Homeಮುಖಪುಟ"ಜಾತ್ಯತೀತತೆ ಯುರೋಪಿನದ್ದು, ಭಾರತಕ್ಕೆ ಅಗತ್ಯವಿಲ್ಲ": ಸಂವಿಧಾನ ವಿರೋಧಿ ಹೇಳಿಕೆ ಕೊಟ್ಟ ತಮಿಳುನಾಡು ರಾಜ್ಯಪಾಲ

“ಜಾತ್ಯತೀತತೆ ಯುರೋಪಿನದ್ದು, ಭಾರತಕ್ಕೆ ಅಗತ್ಯವಿಲ್ಲ”: ಸಂವಿಧಾನ ವಿರೋಧಿ ಹೇಳಿಕೆ ಕೊಟ್ಟ ತಮಿಳುನಾಡು ರಾಜ್ಯಪಾಲ

- Advertisement -
- Advertisement -

“ಜಾತ್ಯತೀತತೆ ಯುರೋಪಿನ ಪರಿಕಲ್ಪನೆಯಾಗಿದ್ದು, ಅದು ಭಾರತದಲ್ಲಿ ಅಗತ್ಯವಿಲ್ಲ” ಎಂದು ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ.

ಸೆಪ್ಟೆಂಬರ್ 22ರಂದು ಕನ್ಯಾಕುಮಾರಿಯ ತಿರುವತ್ತೂರಿನ ‘ಹಿಂದೂ ಧರ್ಮ ವಿದ್ಯಾಪೀಠದ ಘಟಕೋತ್ಸವ’ದಲ್ಲಿ ಮಾತನಾಡಿದ ಅವರು, “ಒಬ್ಬರು ಅಸುರಕ್ಷಿತ ಪ್ರಧಾನಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕೆಲ ವರ್ಗದ ಜನರನ್ನು ಸಮಾಧಾನಪಡಿಸುವ ಸಲುವಾಗಿ ಸಂವಿಧಾನದಲ್ಲಿ ಜಾತ್ಯತೀತತೆಯನ್ನು ಪರಿಚಯಿಸಿದರು” ಎಂದು ಪರೋಕ್ಷವಾಗಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಟೀಕಿಸಿದ್ದಾರೆ.

“ಜಾತ್ಯತೀತತೆ ಎನ್ನುವುದು ಭಾರತೀಯರ ಪರಿಕಲ್ಪನೆಯಲ್ಲ, ಅದು ಯುರೋಪಿಯನ್ ಪರಿಕಲ್ಪನೆ. ಅದು ಅಲ್ಲಿಯೇ ಇರಲಿ, ಅವರು ಅದರಲ್ಲಿ ಸಂತೋಷವಾಗಿರಲಿ. ಈ ದೇಶದ ಜನರ ಮೇಲೆ ಸಾಕಷ್ಟು ವಂಚನೆಗಳನ್ನು ಮಾಡಲಾಗಿದೆ. ಅವುಗಳಲ್ಲಿ ಒಂದು ಜಾತ್ಯತೀತತೆಗೆ ತಪ್ಪು ವ್ಯಾಖ್ಯಾನ ನೀಡಲು ಪ್ರಯತ್ನಿಸಿರುವುದು” ಎಂದು ರಾಜ್ಯಪಾಲ ಹೇಳಿದ್ದಾರೆ.

“ಯುರೋಪಿನಲ್ಲಿ, ಚರ್ಚ್ ಮತ್ತು ರಾಜನ ನಡುವೆ ಜಗಳ ನಡೆದಿದ್ದರಿಂದ ಜಾತ್ಯತೀತತೆ ಬಂತು. ಅವರು ನೂರಾರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟವನ್ನು ನಿಲ್ಲಿಸಲು ಬಯಸಿದ್ದರು. ಆದ್ದರಿಂದ ಚರ್ಚ್ ಮತ್ತು ರಾಜನ ನಡುವೆ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಖಚಿತಪಡಿಸಿಕೊಳ್ಳಲು ಪ್ರತ್ಯೇಕತೆಯನ್ನು ಪ್ರತಿಪಾದಿಸಿದರು. ಭಾರತದಲ್ಲಿ ಜಾತ್ಯತೀತತೆಯ ಅಗತ್ಯವಿಲ್ಲ” ಎಂದು ರಾಜ್ಯಪಾಲ ವಿವರಿಸಿದ್ದಾರೆ.

“ಸ್ವಾತಂತ್ರ್ಯದ ಸಮಯದಲ್ಲಿ, ಸಂವಿಧಾನವನ್ನು ರಚಿಸುವಾಗ, ಜಾತ್ಯತೀತತೆ ಚರ್ಚೆಗೆ ಬಂದಿತ್ತು. ಭಾರತ ಧರ್ಮ ಕೇಂದ್ರಿತ ದೇಶವಾಗಿದೆ. ಯುರೋಪಿನಲ್ಲಿ ಕಂಡು ಬಂದಂತೆ ಯಾವುದೇ ಸಂಘರ್ಷ ನಡೆದಿಲ್ಲ ಎಂದು ಗಮನಿಸಿ ಸಂವಿಧಾನ ಸಭೆ ಅದನ್ನು ತಿರಸ್ಕರಿಸಿತು” ಎಂದು ರಾಜ್ಯಪಾಲ ಪ್ರತಿಪಾದಿಸಿದ್ದಾರೆ.

ಸಂವಿಧಾನ ಸಭೆಯ ಚರ್ಚೆಗಳನ್ನು ಉಲ್ಲೇಖಿಸಿದ ರಾಜ್ಯಪಾಲ “ಭಾರತ ಧರ್ಮದ ದೇಶ ಎಂದು ಅಲ್ಲಿ ಚರ್ಚಿಸಲಾಗಿದೆ. ಧರ್ಮದೊಂದಿಗೆ ಸಂಘರ್ಷ ಹೇಗೆ ಸಾಧ್ಯ? ಭಾರತವು ಧರ್ಮದಿಂದ ದೂರವಾಗಲು ಹೇಗೆ ಸಾಧ್ಯ? ಅದು ಸಾಧ್ಯವಿಲ್ಲ!. ಆದ್ದರಿಂದ ಅವರು ಜಾತ್ಯತೀತತೆ ಯುರೋಪಿಯನ್ ಪರಿಕಲ್ಪನೆ. ಅದು ಅಲ್ಲೇ ಇರಲಿ, ಭಾರತದಲ್ಲಿ ಜಾತ್ಯತೀತತೆಯ ಅಗತ್ಯವಿಲ್ಲ ಎಂದು ಹೇಳಿದರು ಮತ್ತು ಅದನ್ನು ಸಂವಿಧಾನದಲ್ಲಿ ಸೇರಿಸಿಲ್ಲ” ಎಂದಿದ್ದಾರೆ.

ರಾಜ್ಯಪಾಲರ ಹೇಳಿಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ‘ರಾಜ್ಯಪಾಲರು ತಮ್ಮ ಸಾಂವಿಧಾನಿಕ ಹುದ್ದೆಗೆ ಬದ್ದರಾಗಿ ಕಾರ್ಯನಿರ್ವಹಿಸಲಿ’ ಎಂದು ಹಲವರು ಹೇಳಿದ್ದಾರೆ.

“ಜಾತ್ಯತೀತತೆಯು ಭಾರತದ ಅತ್ಯಂತ ಅಗತ್ಯವಾದ ಪರಿಕಲ್ಪನೆಯಾಗಿದೆ” ಎಂದು ತಮಿಳುನಾಡಿನ ಆಡಳಿತರೂಢ ಡಿಎಂಕೆ ಹೇಳಿದೆ.

“ಸಂವಿಧಾನ 25ನೇ ವಿಧಿ ಧಾರ್ಮಿಕ ಸ್ವಾತಂತ್ರ್ಯವನ್ನು ಪ್ರತಿಪಾದಿಸುತ್ತದೆ. ಅದು ಅವರಿಗೆ (ರಾಜ್ಯಪಾಲರಿಗೆ) ಗೊತ್ತಿಲ್ಲ ಅನಿಸುತ್ತದೆ. ಅವರು ಹೋಗಿ ಸಂವಿಧಾನವನ್ನು ಸಂಪೂರ್ಣವಾಗಿ ಓದಲಿ. ನಮ್ಮ ಸಂವಿಧಾನದಲ್ಲಿ 22 ಭಾಷೆಗಳನ್ನು ಪಟ್ಟಿ ಮಾಡಲಾಗಿದೆ. ಹಿಂದಿ ಕೆಲ ರಾಜ್ಯಗಳಲ್ಲಿ ಮಾತನಾಡುವ ಭಾಷೆಯಾಗಿದೆ. ಉಳಿದ ರಾಜ್ಯಗಳು ಇತರ ಭಾಷೆಗಳನ್ನು ಮಾತನಾಡುತ್ತವೆ. ಅವರಿಗೆ ಭಾರತ ಅಥವಾ ಸಂವಿಧಾನ ತಿಳಿದಿಲ್ಲ” ಎಂದು ಡಿಎಂಕೆ ವಕ್ತಾರ ಟಿಕೆಎಸ್ ಇಳಂಗೋವನ್ ಹೇಳಿದ್ದಾರೆ.

ಸಿಪಿಐ ನಾಯಕ ಡಿ ರಾಜಾ ರಾಜ್ಯಪಾಲರ ಹೇಳಿಕೆಯನ್ನು ಖಂಡಿಸಿದ್ದು, “ಧರ್ಮ ಮತ್ತು ರಾಜಕೀಯವನ್ನು ಪ್ರತ್ಯೇಕಿಸಲು ಜಾತ್ಯತೀತತೆಯ ಅಗತ್ಯವಿದೆ” ಎಂದಿದ್ದಾರೆ.

“ಆರ್.ಎನ್.ರವಿ ನೀಡಿರುವ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಅವರಿಗೆ ಜಾತ್ಯತೀತತೆಯ ಬಗ್ಗೆ ಏನು ಗೊತ್ತು? ಅವರಿಗೆ ಭಾರತದ ಬಗ್ಗೆ ಏನು ಗೊತ್ತು? ಅವರು ರಾಜ್ಯಪಾಲರು, ಸಂವಿಧಾನಕ್ಕೆ ಬದ್ಧರಾಗಿರಬೇಕು. ಭಾರತದ ಸಂವಿಧಾನವು ಭಾರತವನ್ನು ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯ ಎಂದು ವ್ಯಾಖ್ಯಾನಿಸುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಧಾರ್ಮಿಕ ಪರಿಕಲ್ಪನೆಯನ್ನು ಬಲವಾಗಿ ತಿರಸ್ಕರಿಸಿದ್ದರು. ಒಂದು ವೇಳೆ ಹಿಂದೂ ರಾಷ್ಟ್ರವು ನಿಜವಾಗಿದ್ದರೆ, ಅದು ರಾಷ್ಟ್ರಕ್ಕೆ ವಿಪತ್ತು. ಜಾತ್ಯತೀತತೆ ಎಂದರೆ ಧರ್ಮ ಮತ್ತು ರಾಜಕೀಯವನ್ನು ಪ್ರತ್ಯೇಕವಾಗಿ ಇಡುವುದಾಗಿದೆ. ರಾಜಕೀಯ ಉದ್ದೇಶಕ್ಕೆ ದೇವರನ್ನು ಎಳೆದು ತರಬೇಡಿ” ಎಂದು ಡಿ ರಾಜಾ ಹೇಳಿದ್ದಾರೆ.

ತಮಿಳುನಾಡು ರಾಜ್ಯಪಾಲರು ಜಾತ್ಯತೀತತೆಯ ಬಗ್ಗೆ ಹೇಳಿಕೆ ನೀಡಿ ವಿವಾದ ಎಬ್ಬಿಸಿರುವುದು ಇದೇ ಮೊದಲಲ್ಲ. ಕಳೆದ ವರ್ಷ “ಈ ದೇಶವನ್ನು ಒಡೆಯಲು ಮುಂದಾಗಿರುವ ಜನರು ಜಾತ್ಯತೀತತೆಯ ಬಗ್ಗೆ ವಿಕೃತ ವ್ಯಾಖ್ಯಾನ ನೀಡಿದ್ದಾರೆ” ಎಂದಿದ್ದರು.

“ನಮ್ಮ ಸಂವಿಧಾನವು ‘ಧರ್ಮ’ಕ್ಕೆ ವಿರುದ್ಧವಾಗಿಲ್ಲ. ಈ ದೇಶವನ್ನು ಒಡೆಯಲು ಬಯಸುವ ಜನರು ಜಾತ್ಯತೀತತೆಯ ವಿಕೃತ ವ್ಯಾಖ್ಯಾನವನ್ನು ನೀಡಿದ್ದಾರೆ. ನಮ್ಮ ಸಂವಿಧಾನದಲ್ಲಿರುವ ಜಾತ್ಯತೀತತೆಯ ನಿಜವಾದ ಅರ್ಥವನ್ನು ನಾವು ಗ್ರಹಿಸಿಕೊಳ್ಳಬೇಕು. ಹಿಂದೂ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುವವರು ಪ್ರತಿಕೂಲ ವಿದೇಶಿ ಶಕ್ತಿಗಳ ಸಹಯೋಗದೊಂದಿಗೆ ಈ ದೇಶವನ್ನು ಒಡೆಯುವ ಗುಪ್ತ ಕಾರ್ಯಸೂಚಿಯನ್ನು ಹೊಂದಿದ್ದು, ಭಾರತಕ್ಕೆ ಅಂತರ್ಗತ ಶಕ್ತಿ ಇರುವುದರಿಂದ ಅವರು ಯಶಸ್ವಿಯಾಗುವುದಿಲ್ಲ” ಎಂದು ರಾಜ್ಯಪಾಲ ರವಿ ಹೇಳಿದ್ದರು.

ಕೃಪೆ : ಟೈಮ್ಸ್ ಆಫ್ ಇಂಡಿಯಾ

ಇದನ್ನೂ ಓದಿ : ಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ ಹತ್ಯೆ : ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ವಿರುದ್ದ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...