Homeಮುಖಪುಟದೆಹಲಿ ವಿಧಾನಸಭೆಯಿಂದ ಕೆಂಪು ಕೋಟೆಗೆ ಸುರಂಗ ಮಾರ್ಗ- 2016 ರಲ್ಲಿ ಬಿಬಿಸಿಯಲ್ಲಿ ವರದಿಯಾಗಿತ್ತು

ದೆಹಲಿ ವಿಧಾನಸಭೆಯಿಂದ ಕೆಂಪು ಕೋಟೆಗೆ ಸುರಂಗ ಮಾರ್ಗ- 2016 ರಲ್ಲಿ ಬಿಬಿಸಿಯಲ್ಲಿ ವರದಿಯಾಗಿತ್ತು

- Advertisement -
- Advertisement -

ದೆಹಲಿ ವಿಧಾನಸಭೆಯಲ್ಲಿ ಸುರಂಗ ಮಾರ್ಗವೊಂದು ಪತ್ತೆಯಾಗಿದ್ದು, ಸ್ವಾತಂತ್ರ್ಯ ಹೋರಾಟ ನಡೆಯುತ್ತಿದ್ದ ಸಂದರ್ಭದಲ್ಲಿ ಬ್ರಿಟಿಷರು ಸ್ವಾತಂತ್ರ್ಯ ಹೋರಾಟಗಾರರನ್ನು ಹತ್ತಿಕ್ಕಲು ಈ ಸುರಂಗವನ್ನು ಬಳಸುತ್ತಿದ್ದರು ಹೇಳಲಾಗಿದೆ. ಆದರೆ ಈ ಸುರಂಗದ ಬಗ್ಗೆ 2016 ರಲ್ಲಿ ಬಿಬಿಸಿ ಸುದ್ದಿ ಮಾಡಿ, ವಿಡಿಯೊ ಬಹಿರಂಗಪಡಿಸಿತ್ತು.

ಈಗ ಮತ್ತೆ ಹಳೆ ಸುದ್ದಿಗೆ ಜೀವ ಬಂದಿದ್ದು, ರಾಷ್ಟ್ರೀಯ ಮಾಧ್ಯಮಗಳು ಈ ಬಗ್ಗೆ ವರದಿ ಮಾಡುತ್ತಿವೆ. ಬಿಬಿಸಿ 2016 ರ ಮಾರ್ಚ್ 26 ರಂದು ಈ ಸುರಂಗ ಮಾರ್ಗದ ಬಗ್ಗೆ ಸುದ್ದಿ ಮಾಡಿ, ವಿಡಿಯೊ ಕೂಡ ಬಹಿರಂಗ ಪಡಿಸಿತ್ತು. ಜೊತೆಗೆ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರು ಮತ್ತು ಇತಿಹಾಸಕಾರ ವಿಲಿಯಂ ಡಾಲ್ರಿಂಪಲ್ ಅವರ ಹೇಳಿಕೆಗಳನ್ನು ದಾಖಲಿಸಿತ್ತು.

“ಈ ಸುರಂಗ ಮಾರ್ಗವು ವಿಧಾನಸಭೆಯಿಂದ ಕೆಂಪು ಕೋಟೆಗೆ ಸಂಪರ್ಕಿಸುತ್ತದೆ. ಬ್ರಿಟಿಷರು ಇದನ್ನು ಬಳಸುತ್ತಿದ್ದರು ಎಂದು ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಹೇಳಿದ್ದಾರೆ.

“ನಾನು 1993ರಲ್ಲಿ ಶಾಸಕರಾಗಿ ಆಯ್ಕೆಯಾದಾಗ ವಿಧಾನಸಭೆಯಿಂದ ಕೆಂಪುಕೋಟೆಗೆ ಸಂಪರ್ಕಿಸುವ ಸುರಂಗದ ಬಗ್ಗೆ ಕೇಳಿದ್ದೆ. ನಾನು ಅದರ ಇತಿಹಾಸವನ್ನು ಹುಡುಕಲು ಪ್ರಯತ್ನಿಸಿದ್ದೆ. ಆದರೆ ಅದರ ಬಗ್ಗೆ ಸ್ಪಷ್ಟತೆ ಇರಲಿಲ್ಲ” ಎಂದು ಈಗ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ಮತ್ತೊಬ್ಬ ಮಹಿಳೆಗಾಗಿ ಹೆಂಡತಿ, ಪುಟ್ಟ ಮಕ್ಕಳನ್ನು ಕೊಂದು, ಮನೆಯಲ್ಲಿ ಹೂತು ಪರಾರಿಯಾಗಿದ್ದ ವ್ಯಕ್ತಿ ಬಂಧನ

“ಈಗ ನಮಗೆ ಸುರಂಗದ ದ್ವಾರ ಪತ್ತೆಯಾಗಿದೆ. ಆದರೆ ಮೆಟ್ರೋ ಯೋಜನೆಗಳು ಮತ್ತು ಒಳಚರಂಡಿ ಸ್ಥಾಪನೆಯಿಂದಾಗಿ ಸುರಂಗದ ಎಲ್ಲಾ ಮಾರ್ಗಗಳು ನಾಶವಾಗಿದ್ದು, ನಾವು ಅದನ್ನು ಮತ್ತಷ್ಟು ಅಗೆಯುತ್ತಿಲ್ಲ” ಎಂದು ಹೇಳಿದ್ದಾರೆ.

“1912ರಲ್ಲಿ ಕೋಲ್ಕತ್ತಾದಿಂದ ದೆಹಲಿಗೆ ರಾಜಧಾನಿಯನ್ನು ವರ್ಗಾಯಿಸಿದ ನಂತರ ಕೇಂದ್ರ ಶಾಸಕಾಂಗ ಸಭೆಯಾಗಿ ಬಳಸಲಾಗುತ್ತಿದ್ದ ದೆಹಲಿ ವಿಧಾನ ಸಭೆಯನ್ನು 1926 ರಲ್ಲಿ ನ್ಯಾಯಾಲಯವಾಗಿ ಪರಿವರ್ತಿಸಲಾಗಿತ್ತು. ಬ್ರಿಟಿಷರು ಈ ಸುರಂಗವನ್ನು ಸ್ವಾತಂತ್ರ್ಯ ಹೋರಾಟಗಾರರನ್ನು ನ್ಯಾಯಾಲಯಕ್ಕೆ ಕರೆತರಲು ಬಳಸಿದ್ದರು” ಎಂದು ಗೋಯೆಲ್ ಮಾಹಿತಿ ನೀಡಿದ್ದಾರೆ.

“ಇಲ್ಲಿ ಗಲ್ಲು ಶಿಕ್ಷೆ ನೀಡುತ್ತಿದ್ದ ಕೋಣೆಯಿತ್ತು ಎಂಬುದರ ಬಗ್ಗೆ ನಮಗೆಲ್ಲರಿಗೂ ತಿಳಿದಿತ್ತು. ಆದರೆ ಅದನ್ನು ಎಂದಿಗೂ ತೆರೆಯಲಿಲ್ಲ. ಈಗ ಸ್ವಾತಂತ್ರ್ಯದ 75 ನೇ ವರ್ಷವಾಗಿದೆ. ಹೀಗಾಗಿ, ನಾನು ಆ ಕೊಠಡಿಯನ್ನು ಪರೀಕ್ಷಿಸಲು ನಿರ್ಧರಿಸಿದೆ. ನಾವು ಆ ಕೊಠಡಿಯನ್ನು ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವವನ್ನು ನೀಡುವ ದೇಗುಲವಾಗಿ ಬದಲಾಯಿಸುವ ಉದ್ದೇಶ ಹೊಂದಿದ್ದೇವೆ” ಎಂದು ಹೇಳಿದ್ದಾರೆ.

ಬಿಬಿಸಿ 2016 ರಲ್ಲಿ ಬಿಡುಗಡೆ ಮಾಡಿದ ಸುರಂಗದ ವರದಿ ಮತ್ತು ವಿಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...