Homeರಾಷ್ಟ್ರೀಯವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸುವಂತೆ ಪತ್ರ ಬರೆದ 'ಜಾತ್ಯತೀತ ಜನತಾದಳ' ನಾಯಕ ಕುಮಾರಸ್ವಾಮಿ

ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸುವಂತೆ ಪತ್ರ ಬರೆದ ‘ಜಾತ್ಯತೀತ ಜನತಾದಳ’ ನಾಯಕ ಕುಮಾರಸ್ವಾಮಿ

- Advertisement -
- Advertisement -

ಭಗವದ್ಗೀತೆಯನ್ನು ‘ಪವಿತ್ರ ಗ್ರಂಥ’ ಎಂದಿರುವ ಜಾತ್ಯತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ, ವಿದ್ಯಾರ್ಥಿಗಳಿಗೆ ಪಠ್ಯದಲ್ಲಿ ಭಗವದ್ಗೀತೆ ಬೋಧಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ, “ನಮ್ಮ ನೆಲದ ಪವಿತ್ರ ಗ್ರಂಥ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಪಠ್ಯದ ಮೂಲಕ ಬೋಧಿಸಬೇಕು, ಆ ನಿಟ್ಟಿನಲ್ಲಿ ಕ್ರಮ ವಹಿಸಬೇಕು” ಎಂದು ವಿನಂತಿಸಿದ್ದಾರೆ.

“ನಿಷ್ಕಾಮ ಕರ್ಮದ ಕಾಲಾತೀತ ಮೌಲ್ಯಗಳು, ಪ್ರಾಮಾಣಿಕತೆ ಮತ್ತು ನೈತಿಕ ಶಕ್ತಿಯು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿಯಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಹೆಚ್ಚು ಉತ್ಕೃಷ್ಟಗೊಳಿಸುತ್ತದೆ ಮತ್ತು ನಮ್ಮ ಯುವಜನರು ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಪ್ರಜೆಗಳಾಗಿ ರೂಪುಗೊಂಡು ಜಾಗತಿಕವಾಗಿ ಶ್ರೇಷ್ಠರಾಗಲು ಸ್ಫೂರ್ತಿ, ಪ್ರೇರಣೆ ನೀಡುತ್ತದೆ. ಅತ್ಯಂತ ಶ್ರೇಷ್ಠ, ಮಾನವೀಯತೆಯ ಭಾರತೀಯ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸಂಕಲ್ಪಕ್ಕೆ ಅನುಗುಣವಾಗಿ ಭಗವದ್ಗೀತೆ ಬೋಧನೆ ಅಗತ್ಯವಿದೆ ಎಂದು ನಾನು ಬಲವಾಗಿ ನಂಬಿದ್ದೇನೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕುಮಾರಸ್ವಾಮಿ ಪತ್ರಕ್ಕೆ ಬಿಜೆಪಿ ಬೆಂಬಲಿಗರಿಂದ ಮೆಚ್ಚುಗೆ

ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪತ್ರ ಬರೆದಿರುವುದಕ್ಕೆ ಬಿಜೆಪಿ ಬೆಂಬಲಿಗರು ಮತ್ತು ಬಲಪಂಥೀಯ ಹಿಂದುತ್ವವಾದ ಬೆಂಬಲಿಗರು ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಧನ್ಯವಾದಗಳು ಸರ್, ನಮ್ಮ ಸನಾತನ ಸಂಸ್ಕೃತಿ ಯನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ಬರುವುದು ಉತ್ತಮ” ಎಂದು ಫೇಸ್‌ಬುಕ್‌ ಬಳಕೆದಾರರೊಬ್ಬರು ಬರೆದಿದ್ದಾರೆ.

“ನಿಮ್ಮ ಮೇಲೆ ಇದ್ದ ಅಭಿಪ್ರಾಯ ಬದಲಾಯ್ತು ಅಣ್ಣ, ನಿಮ್ಮ ಧರ್ಮ ನಿಷ್ಠೆಗೆ ನನ್ನ ನಮನಗಳು” ಎಂದು ಬಿಜೆಪಿ ಬೆಂಬಲಿಗರೊಬ್ಬರು ಮತ್ತು “ನಮ್ಮದೇಶ ಗುರುಕುಲಗಳ ತಾಣ. ಮೊದಲಿನಿಂದಲೂ ರಾಮಾಯಣ, ಮಹಾಭಾರತ ಪ್ರವಚನಗಳು ನಡೆಯುತ್ತಿತ್ತು. ಕುತಂತ್ರಿಗಳು ಮತ್ತು ಧರ್ಮದ್ರೋಹಿಗಳಿಂದ ನಮ್ಮ ದೇಶ ಹಾಳಾಗಿತ್ತು. ಸದ್ಯ ಈಗಲಾದರೂ ಎಲ್ಲಾ ಹಿಂದುಗಳು ಒಟ್ಟುಗೂಡಲಿ. ಅಭಿವೃದ್ಧಿಯು ನಡೆಯಲಿ ಧರ್ಮವು ಬೆಳೆಯಲಿ” ಮತ್ತೊಬ್ಬ ಬಳಕೆದಾರ ಮೆಚ್ಚುಗೆ ಸೂಚಿಸಿದ್ದಾರೆ.

ಕುಮಾರಸ್ವಾಮಿ ಪೋಸ್ಟ್‌ಗೆ ವಿರೋಧ:

ಕುಮಾರಸ್ವಾಮಿ ಅವರ ಪೋಸ್ಟ್‌ಗೆ ಬಲಪಮಥೀಯರು ವಿರೊಧ ವ್ಯಕ್ತಪಡಿಸಿದ್ದರೆ, ಕೆಲವರು ವಿರೊಧ ವ್ಯಕ್ತಪಡಿಸಿದ್ದಾರೆ. “ಭಗವದ್ಗೀತೆ ಗಿಂತಲೂ ಮಕ್ಕಳಿಗೆ ಚಿಕ್ಕಂದಿನಿಂದಲೇ ಸಂವಿಧಾನದ ಪಾಠ ಬಹಳ ಮುಖ್ಯ” ಎಂದು ಪೇಸ್‌ಬುಕ್ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಅರ್‌ಎಸ್‌ಎಸ್ ಅನ್ನು ಮೆಚ್ಚಿಸಲು ಏನೆಲ್ಲಾ ಲಾಗ ಹೋಡೆಯಬಹುದು ಎಂದು ಇದರಲ್ಲಿ ಗೊತ್ತಾಗುತ್ತೆ. ಒಂದು ನೆನಪಿಡಿ ಕುಮಾರಣ್ಣ.. ನಿಮ್ಮ ಕೈಗೆ ಕೊನೆಗೆ ಅವರು ಕೊಡೋದು ಚೆಂಬು ಮಾತ್ರ” ಎಂದು ಒಬ್ಬರು, “ಅಲ್ಪವಾದರೂ ಸ್ವಾಭಿಮಾನ ಇರಲಿ, ಒಬ್ಬ ಕನ್ನಡಿಗನಾಗಿ ಹೇಳ್ತಿದ್ದೇನೆ ಕುಮಾರಣ್ಣ… ಅಧಿಕಾರಕ್ಕಾಗಿ ನೀವೂ ಒಂದು ಪಕ್ಷಕ್ಕೆ ಇಷ್ಟೊಂದು ಬಕೇಟು ಹಿಡಿಯುತ್ತಿರುವುದು ನನಗಿಷ್ಟ ಇಲ್ಲ” ಎಂದು ಮತ್ತೊರ್ವ ಬಳಕೆದಾರ ಬೇಸರ ಹೊರಹಾಕಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...