Homeಮುಖಪುಟ"ಜಾತ್ಯತೀತತೆ ಯುರೋಪಿನದ್ದು, ಭಾರತಕ್ಕೆ ಅಗತ್ಯವಿಲ್ಲ": ಸಂವಿಧಾನ ವಿರೋಧಿ ಹೇಳಿಕೆ ಕೊಟ್ಟ ತಮಿಳುನಾಡು ರಾಜ್ಯಪಾಲ

“ಜಾತ್ಯತೀತತೆ ಯುರೋಪಿನದ್ದು, ಭಾರತಕ್ಕೆ ಅಗತ್ಯವಿಲ್ಲ”: ಸಂವಿಧಾನ ವಿರೋಧಿ ಹೇಳಿಕೆ ಕೊಟ್ಟ ತಮಿಳುನಾಡು ರಾಜ್ಯಪಾಲ

- Advertisement -
- Advertisement -

“ಜಾತ್ಯತೀತತೆ ಯುರೋಪಿನ ಪರಿಕಲ್ಪನೆಯಾಗಿದ್ದು, ಅದು ಭಾರತದಲ್ಲಿ ಅಗತ್ಯವಿಲ್ಲ” ಎಂದು ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ.

ಸೆಪ್ಟೆಂಬರ್ 22ರಂದು ಕನ್ಯಾಕುಮಾರಿಯ ತಿರುವತ್ತೂರಿನ ‘ಹಿಂದೂ ಧರ್ಮ ವಿದ್ಯಾಪೀಠದ ಘಟಕೋತ್ಸವ’ದಲ್ಲಿ ಮಾತನಾಡಿದ ಅವರು, “ಒಬ್ಬರು ಅಸುರಕ್ಷಿತ ಪ್ರಧಾನಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕೆಲ ವರ್ಗದ ಜನರನ್ನು ಸಮಾಧಾನಪಡಿಸುವ ಸಲುವಾಗಿ ಸಂವಿಧಾನದಲ್ಲಿ ಜಾತ್ಯತೀತತೆಯನ್ನು ಪರಿಚಯಿಸಿದರು” ಎಂದು ಪರೋಕ್ಷವಾಗಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಟೀಕಿಸಿದ್ದಾರೆ.

“ಜಾತ್ಯತೀತತೆ ಎನ್ನುವುದು ಭಾರತೀಯರ ಪರಿಕಲ್ಪನೆಯಲ್ಲ, ಅದು ಯುರೋಪಿಯನ್ ಪರಿಕಲ್ಪನೆ. ಅದು ಅಲ್ಲಿಯೇ ಇರಲಿ, ಅವರು ಅದರಲ್ಲಿ ಸಂತೋಷವಾಗಿರಲಿ. ಈ ದೇಶದ ಜನರ ಮೇಲೆ ಸಾಕಷ್ಟು ವಂಚನೆಗಳನ್ನು ಮಾಡಲಾಗಿದೆ. ಅವುಗಳಲ್ಲಿ ಒಂದು ಜಾತ್ಯತೀತತೆಗೆ ತಪ್ಪು ವ್ಯಾಖ್ಯಾನ ನೀಡಲು ಪ್ರಯತ್ನಿಸಿರುವುದು” ಎಂದು ರಾಜ್ಯಪಾಲ ಹೇಳಿದ್ದಾರೆ.

“ಯುರೋಪಿನಲ್ಲಿ, ಚರ್ಚ್ ಮತ್ತು ರಾಜನ ನಡುವೆ ಜಗಳ ನಡೆದಿದ್ದರಿಂದ ಜಾತ್ಯತೀತತೆ ಬಂತು. ಅವರು ನೂರಾರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟವನ್ನು ನಿಲ್ಲಿಸಲು ಬಯಸಿದ್ದರು. ಆದ್ದರಿಂದ ಚರ್ಚ್ ಮತ್ತು ರಾಜನ ನಡುವೆ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಖಚಿತಪಡಿಸಿಕೊಳ್ಳಲು ಪ್ರತ್ಯೇಕತೆಯನ್ನು ಪ್ರತಿಪಾದಿಸಿದರು. ಭಾರತದಲ್ಲಿ ಜಾತ್ಯತೀತತೆಯ ಅಗತ್ಯವಿಲ್ಲ” ಎಂದು ರಾಜ್ಯಪಾಲ ವಿವರಿಸಿದ್ದಾರೆ.

“ಸ್ವಾತಂತ್ರ್ಯದ ಸಮಯದಲ್ಲಿ, ಸಂವಿಧಾನವನ್ನು ರಚಿಸುವಾಗ, ಜಾತ್ಯತೀತತೆ ಚರ್ಚೆಗೆ ಬಂದಿತ್ತು. ಭಾರತ ಧರ್ಮ ಕೇಂದ್ರಿತ ದೇಶವಾಗಿದೆ. ಯುರೋಪಿನಲ್ಲಿ ಕಂಡು ಬಂದಂತೆ ಯಾವುದೇ ಸಂಘರ್ಷ ನಡೆದಿಲ್ಲ ಎಂದು ಗಮನಿಸಿ ಸಂವಿಧಾನ ಸಭೆ ಅದನ್ನು ತಿರಸ್ಕರಿಸಿತು” ಎಂದು ರಾಜ್ಯಪಾಲ ಪ್ರತಿಪಾದಿಸಿದ್ದಾರೆ.

ಸಂವಿಧಾನ ಸಭೆಯ ಚರ್ಚೆಗಳನ್ನು ಉಲ್ಲೇಖಿಸಿದ ರಾಜ್ಯಪಾಲ “ಭಾರತ ಧರ್ಮದ ದೇಶ ಎಂದು ಅಲ್ಲಿ ಚರ್ಚಿಸಲಾಗಿದೆ. ಧರ್ಮದೊಂದಿಗೆ ಸಂಘರ್ಷ ಹೇಗೆ ಸಾಧ್ಯ? ಭಾರತವು ಧರ್ಮದಿಂದ ದೂರವಾಗಲು ಹೇಗೆ ಸಾಧ್ಯ? ಅದು ಸಾಧ್ಯವಿಲ್ಲ!. ಆದ್ದರಿಂದ ಅವರು ಜಾತ್ಯತೀತತೆ ಯುರೋಪಿಯನ್ ಪರಿಕಲ್ಪನೆ. ಅದು ಅಲ್ಲೇ ಇರಲಿ, ಭಾರತದಲ್ಲಿ ಜಾತ್ಯತೀತತೆಯ ಅಗತ್ಯವಿಲ್ಲ ಎಂದು ಹೇಳಿದರು ಮತ್ತು ಅದನ್ನು ಸಂವಿಧಾನದಲ್ಲಿ ಸೇರಿಸಿಲ್ಲ” ಎಂದಿದ್ದಾರೆ.

ರಾಜ್ಯಪಾಲರ ಹೇಳಿಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ‘ರಾಜ್ಯಪಾಲರು ತಮ್ಮ ಸಾಂವಿಧಾನಿಕ ಹುದ್ದೆಗೆ ಬದ್ದರಾಗಿ ಕಾರ್ಯನಿರ್ವಹಿಸಲಿ’ ಎಂದು ಹಲವರು ಹೇಳಿದ್ದಾರೆ.

“ಜಾತ್ಯತೀತತೆಯು ಭಾರತದ ಅತ್ಯಂತ ಅಗತ್ಯವಾದ ಪರಿಕಲ್ಪನೆಯಾಗಿದೆ” ಎಂದು ತಮಿಳುನಾಡಿನ ಆಡಳಿತರೂಢ ಡಿಎಂಕೆ ಹೇಳಿದೆ.

“ಸಂವಿಧಾನ 25ನೇ ವಿಧಿ ಧಾರ್ಮಿಕ ಸ್ವಾತಂತ್ರ್ಯವನ್ನು ಪ್ರತಿಪಾದಿಸುತ್ತದೆ. ಅದು ಅವರಿಗೆ (ರಾಜ್ಯಪಾಲರಿಗೆ) ಗೊತ್ತಿಲ್ಲ ಅನಿಸುತ್ತದೆ. ಅವರು ಹೋಗಿ ಸಂವಿಧಾನವನ್ನು ಸಂಪೂರ್ಣವಾಗಿ ಓದಲಿ. ನಮ್ಮ ಸಂವಿಧಾನದಲ್ಲಿ 22 ಭಾಷೆಗಳನ್ನು ಪಟ್ಟಿ ಮಾಡಲಾಗಿದೆ. ಹಿಂದಿ ಕೆಲ ರಾಜ್ಯಗಳಲ್ಲಿ ಮಾತನಾಡುವ ಭಾಷೆಯಾಗಿದೆ. ಉಳಿದ ರಾಜ್ಯಗಳು ಇತರ ಭಾಷೆಗಳನ್ನು ಮಾತನಾಡುತ್ತವೆ. ಅವರಿಗೆ ಭಾರತ ಅಥವಾ ಸಂವಿಧಾನ ತಿಳಿದಿಲ್ಲ” ಎಂದು ಡಿಎಂಕೆ ವಕ್ತಾರ ಟಿಕೆಎಸ್ ಇಳಂಗೋವನ್ ಹೇಳಿದ್ದಾರೆ.

ಸಿಪಿಐ ನಾಯಕ ಡಿ ರಾಜಾ ರಾಜ್ಯಪಾಲರ ಹೇಳಿಕೆಯನ್ನು ಖಂಡಿಸಿದ್ದು, “ಧರ್ಮ ಮತ್ತು ರಾಜಕೀಯವನ್ನು ಪ್ರತ್ಯೇಕಿಸಲು ಜಾತ್ಯತೀತತೆಯ ಅಗತ್ಯವಿದೆ” ಎಂದಿದ್ದಾರೆ.

“ಆರ್.ಎನ್.ರವಿ ನೀಡಿರುವ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಅವರಿಗೆ ಜಾತ್ಯತೀತತೆಯ ಬಗ್ಗೆ ಏನು ಗೊತ್ತು? ಅವರಿಗೆ ಭಾರತದ ಬಗ್ಗೆ ಏನು ಗೊತ್ತು? ಅವರು ರಾಜ್ಯಪಾಲರು, ಸಂವಿಧಾನಕ್ಕೆ ಬದ್ಧರಾಗಿರಬೇಕು. ಭಾರತದ ಸಂವಿಧಾನವು ಭಾರತವನ್ನು ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯ ಎಂದು ವ್ಯಾಖ್ಯಾನಿಸುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಧಾರ್ಮಿಕ ಪರಿಕಲ್ಪನೆಯನ್ನು ಬಲವಾಗಿ ತಿರಸ್ಕರಿಸಿದ್ದರು. ಒಂದು ವೇಳೆ ಹಿಂದೂ ರಾಷ್ಟ್ರವು ನಿಜವಾಗಿದ್ದರೆ, ಅದು ರಾಷ್ಟ್ರಕ್ಕೆ ವಿಪತ್ತು. ಜಾತ್ಯತೀತತೆ ಎಂದರೆ ಧರ್ಮ ಮತ್ತು ರಾಜಕೀಯವನ್ನು ಪ್ರತ್ಯೇಕವಾಗಿ ಇಡುವುದಾಗಿದೆ. ರಾಜಕೀಯ ಉದ್ದೇಶಕ್ಕೆ ದೇವರನ್ನು ಎಳೆದು ತರಬೇಡಿ” ಎಂದು ಡಿ ರಾಜಾ ಹೇಳಿದ್ದಾರೆ.

ತಮಿಳುನಾಡು ರಾಜ್ಯಪಾಲರು ಜಾತ್ಯತೀತತೆಯ ಬಗ್ಗೆ ಹೇಳಿಕೆ ನೀಡಿ ವಿವಾದ ಎಬ್ಬಿಸಿರುವುದು ಇದೇ ಮೊದಲಲ್ಲ. ಕಳೆದ ವರ್ಷ “ಈ ದೇಶವನ್ನು ಒಡೆಯಲು ಮುಂದಾಗಿರುವ ಜನರು ಜಾತ್ಯತೀತತೆಯ ಬಗ್ಗೆ ವಿಕೃತ ವ್ಯಾಖ್ಯಾನ ನೀಡಿದ್ದಾರೆ” ಎಂದಿದ್ದರು.

“ನಮ್ಮ ಸಂವಿಧಾನವು ‘ಧರ್ಮ’ಕ್ಕೆ ವಿರುದ್ಧವಾಗಿಲ್ಲ. ಈ ದೇಶವನ್ನು ಒಡೆಯಲು ಬಯಸುವ ಜನರು ಜಾತ್ಯತೀತತೆಯ ವಿಕೃತ ವ್ಯಾಖ್ಯಾನವನ್ನು ನೀಡಿದ್ದಾರೆ. ನಮ್ಮ ಸಂವಿಧಾನದಲ್ಲಿರುವ ಜಾತ್ಯತೀತತೆಯ ನಿಜವಾದ ಅರ್ಥವನ್ನು ನಾವು ಗ್ರಹಿಸಿಕೊಳ್ಳಬೇಕು. ಹಿಂದೂ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುವವರು ಪ್ರತಿಕೂಲ ವಿದೇಶಿ ಶಕ್ತಿಗಳ ಸಹಯೋಗದೊಂದಿಗೆ ಈ ದೇಶವನ್ನು ಒಡೆಯುವ ಗುಪ್ತ ಕಾರ್ಯಸೂಚಿಯನ್ನು ಹೊಂದಿದ್ದು, ಭಾರತಕ್ಕೆ ಅಂತರ್ಗತ ಶಕ್ತಿ ಇರುವುದರಿಂದ ಅವರು ಯಶಸ್ವಿಯಾಗುವುದಿಲ್ಲ” ಎಂದು ರಾಜ್ಯಪಾಲ ರವಿ ಹೇಳಿದ್ದರು.

ಕೃಪೆ : ಟೈಮ್ಸ್ ಆಫ್ ಇಂಡಿಯಾ

ಇದನ್ನೂ ಓದಿ : ಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ ಹತ್ಯೆ : ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ವಿರುದ್ದ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...