Homeಕರ್ನಾಟಕಮೇಕೆದಾಟು ಪಾದಯಾತ್ರೆ ತಡೆಯಲು ರಾಮನಗರದಲ್ಲಿ ಮಾತ್ರ ನಿಷೇದಾಜ್ಞೆ: ಸಿದ್ದರಾಮಯ್ಯ

ಮೇಕೆದಾಟು ಪಾದಯಾತ್ರೆ ತಡೆಯಲು ರಾಮನಗರದಲ್ಲಿ ಮಾತ್ರ ನಿಷೇದಾಜ್ಞೆ: ಸಿದ್ದರಾಮಯ್ಯ

- Advertisement -
- Advertisement -

ರಾಮನಗರ ಜಿಲ್ಲೆಗೆ ಸೀಮಿತವಾಗಿ ಸರ್ಕಾರ 144 ಸೆಕ್ಷನ್ ಹೇರಿರುವುದು ಏನಾದರೂ ಮಾಡಿ ನಮ್ಮ ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂಬ ದುರುದ್ದೇಶವನ್ನು ತೋರಿಸುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ನಾಳೆ ಪಾದಯಾತ್ರೆ ಮಾಡುವುದು ನಿಶ್ಚಿತ, ಈ ಸರ್ಕಾರ ನಮ್ಮ ಮೇಲೆ ಏನು ಕ್ರಮ ಜರುಗಿಸುತ್ತದೋ ಜರುಗಿಸಲಿ. ನಾವು ಎಲ್ಲವನ್ನು ಎದುರಿಸಲು ಸಿದ್ಧರಿದ್ದೇವೆ ಎಂದಿದ್ದಾರೆ.

ಬಿಜೆಪಿಯವರು ಅಧಿಕಾರದಲ್ಲಿ ಇದ್ದಾರೆ. ನಾವು ಕೊರೊನಾ ನಿಯಮಗಳನ್ನು ಅನುಸರಿಸಿಯೇ ಪಾದಯಾತ್ರೆ ಮಾಡುತ್ತೇವೆ. ನಮ್ಮ ಮೇಲೆ ಏನು ಕಾನೂನು ಕ್ರಮ ತೆಗೆದುಕೊಳ್ಳಬೇಕು, ಅದನ್ನು ಸರ್ಕಾರ ಮಾಡಲಿ. ನಾವು ಅದನ್ನು ಎದುರಿಸಲು ತಯಾರಾಗಿದ್ದೇವೆ. ನಾವು ಕಾನೂನನ್ನು ಗೌರವಿಸುತ್ತೇವೆ, ಆದರೂ ಅವರು ನಮ್ಮನ್ನು ಬಂಧಿಸುತ್ತಾರೆ ಎಂದರೆ ಬಂಧಿಸಲಿ ಎಂದು ತಿಳಿಸಿದ್ದಾರೆ.

ಮೇಕೆದಾಟು ಬಳಿ 144 ಸೆಕ್ಷನ್ ಜಾರಿಯಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಹಾಗೇನಾದರೂ ಜಾರಿ ಮಾಡಿದ್ದರೆ ನಾಲ್ಕೇ ಜನ ಪಾದಯಾತ್ರೆ ಮಾಡ್ತೇವೆ. ನಮ್ಮ ಪಾದಯಾತ್ರೆ ಘೋಷಣೆಯಾಗಿ ಎರಡು ತಿಂಗಳಾಯ್ತು. ವಾರಾಂತ್ಯದ ಲಾಕ್ ಡೌನ್ ಘೋಷಣೆ ಆಗಿದ್ದು ಮೊನ್ನೆ ಮೊನ್ನೆ. ಅದೂ ಅಲ್ಲದೆ ರಾಮನಗರ ಜಿಲ್ಲೆಯಲ್ಲಿ ಮಾತ್ರ 144 ಸೆಕ್ಷನ್ ಯಾಕೆ? ಬೇರೆ ಜಿಲ್ಲೆಯಲ್ಲಿ ಏಕಿಲ್ಲ? ಇದು ಏನಾದರೂ ಮಾಡಿ ಪಾದಯಾತ್ರೆ ತಡೆಯಬೇಕು ಎಂಬ ಅವರ ದುರುದ್ದೇಶವನ್ನು ತೋರಿಸುತ್ತದೆ. ರಾಮನಗರದಲ್ಲಿ ಗೆಸ್ಟ್ ಹೌಸ್ ಗಳು ಸಿಗದಂತೆ ನಿರ್ಬಂಧ ಹೇರಲಾಗಿದೆ. ಇದಕ್ಕೆ ಏನು ಹೇಳಬೇಕು? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರದ ಜೊತೆ ಸಂಧಾನ ಮಾಡೋಕೇನಿದೆ? ಈ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದಿದೆ. ಅವತ್ತಿಂದ ಏನು ಮಾಡ್ತಿದ್ದಾರೆ. ಕಾವೇರಿ ಜಲ ವಿವಾದ ಇತ್ಯರ್ಥವಾಗಿದ್ದು 2018ರ ಫೆಬ್ರವರಿಯಲ್ಲಿ. ಅದಾದಮೇಲೆ ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡಬೇಕು ಎಂದು ಹೇಳಿದ್ದಾರೆ. ಒಂದು ಸಾಮಾನ್ಯ ವರ್ಷದಲ್ಲಿ ಇಷ್ಟು ನೀರು ಬಿಡೋಣ. ಆದರೆ ಈಗ ಹೆಚ್ಚು ಮಳೆಯಾದ ಕಾರಣ ನೀರು ಸಮುದ್ರಕ್ಕೆ ಹೋಗಿ ವ್ಯರ್ಥವಾಗುತ್ತಿದೆ. ಒಂದು ಜಲಾಶಯ ನಿರ್ಮಾಣ ಮಾಡಿ ವ್ಯರ್ಥವಾಗುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡಬಹುದು ಎಂದು ವಿವರಿಸಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬೊಮ್ಮಾಯಿ ಅವರು ಜಲ ಸಂಪನ್ಮೂಲ ಸಚಿವರಾಗಿದ್ದರು. ಆಗ ಯಾಕೆ ಯೋಜನೆ ಜಾರಿ ಮಾಡಿಲ್ಲ? ಈಗ ಸುಪ್ರೀಂ ಕೋರ್ಟ್, ಕಾವೇರಿ ಜಲ ಪ್ರಾಧಿಕಾರ, ಹಸಿರು ನ್ಯಾಯಾಧೀಕರಣ ಎಲ್ಲಿಯೂ ಯೋಜನೆ ಜಾರಿ ಮಾಡದಂತೆ ತಡೆ ನೀಡಿಲ್ಲ. ಎರಡೂ ಕಡೆ ಬಿಜೆಪಿಯವರ ಸರ್ಕಾರವೇ ಇದೆ, ಅಣೆಕಟ್ಟು ನಿರ್ಮಾಣಕ್ಕೆ ಬೇರಾವ ತೊಂದರೆ ಇದೆ ಹೇಳಲಿ. ಈ ಸರ್ಕಾರ ಪರಿಸರ ಇಲಾಖೆಯ ಅನುಮತಿ ಪಡೆಯಲು ಯಾವತ್ತಾದರೂ ಒತ್ತಾಯ ಮಾಡಿದೆಯಾ? ಒಂದು ಪರಿಸರ ಒಪ್ಪಿಗೆ ಪತ್ರ ಪಡೆಯಲು ಎರಡೂವರೆ ವರ್ಷ ಬೇಕಾ? ಸಿದ್ದರಾಮಯ್ಯ ಅವರ ಸರ್ಕಾರ ಏನೂ ಮಾಡಿಲ್ಲ ಎಂದು ಇದಕ್ಕೆ ರಾಜಕೀಯ ಬಣ್ಣ ಬಳಿಯಲು ನೋಡುತ್ತಿದ್ದಾರೆ. ನಾವಿದ್ದಾಗಲೇ ಯೋಜನೆ ಜಾರಿ ಪ್ರಕ್ರಿಯೆ ಆರಂಭವಾಗಿದ್ದು, ಡಿ.ಪಿ.ಆರ್. ಸಿದ್ಧಪಡಿಸಿ ಕೇಂದ್ರದ ಅನುಮತಿಗೆ ಕಳುಹಿಸಿದ್ದು ಎಂದು ಮಾಹಿತಿ ನೀಡಿದ್ದಾರೆ.

ಈ ಸರ್ಕಾರ ಏನು ಮಾಡಿದೆ ಹೇಳಲಿ. ತಾವು ಏನನ್ನು ಮಾಡದೆ ನಮ್ಮ ಮೇಲೆ ಆರೋಪ ಮಾಡೋದಕ್ಕೆ ಅರ್ಥ ಇಲ್ಲ. ಹಿಂದೆ ಯಡಿಯೂರಪ್ಪ, ಸದಾನಂದಗೌಡರು, ಜಗದೀಶ್ ಶೆಟ್ಟರ್ ಅವರು ಐದು ವರ್ಷ ಮುಖ್ಯಮಂತ್ರಿ ಆಗಿದ್ದರಲ್ಲ ಆಗೇನು ಮಾಡಿದ್ರು? ಈಗಿನ ಸರ್ಕಾರ ಏನು ಮಾಡಿದೆ? ಸರ್ಕಾರ ಅನುಮತಿ ನೀಡುತ್ತಾ, ನಮ್ಮ ಬಂಧನ ಮಾಡುತ್ತಾ ಗೊತ್ತಿಲ್ಲ. ಹದಿನೈದು ಜನ ಇದ್ರೂ ಅದು 144 ಸೆಕ್ಷನ್‌ನ ಮೀರಿದಂತೆಯೇ ಆಗುತ್ತೆ. ಐದು ಜನಕ್ಕಿಂತ ಜಾಸ್ತಿ ಸೇರಬಾರದು ಎಂದು ನಿಯಮ ಹೇಳುತ್ತೆ. ಹದಿನೈದು ಜನಕ್ಕೆ ಅನುಮತಿ ಏಕೆ? ಹಿಂದಿನ ಸರ್ಕಾರ ಅದು ಮಾಡಿಲ್ಲ ಇದು ಮಾಡಿಲ್ಲ ಎನ್ನೋಕೆ ಬಿಜೆಪಿ ಅಧಿಕಾರಕ್ಕೆ ಬಂದಿರೋದ? ತಾವೇನು ಮಾಡಿದ್ದಾರೆಂದು ಜನರಿಗೆ ಹೇಳಬೇಕಲ್ವಾ? ಎಂದು ಕೇಳಿದರು.

ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲ್ಲ, ಅವರು ಹತಾಶೆಯಿಂದ ಏನೇನೋ ಹೇಳ್ತಾರೆ, ಅದಕ್ಕೆಲ್ಲ ನಾನು ಉತ್ತರ ಕೊಡಲ್ಲ ಎಂದು ಸ್ಪಷ್ಟಪಡಿಸಿದರು.


ಇದನ್ನೂ ಓದಿರಿ: ಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...