Homeರಾಷ್ಟ್ರೀಯವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸುವಂತೆ ಪತ್ರ ಬರೆದ 'ಜಾತ್ಯತೀತ ಜನತಾದಳ' ನಾಯಕ ಕುಮಾರಸ್ವಾಮಿ

ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸುವಂತೆ ಪತ್ರ ಬರೆದ ‘ಜಾತ್ಯತೀತ ಜನತಾದಳ’ ನಾಯಕ ಕುಮಾರಸ್ವಾಮಿ

- Advertisement -
- Advertisement -

ಭಗವದ್ಗೀತೆಯನ್ನು ‘ಪವಿತ್ರ ಗ್ರಂಥ’ ಎಂದಿರುವ ಜಾತ್ಯತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ, ವಿದ್ಯಾರ್ಥಿಗಳಿಗೆ ಪಠ್ಯದಲ್ಲಿ ಭಗವದ್ಗೀತೆ ಬೋಧಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ, “ನಮ್ಮ ನೆಲದ ಪವಿತ್ರ ಗ್ರಂಥ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಪಠ್ಯದ ಮೂಲಕ ಬೋಧಿಸಬೇಕು, ಆ ನಿಟ್ಟಿನಲ್ಲಿ ಕ್ರಮ ವಹಿಸಬೇಕು” ಎಂದು ವಿನಂತಿಸಿದ್ದಾರೆ.

“ನಿಷ್ಕಾಮ ಕರ್ಮದ ಕಾಲಾತೀತ ಮೌಲ್ಯಗಳು, ಪ್ರಾಮಾಣಿಕತೆ ಮತ್ತು ನೈತಿಕ ಶಕ್ತಿಯು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿಯಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಹೆಚ್ಚು ಉತ್ಕೃಷ್ಟಗೊಳಿಸುತ್ತದೆ ಮತ್ತು ನಮ್ಮ ಯುವಜನರು ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಪ್ರಜೆಗಳಾಗಿ ರೂಪುಗೊಂಡು ಜಾಗತಿಕವಾಗಿ ಶ್ರೇಷ್ಠರಾಗಲು ಸ್ಫೂರ್ತಿ, ಪ್ರೇರಣೆ ನೀಡುತ್ತದೆ. ಅತ್ಯಂತ ಶ್ರೇಷ್ಠ, ಮಾನವೀಯತೆಯ ಭಾರತೀಯ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸಂಕಲ್ಪಕ್ಕೆ ಅನುಗುಣವಾಗಿ ಭಗವದ್ಗೀತೆ ಬೋಧನೆ ಅಗತ್ಯವಿದೆ ಎಂದು ನಾನು ಬಲವಾಗಿ ನಂಬಿದ್ದೇನೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕುಮಾರಸ್ವಾಮಿ ಪತ್ರಕ್ಕೆ ಬಿಜೆಪಿ ಬೆಂಬಲಿಗರಿಂದ ಮೆಚ್ಚುಗೆ

ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪತ್ರ ಬರೆದಿರುವುದಕ್ಕೆ ಬಿಜೆಪಿ ಬೆಂಬಲಿಗರು ಮತ್ತು ಬಲಪಂಥೀಯ ಹಿಂದುತ್ವವಾದ ಬೆಂಬಲಿಗರು ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಧನ್ಯವಾದಗಳು ಸರ್, ನಮ್ಮ ಸನಾತನ ಸಂಸ್ಕೃತಿ ಯನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ಬರುವುದು ಉತ್ತಮ” ಎಂದು ಫೇಸ್‌ಬುಕ್‌ ಬಳಕೆದಾರರೊಬ್ಬರು ಬರೆದಿದ್ದಾರೆ.

“ನಿಮ್ಮ ಮೇಲೆ ಇದ್ದ ಅಭಿಪ್ರಾಯ ಬದಲಾಯ್ತು ಅಣ್ಣ, ನಿಮ್ಮ ಧರ್ಮ ನಿಷ್ಠೆಗೆ ನನ್ನ ನಮನಗಳು” ಎಂದು ಬಿಜೆಪಿ ಬೆಂಬಲಿಗರೊಬ್ಬರು ಮತ್ತು “ನಮ್ಮದೇಶ ಗುರುಕುಲಗಳ ತಾಣ. ಮೊದಲಿನಿಂದಲೂ ರಾಮಾಯಣ, ಮಹಾಭಾರತ ಪ್ರವಚನಗಳು ನಡೆಯುತ್ತಿತ್ತು. ಕುತಂತ್ರಿಗಳು ಮತ್ತು ಧರ್ಮದ್ರೋಹಿಗಳಿಂದ ನಮ್ಮ ದೇಶ ಹಾಳಾಗಿತ್ತು. ಸದ್ಯ ಈಗಲಾದರೂ ಎಲ್ಲಾ ಹಿಂದುಗಳು ಒಟ್ಟುಗೂಡಲಿ. ಅಭಿವೃದ್ಧಿಯು ನಡೆಯಲಿ ಧರ್ಮವು ಬೆಳೆಯಲಿ” ಮತ್ತೊಬ್ಬ ಬಳಕೆದಾರ ಮೆಚ್ಚುಗೆ ಸೂಚಿಸಿದ್ದಾರೆ.

ಕುಮಾರಸ್ವಾಮಿ ಪೋಸ್ಟ್‌ಗೆ ವಿರೋಧ:

ಕುಮಾರಸ್ವಾಮಿ ಅವರ ಪೋಸ್ಟ್‌ಗೆ ಬಲಪಮಥೀಯರು ವಿರೊಧ ವ್ಯಕ್ತಪಡಿಸಿದ್ದರೆ, ಕೆಲವರು ವಿರೊಧ ವ್ಯಕ್ತಪಡಿಸಿದ್ದಾರೆ. “ಭಗವದ್ಗೀತೆ ಗಿಂತಲೂ ಮಕ್ಕಳಿಗೆ ಚಿಕ್ಕಂದಿನಿಂದಲೇ ಸಂವಿಧಾನದ ಪಾಠ ಬಹಳ ಮುಖ್ಯ” ಎಂದು ಪೇಸ್‌ಬುಕ್ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಅರ್‌ಎಸ್‌ಎಸ್ ಅನ್ನು ಮೆಚ್ಚಿಸಲು ಏನೆಲ್ಲಾ ಲಾಗ ಹೋಡೆಯಬಹುದು ಎಂದು ಇದರಲ್ಲಿ ಗೊತ್ತಾಗುತ್ತೆ. ಒಂದು ನೆನಪಿಡಿ ಕುಮಾರಣ್ಣ.. ನಿಮ್ಮ ಕೈಗೆ ಕೊನೆಗೆ ಅವರು ಕೊಡೋದು ಚೆಂಬು ಮಾತ್ರ” ಎಂದು ಒಬ್ಬರು, “ಅಲ್ಪವಾದರೂ ಸ್ವಾಭಿಮಾನ ಇರಲಿ, ಒಬ್ಬ ಕನ್ನಡಿಗನಾಗಿ ಹೇಳ್ತಿದ್ದೇನೆ ಕುಮಾರಣ್ಣ… ಅಧಿಕಾರಕ್ಕಾಗಿ ನೀವೂ ಒಂದು ಪಕ್ಷಕ್ಕೆ ಇಷ್ಟೊಂದು ಬಕೇಟು ಹಿಡಿಯುತ್ತಿರುವುದು ನನಗಿಷ್ಟ ಇಲ್ಲ” ಎಂದು ಮತ್ತೊರ್ವ ಬಳಕೆದಾರ ಬೇಸರ ಹೊರಹಾಕಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...