Homeಕರ್ನಾಟಕಮೇಕೆದಾಟು ಪಾದಯಾತ್ರೆ ತಡೆಯಲು ರಾಮನಗರದಲ್ಲಿ ಮಾತ್ರ ನಿಷೇದಾಜ್ಞೆ: ಸಿದ್ದರಾಮಯ್ಯ

ಮೇಕೆದಾಟು ಪಾದಯಾತ್ರೆ ತಡೆಯಲು ರಾಮನಗರದಲ್ಲಿ ಮಾತ್ರ ನಿಷೇದಾಜ್ಞೆ: ಸಿದ್ದರಾಮಯ್ಯ

- Advertisement -
- Advertisement -

ರಾಮನಗರ ಜಿಲ್ಲೆಗೆ ಸೀಮಿತವಾಗಿ ಸರ್ಕಾರ 144 ಸೆಕ್ಷನ್ ಹೇರಿರುವುದು ಏನಾದರೂ ಮಾಡಿ ನಮ್ಮ ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂಬ ದುರುದ್ದೇಶವನ್ನು ತೋರಿಸುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ನಾಳೆ ಪಾದಯಾತ್ರೆ ಮಾಡುವುದು ನಿಶ್ಚಿತ, ಈ ಸರ್ಕಾರ ನಮ್ಮ ಮೇಲೆ ಏನು ಕ್ರಮ ಜರುಗಿಸುತ್ತದೋ ಜರುಗಿಸಲಿ. ನಾವು ಎಲ್ಲವನ್ನು ಎದುರಿಸಲು ಸಿದ್ಧರಿದ್ದೇವೆ ಎಂದಿದ್ದಾರೆ.

ಬಿಜೆಪಿಯವರು ಅಧಿಕಾರದಲ್ಲಿ ಇದ್ದಾರೆ. ನಾವು ಕೊರೊನಾ ನಿಯಮಗಳನ್ನು ಅನುಸರಿಸಿಯೇ ಪಾದಯಾತ್ರೆ ಮಾಡುತ್ತೇವೆ. ನಮ್ಮ ಮೇಲೆ ಏನು ಕಾನೂನು ಕ್ರಮ ತೆಗೆದುಕೊಳ್ಳಬೇಕು, ಅದನ್ನು ಸರ್ಕಾರ ಮಾಡಲಿ. ನಾವು ಅದನ್ನು ಎದುರಿಸಲು ತಯಾರಾಗಿದ್ದೇವೆ. ನಾವು ಕಾನೂನನ್ನು ಗೌರವಿಸುತ್ತೇವೆ, ಆದರೂ ಅವರು ನಮ್ಮನ್ನು ಬಂಧಿಸುತ್ತಾರೆ ಎಂದರೆ ಬಂಧಿಸಲಿ ಎಂದು ತಿಳಿಸಿದ್ದಾರೆ.

ಮೇಕೆದಾಟು ಬಳಿ 144 ಸೆಕ್ಷನ್ ಜಾರಿಯಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಹಾಗೇನಾದರೂ ಜಾರಿ ಮಾಡಿದ್ದರೆ ನಾಲ್ಕೇ ಜನ ಪಾದಯಾತ್ರೆ ಮಾಡ್ತೇವೆ. ನಮ್ಮ ಪಾದಯಾತ್ರೆ ಘೋಷಣೆಯಾಗಿ ಎರಡು ತಿಂಗಳಾಯ್ತು. ವಾರಾಂತ್ಯದ ಲಾಕ್ ಡೌನ್ ಘೋಷಣೆ ಆಗಿದ್ದು ಮೊನ್ನೆ ಮೊನ್ನೆ. ಅದೂ ಅಲ್ಲದೆ ರಾಮನಗರ ಜಿಲ್ಲೆಯಲ್ಲಿ ಮಾತ್ರ 144 ಸೆಕ್ಷನ್ ಯಾಕೆ? ಬೇರೆ ಜಿಲ್ಲೆಯಲ್ಲಿ ಏಕಿಲ್ಲ? ಇದು ಏನಾದರೂ ಮಾಡಿ ಪಾದಯಾತ್ರೆ ತಡೆಯಬೇಕು ಎಂಬ ಅವರ ದುರುದ್ದೇಶವನ್ನು ತೋರಿಸುತ್ತದೆ. ರಾಮನಗರದಲ್ಲಿ ಗೆಸ್ಟ್ ಹೌಸ್ ಗಳು ಸಿಗದಂತೆ ನಿರ್ಬಂಧ ಹೇರಲಾಗಿದೆ. ಇದಕ್ಕೆ ಏನು ಹೇಳಬೇಕು? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರದ ಜೊತೆ ಸಂಧಾನ ಮಾಡೋಕೇನಿದೆ? ಈ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದಿದೆ. ಅವತ್ತಿಂದ ಏನು ಮಾಡ್ತಿದ್ದಾರೆ. ಕಾವೇರಿ ಜಲ ವಿವಾದ ಇತ್ಯರ್ಥವಾಗಿದ್ದು 2018ರ ಫೆಬ್ರವರಿಯಲ್ಲಿ. ಅದಾದಮೇಲೆ ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡಬೇಕು ಎಂದು ಹೇಳಿದ್ದಾರೆ. ಒಂದು ಸಾಮಾನ್ಯ ವರ್ಷದಲ್ಲಿ ಇಷ್ಟು ನೀರು ಬಿಡೋಣ. ಆದರೆ ಈಗ ಹೆಚ್ಚು ಮಳೆಯಾದ ಕಾರಣ ನೀರು ಸಮುದ್ರಕ್ಕೆ ಹೋಗಿ ವ್ಯರ್ಥವಾಗುತ್ತಿದೆ. ಒಂದು ಜಲಾಶಯ ನಿರ್ಮಾಣ ಮಾಡಿ ವ್ಯರ್ಥವಾಗುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡಬಹುದು ಎಂದು ವಿವರಿಸಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬೊಮ್ಮಾಯಿ ಅವರು ಜಲ ಸಂಪನ್ಮೂಲ ಸಚಿವರಾಗಿದ್ದರು. ಆಗ ಯಾಕೆ ಯೋಜನೆ ಜಾರಿ ಮಾಡಿಲ್ಲ? ಈಗ ಸುಪ್ರೀಂ ಕೋರ್ಟ್, ಕಾವೇರಿ ಜಲ ಪ್ರಾಧಿಕಾರ, ಹಸಿರು ನ್ಯಾಯಾಧೀಕರಣ ಎಲ್ಲಿಯೂ ಯೋಜನೆ ಜಾರಿ ಮಾಡದಂತೆ ತಡೆ ನೀಡಿಲ್ಲ. ಎರಡೂ ಕಡೆ ಬಿಜೆಪಿಯವರ ಸರ್ಕಾರವೇ ಇದೆ, ಅಣೆಕಟ್ಟು ನಿರ್ಮಾಣಕ್ಕೆ ಬೇರಾವ ತೊಂದರೆ ಇದೆ ಹೇಳಲಿ. ಈ ಸರ್ಕಾರ ಪರಿಸರ ಇಲಾಖೆಯ ಅನುಮತಿ ಪಡೆಯಲು ಯಾವತ್ತಾದರೂ ಒತ್ತಾಯ ಮಾಡಿದೆಯಾ? ಒಂದು ಪರಿಸರ ಒಪ್ಪಿಗೆ ಪತ್ರ ಪಡೆಯಲು ಎರಡೂವರೆ ವರ್ಷ ಬೇಕಾ? ಸಿದ್ದರಾಮಯ್ಯ ಅವರ ಸರ್ಕಾರ ಏನೂ ಮಾಡಿಲ್ಲ ಎಂದು ಇದಕ್ಕೆ ರಾಜಕೀಯ ಬಣ್ಣ ಬಳಿಯಲು ನೋಡುತ್ತಿದ್ದಾರೆ. ನಾವಿದ್ದಾಗಲೇ ಯೋಜನೆ ಜಾರಿ ಪ್ರಕ್ರಿಯೆ ಆರಂಭವಾಗಿದ್ದು, ಡಿ.ಪಿ.ಆರ್. ಸಿದ್ಧಪಡಿಸಿ ಕೇಂದ್ರದ ಅನುಮತಿಗೆ ಕಳುಹಿಸಿದ್ದು ಎಂದು ಮಾಹಿತಿ ನೀಡಿದ್ದಾರೆ.

ಈ ಸರ್ಕಾರ ಏನು ಮಾಡಿದೆ ಹೇಳಲಿ. ತಾವು ಏನನ್ನು ಮಾಡದೆ ನಮ್ಮ ಮೇಲೆ ಆರೋಪ ಮಾಡೋದಕ್ಕೆ ಅರ್ಥ ಇಲ್ಲ. ಹಿಂದೆ ಯಡಿಯೂರಪ್ಪ, ಸದಾನಂದಗೌಡರು, ಜಗದೀಶ್ ಶೆಟ್ಟರ್ ಅವರು ಐದು ವರ್ಷ ಮುಖ್ಯಮಂತ್ರಿ ಆಗಿದ್ದರಲ್ಲ ಆಗೇನು ಮಾಡಿದ್ರು? ಈಗಿನ ಸರ್ಕಾರ ಏನು ಮಾಡಿದೆ? ಸರ್ಕಾರ ಅನುಮತಿ ನೀಡುತ್ತಾ, ನಮ್ಮ ಬಂಧನ ಮಾಡುತ್ತಾ ಗೊತ್ತಿಲ್ಲ. ಹದಿನೈದು ಜನ ಇದ್ರೂ ಅದು 144 ಸೆಕ್ಷನ್‌ನ ಮೀರಿದಂತೆಯೇ ಆಗುತ್ತೆ. ಐದು ಜನಕ್ಕಿಂತ ಜಾಸ್ತಿ ಸೇರಬಾರದು ಎಂದು ನಿಯಮ ಹೇಳುತ್ತೆ. ಹದಿನೈದು ಜನಕ್ಕೆ ಅನುಮತಿ ಏಕೆ? ಹಿಂದಿನ ಸರ್ಕಾರ ಅದು ಮಾಡಿಲ್ಲ ಇದು ಮಾಡಿಲ್ಲ ಎನ್ನೋಕೆ ಬಿಜೆಪಿ ಅಧಿಕಾರಕ್ಕೆ ಬಂದಿರೋದ? ತಾವೇನು ಮಾಡಿದ್ದಾರೆಂದು ಜನರಿಗೆ ಹೇಳಬೇಕಲ್ವಾ? ಎಂದು ಕೇಳಿದರು.

ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲ್ಲ, ಅವರು ಹತಾಶೆಯಿಂದ ಏನೇನೋ ಹೇಳ್ತಾರೆ, ಅದಕ್ಕೆಲ್ಲ ನಾನು ಉತ್ತರ ಕೊಡಲ್ಲ ಎಂದು ಸ್ಪಷ್ಟಪಡಿಸಿದರು.


ಇದನ್ನೂ ಓದಿರಿ: ಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...