Homeಮುಖಪುಟದೆಹಲಿ ವಿಧಾನಸಭೆಯಿಂದ ಕೆಂಪು ಕೋಟೆಗೆ ಸುರಂಗ ಮಾರ್ಗ- 2016 ರಲ್ಲಿ ಬಿಬಿಸಿಯಲ್ಲಿ ವರದಿಯಾಗಿತ್ತು

ದೆಹಲಿ ವಿಧಾನಸಭೆಯಿಂದ ಕೆಂಪು ಕೋಟೆಗೆ ಸುರಂಗ ಮಾರ್ಗ- 2016 ರಲ್ಲಿ ಬಿಬಿಸಿಯಲ್ಲಿ ವರದಿಯಾಗಿತ್ತು

- Advertisement -
- Advertisement -

ದೆಹಲಿ ವಿಧಾನಸಭೆಯಲ್ಲಿ ಸುರಂಗ ಮಾರ್ಗವೊಂದು ಪತ್ತೆಯಾಗಿದ್ದು, ಸ್ವಾತಂತ್ರ್ಯ ಹೋರಾಟ ನಡೆಯುತ್ತಿದ್ದ ಸಂದರ್ಭದಲ್ಲಿ ಬ್ರಿಟಿಷರು ಸ್ವಾತಂತ್ರ್ಯ ಹೋರಾಟಗಾರರನ್ನು ಹತ್ತಿಕ್ಕಲು ಈ ಸುರಂಗವನ್ನು ಬಳಸುತ್ತಿದ್ದರು ಹೇಳಲಾಗಿದೆ. ಆದರೆ ಈ ಸುರಂಗದ ಬಗ್ಗೆ 2016 ರಲ್ಲಿ ಬಿಬಿಸಿ ಸುದ್ದಿ ಮಾಡಿ, ವಿಡಿಯೊ ಬಹಿರಂಗಪಡಿಸಿತ್ತು.

ಈಗ ಮತ್ತೆ ಹಳೆ ಸುದ್ದಿಗೆ ಜೀವ ಬಂದಿದ್ದು, ರಾಷ್ಟ್ರೀಯ ಮಾಧ್ಯಮಗಳು ಈ ಬಗ್ಗೆ ವರದಿ ಮಾಡುತ್ತಿವೆ. ಬಿಬಿಸಿ 2016 ರ ಮಾರ್ಚ್ 26 ರಂದು ಈ ಸುರಂಗ ಮಾರ್ಗದ ಬಗ್ಗೆ ಸುದ್ದಿ ಮಾಡಿ, ವಿಡಿಯೊ ಕೂಡ ಬಹಿರಂಗ ಪಡಿಸಿತ್ತು. ಜೊತೆಗೆ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರು ಮತ್ತು ಇತಿಹಾಸಕಾರ ವಿಲಿಯಂ ಡಾಲ್ರಿಂಪಲ್ ಅವರ ಹೇಳಿಕೆಗಳನ್ನು ದಾಖಲಿಸಿತ್ತು.

“ಈ ಸುರಂಗ ಮಾರ್ಗವು ವಿಧಾನಸಭೆಯಿಂದ ಕೆಂಪು ಕೋಟೆಗೆ ಸಂಪರ್ಕಿಸುತ್ತದೆ. ಬ್ರಿಟಿಷರು ಇದನ್ನು ಬಳಸುತ್ತಿದ್ದರು ಎಂದು ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಹೇಳಿದ್ದಾರೆ.

“ನಾನು 1993ರಲ್ಲಿ ಶಾಸಕರಾಗಿ ಆಯ್ಕೆಯಾದಾಗ ವಿಧಾನಸಭೆಯಿಂದ ಕೆಂಪುಕೋಟೆಗೆ ಸಂಪರ್ಕಿಸುವ ಸುರಂಗದ ಬಗ್ಗೆ ಕೇಳಿದ್ದೆ. ನಾನು ಅದರ ಇತಿಹಾಸವನ್ನು ಹುಡುಕಲು ಪ್ರಯತ್ನಿಸಿದ್ದೆ. ಆದರೆ ಅದರ ಬಗ್ಗೆ ಸ್ಪಷ್ಟತೆ ಇರಲಿಲ್ಲ” ಎಂದು ಈಗ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ಮತ್ತೊಬ್ಬ ಮಹಿಳೆಗಾಗಿ ಹೆಂಡತಿ, ಪುಟ್ಟ ಮಕ್ಕಳನ್ನು ಕೊಂದು, ಮನೆಯಲ್ಲಿ ಹೂತು ಪರಾರಿಯಾಗಿದ್ದ ವ್ಯಕ್ತಿ ಬಂಧನ

“ಈಗ ನಮಗೆ ಸುರಂಗದ ದ್ವಾರ ಪತ್ತೆಯಾಗಿದೆ. ಆದರೆ ಮೆಟ್ರೋ ಯೋಜನೆಗಳು ಮತ್ತು ಒಳಚರಂಡಿ ಸ್ಥಾಪನೆಯಿಂದಾಗಿ ಸುರಂಗದ ಎಲ್ಲಾ ಮಾರ್ಗಗಳು ನಾಶವಾಗಿದ್ದು, ನಾವು ಅದನ್ನು ಮತ್ತಷ್ಟು ಅಗೆಯುತ್ತಿಲ್ಲ” ಎಂದು ಹೇಳಿದ್ದಾರೆ.

“1912ರಲ್ಲಿ ಕೋಲ್ಕತ್ತಾದಿಂದ ದೆಹಲಿಗೆ ರಾಜಧಾನಿಯನ್ನು ವರ್ಗಾಯಿಸಿದ ನಂತರ ಕೇಂದ್ರ ಶಾಸಕಾಂಗ ಸಭೆಯಾಗಿ ಬಳಸಲಾಗುತ್ತಿದ್ದ ದೆಹಲಿ ವಿಧಾನ ಸಭೆಯನ್ನು 1926 ರಲ್ಲಿ ನ್ಯಾಯಾಲಯವಾಗಿ ಪರಿವರ್ತಿಸಲಾಗಿತ್ತು. ಬ್ರಿಟಿಷರು ಈ ಸುರಂಗವನ್ನು ಸ್ವಾತಂತ್ರ್ಯ ಹೋರಾಟಗಾರರನ್ನು ನ್ಯಾಯಾಲಯಕ್ಕೆ ಕರೆತರಲು ಬಳಸಿದ್ದರು” ಎಂದು ಗೋಯೆಲ್ ಮಾಹಿತಿ ನೀಡಿದ್ದಾರೆ.

“ಇಲ್ಲಿ ಗಲ್ಲು ಶಿಕ್ಷೆ ನೀಡುತ್ತಿದ್ದ ಕೋಣೆಯಿತ್ತು ಎಂಬುದರ ಬಗ್ಗೆ ನಮಗೆಲ್ಲರಿಗೂ ತಿಳಿದಿತ್ತು. ಆದರೆ ಅದನ್ನು ಎಂದಿಗೂ ತೆರೆಯಲಿಲ್ಲ. ಈಗ ಸ್ವಾತಂತ್ರ್ಯದ 75 ನೇ ವರ್ಷವಾಗಿದೆ. ಹೀಗಾಗಿ, ನಾನು ಆ ಕೊಠಡಿಯನ್ನು ಪರೀಕ್ಷಿಸಲು ನಿರ್ಧರಿಸಿದೆ. ನಾವು ಆ ಕೊಠಡಿಯನ್ನು ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವವನ್ನು ನೀಡುವ ದೇಗುಲವಾಗಿ ಬದಲಾಯಿಸುವ ಉದ್ದೇಶ ಹೊಂದಿದ್ದೇವೆ” ಎಂದು ಹೇಳಿದ್ದಾರೆ.

ಬಿಬಿಸಿ 2016 ರಲ್ಲಿ ಬಿಡುಗಡೆ ಮಾಡಿದ ಸುರಂಗದ ವರದಿ ಮತ್ತು ವಿಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....