Homeಕರ್ನಾಟಕಮೇಕೆದಾಟು ಪಾದಯಾತ್ರೆ ತಡೆಯಲು ರಾಮನಗರದಲ್ಲಿ ಮಾತ್ರ ನಿಷೇದಾಜ್ಞೆ: ಸಿದ್ದರಾಮಯ್ಯ

ಮೇಕೆದಾಟು ಪಾದಯಾತ್ರೆ ತಡೆಯಲು ರಾಮನಗರದಲ್ಲಿ ಮಾತ್ರ ನಿಷೇದಾಜ್ಞೆ: ಸಿದ್ದರಾಮಯ್ಯ

- Advertisement -
- Advertisement -

ರಾಮನಗರ ಜಿಲ್ಲೆಗೆ ಸೀಮಿತವಾಗಿ ಸರ್ಕಾರ 144 ಸೆಕ್ಷನ್ ಹೇರಿರುವುದು ಏನಾದರೂ ಮಾಡಿ ನಮ್ಮ ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂಬ ದುರುದ್ದೇಶವನ್ನು ತೋರಿಸುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ನಾಳೆ ಪಾದಯಾತ್ರೆ ಮಾಡುವುದು ನಿಶ್ಚಿತ, ಈ ಸರ್ಕಾರ ನಮ್ಮ ಮೇಲೆ ಏನು ಕ್ರಮ ಜರುಗಿಸುತ್ತದೋ ಜರುಗಿಸಲಿ. ನಾವು ಎಲ್ಲವನ್ನು ಎದುರಿಸಲು ಸಿದ್ಧರಿದ್ದೇವೆ ಎಂದಿದ್ದಾರೆ.

ಬಿಜೆಪಿಯವರು ಅಧಿಕಾರದಲ್ಲಿ ಇದ್ದಾರೆ. ನಾವು ಕೊರೊನಾ ನಿಯಮಗಳನ್ನು ಅನುಸರಿಸಿಯೇ ಪಾದಯಾತ್ರೆ ಮಾಡುತ್ತೇವೆ. ನಮ್ಮ ಮೇಲೆ ಏನು ಕಾನೂನು ಕ್ರಮ ತೆಗೆದುಕೊಳ್ಳಬೇಕು, ಅದನ್ನು ಸರ್ಕಾರ ಮಾಡಲಿ. ನಾವು ಅದನ್ನು ಎದುರಿಸಲು ತಯಾರಾಗಿದ್ದೇವೆ. ನಾವು ಕಾನೂನನ್ನು ಗೌರವಿಸುತ್ತೇವೆ, ಆದರೂ ಅವರು ನಮ್ಮನ್ನು ಬಂಧಿಸುತ್ತಾರೆ ಎಂದರೆ ಬಂಧಿಸಲಿ ಎಂದು ತಿಳಿಸಿದ್ದಾರೆ.

ಮೇಕೆದಾಟು ಬಳಿ 144 ಸೆಕ್ಷನ್ ಜಾರಿಯಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಹಾಗೇನಾದರೂ ಜಾರಿ ಮಾಡಿದ್ದರೆ ನಾಲ್ಕೇ ಜನ ಪಾದಯಾತ್ರೆ ಮಾಡ್ತೇವೆ. ನಮ್ಮ ಪಾದಯಾತ್ರೆ ಘೋಷಣೆಯಾಗಿ ಎರಡು ತಿಂಗಳಾಯ್ತು. ವಾರಾಂತ್ಯದ ಲಾಕ್ ಡೌನ್ ಘೋಷಣೆ ಆಗಿದ್ದು ಮೊನ್ನೆ ಮೊನ್ನೆ. ಅದೂ ಅಲ್ಲದೆ ರಾಮನಗರ ಜಿಲ್ಲೆಯಲ್ಲಿ ಮಾತ್ರ 144 ಸೆಕ್ಷನ್ ಯಾಕೆ? ಬೇರೆ ಜಿಲ್ಲೆಯಲ್ಲಿ ಏಕಿಲ್ಲ? ಇದು ಏನಾದರೂ ಮಾಡಿ ಪಾದಯಾತ್ರೆ ತಡೆಯಬೇಕು ಎಂಬ ಅವರ ದುರುದ್ದೇಶವನ್ನು ತೋರಿಸುತ್ತದೆ. ರಾಮನಗರದಲ್ಲಿ ಗೆಸ್ಟ್ ಹೌಸ್ ಗಳು ಸಿಗದಂತೆ ನಿರ್ಬಂಧ ಹೇರಲಾಗಿದೆ. ಇದಕ್ಕೆ ಏನು ಹೇಳಬೇಕು? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರದ ಜೊತೆ ಸಂಧಾನ ಮಾಡೋಕೇನಿದೆ? ಈ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದಿದೆ. ಅವತ್ತಿಂದ ಏನು ಮಾಡ್ತಿದ್ದಾರೆ. ಕಾವೇರಿ ಜಲ ವಿವಾದ ಇತ್ಯರ್ಥವಾಗಿದ್ದು 2018ರ ಫೆಬ್ರವರಿಯಲ್ಲಿ. ಅದಾದಮೇಲೆ ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡಬೇಕು ಎಂದು ಹೇಳಿದ್ದಾರೆ. ಒಂದು ಸಾಮಾನ್ಯ ವರ್ಷದಲ್ಲಿ ಇಷ್ಟು ನೀರು ಬಿಡೋಣ. ಆದರೆ ಈಗ ಹೆಚ್ಚು ಮಳೆಯಾದ ಕಾರಣ ನೀರು ಸಮುದ್ರಕ್ಕೆ ಹೋಗಿ ವ್ಯರ್ಥವಾಗುತ್ತಿದೆ. ಒಂದು ಜಲಾಶಯ ನಿರ್ಮಾಣ ಮಾಡಿ ವ್ಯರ್ಥವಾಗುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡಬಹುದು ಎಂದು ವಿವರಿಸಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬೊಮ್ಮಾಯಿ ಅವರು ಜಲ ಸಂಪನ್ಮೂಲ ಸಚಿವರಾಗಿದ್ದರು. ಆಗ ಯಾಕೆ ಯೋಜನೆ ಜಾರಿ ಮಾಡಿಲ್ಲ? ಈಗ ಸುಪ್ರೀಂ ಕೋರ್ಟ್, ಕಾವೇರಿ ಜಲ ಪ್ರಾಧಿಕಾರ, ಹಸಿರು ನ್ಯಾಯಾಧೀಕರಣ ಎಲ್ಲಿಯೂ ಯೋಜನೆ ಜಾರಿ ಮಾಡದಂತೆ ತಡೆ ನೀಡಿಲ್ಲ. ಎರಡೂ ಕಡೆ ಬಿಜೆಪಿಯವರ ಸರ್ಕಾರವೇ ಇದೆ, ಅಣೆಕಟ್ಟು ನಿರ್ಮಾಣಕ್ಕೆ ಬೇರಾವ ತೊಂದರೆ ಇದೆ ಹೇಳಲಿ. ಈ ಸರ್ಕಾರ ಪರಿಸರ ಇಲಾಖೆಯ ಅನುಮತಿ ಪಡೆಯಲು ಯಾವತ್ತಾದರೂ ಒತ್ತಾಯ ಮಾಡಿದೆಯಾ? ಒಂದು ಪರಿಸರ ಒಪ್ಪಿಗೆ ಪತ್ರ ಪಡೆಯಲು ಎರಡೂವರೆ ವರ್ಷ ಬೇಕಾ? ಸಿದ್ದರಾಮಯ್ಯ ಅವರ ಸರ್ಕಾರ ಏನೂ ಮಾಡಿಲ್ಲ ಎಂದು ಇದಕ್ಕೆ ರಾಜಕೀಯ ಬಣ್ಣ ಬಳಿಯಲು ನೋಡುತ್ತಿದ್ದಾರೆ. ನಾವಿದ್ದಾಗಲೇ ಯೋಜನೆ ಜಾರಿ ಪ್ರಕ್ರಿಯೆ ಆರಂಭವಾಗಿದ್ದು, ಡಿ.ಪಿ.ಆರ್. ಸಿದ್ಧಪಡಿಸಿ ಕೇಂದ್ರದ ಅನುಮತಿಗೆ ಕಳುಹಿಸಿದ್ದು ಎಂದು ಮಾಹಿತಿ ನೀಡಿದ್ದಾರೆ.

ಈ ಸರ್ಕಾರ ಏನು ಮಾಡಿದೆ ಹೇಳಲಿ. ತಾವು ಏನನ್ನು ಮಾಡದೆ ನಮ್ಮ ಮೇಲೆ ಆರೋಪ ಮಾಡೋದಕ್ಕೆ ಅರ್ಥ ಇಲ್ಲ. ಹಿಂದೆ ಯಡಿಯೂರಪ್ಪ, ಸದಾನಂದಗೌಡರು, ಜಗದೀಶ್ ಶೆಟ್ಟರ್ ಅವರು ಐದು ವರ್ಷ ಮುಖ್ಯಮಂತ್ರಿ ಆಗಿದ್ದರಲ್ಲ ಆಗೇನು ಮಾಡಿದ್ರು? ಈಗಿನ ಸರ್ಕಾರ ಏನು ಮಾಡಿದೆ? ಸರ್ಕಾರ ಅನುಮತಿ ನೀಡುತ್ತಾ, ನಮ್ಮ ಬಂಧನ ಮಾಡುತ್ತಾ ಗೊತ್ತಿಲ್ಲ. ಹದಿನೈದು ಜನ ಇದ್ರೂ ಅದು 144 ಸೆಕ್ಷನ್‌ನ ಮೀರಿದಂತೆಯೇ ಆಗುತ್ತೆ. ಐದು ಜನಕ್ಕಿಂತ ಜಾಸ್ತಿ ಸೇರಬಾರದು ಎಂದು ನಿಯಮ ಹೇಳುತ್ತೆ. ಹದಿನೈದು ಜನಕ್ಕೆ ಅನುಮತಿ ಏಕೆ? ಹಿಂದಿನ ಸರ್ಕಾರ ಅದು ಮಾಡಿಲ್ಲ ಇದು ಮಾಡಿಲ್ಲ ಎನ್ನೋಕೆ ಬಿಜೆಪಿ ಅಧಿಕಾರಕ್ಕೆ ಬಂದಿರೋದ? ತಾವೇನು ಮಾಡಿದ್ದಾರೆಂದು ಜನರಿಗೆ ಹೇಳಬೇಕಲ್ವಾ? ಎಂದು ಕೇಳಿದರು.

ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲ್ಲ, ಅವರು ಹತಾಶೆಯಿಂದ ಏನೇನೋ ಹೇಳ್ತಾರೆ, ಅದಕ್ಕೆಲ್ಲ ನಾನು ಉತ್ತರ ಕೊಡಲ್ಲ ಎಂದು ಸ್ಪಷ್ಟಪಡಿಸಿದರು.


ಇದನ್ನೂ ಓದಿರಿ: ಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...