Homeಮುಖಪುಟದೆಹಲಿ ವಿಧಾನಸಭೆಯಿಂದ ಕೆಂಪು ಕೋಟೆಗೆ ಸುರಂಗ ಮಾರ್ಗ- 2016 ರಲ್ಲಿ ಬಿಬಿಸಿಯಲ್ಲಿ ವರದಿಯಾಗಿತ್ತು

ದೆಹಲಿ ವಿಧಾನಸಭೆಯಿಂದ ಕೆಂಪು ಕೋಟೆಗೆ ಸುರಂಗ ಮಾರ್ಗ- 2016 ರಲ್ಲಿ ಬಿಬಿಸಿಯಲ್ಲಿ ವರದಿಯಾಗಿತ್ತು

- Advertisement -
- Advertisement -

ದೆಹಲಿ ವಿಧಾನಸಭೆಯಲ್ಲಿ ಸುರಂಗ ಮಾರ್ಗವೊಂದು ಪತ್ತೆಯಾಗಿದ್ದು, ಸ್ವಾತಂತ್ರ್ಯ ಹೋರಾಟ ನಡೆಯುತ್ತಿದ್ದ ಸಂದರ್ಭದಲ್ಲಿ ಬ್ರಿಟಿಷರು ಸ್ವಾತಂತ್ರ್ಯ ಹೋರಾಟಗಾರರನ್ನು ಹತ್ತಿಕ್ಕಲು ಈ ಸುರಂಗವನ್ನು ಬಳಸುತ್ತಿದ್ದರು ಹೇಳಲಾಗಿದೆ. ಆದರೆ ಈ ಸುರಂಗದ ಬಗ್ಗೆ 2016 ರಲ್ಲಿ ಬಿಬಿಸಿ ಸುದ್ದಿ ಮಾಡಿ, ವಿಡಿಯೊ ಬಹಿರಂಗಪಡಿಸಿತ್ತು.

ಈಗ ಮತ್ತೆ ಹಳೆ ಸುದ್ದಿಗೆ ಜೀವ ಬಂದಿದ್ದು, ರಾಷ್ಟ್ರೀಯ ಮಾಧ್ಯಮಗಳು ಈ ಬಗ್ಗೆ ವರದಿ ಮಾಡುತ್ತಿವೆ. ಬಿಬಿಸಿ 2016 ರ ಮಾರ್ಚ್ 26 ರಂದು ಈ ಸುರಂಗ ಮಾರ್ಗದ ಬಗ್ಗೆ ಸುದ್ದಿ ಮಾಡಿ, ವಿಡಿಯೊ ಕೂಡ ಬಹಿರಂಗ ಪಡಿಸಿತ್ತು. ಜೊತೆಗೆ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರು ಮತ್ತು ಇತಿಹಾಸಕಾರ ವಿಲಿಯಂ ಡಾಲ್ರಿಂಪಲ್ ಅವರ ಹೇಳಿಕೆಗಳನ್ನು ದಾಖಲಿಸಿತ್ತು.

“ಈ ಸುರಂಗ ಮಾರ್ಗವು ವಿಧಾನಸಭೆಯಿಂದ ಕೆಂಪು ಕೋಟೆಗೆ ಸಂಪರ್ಕಿಸುತ್ತದೆ. ಬ್ರಿಟಿಷರು ಇದನ್ನು ಬಳಸುತ್ತಿದ್ದರು ಎಂದು ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಹೇಳಿದ್ದಾರೆ.

“ನಾನು 1993ರಲ್ಲಿ ಶಾಸಕರಾಗಿ ಆಯ್ಕೆಯಾದಾಗ ವಿಧಾನಸಭೆಯಿಂದ ಕೆಂಪುಕೋಟೆಗೆ ಸಂಪರ್ಕಿಸುವ ಸುರಂಗದ ಬಗ್ಗೆ ಕೇಳಿದ್ದೆ. ನಾನು ಅದರ ಇತಿಹಾಸವನ್ನು ಹುಡುಕಲು ಪ್ರಯತ್ನಿಸಿದ್ದೆ. ಆದರೆ ಅದರ ಬಗ್ಗೆ ಸ್ಪಷ್ಟತೆ ಇರಲಿಲ್ಲ” ಎಂದು ಈಗ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ಮತ್ತೊಬ್ಬ ಮಹಿಳೆಗಾಗಿ ಹೆಂಡತಿ, ಪುಟ್ಟ ಮಕ್ಕಳನ್ನು ಕೊಂದು, ಮನೆಯಲ್ಲಿ ಹೂತು ಪರಾರಿಯಾಗಿದ್ದ ವ್ಯಕ್ತಿ ಬಂಧನ

“ಈಗ ನಮಗೆ ಸುರಂಗದ ದ್ವಾರ ಪತ್ತೆಯಾಗಿದೆ. ಆದರೆ ಮೆಟ್ರೋ ಯೋಜನೆಗಳು ಮತ್ತು ಒಳಚರಂಡಿ ಸ್ಥಾಪನೆಯಿಂದಾಗಿ ಸುರಂಗದ ಎಲ್ಲಾ ಮಾರ್ಗಗಳು ನಾಶವಾಗಿದ್ದು, ನಾವು ಅದನ್ನು ಮತ್ತಷ್ಟು ಅಗೆಯುತ್ತಿಲ್ಲ” ಎಂದು ಹೇಳಿದ್ದಾರೆ.

“1912ರಲ್ಲಿ ಕೋಲ್ಕತ್ತಾದಿಂದ ದೆಹಲಿಗೆ ರಾಜಧಾನಿಯನ್ನು ವರ್ಗಾಯಿಸಿದ ನಂತರ ಕೇಂದ್ರ ಶಾಸಕಾಂಗ ಸಭೆಯಾಗಿ ಬಳಸಲಾಗುತ್ತಿದ್ದ ದೆಹಲಿ ವಿಧಾನ ಸಭೆಯನ್ನು 1926 ರಲ್ಲಿ ನ್ಯಾಯಾಲಯವಾಗಿ ಪರಿವರ್ತಿಸಲಾಗಿತ್ತು. ಬ್ರಿಟಿಷರು ಈ ಸುರಂಗವನ್ನು ಸ್ವಾತಂತ್ರ್ಯ ಹೋರಾಟಗಾರರನ್ನು ನ್ಯಾಯಾಲಯಕ್ಕೆ ಕರೆತರಲು ಬಳಸಿದ್ದರು” ಎಂದು ಗೋಯೆಲ್ ಮಾಹಿತಿ ನೀಡಿದ್ದಾರೆ.

“ಇಲ್ಲಿ ಗಲ್ಲು ಶಿಕ್ಷೆ ನೀಡುತ್ತಿದ್ದ ಕೋಣೆಯಿತ್ತು ಎಂಬುದರ ಬಗ್ಗೆ ನಮಗೆಲ್ಲರಿಗೂ ತಿಳಿದಿತ್ತು. ಆದರೆ ಅದನ್ನು ಎಂದಿಗೂ ತೆರೆಯಲಿಲ್ಲ. ಈಗ ಸ್ವಾತಂತ್ರ್ಯದ 75 ನೇ ವರ್ಷವಾಗಿದೆ. ಹೀಗಾಗಿ, ನಾನು ಆ ಕೊಠಡಿಯನ್ನು ಪರೀಕ್ಷಿಸಲು ನಿರ್ಧರಿಸಿದೆ. ನಾವು ಆ ಕೊಠಡಿಯನ್ನು ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವವನ್ನು ನೀಡುವ ದೇಗುಲವಾಗಿ ಬದಲಾಯಿಸುವ ಉದ್ದೇಶ ಹೊಂದಿದ್ದೇವೆ” ಎಂದು ಹೇಳಿದ್ದಾರೆ.

ಬಿಬಿಸಿ 2016 ರಲ್ಲಿ ಬಿಡುಗಡೆ ಮಾಡಿದ ಸುರಂಗದ ವರದಿ ಮತ್ತು ವಿಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...