Homeಕರ್ನಾಟಕಮತೀಯವಾದಿಗಳಿಗೆ ಕುವೆಂಪು ಅವರನ್ನು ಪ್ರಶ್ನಿಸಲು ಸಾಧ್ಯವಾಗುತ್ತಿರಲಿಲ್ಲ: ಬಿ.ಟಿ. ಲಲಿತಾ ನಾಯಕ್

ಮತೀಯವಾದಿಗಳಿಗೆ ಕುವೆಂಪು ಅವರನ್ನು ಪ್ರಶ್ನಿಸಲು ಸಾಧ್ಯವಾಗುತ್ತಿರಲಿಲ್ಲ: ಬಿ.ಟಿ. ಲಲಿತಾ ನಾಯಕ್

- Advertisement -
- Advertisement -

‘ಮತೀಯವಾದಿಗಳು ಕುವೆಂಪು ಅವರನ್ನು ಪ್ರಶ್ನಿಸಲು ಸಾಧ್ಯವಾಗುತ್ತಿರಲಿಲ್ಲ. ಏಕೆಂದರೆ, ಅವರಲ್ಲಿ ಮಾತಿಗೆ ಅವಕಾಶವಿಲ್ಲದಷ್ಟು ಪಾಂಡಿತ್ಯ, ಓದು, ವಿವೇಕ ಇತ್ತು; ಸಾಕಷ್ಟು ಇಂಗ್ಲಿಷ್ ಸಾಹಿತ್ಯವನ್ನೂ ಓದಿಕೊಂಡಿದ್ದರು. ಹಾಗಾಗಿಯೇ ಅವರು ಮತ-ಮೌಢ್ಯಗಳನ್ನು ವಿರೋಧಿಸಿದ್ದರು’ ಎಂದು ಬಿ.ಟಿ. ಲಲಿತಾ ನಾಯಕ್ ಹೇಳಿದರು.

ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರ ʼವಿಚಾರ ಕ್ರಾಂತಿಗೆ ಆಹ್ವಾನʼ ಮತ್ತು ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಎಂಬ ಎರಡೂ ಯುಗಪ್ರವರ್ತಕ ಭಾಷಣಗಳಿಗೆ 50 ವರ್ಷಗಳು ತುಂಬಿದ್ದು, ಈ ನೆನಪಿನಲ್ಲಿ ‘ಜಾಗೃತ ಕರ್ನಾಟಕ’ ಸಂಘಟನೆ ಮೈಸೂರಿನ ಮಹಾರಾಜ ಕಾಲೇಜಿನ ಶತಮಾನೋತ್ಸವ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಕುವೆಂಪು ಕ್ರಾಂತಿ ಕಹಳೆ–50’ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಾಕವಿ ಕುವೆಂಪು ಅವರ ಸಂದೇಶಗಳನ್ನು ಓದಿ, ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದರಿಂದ ಅಸಮಾನತೆ, ಅಸಹಿಷ್ಣುತೆ, ಮೂಡನಂಬಿಕೆ, ಅನಾಚಾರದಂತಹ ಮಾನವ ವಿರೋಧಿ ಅನಿಷ್ಟ ಮತ್ತು ಮೌಢ್ಯಗಳಿಂದ ಹೊರಬರಲು ಸಾಧ್ಯ’ ಎಂದು ಅವರು ಪ್ರತಿಪಾದಿಸಿದರು.

‘ನಮ್ಮ ದೇಶದಲ್ಲಿರುವ ಅಷ್ಟೂ ಜನರು ಕುವೆಂಪು ಅವರ ಒಂದೊಂದು ಸಾಲು ಓದಿದರೂ ಇನ್ನೂ ಉಳಿಯಬಹುದಾದಷ್ಟು ಸಾಕಷ್ಟು ವಿಚಾರ ಕುವೆಂಪುರವರ ಬರಹದಲ್ಲಿವೆ. 50 ವರ್ಷಗಳ ಹಿಂದೆ ನಮ್ಮ ಮುಂದಿಟ್ಟ ಕ್ರಾಂತಿಕಾರಿ ಚಿಂತನೆಗಳು ಈಗಲೂ ಪ್ರಸ್ತುತ’ ಎಂದು ಲಲಿತಾ ನಾಯಕ್‌ ಹೇಳಿದರು.

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಹಾರಿಸಿ ಆತಂಕ ಸೃಷ್ಟಿಸಿದ ಘಟನೆಯನ್ನು ಖಂಡಿಸಿದ ಅವರು, ‘ಇದರಲ್ಲಿ ಭಾಗಿಯಾದವರು ನಮ್ಮ ಶೂದ್ರ ಯುವಜನರು. ಆ ಯುವಕರು ಕುವೆಂಪು, ಅಂಬೇಡ್ಕರ್, ಲೋಹಿಯಾರವರನ್ನು ಓದಿಕೊಂಡಿದ್ದರೆ ಆ ರೀತಿ ಮಾಡುತ್ತಿರಲಿಲ್ಲ. ಕುವೆಂಪುರವರನ್ನು ಆಸ್ತಿಯನ್ನಾಗಿ, ಸಂಪತ್ತಾಗಿ ಮಾಡಕೊಳ್ಳದಿದ್ದರೆ ನಾವು ಹಿಮ್ಮುಖವಾಗಿ ಚಲಿಸುತ್ತೇವೆ. ಮೌಢ್ಯ ಅಳಿಯಬೇಕು ಎಂದಾದರೆ ಕುವೆಂಪು ಅವರ ಸಂದೇಶಗಳನ್ನು ಪಾಲಿಸೋಣ’ ಎಂದು ಕರೆಕೊಟ್ಟರು.

‘ಕುವೆಂಪು ಕ್ರಾಂತಿ ಕಹಳೆ’ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಜನ ಸಮೂಹ

‘ಕುವೆಂಪು ಕ್ರಾಂತಿ ಕಹಳೆ–50, ಕವಿವಾಣಿಯಿಂದ ಕರ್ನಾಟಕ ಮಾದರಿಯಕೆಗೆ’ ಎಂಬ ಆಶಯದೊಂದಿಗೆ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಕೆ.ವಿ. ನಾರಾಯಣ ವಹಿಸಿದ್ದರು. ಚಿಂತಕರಾದ ಎಲ್. ಎನ್. ಮುಕುಂದರಾಜ್, ಡಾಲಿ ಧನಂಜಯ್ ಯುವ ಪ್ರತಿನಿಧಿಗಳಾದ ಕೊಡಗಿನ ಡಾ. ಕಾವೇರಿ, ಬೆಂಗಳೂರಿನ ಕಾವ್ಯಶ್ರೀ, ಔರಾದ್‌ʼನ ಬಾಲಾಜಿ ಕುಂಬಾರ್, ಮಡಿಕೇರಿಯ ಡಾ.ಮುಸ್ತಫಾ ಕೆ.ಎಚ್., ಮಹೇಶ ಸಿ., ಮೈಸೂರು ವಿ.ವಿ ಸಂಶೋಧಕರಾದ ಧನಲಕ್ಷ್ಮಿ, ಅಹಿಂದ ಜವರಪ್ಪ, ಪ್ರಸನ್ನ ಗೌಡ ಮತ್ತು ಜಾಗೃತ ಕರ್ನಾಟಕದ ಸಂಚಾಲಕ ಬಿ.ಸಿ. ಬಸವರಾಜು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಲಿತ ವಿದ್ಯಾರ್ಥಿ ಒಕ್ಕೂಟ, ಮಾನಸ ಗಂಗೋತ್ರಿ; ಮೈಸೂರು ವಿವಿ ಸಂಶೋಧಕರ ಸಂಘ, ಸಮಾಜ ಪರಿವರ್ತನ ಜನಾಂದೋಲನ, ಮೈಸೂರು; ಕರುನಾಡ ರಕ್ಷಣಾ ವೇದಿಕೆ, ಮೈಸೂರು; ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ (ರಿ), ಕರ್ನಾಟಕ ಕಾವಲು ಪಡೆ (ರಿ), ಆಕೃತಿ ಪುಸ್ತಕ, ಬೆಂಗಳೂರು ಮತ್ತು ಜಂಗಮ ಕಲೆಕ್ಟಿವ್, ಬೆಂಗಳೂರು ಇವರ ಸಹಯೋಗದೊಂದಿಗೆ ಕಾರ್ಯಕ್ರಮ ನಡೆದಿದೆ.

ಕಾರ್ಯಕ್ರಮದಲ್ಲಿ ಕೃಷ್ಣಮೂರ್ತಿ ಚಮರಂ ಸ್ವಾಗತಿಸಿದರು. ರಮೇಶ್ ಗೌಡ ನಾಗಮಂಗಲ ಪ್ರಸ್ತಾವಿಕ ಮಾತುಗಳನ್ನಾಡಿದರು. ಜಯಶಂಕರ ಹಲಗೂರು ಕಾರ್ಯಕ್ರಮ ನಿರ್ವಹಿಸಿದರು. ಸಮಾರಂಭಕ್ಕೂ ಮೊದಲು ಚಿಂತನ್ ವಿಕಾಸ್ ಮೈಸೂರು ಮತ್ತು ಗೋವಿಂದರಾಜು ಚಾಮನಕೊಪ್ಪಲು ತಂಡಗಳು ಕುವೆಂಪು ಹಾಡುಗಳನ್ನು ಪ್ರಸ್ತುತಪಡಿಸಿದರು.

ಇದನ್ನೂ ಓದಿ; ಕೇರಳದಲ್ಲಿ ‘ಪೌರತ್ವ ತಿದ್ದುಪಡಿ ಕಾಯ್ದೆ’ ಜಾರಿಗೊಳಿಸುವುದಿಲ್ಲ: ಪಿಣರಾಯ್‌ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...