Homeಮುಖಪುಟ'ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ': ಯೋಗಿ ಆದಿತ್ಯನಾಥ್!

‘ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ’: ಯೋಗಿ ಆದಿತ್ಯನಾಥ್!

"ತಮ್ಮ ಲಾಭಕ್ಕಾಗಿ ಜನರನ್ನು ದಾರಿ ತಪ್ಪಿಸುವ ಮತ್ತು ದೇಶಕ್ಕೆ ದ್ರೋಹ ಮಾಡುವವರನ್ನು ಸುಮ್ಮನೆ ಬಿಡಲಾಗದು" ಎಂದು ಅವರು ಎಚ್ಚರಿಸಿದ್ದಾರೆ.

- Advertisement -
- Advertisement -

ಜಾಗತಿಕ ವೇದಿಕೆಯಲ್ಲಿ ಭಾರತದ ಸಂಪ್ರದಾಯಕ್ಕೆ ಮಾನ್ಯತೆ ಪಡೆಯಲು ಜಾತ್ಯತೀತತೆಯು ದೊಡ್ಡ ಬೆದರಿಕೆಯಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ಹೇಳಿದ್ದಾರೆ.

“ತಮ್ಮ ಲಾಭಕ್ಕಾಗಿ ಜನರನ್ನು ದಾರಿ ತಪ್ಪಿಸುವ ಮತ್ತು ದೇಶಕ್ಕೆ ದ್ರೋಹ ಮಾಡುವವರನ್ನು ಸುಮ್ಮನೆ ಬಿಡಲಾಗದು” ಎಂದು ಅವರು ಎಚ್ಚರಿಸಿದ್ದಾರೆ. ಕ್ಷುಲ್ಲಕ, ಸಣ್ಣ ಕೋಮು ವಿವಾದಗಳಲ್ಲಿ ಸಿಲುಕುವ ಮೂಲಕ ರಾಷ್ಟ್ರದ ಸಾಮರಸ್ಯ ಮನೋಭಾವವನ್ನು ಕಳೆದುಕೊಳ್ಳದಂತೆ ಅವರು ಜನರನ್ನು ಕೋರಿದರು. ಅಲ್ಪ ಮೊತ್ತದ ಹಣಕ್ಕಾಗಿ ಭಾರತದ ಬಗ್ಗೆ ಸುಳ್ಳು ಪ್ರಚಾರವನ್ನು ಮಾಡುತ್ತಿರುವ ಜನರು ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಅಯೋಧ್ಯ ಸಂಶೋಧನಾ ಸಂಸ್ಥೆ ಸಿದ್ಧಪಡಿಸಿದ ಇ-ಪುಸ್ತಕವಾದ ರಾಮಾಯಣದ ಗ್ಲೋಬಲ್ ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯ ಬಿಡುಗಡೆ ಸಂದರ್ಭದಲ್ಲಿ ಮಾತನಾಡುತ್ತಾ, “ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವು ರಾಮಾಯಣದ ಗ್ಲೋಬಲ್ ಎನ್‌ಸೈಕ್ಲೋಪೀಡಿಯಾವನ್ನು ಹೆಚ್ಚು ವಿಶೇಷಗೊಳಿಸಿದೆ” ಎಂದು ಅವರು ಹೇಳಿದರು.

ಕಾಂಬೋಡಿಯಾ ಭೇಟಿಯ ಸಮಯದಲ್ಲಿ ಅಂಕೋರ್ ವಾಟ್ ದೇವಸ್ಥಾನದಲ್ಲಿ ದೊರೆತ ಬೌದ್ಧ ಮಾರ್ಗದರ್ಶಿಯೊಬ್ಬರ ಕಥೆಯನ್ನು ವಿವರಿಸಿದ ಆದಿತ್ಯನಾಥ್, ಹಿಂದೂ ಸಂಸ್ಕೃತಿಯನ್ನು ಪ್ರಶ್ನಿಸುವವರ ಮೇಲೆ ವಾಗ್ದಾಳಿ ನಡೆಸಿದರು. “ದೇವಾಲಯದ ಗೈಡ್ ಬೌದ್ಧನಾಗಿದ್ದ, ಆತ ಬೌದ್ಧಧರ್ಮ ಹಿಂದೂ ಧರ್ಮದಿಂದ ಹುಟ್ಟಿಕೊಂಡಿದೆ ಎಂದು ಒಪ್ಪಿಕೊಳ್ಳುವಷ್ಟು ವಿಶ್ವಾಸವಿದೆ ಎಂದು ಹೇಳಿದ” ಎಂದು ಯೋಗಿ ತಿಳಿಸಿದರು.

“ರಾಮಾಯಣ ಮತ್ತು ಮಹಾಭಾರತದ ಕಥೆಗಳು ನಮಗೆ ಉತ್ತಮವಾದ ಜೀವನದ ಪಾಠಗಳನ್ನು ಹೇಳಿಕೊಡುವುದಲ್ಲದೆ, ಭಾರತೀಯ ಗಡಿಗಳ ವಿಸ್ತರಣೆಯ ಬಗ್ಗೆಯೂ ಸಾಕಷ್ಟು ಹೇಳುತ್ತವೆ. ನಮ್ಮ ಮಹಾಕಾವ್ಯ, ಹಿಂದೂ ಸಾಹಿತ್ಯದ ಈ ಕಥೆಗಳು ಉತ್ತಮ ಭಾರತವನ್ನು ರೂಪಿಸಲು ನಮಗೆ ಸಹಾಯ ಮಾಡುತ್ತವೆ. 1947 ಕ್ಕಿಂತ ಮೊದಲು ಪಾಕಿಸ್ತಾನವು ಭಾರತದ ಒಂದು ಭಾಗವಾಗಿತ್ತು ಮತ್ತು ಮರ್ಯಾದಾ ಪುರುಷೋತ್ತಮ ಭಗವಾನ್ ಶ್ರೀ ರಾಮ ತಮ್ಮ ಸಹೋದರನ ಮಗನನ್ನು ಪಾಕಿಸ್ತಾನದ ಆಡಳಿತಗಾರರನ್ನಾಗಿ ಮಾಡುವ ಮೂಲಕ ಭಾರತದ ಗಡಿಯನ್ನು ವಿಸ್ತರಿಸಿದ್ದರು” ಎಂದು ಅವರು ಹೇಳಿದರು. ಅಯೋಧ್ಯೆಯಲ್ಲಿ ಶ್ರೀರಾಮನ ಅಸ್ತಿತ್ವದ ಬಗ್ಗೆ ಇನ್ನೂ ಕೆಲವು ಜನರು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಆದರೆ ಐತಿಹಾಸಿಕ ಸಂಗತಿಗಳನ್ನು ನಿರಾಕರಿಸಲಾಗುವುದಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ‘ಖೇಲಾ ಹೋಬೆ’ಗೆ ‘ಖೇಲ್ ಖತಂ’ ಎಂದ ಪ್ರಧಾನಿ: ‘ಉಜ್ವಲಾ-ಜುಮ್ಲಾ’ ಎಂದು ದಾಳಿ ಮಾಡಿದ ದೀದಿ

ರಾಮಾಯಣ, ರಾಮ ಮತ್ತು ಭಾರತದ ಬಗ್ಗೆ ಪೂಜ್ಯ ಭಾವನೆ ಇರುವ ಜನರು ವಿಶ್ವಕೋಶದ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮುಖ್ಯಮಂತ್ರಿ ಆಗ್ರಹಿಸಿದರು. ವಿಜ್ಞಾನ ಮತ್ತು ಆಧ್ಯಾತ್ಮಿಕತೆಯ ಕುರಿತು ಗೊತ್ತಿರದ ಅಂಶಗಳನ್ನು ಪರಿಚಯಿಸುವ ಕಾರಣ ವಿಶ್ವಕೋಶವು ಜನರನ್ನು ಅಯೋಧ್ಯೆಗೆ ಭೇಟಿ ನೀಡಲು ಪ್ರೇರೇಪಿಸುತ್ತದೆ ಎಂದು ಅವರು ಹೇಳಿದರು.

ಸಪ್ತ ಪುರಿಯ ಏಳು ಪವಿತ್ರ ನಗರಗಳಿವೆ. ಇವುಗಳನ್ನು ಪವಿತ್ರ ಹಿಂದೂ ತೀರ್ಥಗಳೆಂದು ಪರಿಗಣಿಸಲಾಗಿದೆ. ಇವುಗಳಲ್ಲಿ ಅಯೋಧ್ಯೆ, ಮಥುರಾ ಮತ್ತು ಕಾಶಿ ಉತ್ತರ ಪ್ರದೇಶದ ವ್ಯಾಪ್ತಿಯಲ್ಲಿವೆ. ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ ಸಂಸ್ಕೃತಿ ಇಲಾಖೆಯಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂಬುದು ನಮಗೆ ಹೆಮ್ಮೆಯ ವಿಷಯ. ರಾಮ್‌ಲೀಲಾವನ್ನು ಪ್ರಪಂಚದಾದ್ಯಂತ ಪ್ರದರ್ಶಿಸಲು ನಾವು ಪ್ರಯತ್ನಿಸುತ್ತೇವೆ.

ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ಬಿಡುಗಡೆ ಮಾಡಲಾಗಿದ್ದು, ಇದನ್ನು ಖರಗ್‌ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿನ್ಯಾಸಗೊಳಿಸಿದೆ. ಹಿಂದಿ ಮತ್ತು ತಮಿಳು ಭಾಷೆಗಳಲ್ಲಿ ಮೊದಲ ಆವೃತ್ತಿ ಮುಂಬರುವ ತಿಂಗಳಲ್ಲಿ ಪ್ರಕಟವಾಗಲಿದೆ. ರಾಮಾಯಣ ವಿಶ್ವಕೋಶವನ್ನು 200 ಕ್ಕೂ ಹೆಚ್ಚು ಸಂಪುಟಗಳಲ್ಲಿ ಪ್ರಕಟಿಸುವ ಯೋಜನೆ ಇದೆ ಎಂದು ರಾಜ್ಯ ಮಾಹಿತಿ ವಿಭಾಗದ ನಿರ್ದೇಶಕ ಶಿಶಿರ್ ಸಿಂಗ್ ಹೇಳಿದ್ದಾರೆ. ಇದಕ್ಕಾಗಿ ಅಯೋಧ್ಯ ಸಂಶೋಧನಾ ಸಂಸ್ಥೆ ದೇಶ ಮತ್ತು ವಿಶ್ವದಾದ್ಯಂತ ಸಂಪಾದಕರು ಮತ್ತು ಸಲಹೆಗಾರರ ಮಂಡಳಿಯನ್ನು ಸ್ಥಾಪಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗ್ಲೋಬಲ್ ರಾಮಾಯಣ ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯೊಂದಿಗೆ ರಾಮಾಯಣದ ಪ್ರಕಟಣೆಯನ್ನು ಒಡಿಯಾ, ಮಲಯಾಳಂ, ಉರ್ದು ಮತ್ತು ಅಸ್ಸಾಮಿ ಭಾಷೆಗಳಲ್ಲಿಯೂ ಬಿಡುಗಡೆ ಮಾಡಲಾಗುತ್ತಿದೆ.

ಉತ್ತರ ಪ್ರದೇಶದ ಸಂಸ್ಕೃತಿ ಇಲಾಖೆ, ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ, ವಿಶ್ವದ ಹಲವಾರು ದೇಶಗಳಿಂದ ರಾಮಾಯಣದ ಸ್ಪಷ್ಟವಾದ ಮತ್ತು ಅಸ್ಪಷ್ಟ ಪರಂಪರೆಯನ್ನು ಒಟ್ಟುಗೂಡಿಸುವ ಮೂಲಕ ಈ ಮೆಗಾ ಯೋಜನೆಯಲ್ಲಿ ತೊಡಗಿಸಿಕೊಂಡಿದೆ.


ಇದನ್ನೂ ಓದಿ: ಇಂದು ಬಂಗಾಳಕ್ಕೆ ಸರ್ಕಾರ ಹೋಗಿದೆ, ಮಾರ್ಚ್ 13ಕ್ಕೆ ನಾವು ಹೋಗುತ್ತೇವೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Sir nange Ramayana Mahabharata bekagilla moodanambikeyannu naanu oppalare ekendare idu vygnanika Yuga illi moodanabikege Jaga illa Indian Constitution idre saaku ee Ramayana Mahabharata bekagilla jai bheem

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...