Homeಮುಖಪುಟ'ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ': ಯೋಗಿ ಆದಿತ್ಯನಾಥ್!

‘ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ’: ಯೋಗಿ ಆದಿತ್ಯನಾಥ್!

"ತಮ್ಮ ಲಾಭಕ್ಕಾಗಿ ಜನರನ್ನು ದಾರಿ ತಪ್ಪಿಸುವ ಮತ್ತು ದೇಶಕ್ಕೆ ದ್ರೋಹ ಮಾಡುವವರನ್ನು ಸುಮ್ಮನೆ ಬಿಡಲಾಗದು" ಎಂದು ಅವರು ಎಚ್ಚರಿಸಿದ್ದಾರೆ.

- Advertisement -
- Advertisement -

ಜಾಗತಿಕ ವೇದಿಕೆಯಲ್ಲಿ ಭಾರತದ ಸಂಪ್ರದಾಯಕ್ಕೆ ಮಾನ್ಯತೆ ಪಡೆಯಲು ಜಾತ್ಯತೀತತೆಯು ದೊಡ್ಡ ಬೆದರಿಕೆಯಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ಹೇಳಿದ್ದಾರೆ.

“ತಮ್ಮ ಲಾಭಕ್ಕಾಗಿ ಜನರನ್ನು ದಾರಿ ತಪ್ಪಿಸುವ ಮತ್ತು ದೇಶಕ್ಕೆ ದ್ರೋಹ ಮಾಡುವವರನ್ನು ಸುಮ್ಮನೆ ಬಿಡಲಾಗದು” ಎಂದು ಅವರು ಎಚ್ಚರಿಸಿದ್ದಾರೆ. ಕ್ಷುಲ್ಲಕ, ಸಣ್ಣ ಕೋಮು ವಿವಾದಗಳಲ್ಲಿ ಸಿಲುಕುವ ಮೂಲಕ ರಾಷ್ಟ್ರದ ಸಾಮರಸ್ಯ ಮನೋಭಾವವನ್ನು ಕಳೆದುಕೊಳ್ಳದಂತೆ ಅವರು ಜನರನ್ನು ಕೋರಿದರು. ಅಲ್ಪ ಮೊತ್ತದ ಹಣಕ್ಕಾಗಿ ಭಾರತದ ಬಗ್ಗೆ ಸುಳ್ಳು ಪ್ರಚಾರವನ್ನು ಮಾಡುತ್ತಿರುವ ಜನರು ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಅಯೋಧ್ಯ ಸಂಶೋಧನಾ ಸಂಸ್ಥೆ ಸಿದ್ಧಪಡಿಸಿದ ಇ-ಪುಸ್ತಕವಾದ ರಾಮಾಯಣದ ಗ್ಲೋಬಲ್ ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯ ಬಿಡುಗಡೆ ಸಂದರ್ಭದಲ್ಲಿ ಮಾತನಾಡುತ್ತಾ, “ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವು ರಾಮಾಯಣದ ಗ್ಲೋಬಲ್ ಎನ್‌ಸೈಕ್ಲೋಪೀಡಿಯಾವನ್ನು ಹೆಚ್ಚು ವಿಶೇಷಗೊಳಿಸಿದೆ” ಎಂದು ಅವರು ಹೇಳಿದರು.

ಕಾಂಬೋಡಿಯಾ ಭೇಟಿಯ ಸಮಯದಲ್ಲಿ ಅಂಕೋರ್ ವಾಟ್ ದೇವಸ್ಥಾನದಲ್ಲಿ ದೊರೆತ ಬೌದ್ಧ ಮಾರ್ಗದರ್ಶಿಯೊಬ್ಬರ ಕಥೆಯನ್ನು ವಿವರಿಸಿದ ಆದಿತ್ಯನಾಥ್, ಹಿಂದೂ ಸಂಸ್ಕೃತಿಯನ್ನು ಪ್ರಶ್ನಿಸುವವರ ಮೇಲೆ ವಾಗ್ದಾಳಿ ನಡೆಸಿದರು. “ದೇವಾಲಯದ ಗೈಡ್ ಬೌದ್ಧನಾಗಿದ್ದ, ಆತ ಬೌದ್ಧಧರ್ಮ ಹಿಂದೂ ಧರ್ಮದಿಂದ ಹುಟ್ಟಿಕೊಂಡಿದೆ ಎಂದು ಒಪ್ಪಿಕೊಳ್ಳುವಷ್ಟು ವಿಶ್ವಾಸವಿದೆ ಎಂದು ಹೇಳಿದ” ಎಂದು ಯೋಗಿ ತಿಳಿಸಿದರು.

“ರಾಮಾಯಣ ಮತ್ತು ಮಹಾಭಾರತದ ಕಥೆಗಳು ನಮಗೆ ಉತ್ತಮವಾದ ಜೀವನದ ಪಾಠಗಳನ್ನು ಹೇಳಿಕೊಡುವುದಲ್ಲದೆ, ಭಾರತೀಯ ಗಡಿಗಳ ವಿಸ್ತರಣೆಯ ಬಗ್ಗೆಯೂ ಸಾಕಷ್ಟು ಹೇಳುತ್ತವೆ. ನಮ್ಮ ಮಹಾಕಾವ್ಯ, ಹಿಂದೂ ಸಾಹಿತ್ಯದ ಈ ಕಥೆಗಳು ಉತ್ತಮ ಭಾರತವನ್ನು ರೂಪಿಸಲು ನಮಗೆ ಸಹಾಯ ಮಾಡುತ್ತವೆ. 1947 ಕ್ಕಿಂತ ಮೊದಲು ಪಾಕಿಸ್ತಾನವು ಭಾರತದ ಒಂದು ಭಾಗವಾಗಿತ್ತು ಮತ್ತು ಮರ್ಯಾದಾ ಪುರುಷೋತ್ತಮ ಭಗವಾನ್ ಶ್ರೀ ರಾಮ ತಮ್ಮ ಸಹೋದರನ ಮಗನನ್ನು ಪಾಕಿಸ್ತಾನದ ಆಡಳಿತಗಾರರನ್ನಾಗಿ ಮಾಡುವ ಮೂಲಕ ಭಾರತದ ಗಡಿಯನ್ನು ವಿಸ್ತರಿಸಿದ್ದರು” ಎಂದು ಅವರು ಹೇಳಿದರು. ಅಯೋಧ್ಯೆಯಲ್ಲಿ ಶ್ರೀರಾಮನ ಅಸ್ತಿತ್ವದ ಬಗ್ಗೆ ಇನ್ನೂ ಕೆಲವು ಜನರು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಆದರೆ ಐತಿಹಾಸಿಕ ಸಂಗತಿಗಳನ್ನು ನಿರಾಕರಿಸಲಾಗುವುದಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ‘ಖೇಲಾ ಹೋಬೆ’ಗೆ ‘ಖೇಲ್ ಖತಂ’ ಎಂದ ಪ್ರಧಾನಿ: ‘ಉಜ್ವಲಾ-ಜುಮ್ಲಾ’ ಎಂದು ದಾಳಿ ಮಾಡಿದ ದೀದಿ

ರಾಮಾಯಣ, ರಾಮ ಮತ್ತು ಭಾರತದ ಬಗ್ಗೆ ಪೂಜ್ಯ ಭಾವನೆ ಇರುವ ಜನರು ವಿಶ್ವಕೋಶದ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮುಖ್ಯಮಂತ್ರಿ ಆಗ್ರಹಿಸಿದರು. ವಿಜ್ಞಾನ ಮತ್ತು ಆಧ್ಯಾತ್ಮಿಕತೆಯ ಕುರಿತು ಗೊತ್ತಿರದ ಅಂಶಗಳನ್ನು ಪರಿಚಯಿಸುವ ಕಾರಣ ವಿಶ್ವಕೋಶವು ಜನರನ್ನು ಅಯೋಧ್ಯೆಗೆ ಭೇಟಿ ನೀಡಲು ಪ್ರೇರೇಪಿಸುತ್ತದೆ ಎಂದು ಅವರು ಹೇಳಿದರು.

ಸಪ್ತ ಪುರಿಯ ಏಳು ಪವಿತ್ರ ನಗರಗಳಿವೆ. ಇವುಗಳನ್ನು ಪವಿತ್ರ ಹಿಂದೂ ತೀರ್ಥಗಳೆಂದು ಪರಿಗಣಿಸಲಾಗಿದೆ. ಇವುಗಳಲ್ಲಿ ಅಯೋಧ್ಯೆ, ಮಥುರಾ ಮತ್ತು ಕಾಶಿ ಉತ್ತರ ಪ್ರದೇಶದ ವ್ಯಾಪ್ತಿಯಲ್ಲಿವೆ. ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ ಸಂಸ್ಕೃತಿ ಇಲಾಖೆಯಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂಬುದು ನಮಗೆ ಹೆಮ್ಮೆಯ ವಿಷಯ. ರಾಮ್‌ಲೀಲಾವನ್ನು ಪ್ರಪಂಚದಾದ್ಯಂತ ಪ್ರದರ್ಶಿಸಲು ನಾವು ಪ್ರಯತ್ನಿಸುತ್ತೇವೆ.

ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ಬಿಡುಗಡೆ ಮಾಡಲಾಗಿದ್ದು, ಇದನ್ನು ಖರಗ್‌ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿನ್ಯಾಸಗೊಳಿಸಿದೆ. ಹಿಂದಿ ಮತ್ತು ತಮಿಳು ಭಾಷೆಗಳಲ್ಲಿ ಮೊದಲ ಆವೃತ್ತಿ ಮುಂಬರುವ ತಿಂಗಳಲ್ಲಿ ಪ್ರಕಟವಾಗಲಿದೆ. ರಾಮಾಯಣ ವಿಶ್ವಕೋಶವನ್ನು 200 ಕ್ಕೂ ಹೆಚ್ಚು ಸಂಪುಟಗಳಲ್ಲಿ ಪ್ರಕಟಿಸುವ ಯೋಜನೆ ಇದೆ ಎಂದು ರಾಜ್ಯ ಮಾಹಿತಿ ವಿಭಾಗದ ನಿರ್ದೇಶಕ ಶಿಶಿರ್ ಸಿಂಗ್ ಹೇಳಿದ್ದಾರೆ. ಇದಕ್ಕಾಗಿ ಅಯೋಧ್ಯ ಸಂಶೋಧನಾ ಸಂಸ್ಥೆ ದೇಶ ಮತ್ತು ವಿಶ್ವದಾದ್ಯಂತ ಸಂಪಾದಕರು ಮತ್ತು ಸಲಹೆಗಾರರ ಮಂಡಳಿಯನ್ನು ಸ್ಥಾಪಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗ್ಲೋಬಲ್ ರಾಮಾಯಣ ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯೊಂದಿಗೆ ರಾಮಾಯಣದ ಪ್ರಕಟಣೆಯನ್ನು ಒಡಿಯಾ, ಮಲಯಾಳಂ, ಉರ್ದು ಮತ್ತು ಅಸ್ಸಾಮಿ ಭಾಷೆಗಳಲ್ಲಿಯೂ ಬಿಡುಗಡೆ ಮಾಡಲಾಗುತ್ತಿದೆ.

ಉತ್ತರ ಪ್ರದೇಶದ ಸಂಸ್ಕೃತಿ ಇಲಾಖೆ, ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ, ವಿಶ್ವದ ಹಲವಾರು ದೇಶಗಳಿಂದ ರಾಮಾಯಣದ ಸ್ಪಷ್ಟವಾದ ಮತ್ತು ಅಸ್ಪಷ್ಟ ಪರಂಪರೆಯನ್ನು ಒಟ್ಟುಗೂಡಿಸುವ ಮೂಲಕ ಈ ಮೆಗಾ ಯೋಜನೆಯಲ್ಲಿ ತೊಡಗಿಸಿಕೊಂಡಿದೆ.


ಇದನ್ನೂ ಓದಿ: ಇಂದು ಬಂಗಾಳಕ್ಕೆ ಸರ್ಕಾರ ಹೋಗಿದೆ, ಮಾರ್ಚ್ 13ಕ್ಕೆ ನಾವು ಹೋಗುತ್ತೇವೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Sir nange Ramayana Mahabharata bekagilla moodanambikeyannu naanu oppalare ekendare idu vygnanika Yuga illi moodanabikege Jaga illa Indian Constitution idre saaku ee Ramayana Mahabharata bekagilla jai bheem

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...