗಿ ಹೆಂಡತಿ, ಪುಟ್ಟ ಮಕ್ಕಳನ್ನು ಕೊಂದು, ಮನೆಯಲ್ಲಿ ಹೂತು ಪರಾರಿಯಾಗಿದ್ದ ವ್ಯಕ್ತಿ ಬಂಧನ

“ಈಗ ನಮಗೆ ಸುರಂಗದ ದ್ವಾರ ಪತ್ತೆಯಾಗಿದೆ. ಆದರೆ ಮೆಟ್ರೋ ಯೋಜನೆಗಳು ಮತ್ತು ಒಳಚರಂಡಿ ಸ್ಥಾಪನೆಯಿಂದಾಗಿ ಸುರಂಗದ ಎಲ್ಲಾ ಮಾರ್ಗಗಳು ನಾಶವಾಗಿದ್ದು, ನಾವು ಅದನ್ನು ಮತ್ತಷ್ಟು ಅಗೆಯುತ್ತಿಲ್ಲ” ಎಂದು ಹೇಳಿದ್ದಾರೆ.

“1912ರಲ್ಲಿ ಕೋಲ್ಕತ್ತಾದಿಂದ ದೆಹಲಿಗೆ ರಾಜಧಾನಿಯನ್ನು ವರ್ಗಾಯಿಸಿದ ನಂತರ ಕೇಂದ್ರ ಶಾಸಕಾಂಗ ಸಭೆಯಾಗಿ ಬಳಸಲಾಗುತ್ತಿದ್ದ ದೆಹಲಿ ವಿಧಾನ ಸಭೆಯನ್ನು 1926 ರಲ್ಲಿ ನ್ಯಾಯಾಲಯವಾಗಿ ಪರಿವರ್ತಿಸಲಾಗಿತ್ತು. ಬ್ರಿಟಿಷರು ಈ ಸುರಂಗವನ್ನು ಸ್ವಾತಂತ್ರ್ಯ ಹೋರಾಟಗಾರರನ್ನು ನ್ಯಾಯಾಲಯಕ್ಕೆ ಕರೆತರಲು ಬಳಸಿದ್ದರು” ಎಂದು ಗೋಯೆಲ್ ಮಾಹಿತಿ ನೀಡಿದ್ದಾರೆ.

“ಇಲ್ಲಿ ಗಲ್ಲು ಶಿಕ್ಷೆ ನೀಡುತ್ತಿದ್ದ ಕೋಣೆಯಿತ್ತು ಎಂಬುದರ ಬಗ್ಗೆ ನಮಗೆಲ್ಲರಿಗೂ ತಿಳಿದಿತ್ತು. ಆದರೆ ಅದನ್ನು ಎಂದಿಗೂ ತೆರೆಯಲಿಲ್ಲ. ಈಗ ಸ್ವಾತಂತ್ರ್ಯದ 75 ನೇ ವರ್ಷವಾಗಿದೆ. ಹೀಗಾಗಿ, ನಾನು ಆ ಕೊಠಡಿಯನ್ನು ಪರೀಕ್ಷಿಸಲು ನಿರ್ಧರಿಸಿದೆ. ನಾವು ಆ ಕೊಠಡಿಯನ್ನು ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವವನ್ನು ನೀಡುವ ದೇಗುಲವಾಗಿ ಬದಲಾಯಿಸುವ ಉದ್ದೇಶ ಹೊಂದಿದ್ದೇವೆ” ಎಂದು ಹೇಳಿದ್ದಾರೆ.

ಬಿಬಿಸಿ 2016 ರಲ್ಲಿ ಬಿಡುಗಡೆ ಮಾಡಿದ ಸುರಂಗದ ವರದಿ ಮತ್ತು ವಿಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...