Homeಕರ್ನಾಟಕಕೊಡಗಿನಲ್ಲಿ 4 ದಿನ ನಿಷೇಧಾಜ್ಞೆ; ಉಭಯ ಪಕ್ಷಗಳ ಕಾರ್ಯಕ್ರಮಗಳಿಗೆ ಬ್ರೇಕ್‌

ಕೊಡಗಿನಲ್ಲಿ 4 ದಿನ ನಿಷೇಧಾಜ್ಞೆ; ಉಭಯ ಪಕ್ಷಗಳ ಕಾರ್ಯಕ್ರಮಗಳಿಗೆ ಬ್ರೇಕ್‌

- Advertisement -
- Advertisement -

ಕೊಡಗು ಜಿಲ್ಲೆಯಾದ್ಯಂತ ಬುಧವಾರ (ಆಗಸ್ಟ್‌ 24) ಬೆಳಿಗ್ಗೆ ಆರು ಗಂಟೆಯಿಂದ ಆಗಸ್ಟ್‌ 27 ಸಂಜೆ ಆರು ಗಂಟೆವರೆಗೆ 144 ಸೆಕ್ಷನ್‌ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶ ಹೊರಡಿಸಿದ್ದಾರೆ.

ಈ ನಿಷೇಧಾಜ್ಞೆ ಸಮಯದಲ್ಲಿ ಯಾವುದೇ ಪ್ರತಿಭಟನೆ ಜಾಥಾ, ಕಪ್ಪು ಬಟ್ಟೆ ಪ್ರದರ್ಶನ ಹಾಗೂ ಐದು ಜನಕ್ಕಿಂತ ಹೆಚ್ಚಿನ ಜನ ಒಂದೆಡೆ ಗುಂಪು ಸೇರದಂತೆ ಮತ್ತು ಓಡಾಡದಂತೆ ನಿರ್ಬಂಧಿಸಲಾಗಿದೆ.

ಇದೇ ಅಗಸ್ಟ್‌ 26ರಂದು ಮಡಿಕೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಡಿಕೇರಿ ಚಲೋ ಮತ್ತು ರಾಜ್ಯ ಸರ್ಕಾರ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಈಗ ಅವೆರಡೂ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಹಿಂದುತ್ವ ಸಂಘಟನೆಯ ಕಾರ್ಯಕರ್ತ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಡಿಕೇರಿ ಪೊಲೀಸ್ ಆಯುಕ್ತ ಕಚೇರಿ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆ ಕುರಿತು ಲಕ್ಷಾಂತರ ಜನ ಕಾಂಗ್ರೆಸ್ ಕಾರ್ಯಕರ್ತರು ಕೊಡಗಿಗೆ ಆಗಮಿಸುತ್ತಿದ್ದರು.

ಮತ್ತೊಂದಡೆ ರಾಜ್ಯ ಸರ್ಕಾರ ಸಹಿತ ತಮ್ಮ ಸರ್ಕರ ಸಾಧನೆಗಳನ್ನು ತಿಳಿಸಲು ಜನೋತ್ಸವವನ್ನು ಹಮ್ಮಿಕೊಂಡು ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದವು. ಆದರೆ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಜಿಲ್ಲಾ ಎಸ್‌ಪಿ ಅಯ್ಯಪ್ಪ ಅವರ ಮನವಿ ಮೇರೆಗೆ ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಮೊಟ್ಟೆ ಎಸೆದವನು ಯಾವ ಪಕ್ಷದ ಕಾರ್ಯಕರ್ತ?

ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಡಗಿಗೆ ಆಗಮಿಸಿದ್ದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ಸಿಕ್ಕಿಬಿದ್ದಿರುವ ಆರೋಪಿ ಸಂಪತ್, ಯಾವ ಪಕ್ಷದವನು ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಆತ ಬಿಜೆಪಿ ಕಾರ್ಯಕರ್ತ ಎಂಬ ಆರೋಪಗಳಿವೆ. ಆದರೆ ಆರೋಪಿ ನೀಡುತ್ತಿರುವ ಹೇಳಿಕೆಗಳು ಗೊಂದಲಕಾರಿಯಾಗಿವೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಆತನ ಫೋಟೋಗಳು ಸಂಶಯಗಳಿಗೆ ಎಡೆಮಾಡಿಕೊಟ್ಟಿವೆ.

ಆರೋಪಿ ಸಂಪತ್‌ ಆರ್‌ಎಸ್‌ಎಸ್‌/ಬಿಜೆಪಿಯವನೋ, ಕಾಂಗ್ರೆಸ್‌ ಪಕ್ಷದವನೋ ಅಥವಾ ಜೆಡಿಎಸ್‌ಗೆ ಸೇರಿದವನೋ ಎಂಬುದು ಈಗ ಚರ್ಚೆಗೆ ಗ್ರಾಸವಾಗಿದೆ.

“ನಾನು ಕೂಡ ಕಾಂಗ್ರೆಸ್ ಕಾರ್ಯಕರ್ತ” ಎಂದು ಸಂಪತ್‌ ಹೇಳಿದ ಬಳಿಕ ಆತನ ಹಳೆಯ ಫೋಟೋಗಳು ಹರಿದಾಡಿದವು. ಬಿಜೆಪಿ ಶಾಸಕ ಅಪ್ಪಚ್ಚು ರಂಜನ್‌ ಅವರ ಜೊತೆ ಕೇಸರಿ ಶಾಲು ಧರಿಸಿ ಆತ ನಿಂತಿರುವ ಫೋಟೋವನ್ನು ಸ್ವತಃ ಸಿದ್ದರಾಮಯ್ಯನವರೇ ಹಂಚಿಕೊಂಡಿದ್ದಾರೆ.

“ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ BJP Karnataka ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಬಂದಿದ್ದು ಯಾಕೆ? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇಷ್ಟರ ನಡುವೆ ಕಾಂಗ್ರೆಸ್‌ ಪಕ್ಷದ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಮತ್ತೊಂದು ಟ್ವೀಟ್ ಮಾಡಲಾಗಿದ್ದು, ಆರ್‌ಎಸ್‌ಎಸ್‌ ಜೊತೆಗೆ ಸಂಪತ್‌ನ ಸಂಪರ್ಕ ಇತ್ತೆಂದು ಪ್ರತಿಪಾದಿಸಲಾಗಿದೆ. “ಆರ್‌ಎಸ್‌ಎಸ್‌ ಶಿಬಿರದಲ್ಲಿ ಸಂತೋಷ್ ಪಾಲ್ಗೊಂಡಿದ್ದಾನೆ” ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿರಿ: ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ. ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ, ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ. ಆರ್‌ಎಸ್‌ಎಸ್‌ ‘ಪ್ಯಾಂಟು’ ತೊಟ್ಟವನಿಗೆ ಕಾಂಗ್ರೆಸ್ ವೇಷ ತೋಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ?” ಎಂದು ಕಾಂಗ್ರೆಸ್ ಕುಟುಕಿದೆ.

ಇಷ್ಟೆಲ್ಲದರ ನಡುವೆ ಸಂತೋಷ್‌ ಮೂಲತಃ ಜೆಡಿಎಸ್‌ನವನು ಎಂದು ಹೇಳಲಾಗುತ್ತಿದೆ. ಮಾಧ್ಯಮ ಜೊತೆ ಮಾತನಾಡಿರುವ ಸಂಪತ್‌, “ನಾನು ಜೆಡಿಎಸ್‌. ಮೂಲತಃ ನಾನು ಮೊದಲು ಜೆಡಿಎಸ್‌ನಲ್ಲಿದ್ದೆ. ಲೋಕಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಜೊತೆಯಾಗಿ ಸ್ಪರ್ಧೆ ಮಾಡಿದವು. ಕಾಂಗ್ರೆಸ್‌ ಪಕ್ಷಕ್ಕಾಗಿ ಕೆಲಸ ಮಾಡಲು ಹೇಳಿದರು. ಆಗ ನಾನು ಕಾಂಗ್ರೆಸ್‌ಗೆ ಕೆಲಸ ಮಾಡಿದ್ದೇನೆ. ನಂತರ ಪಟ್ಟಣ ಪಂಚಾಯಿತಿ ಚುನಾವಣೆ ಬಂತು. ಹನ್ನೊಂದು ವಾರ್ಡ್‌ಗಳಲ್ಲಿ ಐದು ವಾರ್ಡ್ ಜೆಡಿಎಸ್‌ಗೆ ಮೀಸಲಾದವು. ನನ್ನ ವಾರ್ಡ್ ಕಾಂಗ್ರೆಸ್‌ಗೆ ಸೀಮಿತವಾಯ್ತು. ಕಾಂಗ್ರೆಸ್‌ಗಾಗಿ ಕೆಲಸ ಮಾಡಿದ್ದೇನೆ. ಯಾರೂ ಇರಲಿಲ್ಲ. ಕಾಂಗ್ರೆಸ್‌ನವರು ಒಬ್ಬರೇ ಒಬ್ಬರು ಬಂದಿಲ್ಲ” ಎಂದಿದ್ದಾನೆ.

ಮೊಟ್ಟೆ ಪ್ರಕರಣದ ಬಳಿಕ ಕೊಡಗು ರಾಜಕೀಯ ವಿದ್ಯಮಾನಗಳ ಕೇಂದ್ರವಾಗಿದೆ. ಈಗ ಉಭಯ ಪಕ್ಷಗಳ ಕಾರ್ಯಕ್ರಮಗಳಿಗೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...