Homeಮುಖಪುಟ"ಜಾತ್ಯತೀತತೆ ಯುರೋಪಿನದ್ದು, ಭಾರತಕ್ಕೆ ಅಗತ್ಯವಿಲ್ಲ": ಸಂವಿಧಾನ ವಿರೋಧಿ ಹೇಳಿಕೆ ಕೊಟ್ಟ ತಮಿಳುನಾಡು ರಾಜ್ಯಪಾಲ

“ಜಾತ್ಯತೀತತೆ ಯುರೋಪಿನದ್ದು, ಭಾರತಕ್ಕೆ ಅಗತ್ಯವಿಲ್ಲ”: ಸಂವಿಧಾನ ವಿರೋಧಿ ಹೇಳಿಕೆ ಕೊಟ್ಟ ತಮಿಳುನಾಡು ರಾಜ್ಯಪಾಲ

- Advertisement -
- Advertisement -

“ಜಾತ್ಯತೀತತೆ ಯುರೋಪಿನ ಪರಿಕಲ್ಪನೆಯಾಗಿದ್ದು, ಅದು ಭಾರತದಲ್ಲಿ ಅಗತ್ಯವಿಲ್ಲ” ಎಂದು ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ.

ಸೆಪ್ಟೆಂಬರ್ 22ರಂದು ಕನ್ಯಾಕುಮಾರಿಯ ತಿರುವತ್ತೂರಿನ ‘ಹಿಂದೂ ಧರ್ಮ ವಿದ್ಯಾಪೀಠದ ಘಟಕೋತ್ಸವ’ದಲ್ಲಿ ಮಾತನಾಡಿದ ಅವರು, “ಒಬ್ಬರು ಅಸುರಕ್ಷಿತ ಪ್ರಧಾನಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕೆಲ ವರ್ಗದ ಜನರನ್ನು ಸಮಾಧಾನಪಡಿಸುವ ಸಲುವಾಗಿ ಸಂವಿಧಾನದಲ್ಲಿ ಜಾತ್ಯತೀತತೆಯನ್ನು ಪರಿಚಯಿಸಿದರು” ಎಂದು ಪರೋಕ್ಷವಾಗಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಟೀಕಿಸಿದ್ದಾರೆ.

“ಜಾತ್ಯತೀತತೆ ಎನ್ನುವುದು ಭಾರತೀಯರ ಪರಿಕಲ್ಪನೆಯಲ್ಲ, ಅದು ಯುರೋಪಿಯನ್ ಪರಿಕಲ್ಪನೆ. ಅದು ಅಲ್ಲಿಯೇ ಇರಲಿ, ಅವರು ಅದರಲ್ಲಿ ಸಂತೋಷವಾಗಿರಲಿ. ಈ ದೇಶದ ಜನರ ಮೇಲೆ ಸಾಕಷ್ಟು ವಂಚನೆಗಳನ್ನು ಮಾಡಲಾಗಿದೆ. ಅವುಗಳಲ್ಲಿ ಒಂದು ಜಾತ್ಯತೀತತೆಗೆ ತಪ್ಪು ವ್ಯಾಖ್ಯಾನ ನೀಡಲು ಪ್ರಯತ್ನಿಸಿರುವುದು” ಎಂದು ರಾಜ್ಯಪಾಲ ಹೇಳಿದ್ದಾರೆ.

“ಯುರೋಪಿನಲ್ಲಿ, ಚರ್ಚ್ ಮತ್ತು ರಾಜನ ನಡುವೆ ಜಗಳ ನಡೆದಿದ್ದರಿಂದ ಜಾತ್ಯತೀತತೆ ಬಂತು. ಅವರು ನೂರಾರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟವನ್ನು ನಿಲ್ಲಿಸಲು ಬಯಸಿದ್ದರು. ಆದ್ದರಿಂದ ಚರ್ಚ್ ಮತ್ತು ರಾಜನ ನಡುವೆ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಖಚಿತಪಡಿಸಿಕೊಳ್ಳಲು ಪ್ರತ್ಯೇಕತೆಯನ್ನು ಪ್ರತಿಪಾದಿಸಿದರು. ಭಾರತದಲ್ಲಿ ಜಾತ್ಯತೀತತೆಯ ಅಗತ್ಯವಿಲ್ಲ” ಎಂದು ರಾಜ್ಯಪಾಲ ವಿವರಿಸಿದ್ದಾರೆ.

“ಸ್ವಾತಂತ್ರ್ಯದ ಸಮಯದಲ್ಲಿ, ಸಂವಿಧಾನವನ್ನು ರಚಿಸುವಾಗ, ಜಾತ್ಯತೀತತೆ ಚರ್ಚೆಗೆ ಬಂದಿತ್ತು. ಭಾರತ ಧರ್ಮ ಕೇಂದ್ರಿತ ದೇಶವಾಗಿದೆ. ಯುರೋಪಿನಲ್ಲಿ ಕಂಡು ಬಂದಂತೆ ಯಾವುದೇ ಸಂಘರ್ಷ ನಡೆದಿಲ್ಲ ಎಂದು ಗಮನಿಸಿ ಸಂವಿಧಾನ ಸಭೆ ಅದನ್ನು ತಿರಸ್ಕರಿಸಿತು” ಎಂದು ರಾಜ್ಯಪಾಲ ಪ್ರತಿಪಾದಿಸಿದ್ದಾರೆ.

ಸಂವಿಧಾನ ಸಭೆಯ ಚರ್ಚೆಗಳನ್ನು ಉಲ್ಲೇಖಿಸಿದ ರಾಜ್ಯಪಾಲ “ಭಾರತ ಧರ್ಮದ ದೇಶ ಎಂದು ಅಲ್ಲಿ ಚರ್ಚಿಸಲಾಗಿದೆ. ಧರ್ಮದೊಂದಿಗೆ ಸಂಘರ್ಷ ಹೇಗೆ ಸಾಧ್ಯ? ಭಾರತವು ಧರ್ಮದಿಂದ ದೂರವಾಗಲು ಹೇಗೆ ಸಾಧ್ಯ? ಅದು ಸಾಧ್ಯವಿಲ್ಲ!. ಆದ್ದರಿಂದ ಅವರು ಜಾತ್ಯತೀತತೆ ಯುರೋಪಿಯನ್ ಪರಿಕಲ್ಪನೆ. ಅದು ಅಲ್ಲೇ ಇರಲಿ, ಭಾರತದಲ್ಲಿ ಜಾತ್ಯತೀತತೆಯ ಅಗತ್ಯವಿಲ್ಲ ಎಂದು ಹೇಳಿದರು ಮತ್ತು ಅದನ್ನು ಸಂವಿಧಾನದಲ್ಲಿ ಸೇರಿಸಿಲ್ಲ” ಎಂದಿದ್ದಾರೆ.

ರಾಜ್ಯಪಾಲರ ಹೇಳಿಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ‘ರಾಜ್ಯಪಾಲರು ತಮ್ಮ ಸಾಂವಿಧಾನಿಕ ಹುದ್ದೆಗೆ ಬದ್ದರಾಗಿ ಕಾರ್ಯನಿರ್ವಹಿಸಲಿ’ ಎಂದು ಹಲವರು ಹೇಳಿದ್ದಾರೆ.

“ಜಾತ್ಯತೀತತೆಯು ಭಾರತದ ಅತ್ಯಂತ ಅಗತ್ಯವಾದ ಪರಿಕಲ್ಪನೆಯಾಗಿದೆ” ಎಂದು ತಮಿಳುನಾಡಿನ ಆಡಳಿತರೂಢ ಡಿಎಂಕೆ ಹೇಳಿದೆ.

“ಸಂವಿಧಾನ 25ನೇ ವಿಧಿ ಧಾರ್ಮಿಕ ಸ್ವಾತಂತ್ರ್ಯವನ್ನು ಪ್ರತಿಪಾದಿಸುತ್ತದೆ. ಅದು ಅವರಿಗೆ (ರಾಜ್ಯಪಾಲರಿಗೆ) ಗೊತ್ತಿಲ್ಲ ಅನಿಸುತ್ತದೆ. ಅವರು ಹೋಗಿ ಸಂವಿಧಾನವನ್ನು ಸಂಪೂರ್ಣವಾಗಿ ಓದಲಿ. ನಮ್ಮ ಸಂವಿಧಾನದಲ್ಲಿ 22 ಭಾಷೆಗಳನ್ನು ಪಟ್ಟಿ ಮಾಡಲಾಗಿದೆ. ಹಿಂದಿ ಕೆಲ ರಾಜ್ಯಗಳಲ್ಲಿ ಮಾತನಾಡುವ ಭಾಷೆಯಾಗಿದೆ. ಉಳಿದ ರಾಜ್ಯಗಳು ಇತರ ಭಾಷೆಗಳನ್ನು ಮಾತನಾಡುತ್ತವೆ. ಅವರಿಗೆ ಭಾರತ ಅಥವಾ ಸಂವಿಧಾನ ತಿಳಿದಿಲ್ಲ” ಎಂದು ಡಿಎಂಕೆ ವಕ್ತಾರ ಟಿಕೆಎಸ್ ಇಳಂಗೋವನ್ ಹೇಳಿದ್ದಾರೆ.

ಸಿಪಿಐ ನಾಯಕ ಡಿ ರಾಜಾ ರಾಜ್ಯಪಾಲರ ಹೇಳಿಕೆಯನ್ನು ಖಂಡಿಸಿದ್ದು, “ಧರ್ಮ ಮತ್ತು ರಾಜಕೀಯವನ್ನು ಪ್ರತ್ಯೇಕಿಸಲು ಜಾತ್ಯತೀತತೆಯ ಅಗತ್ಯವಿದೆ” ಎಂದಿದ್ದಾರೆ.

“ಆರ್.ಎನ್.ರವಿ ನೀಡಿರುವ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಅವರಿಗೆ ಜಾತ್ಯತೀತತೆಯ ಬಗ್ಗೆ ಏನು ಗೊತ್ತು? ಅವರಿಗೆ ಭಾರತದ ಬಗ್ಗೆ ಏನು ಗೊತ್ತು? ಅವರು ರಾಜ್ಯಪಾಲರು, ಸಂವಿಧಾನಕ್ಕೆ ಬದ್ಧರಾಗಿರಬೇಕು. ಭಾರತದ ಸಂವಿಧಾನವು ಭಾರತವನ್ನು ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯ ಎಂದು ವ್ಯಾಖ್ಯಾನಿಸುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಧಾರ್ಮಿಕ ಪರಿಕಲ್ಪನೆಯನ್ನು ಬಲವಾಗಿ ತಿರಸ್ಕರಿಸಿದ್ದರು. ಒಂದು ವೇಳೆ ಹಿಂದೂ ರಾಷ್ಟ್ರವು ನಿಜವಾಗಿದ್ದರೆ, ಅದು ರಾಷ್ಟ್ರಕ್ಕೆ ವಿಪತ್ತು. ಜಾತ್ಯತೀತತೆ ಎಂದರೆ ಧರ್ಮ ಮತ್ತು ರಾಜಕೀಯವನ್ನು ಪ್ರತ್ಯೇಕವಾಗಿ ಇಡುವುದಾಗಿದೆ. ರಾಜಕೀಯ ಉದ್ದೇಶಕ್ಕೆ ದೇವರನ್ನು ಎಳೆದು ತರಬೇಡಿ” ಎಂದು ಡಿ ರಾಜಾ ಹೇಳಿದ್ದಾರೆ.

ತಮಿಳುನಾಡು ರಾಜ್ಯಪಾಲರು ಜಾತ್ಯತೀತತೆಯ ಬಗ್ಗೆ ಹೇಳಿಕೆ ನೀಡಿ ವಿವಾದ ಎಬ್ಬಿಸಿರುವುದು ಇದೇ ಮೊದಲಲ್ಲ. ಕಳೆದ ವರ್ಷ “ಈ ದೇಶವನ್ನು ಒಡೆಯಲು ಮುಂದಾಗಿರುವ ಜನರು ಜಾತ್ಯತೀತತೆಯ ಬಗ್ಗೆ ವಿಕೃತ ವ್ಯಾಖ್ಯಾನ ನೀಡಿದ್ದಾರೆ” ಎಂದಿದ್ದರು.

“ನಮ್ಮ ಸಂವಿಧಾನವು ‘ಧರ್ಮ’ಕ್ಕೆ ವಿರುದ್ಧವಾಗಿಲ್ಲ. ಈ ದೇಶವನ್ನು ಒಡೆಯಲು ಬಯಸುವ ಜನರು ಜಾತ್ಯತೀತತೆಯ ವಿಕೃತ ವ್ಯಾಖ್ಯಾನವನ್ನು ನೀಡಿದ್ದಾರೆ. ನಮ್ಮ ಸಂವಿಧಾನದಲ್ಲಿರುವ ಜಾತ್ಯತೀತತೆಯ ನಿಜವಾದ ಅರ್ಥವನ್ನು ನಾವು ಗ್ರಹಿಸಿಕೊಳ್ಳಬೇಕು. ಹಿಂದೂ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುವವರು ಪ್ರತಿಕೂಲ ವಿದೇಶಿ ಶಕ್ತಿಗಳ ಸಹಯೋಗದೊಂದಿಗೆ ಈ ದೇಶವನ್ನು ಒಡೆಯುವ ಗುಪ್ತ ಕಾರ್ಯಸೂಚಿಯನ್ನು ಹೊಂದಿದ್ದು, ಭಾರತಕ್ಕೆ ಅಂತರ್ಗತ ಶಕ್ತಿ ಇರುವುದರಿಂದ ಅವರು ಯಶಸ್ವಿಯಾಗುವುದಿಲ್ಲ” ಎಂದು ರಾಜ್ಯಪಾಲ ರವಿ ಹೇಳಿದ್ದರು.

ಕೃಪೆ : ಟೈಮ್ಸ್ ಆಫ್ ಇಂಡಿಯಾ

ಇದನ್ನೂ ಓದಿ : ಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ ಹತ್ಯೆ : ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ವಿರುದ್ದ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...