Homeಮುಖಪುಟ"ಜಾತ್ಯತೀತತೆ ಯುರೋಪಿನದ್ದು, ಭಾರತಕ್ಕೆ ಅಗತ್ಯವಿಲ್ಲ": ಸಂವಿಧಾನ ವಿರೋಧಿ ಹೇಳಿಕೆ ಕೊಟ್ಟ ತಮಿಳುನಾಡು ರಾಜ್ಯಪಾಲ

“ಜಾತ್ಯತೀತತೆ ಯುರೋಪಿನದ್ದು, ಭಾರತಕ್ಕೆ ಅಗತ್ಯವಿಲ್ಲ”: ಸಂವಿಧಾನ ವಿರೋಧಿ ಹೇಳಿಕೆ ಕೊಟ್ಟ ತಮಿಳುನಾಡು ರಾಜ್ಯಪಾಲ

- Advertisement -
- Advertisement -

“ಜಾತ್ಯತೀತತೆ ಯುರೋಪಿನ ಪರಿಕಲ್ಪನೆಯಾಗಿದ್ದು, ಅದು ಭಾರತದಲ್ಲಿ ಅಗತ್ಯವಿಲ್ಲ” ಎಂದು ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ.

ಸೆಪ್ಟೆಂಬರ್ 22ರಂದು ಕನ್ಯಾಕುಮಾರಿಯ ತಿರುವತ್ತೂರಿನ ‘ಹಿಂದೂ ಧರ್ಮ ವಿದ್ಯಾಪೀಠದ ಘಟಕೋತ್ಸವ’ದಲ್ಲಿ ಮಾತನಾಡಿದ ಅವರು, “ಒಬ್ಬರು ಅಸುರಕ್ಷಿತ ಪ್ರಧಾನಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕೆಲ ವರ್ಗದ ಜನರನ್ನು ಸಮಾಧಾನಪಡಿಸುವ ಸಲುವಾಗಿ ಸಂವಿಧಾನದಲ್ಲಿ ಜಾತ್ಯತೀತತೆಯನ್ನು ಪರಿಚಯಿಸಿದರು” ಎಂದು ಪರೋಕ್ಷವಾಗಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಟೀಕಿಸಿದ್ದಾರೆ.

“ಜಾತ್ಯತೀತತೆ ಎನ್ನುವುದು ಭಾರತೀಯರ ಪರಿಕಲ್ಪನೆಯಲ್ಲ, ಅದು ಯುರೋಪಿಯನ್ ಪರಿಕಲ್ಪನೆ. ಅದು ಅಲ್ಲಿಯೇ ಇರಲಿ, ಅವರು ಅದರಲ್ಲಿ ಸಂತೋಷವಾಗಿರಲಿ. ಈ ದೇಶದ ಜನರ ಮೇಲೆ ಸಾಕಷ್ಟು ವಂಚನೆಗಳನ್ನು ಮಾಡಲಾಗಿದೆ. ಅವುಗಳಲ್ಲಿ ಒಂದು ಜಾತ್ಯತೀತತೆಗೆ ತಪ್ಪು ವ್ಯಾಖ್ಯಾನ ನೀಡಲು ಪ್ರಯತ್ನಿಸಿರುವುದು” ಎಂದು ರಾಜ್ಯಪಾಲ ಹೇಳಿದ್ದಾರೆ.

“ಯುರೋಪಿನಲ್ಲಿ, ಚರ್ಚ್ ಮತ್ತು ರಾಜನ ನಡುವೆ ಜಗಳ ನಡೆದಿದ್ದರಿಂದ ಜಾತ್ಯತೀತತೆ ಬಂತು. ಅವರು ನೂರಾರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟವನ್ನು ನಿಲ್ಲಿಸಲು ಬಯಸಿದ್ದರು. ಆದ್ದರಿಂದ ಚರ್ಚ್ ಮತ್ತು ರಾಜನ ನಡುವೆ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಖಚಿತಪಡಿಸಿಕೊಳ್ಳಲು ಪ್ರತ್ಯೇಕತೆಯನ್ನು ಪ್ರತಿಪಾದಿಸಿದರು. ಭಾರತದಲ್ಲಿ ಜಾತ್ಯತೀತತೆಯ ಅಗತ್ಯವಿಲ್ಲ” ಎಂದು ರಾಜ್ಯಪಾಲ ವಿವರಿಸಿದ್ದಾರೆ.

“ಸ್ವಾತಂತ್ರ್ಯದ ಸಮಯದಲ್ಲಿ, ಸಂವಿಧಾನವನ್ನು ರಚಿಸುವಾಗ, ಜಾತ್ಯತೀತತೆ ಚರ್ಚೆಗೆ ಬಂದಿತ್ತು. ಭಾರತ ಧರ್ಮ ಕೇಂದ್ರಿತ ದೇಶವಾಗಿದೆ. ಯುರೋಪಿನಲ್ಲಿ ಕಂಡು ಬಂದಂತೆ ಯಾವುದೇ ಸಂಘರ್ಷ ನಡೆದಿಲ್ಲ ಎಂದು ಗಮನಿಸಿ ಸಂವಿಧಾನ ಸಭೆ ಅದನ್ನು ತಿರಸ್ಕರಿಸಿತು” ಎಂದು ರಾಜ್ಯಪಾಲ ಪ್ರತಿಪಾದಿಸಿದ್ದಾರೆ.

ಸಂವಿಧಾನ ಸಭೆಯ ಚರ್ಚೆಗಳನ್ನು ಉಲ್ಲೇಖಿಸಿದ ರಾಜ್ಯಪಾಲ “ಭಾರತ ಧರ್ಮದ ದೇಶ ಎಂದು ಅಲ್ಲಿ ಚರ್ಚಿಸಲಾಗಿದೆ. ಧರ್ಮದೊಂದಿಗೆ ಸಂಘರ್ಷ ಹೇಗೆ ಸಾಧ್ಯ? ಭಾರತವು ಧರ್ಮದಿಂದ ದೂರವಾಗಲು ಹೇಗೆ ಸಾಧ್ಯ? ಅದು ಸಾಧ್ಯವಿಲ್ಲ!. ಆದ್ದರಿಂದ ಅವರು ಜಾತ್ಯತೀತತೆ ಯುರೋಪಿಯನ್ ಪರಿಕಲ್ಪನೆ. ಅದು ಅಲ್ಲೇ ಇರಲಿ, ಭಾರತದಲ್ಲಿ ಜಾತ್ಯತೀತತೆಯ ಅಗತ್ಯವಿಲ್ಲ ಎಂದು ಹೇಳಿದರು ಮತ್ತು ಅದನ್ನು ಸಂವಿಧಾನದಲ್ಲಿ ಸೇರಿಸಿಲ್ಲ” ಎಂದಿದ್ದಾರೆ.

ರಾಜ್ಯಪಾಲರ ಹೇಳಿಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ‘ರಾಜ್ಯಪಾಲರು ತಮ್ಮ ಸಾಂವಿಧಾನಿಕ ಹುದ್ದೆಗೆ ಬದ್ದರಾಗಿ ಕಾರ್ಯನಿರ್ವಹಿಸಲಿ’ ಎಂದು ಹಲವರು ಹೇಳಿದ್ದಾರೆ.

“ಜಾತ್ಯತೀತತೆಯು ಭಾರತದ ಅತ್ಯಂತ ಅಗತ್ಯವಾದ ಪರಿಕಲ್ಪನೆಯಾಗಿದೆ” ಎಂದು ತಮಿಳುನಾಡಿನ ಆಡಳಿತರೂಢ ಡಿಎಂಕೆ ಹೇಳಿದೆ.

“ಸಂವಿಧಾನ 25ನೇ ವಿಧಿ ಧಾರ್ಮಿಕ ಸ್ವಾತಂತ್ರ್ಯವನ್ನು ಪ್ರತಿಪಾದಿಸುತ್ತದೆ. ಅದು ಅವರಿಗೆ (ರಾಜ್ಯಪಾಲರಿಗೆ) ಗೊತ್ತಿಲ್ಲ ಅನಿಸುತ್ತದೆ. ಅವರು ಹೋಗಿ ಸಂವಿಧಾನವನ್ನು ಸಂಪೂರ್ಣವಾಗಿ ಓದಲಿ. ನಮ್ಮ ಸಂವಿಧಾನದಲ್ಲಿ 22 ಭಾಷೆಗಳನ್ನು ಪಟ್ಟಿ ಮಾಡಲಾಗಿದೆ. ಹಿಂದಿ ಕೆಲ ರಾಜ್ಯಗಳಲ್ಲಿ ಮಾತನಾಡುವ ಭಾಷೆಯಾಗಿದೆ. ಉಳಿದ ರಾಜ್ಯಗಳು ಇತರ ಭಾಷೆಗಳನ್ನು ಮಾತನಾಡುತ್ತವೆ. ಅವರಿಗೆ ಭಾರತ ಅಥವಾ ಸಂವಿಧಾನ ತಿಳಿದಿಲ್ಲ” ಎಂದು ಡಿಎಂಕೆ ವಕ್ತಾರ ಟಿಕೆಎಸ್ ಇಳಂಗೋವನ್ ಹೇಳಿದ್ದಾರೆ.

ಸಿಪಿಐ ನಾಯಕ ಡಿ ರಾಜಾ ರಾಜ್ಯಪಾಲರ ಹೇಳಿಕೆಯನ್ನು ಖಂಡಿಸಿದ್ದು, “ಧರ್ಮ ಮತ್ತು ರಾಜಕೀಯವನ್ನು ಪ್ರತ್ಯೇಕಿಸಲು ಜಾತ್ಯತೀತತೆಯ ಅಗತ್ಯವಿದೆ” ಎಂದಿದ್ದಾರೆ.

“ಆರ್.ಎನ್.ರವಿ ನೀಡಿರುವ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಅವರಿಗೆ ಜಾತ್ಯತೀತತೆಯ ಬಗ್ಗೆ ಏನು ಗೊತ್ತು? ಅವರಿಗೆ ಭಾರತದ ಬಗ್ಗೆ ಏನು ಗೊತ್ತು? ಅವರು ರಾಜ್ಯಪಾಲರು, ಸಂವಿಧಾನಕ್ಕೆ ಬದ್ಧರಾಗಿರಬೇಕು. ಭಾರತದ ಸಂವಿಧಾನವು ಭಾರತವನ್ನು ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯ ಎಂದು ವ್ಯಾಖ್ಯಾನಿಸುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಧಾರ್ಮಿಕ ಪರಿಕಲ್ಪನೆಯನ್ನು ಬಲವಾಗಿ ತಿರಸ್ಕರಿಸಿದ್ದರು. ಒಂದು ವೇಳೆ ಹಿಂದೂ ರಾಷ್ಟ್ರವು ನಿಜವಾಗಿದ್ದರೆ, ಅದು ರಾಷ್ಟ್ರಕ್ಕೆ ವಿಪತ್ತು. ಜಾತ್ಯತೀತತೆ ಎಂದರೆ ಧರ್ಮ ಮತ್ತು ರಾಜಕೀಯವನ್ನು ಪ್ರತ್ಯೇಕವಾಗಿ ಇಡುವುದಾಗಿದೆ. ರಾಜಕೀಯ ಉದ್ದೇಶಕ್ಕೆ ದೇವರನ್ನು ಎಳೆದು ತರಬೇಡಿ” ಎಂದು ಡಿ ರಾಜಾ ಹೇಳಿದ್ದಾರೆ.

ತಮಿಳುನಾಡು ರಾಜ್ಯಪಾಲರು ಜಾತ್ಯತೀತತೆಯ ಬಗ್ಗೆ ಹೇಳಿಕೆ ನೀಡಿ ವಿವಾದ ಎಬ್ಬಿಸಿರುವುದು ಇದೇ ಮೊದಲಲ್ಲ. ಕಳೆದ ವರ್ಷ “ಈ ದೇಶವನ್ನು ಒಡೆಯಲು ಮುಂದಾಗಿರುವ ಜನರು ಜಾತ್ಯತೀತತೆಯ ಬಗ್ಗೆ ವಿಕೃತ ವ್ಯಾಖ್ಯಾನ ನೀಡಿದ್ದಾರೆ” ಎಂದಿದ್ದರು.

“ನಮ್ಮ ಸಂವಿಧಾನವು ‘ಧರ್ಮ’ಕ್ಕೆ ವಿರುದ್ಧವಾಗಿಲ್ಲ. ಈ ದೇಶವನ್ನು ಒಡೆಯಲು ಬಯಸುವ ಜನರು ಜಾತ್ಯತೀತತೆಯ ವಿಕೃತ ವ್ಯಾಖ್ಯಾನವನ್ನು ನೀಡಿದ್ದಾರೆ. ನಮ್ಮ ಸಂವಿಧಾನದಲ್ಲಿರುವ ಜಾತ್ಯತೀತತೆಯ ನಿಜವಾದ ಅರ್ಥವನ್ನು ನಾವು ಗ್ರಹಿಸಿಕೊಳ್ಳಬೇಕು. ಹಿಂದೂ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುವವರು ಪ್ರತಿಕೂಲ ವಿದೇಶಿ ಶಕ್ತಿಗಳ ಸಹಯೋಗದೊಂದಿಗೆ ಈ ದೇಶವನ್ನು ಒಡೆಯುವ ಗುಪ್ತ ಕಾರ್ಯಸೂಚಿಯನ್ನು ಹೊಂದಿದ್ದು, ಭಾರತಕ್ಕೆ ಅಂತರ್ಗತ ಶಕ್ತಿ ಇರುವುದರಿಂದ ಅವರು ಯಶಸ್ವಿಯಾಗುವುದಿಲ್ಲ” ಎಂದು ರಾಜ್ಯಪಾಲ ರವಿ ಹೇಳಿದ್ದರು.

ಕೃಪೆ : ಟೈಮ್ಸ್ ಆಫ್ ಇಂಡಿಯಾ

ಇದನ್ನೂ ಓದಿ : ಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ ಹತ್ಯೆ : ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ವಿರುದ್ದ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...