Homeಕರ್ನಾಟಕಮೇಕೆದಾಟು ಪಾದಯಾತ್ರೆ ತಡೆಯಲು ರಾಮನಗರದಲ್ಲಿ ಮಾತ್ರ ನಿಷೇದಾಜ್ಞೆ: ಸಿದ್ದರಾಮಯ್ಯ

ಮೇಕೆದಾಟು ಪಾದಯಾತ್ರೆ ತಡೆಯಲು ರಾಮನಗರದಲ್ಲಿ ಮಾತ್ರ ನಿಷೇದಾಜ್ಞೆ: ಸಿದ್ದರಾಮಯ್ಯ

- Advertisement -
- Advertisement -

ರಾಮನಗರ ಜಿಲ್ಲೆಗೆ ಸೀಮಿತವಾಗಿ ಸರ್ಕಾರ 144 ಸೆಕ್ಷನ್ ಹೇರಿರುವುದು ಏನಾದರೂ ಮಾಡಿ ನಮ್ಮ ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂಬ ದುರುದ್ದೇಶವನ್ನು ತೋರಿಸುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ನಾಳೆ ಪಾದಯಾತ್ರೆ ಮಾಡುವುದು ನಿಶ್ಚಿತ, ಈ ಸರ್ಕಾರ ನಮ್ಮ ಮೇಲೆ ಏನು ಕ್ರಮ ಜರುಗಿಸುತ್ತದೋ ಜರುಗಿಸಲಿ. ನಾವು ಎಲ್ಲವನ್ನು ಎದುರಿಸಲು ಸಿದ್ಧರಿದ್ದೇವೆ ಎಂದಿದ್ದಾರೆ.

ಬಿಜೆಪಿಯವರು ಅಧಿಕಾರದಲ್ಲಿ ಇದ್ದಾರೆ. ನಾವು ಕೊರೊನಾ ನಿಯಮಗಳನ್ನು ಅನುಸರಿಸಿಯೇ ಪಾದಯಾತ್ರೆ ಮಾಡುತ್ತೇವೆ. ನಮ್ಮ ಮೇಲೆ ಏನು ಕಾನೂನು ಕ್ರಮ ತೆಗೆದುಕೊಳ್ಳಬೇಕು, ಅದನ್ನು ಸರ್ಕಾರ ಮಾಡಲಿ. ನಾವು ಅದನ್ನು ಎದುರಿಸಲು ತಯಾರಾಗಿದ್ದೇವೆ. ನಾವು ಕಾನೂನನ್ನು ಗೌರವಿಸುತ್ತೇವೆ, ಆದರೂ ಅವರು ನಮ್ಮನ್ನು ಬಂಧಿಸುತ್ತಾರೆ ಎಂದರೆ ಬಂಧಿಸಲಿ ಎಂದು ತಿಳಿಸಿದ್ದಾರೆ.

ಮೇಕೆದಾಟು ಬಳಿ 144 ಸೆಕ್ಷನ್ ಜಾರಿಯಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಹಾಗೇನಾದರೂ ಜಾರಿ ಮಾಡಿದ್ದರೆ ನಾಲ್ಕೇ ಜನ ಪಾದಯಾತ್ರೆ ಮಾಡ್ತೇವೆ. ನಮ್ಮ ಪಾದಯಾತ್ರೆ ಘೋಷಣೆಯಾಗಿ ಎರಡು ತಿಂಗಳಾಯ್ತು. ವಾರಾಂತ್ಯದ ಲಾಕ್ ಡೌನ್ ಘೋಷಣೆ ಆಗಿದ್ದು ಮೊನ್ನೆ ಮೊನ್ನೆ. ಅದೂ ಅಲ್ಲದೆ ರಾಮನಗರ ಜಿಲ್ಲೆಯಲ್ಲಿ ಮಾತ್ರ 144 ಸೆಕ್ಷನ್ ಯಾಕೆ? ಬೇರೆ ಜಿಲ್ಲೆಯಲ್ಲಿ ಏಕಿಲ್ಲ? ಇದು ಏನಾದರೂ ಮಾಡಿ ಪಾದಯಾತ್ರೆ ತಡೆಯಬೇಕು ಎಂಬ ಅವರ ದುರುದ್ದೇಶವನ್ನು ತೋರಿಸುತ್ತದೆ. ರಾಮನಗರದಲ್ಲಿ ಗೆಸ್ಟ್ ಹೌಸ್ ಗಳು ಸಿಗದಂತೆ ನಿರ್ಬಂಧ ಹೇರಲಾಗಿದೆ. ಇದಕ್ಕೆ ಏನು ಹೇಳಬೇಕು? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರದ ಜೊತೆ ಸಂಧಾನ ಮಾಡೋಕೇನಿದೆ? ಈ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದಿದೆ. ಅವತ್ತಿಂದ ಏನು ಮಾಡ್ತಿದ್ದಾರೆ. ಕಾವೇರಿ ಜಲ ವಿವಾದ ಇತ್ಯರ್ಥವಾಗಿದ್ದು 2018ರ ಫೆಬ್ರವರಿಯಲ್ಲಿ. ಅದಾದಮೇಲೆ ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡಬೇಕು ಎಂದು ಹೇಳಿದ್ದಾರೆ. ಒಂದು ಸಾಮಾನ್ಯ ವರ್ಷದಲ್ಲಿ ಇಷ್ಟು ನೀರು ಬಿಡೋಣ. ಆದರೆ ಈಗ ಹೆಚ್ಚು ಮಳೆಯಾದ ಕಾರಣ ನೀರು ಸಮುದ್ರಕ್ಕೆ ಹೋಗಿ ವ್ಯರ್ಥವಾಗುತ್ತಿದೆ. ಒಂದು ಜಲಾಶಯ ನಿರ್ಮಾಣ ಮಾಡಿ ವ್ಯರ್ಥವಾಗುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡಬಹುದು ಎಂದು ವಿವರಿಸಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬೊಮ್ಮಾಯಿ ಅವರು ಜಲ ಸಂಪನ್ಮೂಲ ಸಚಿವರಾಗಿದ್ದರು. ಆಗ ಯಾಕೆ ಯೋಜನೆ ಜಾರಿ ಮಾಡಿಲ್ಲ? ಈಗ ಸುಪ್ರೀಂ ಕೋರ್ಟ್, ಕಾವೇರಿ ಜಲ ಪ್ರಾಧಿಕಾರ, ಹಸಿರು ನ್ಯಾಯಾಧೀಕರಣ ಎಲ್ಲಿಯೂ ಯೋಜನೆ ಜಾರಿ ಮಾಡದಂತೆ ತಡೆ ನೀಡಿಲ್ಲ. ಎರಡೂ ಕಡೆ ಬಿಜೆಪಿಯವರ ಸರ್ಕಾರವೇ ಇದೆ, ಅಣೆಕಟ್ಟು ನಿರ್ಮಾಣಕ್ಕೆ ಬೇರಾವ ತೊಂದರೆ ಇದೆ ಹೇಳಲಿ. ಈ ಸರ್ಕಾರ ಪರಿಸರ ಇಲಾಖೆಯ ಅನುಮತಿ ಪಡೆಯಲು ಯಾವತ್ತಾದರೂ ಒತ್ತಾಯ ಮಾಡಿದೆಯಾ? ಒಂದು ಪರಿಸರ ಒಪ್ಪಿಗೆ ಪತ್ರ ಪಡೆಯಲು ಎರಡೂವರೆ ವರ್ಷ ಬೇಕಾ? ಸಿದ್ದರಾಮಯ್ಯ ಅವರ ಸರ್ಕಾರ ಏನೂ ಮಾಡಿಲ್ಲ ಎಂದು ಇದಕ್ಕೆ ರಾಜಕೀಯ ಬಣ್ಣ ಬಳಿಯಲು ನೋಡುತ್ತಿದ್ದಾರೆ. ನಾವಿದ್ದಾಗಲೇ ಯೋಜನೆ ಜಾರಿ ಪ್ರಕ್ರಿಯೆ ಆರಂಭವಾಗಿದ್ದು, ಡಿ.ಪಿ.ಆರ್. ಸಿದ್ಧಪಡಿಸಿ ಕೇಂದ್ರದ ಅನುಮತಿಗೆ ಕಳುಹಿಸಿದ್ದು ಎಂದು ಮಾಹಿತಿ ನೀಡಿದ್ದಾರೆ.

ಈ ಸರ್ಕಾರ ಏನು ಮಾಡಿದೆ ಹೇಳಲಿ. ತಾವು ಏನನ್ನು ಮಾಡದೆ ನಮ್ಮ ಮೇಲೆ ಆರೋಪ ಮಾಡೋದಕ್ಕೆ ಅರ್ಥ ಇಲ್ಲ. ಹಿಂದೆ ಯಡಿಯೂರಪ್ಪ, ಸದಾನಂದಗೌಡರು, ಜಗದೀಶ್ ಶೆಟ್ಟರ್ ಅವರು ಐದು ವರ್ಷ ಮುಖ್ಯಮಂತ್ರಿ ಆಗಿದ್ದರಲ್ಲ ಆಗೇನು ಮಾಡಿದ್ರು? ಈಗಿನ ಸರ್ಕಾರ ಏನು ಮಾಡಿದೆ? ಸರ್ಕಾರ ಅನುಮತಿ ನೀಡುತ್ತಾ, ನಮ್ಮ ಬಂಧನ ಮಾಡುತ್ತಾ ಗೊತ್ತಿಲ್ಲ. ಹದಿನೈದು ಜನ ಇದ್ರೂ ಅದು 144 ಸೆಕ್ಷನ್‌ನ ಮೀರಿದಂತೆಯೇ ಆಗುತ್ತೆ. ಐದು ಜನಕ್ಕಿಂತ ಜಾಸ್ತಿ ಸೇರಬಾರದು ಎಂದು ನಿಯಮ ಹೇಳುತ್ತೆ. ಹದಿನೈದು ಜನಕ್ಕೆ ಅನುಮತಿ ಏಕೆ? ಹಿಂದಿನ ಸರ್ಕಾರ ಅದು ಮಾಡಿಲ್ಲ ಇದು ಮಾಡಿಲ್ಲ ಎನ್ನೋಕೆ ಬಿಜೆಪಿ ಅಧಿಕಾರಕ್ಕೆ ಬಂದಿರೋದ? ತಾವೇನು ಮಾಡಿದ್ದಾರೆಂದು ಜನರಿಗೆ ಹೇಳಬೇಕಲ್ವಾ? ಎಂದು ಕೇಳಿದರು.

ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲ್ಲ, ಅವರು ಹತಾಶೆಯಿಂದ ಏನೇನೋ ಹೇಳ್ತಾರೆ, ಅದಕ್ಕೆಲ್ಲ ನಾನು ಉತ್ತರ ಕೊಡಲ್ಲ ಎಂದು ಸ್ಪಷ್ಟಪಡಿಸಿದರು.


ಇದನ್ನೂ ಓದಿರಿ: ಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...