Homeಕರ್ನಾಟಕಮೇಕೆದಾಟು ಪಾದಯಾತ್ರೆ ತಡೆಯಲು ರಾಮನಗರದಲ್ಲಿ ಮಾತ್ರ ನಿಷೇದಾಜ್ಞೆ: ಸಿದ್ದರಾಮಯ್ಯ

ಮೇಕೆದಾಟು ಪಾದಯಾತ್ರೆ ತಡೆಯಲು ರಾಮನಗರದಲ್ಲಿ ಮಾತ್ರ ನಿಷೇದಾಜ್ಞೆ: ಸಿದ್ದರಾಮಯ್ಯ

- Advertisement -
- Advertisement -

ರಾಮನಗರ ಜಿಲ್ಲೆಗೆ ಸೀಮಿತವಾಗಿ ಸರ್ಕಾರ 144 ಸೆಕ್ಷನ್ ಹೇರಿರುವುದು ಏನಾದರೂ ಮಾಡಿ ನಮ್ಮ ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂಬ ದುರುದ್ದೇಶವನ್ನು ತೋರಿಸುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ನಾಳೆ ಪಾದಯಾತ್ರೆ ಮಾಡುವುದು ನಿಶ್ಚಿತ, ಈ ಸರ್ಕಾರ ನಮ್ಮ ಮೇಲೆ ಏನು ಕ್ರಮ ಜರುಗಿಸುತ್ತದೋ ಜರುಗಿಸಲಿ. ನಾವು ಎಲ್ಲವನ್ನು ಎದುರಿಸಲು ಸಿದ್ಧರಿದ್ದೇವೆ ಎಂದಿದ್ದಾರೆ.

ಬಿಜೆಪಿಯವರು ಅಧಿಕಾರದಲ್ಲಿ ಇದ್ದಾರೆ. ನಾವು ಕೊರೊನಾ ನಿಯಮಗಳನ್ನು ಅನುಸರಿಸಿಯೇ ಪಾದಯಾತ್ರೆ ಮಾಡುತ್ತೇವೆ. ನಮ್ಮ ಮೇಲೆ ಏನು ಕಾನೂನು ಕ್ರಮ ತೆಗೆದುಕೊಳ್ಳಬೇಕು, ಅದನ್ನು ಸರ್ಕಾರ ಮಾಡಲಿ. ನಾವು ಅದನ್ನು ಎದುರಿಸಲು ತಯಾರಾಗಿದ್ದೇವೆ. ನಾವು ಕಾನೂನನ್ನು ಗೌರವಿಸುತ್ತೇವೆ, ಆದರೂ ಅವರು ನಮ್ಮನ್ನು ಬಂಧಿಸುತ್ತಾರೆ ಎಂದರೆ ಬಂಧಿಸಲಿ ಎಂದು ತಿಳಿಸಿದ್ದಾರೆ.

ಮೇಕೆದಾಟು ಬಳಿ 144 ಸೆಕ್ಷನ್ ಜಾರಿಯಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಹಾಗೇನಾದರೂ ಜಾರಿ ಮಾಡಿದ್ದರೆ ನಾಲ್ಕೇ ಜನ ಪಾದಯಾತ್ರೆ ಮಾಡ್ತೇವೆ. ನಮ್ಮ ಪಾದಯಾತ್ರೆ ಘೋಷಣೆಯಾಗಿ ಎರಡು ತಿಂಗಳಾಯ್ತು. ವಾರಾಂತ್ಯದ ಲಾಕ್ ಡೌನ್ ಘೋಷಣೆ ಆಗಿದ್ದು ಮೊನ್ನೆ ಮೊನ್ನೆ. ಅದೂ ಅಲ್ಲದೆ ರಾಮನಗರ ಜಿಲ್ಲೆಯಲ್ಲಿ ಮಾತ್ರ 144 ಸೆಕ್ಷನ್ ಯಾಕೆ? ಬೇರೆ ಜಿಲ್ಲೆಯಲ್ಲಿ ಏಕಿಲ್ಲ? ಇದು ಏನಾದರೂ ಮಾಡಿ ಪಾದಯಾತ್ರೆ ತಡೆಯಬೇಕು ಎಂಬ ಅವರ ದುರುದ್ದೇಶವನ್ನು ತೋರಿಸುತ್ತದೆ. ರಾಮನಗರದಲ್ಲಿ ಗೆಸ್ಟ್ ಹೌಸ್ ಗಳು ಸಿಗದಂತೆ ನಿರ್ಬಂಧ ಹೇರಲಾಗಿದೆ. ಇದಕ್ಕೆ ಏನು ಹೇಳಬೇಕು? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರದ ಜೊತೆ ಸಂಧಾನ ಮಾಡೋಕೇನಿದೆ? ಈ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದಿದೆ. ಅವತ್ತಿಂದ ಏನು ಮಾಡ್ತಿದ್ದಾರೆ. ಕಾವೇರಿ ಜಲ ವಿವಾದ ಇತ್ಯರ್ಥವಾಗಿದ್ದು 2018ರ ಫೆಬ್ರವರಿಯಲ್ಲಿ. ಅದಾದಮೇಲೆ ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡಬೇಕು ಎಂದು ಹೇಳಿದ್ದಾರೆ. ಒಂದು ಸಾಮಾನ್ಯ ವರ್ಷದಲ್ಲಿ ಇಷ್ಟು ನೀರು ಬಿಡೋಣ. ಆದರೆ ಈಗ ಹೆಚ್ಚು ಮಳೆಯಾದ ಕಾರಣ ನೀರು ಸಮುದ್ರಕ್ಕೆ ಹೋಗಿ ವ್ಯರ್ಥವಾಗುತ್ತಿದೆ. ಒಂದು ಜಲಾಶಯ ನಿರ್ಮಾಣ ಮಾಡಿ ವ್ಯರ್ಥವಾಗುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡಬಹುದು ಎಂದು ವಿವರಿಸಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬೊಮ್ಮಾಯಿ ಅವರು ಜಲ ಸಂಪನ್ಮೂಲ ಸಚಿವರಾಗಿದ್ದರು. ಆಗ ಯಾಕೆ ಯೋಜನೆ ಜಾರಿ ಮಾಡಿಲ್ಲ? ಈಗ ಸುಪ್ರೀಂ ಕೋರ್ಟ್, ಕಾವೇರಿ ಜಲ ಪ್ರಾಧಿಕಾರ, ಹಸಿರು ನ್ಯಾಯಾಧೀಕರಣ ಎಲ್ಲಿಯೂ ಯೋಜನೆ ಜಾರಿ ಮಾಡದಂತೆ ತಡೆ ನೀಡಿಲ್ಲ. ಎರಡೂ ಕಡೆ ಬಿಜೆಪಿಯವರ ಸರ್ಕಾರವೇ ಇದೆ, ಅಣೆಕಟ್ಟು ನಿರ್ಮಾಣಕ್ಕೆ ಬೇರಾವ ತೊಂದರೆ ಇದೆ ಹೇಳಲಿ. ಈ ಸರ್ಕಾರ ಪರಿಸರ ಇಲಾಖೆಯ ಅನುಮತಿ ಪಡೆಯಲು ಯಾವತ್ತಾದರೂ ಒತ್ತಾಯ ಮಾಡಿದೆಯಾ? ಒಂದು ಪರಿಸರ ಒಪ್ಪಿಗೆ ಪತ್ರ ಪಡೆಯಲು ಎರಡೂವರೆ ವರ್ಷ ಬೇಕಾ? ಸಿದ್ದರಾಮಯ್ಯ ಅವರ ಸರ್ಕಾರ ಏನೂ ಮಾಡಿಲ್ಲ ಎಂದು ಇದಕ್ಕೆ ರಾಜಕೀಯ ಬಣ್ಣ ಬಳಿಯಲು ನೋಡುತ್ತಿದ್ದಾರೆ. ನಾವಿದ್ದಾಗಲೇ ಯೋಜನೆ ಜಾರಿ ಪ್ರಕ್ರಿಯೆ ಆರಂಭವಾಗಿದ್ದು, ಡಿ.ಪಿ.ಆರ್. ಸಿದ್ಧಪಡಿಸಿ ಕೇಂದ್ರದ ಅನುಮತಿಗೆ ಕಳುಹಿಸಿದ್ದು ಎಂದು ಮಾಹಿತಿ ನೀಡಿದ್ದಾರೆ.

ಈ ಸರ್ಕಾರ ಏನು ಮಾಡಿದೆ ಹೇಳಲಿ. ತಾವು ಏನನ್ನು ಮಾಡದೆ ನಮ್ಮ ಮೇಲೆ ಆರೋಪ ಮಾಡೋದಕ್ಕೆ ಅರ್ಥ ಇಲ್ಲ. ಹಿಂದೆ ಯಡಿಯೂರಪ್ಪ, ಸದಾನಂದಗೌಡರು, ಜಗದೀಶ್ ಶೆಟ್ಟರ್ ಅವರು ಐದು ವರ್ಷ ಮುಖ್ಯಮಂತ್ರಿ ಆಗಿದ್ದರಲ್ಲ ಆಗೇನು ಮಾಡಿದ್ರು? ಈಗಿನ ಸರ್ಕಾರ ಏನು ಮಾಡಿದೆ? ಸರ್ಕಾರ ಅನುಮತಿ ನೀಡುತ್ತಾ, ನಮ್ಮ ಬಂಧನ ಮಾಡುತ್ತಾ ಗೊತ್ತಿಲ್ಲ. ಹದಿನೈದು ಜನ ಇದ್ರೂ ಅದು 144 ಸೆಕ್ಷನ್‌ನ ಮೀರಿದಂತೆಯೇ ಆಗುತ್ತೆ. ಐದು ಜನಕ್ಕಿಂತ ಜಾಸ್ತಿ ಸೇರಬಾರದು ಎಂದು ನಿಯಮ ಹೇಳುತ್ತೆ. ಹದಿನೈದು ಜನಕ್ಕೆ ಅನುಮತಿ ಏಕೆ? ಹಿಂದಿನ ಸರ್ಕಾರ ಅದು ಮಾಡಿಲ್ಲ ಇದು ಮಾಡಿಲ್ಲ ಎನ್ನೋಕೆ ಬಿಜೆಪಿ ಅಧಿಕಾರಕ್ಕೆ ಬಂದಿರೋದ? ತಾವೇನು ಮಾಡಿದ್ದಾರೆಂದು ಜನರಿಗೆ ಹೇಳಬೇಕಲ್ವಾ? ಎಂದು ಕೇಳಿದರು.

ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲ್ಲ, ಅವರು ಹತಾಶೆಯಿಂದ ಏನೇನೋ ಹೇಳ್ತಾರೆ, ಅದಕ್ಕೆಲ್ಲ ನಾನು ಉತ್ತರ ಕೊಡಲ್ಲ ಎಂದು ಸ್ಪಷ್ಟಪಡಿಸಿದರು.


ಇದನ್ನೂ ಓದಿರಿ: ಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...