Homeಮುಖಪುಟ'ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ': ಯೋಗಿ ಆದಿತ್ಯನಾಥ್!

‘ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ’: ಯೋಗಿ ಆದಿತ್ಯನಾಥ್!

"ತಮ್ಮ ಲಾಭಕ್ಕಾಗಿ ಜನರನ್ನು ದಾರಿ ತಪ್ಪಿಸುವ ಮತ್ತು ದೇಶಕ್ಕೆ ದ್ರೋಹ ಮಾಡುವವರನ್ನು ಸುಮ್ಮನೆ ಬಿಡಲಾಗದು" ಎಂದು ಅವರು ಎಚ್ಚರಿಸಿದ್ದಾರೆ.

- Advertisement -
- Advertisement -

ಜಾಗತಿಕ ವೇದಿಕೆಯಲ್ಲಿ ಭಾರತದ ಸಂಪ್ರದಾಯಕ್ಕೆ ಮಾನ್ಯತೆ ಪಡೆಯಲು ಜಾತ್ಯತೀತತೆಯು ದೊಡ್ಡ ಬೆದರಿಕೆಯಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ಹೇಳಿದ್ದಾರೆ.

“ತಮ್ಮ ಲಾಭಕ್ಕಾಗಿ ಜನರನ್ನು ದಾರಿ ತಪ್ಪಿಸುವ ಮತ್ತು ದೇಶಕ್ಕೆ ದ್ರೋಹ ಮಾಡುವವರನ್ನು ಸುಮ್ಮನೆ ಬಿಡಲಾಗದು” ಎಂದು ಅವರು ಎಚ್ಚರಿಸಿದ್ದಾರೆ. ಕ್ಷುಲ್ಲಕ, ಸಣ್ಣ ಕೋಮು ವಿವಾದಗಳಲ್ಲಿ ಸಿಲುಕುವ ಮೂಲಕ ರಾಷ್ಟ್ರದ ಸಾಮರಸ್ಯ ಮನೋಭಾವವನ್ನು ಕಳೆದುಕೊಳ್ಳದಂತೆ ಅವರು ಜನರನ್ನು ಕೋರಿದರು. ಅಲ್ಪ ಮೊತ್ತದ ಹಣಕ್ಕಾಗಿ ಭಾರತದ ಬಗ್ಗೆ ಸುಳ್ಳು ಪ್ರಚಾರವನ್ನು ಮಾಡುತ್ತಿರುವ ಜನರು ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಅಯೋಧ್ಯ ಸಂಶೋಧನಾ ಸಂಸ್ಥೆ ಸಿದ್ಧಪಡಿಸಿದ ಇ-ಪುಸ್ತಕವಾದ ರಾಮಾಯಣದ ಗ್ಲೋಬಲ್ ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯ ಬಿಡುಗಡೆ ಸಂದರ್ಭದಲ್ಲಿ ಮಾತನಾಡುತ್ತಾ, “ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವು ರಾಮಾಯಣದ ಗ್ಲೋಬಲ್ ಎನ್‌ಸೈಕ್ಲೋಪೀಡಿಯಾವನ್ನು ಹೆಚ್ಚು ವಿಶೇಷಗೊಳಿಸಿದೆ” ಎಂದು ಅವರು ಹೇಳಿದರು.

ಕಾಂಬೋಡಿಯಾ ಭೇಟಿಯ ಸಮಯದಲ್ಲಿ ಅಂಕೋರ್ ವಾಟ್ ದೇವಸ್ಥಾನದಲ್ಲಿ ದೊರೆತ ಬೌದ್ಧ ಮಾರ್ಗದರ್ಶಿಯೊಬ್ಬರ ಕಥೆಯನ್ನು ವಿವರಿಸಿದ ಆದಿತ್ಯನಾಥ್, ಹಿಂದೂ ಸಂಸ್ಕೃತಿಯನ್ನು ಪ್ರಶ್ನಿಸುವವರ ಮೇಲೆ ವಾಗ್ದಾಳಿ ನಡೆಸಿದರು. “ದೇವಾಲಯದ ಗೈಡ್ ಬೌದ್ಧನಾಗಿದ್ದ, ಆತ ಬೌದ್ಧಧರ್ಮ ಹಿಂದೂ ಧರ್ಮದಿಂದ ಹುಟ್ಟಿಕೊಂಡಿದೆ ಎಂದು ಒಪ್ಪಿಕೊಳ್ಳುವಷ್ಟು ವಿಶ್ವಾಸವಿದೆ ಎಂದು ಹೇಳಿದ” ಎಂದು ಯೋಗಿ ತಿಳಿಸಿದರು.

“ರಾಮಾಯಣ ಮತ್ತು ಮಹಾಭಾರತದ ಕಥೆಗಳು ನಮಗೆ ಉತ್ತಮವಾದ ಜೀವನದ ಪಾಠಗಳನ್ನು ಹೇಳಿಕೊಡುವುದಲ್ಲದೆ, ಭಾರತೀಯ ಗಡಿಗಳ ವಿಸ್ತರಣೆಯ ಬಗ್ಗೆಯೂ ಸಾಕಷ್ಟು ಹೇಳುತ್ತವೆ. ನಮ್ಮ ಮಹಾಕಾವ್ಯ, ಹಿಂದೂ ಸಾಹಿತ್ಯದ ಈ ಕಥೆಗಳು ಉತ್ತಮ ಭಾರತವನ್ನು ರೂಪಿಸಲು ನಮಗೆ ಸಹಾಯ ಮಾಡುತ್ತವೆ. 1947 ಕ್ಕಿಂತ ಮೊದಲು ಪಾಕಿಸ್ತಾನವು ಭಾರತದ ಒಂದು ಭಾಗವಾಗಿತ್ತು ಮತ್ತು ಮರ್ಯಾದಾ ಪುರುಷೋತ್ತಮ ಭಗವಾನ್ ಶ್ರೀ ರಾಮ ತಮ್ಮ ಸಹೋದರನ ಮಗನನ್ನು ಪಾಕಿಸ್ತಾನದ ಆಡಳಿತಗಾರರನ್ನಾಗಿ ಮಾಡುವ ಮೂಲಕ ಭಾರತದ ಗಡಿಯನ್ನು ವಿಸ್ತರಿಸಿದ್ದರು” ಎಂದು ಅವರು ಹೇಳಿದರು. ಅಯೋಧ್ಯೆಯಲ್ಲಿ ಶ್ರೀರಾಮನ ಅಸ್ತಿತ್ವದ ಬಗ್ಗೆ ಇನ್ನೂ ಕೆಲವು ಜನರು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಆದರೆ ಐತಿಹಾಸಿಕ ಸಂಗತಿಗಳನ್ನು ನಿರಾಕರಿಸಲಾಗುವುದಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ‘ಖೇಲಾ ಹೋಬೆ’ಗೆ ‘ಖೇಲ್ ಖತಂ’ ಎಂದ ಪ್ರಧಾನಿ: ‘ಉಜ್ವಲಾ-ಜುಮ್ಲಾ’ ಎಂದು ದಾಳಿ ಮಾಡಿದ ದೀದಿ

ರಾಮಾಯಣ, ರಾಮ ಮತ್ತು ಭಾರತದ ಬಗ್ಗೆ ಪೂಜ್ಯ ಭಾವನೆ ಇರುವ ಜನರು ವಿಶ್ವಕೋಶದ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮುಖ್ಯಮಂತ್ರಿ ಆಗ್ರಹಿಸಿದರು. ವಿಜ್ಞಾನ ಮತ್ತು ಆಧ್ಯಾತ್ಮಿಕತೆಯ ಕುರಿತು ಗೊತ್ತಿರದ ಅಂಶಗಳನ್ನು ಪರಿಚಯಿಸುವ ಕಾರಣ ವಿಶ್ವಕೋಶವು ಜನರನ್ನು ಅಯೋಧ್ಯೆಗೆ ಭೇಟಿ ನೀಡಲು ಪ್ರೇರೇಪಿಸುತ್ತದೆ ಎಂದು ಅವರು ಹೇಳಿದರು.

ಸಪ್ತ ಪುರಿಯ ಏಳು ಪವಿತ್ರ ನಗರಗಳಿವೆ. ಇವುಗಳನ್ನು ಪವಿತ್ರ ಹಿಂದೂ ತೀರ್ಥಗಳೆಂದು ಪರಿಗಣಿಸಲಾಗಿದೆ. ಇವುಗಳಲ್ಲಿ ಅಯೋಧ್ಯೆ, ಮಥುರಾ ಮತ್ತು ಕಾಶಿ ಉತ್ತರ ಪ್ರದೇಶದ ವ್ಯಾಪ್ತಿಯಲ್ಲಿವೆ. ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ ಸಂಸ್ಕೃತಿ ಇಲಾಖೆಯಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂಬುದು ನಮಗೆ ಹೆಮ್ಮೆಯ ವಿಷಯ. ರಾಮ್‌ಲೀಲಾವನ್ನು ಪ್ರಪಂಚದಾದ್ಯಂತ ಪ್ರದರ್ಶಿಸಲು ನಾವು ಪ್ರಯತ್ನಿಸುತ್ತೇವೆ.

ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ಬಿಡುಗಡೆ ಮಾಡಲಾಗಿದ್ದು, ಇದನ್ನು ಖರಗ್‌ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿನ್ಯಾಸಗೊಳಿಸಿದೆ. ಹಿಂದಿ ಮತ್ತು ತಮಿಳು ಭಾಷೆಗಳಲ್ಲಿ ಮೊದಲ ಆವೃತ್ತಿ ಮುಂಬರುವ ತಿಂಗಳಲ್ಲಿ ಪ್ರಕಟವಾಗಲಿದೆ. ರಾಮಾಯಣ ವಿಶ್ವಕೋಶವನ್ನು 200 ಕ್ಕೂ ಹೆಚ್ಚು ಸಂಪುಟಗಳಲ್ಲಿ ಪ್ರಕಟಿಸುವ ಯೋಜನೆ ಇದೆ ಎಂದು ರಾಜ್ಯ ಮಾಹಿತಿ ವಿಭಾಗದ ನಿರ್ದೇಶಕ ಶಿಶಿರ್ ಸಿಂಗ್ ಹೇಳಿದ್ದಾರೆ. ಇದಕ್ಕಾಗಿ ಅಯೋಧ್ಯ ಸಂಶೋಧನಾ ಸಂಸ್ಥೆ ದೇಶ ಮತ್ತು ವಿಶ್ವದಾದ್ಯಂತ ಸಂಪಾದಕರು ಮತ್ತು ಸಲಹೆಗಾರರ ಮಂಡಳಿಯನ್ನು ಸ್ಥಾಪಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗ್ಲೋಬಲ್ ರಾಮಾಯಣ ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯೊಂದಿಗೆ ರಾಮಾಯಣದ ಪ್ರಕಟಣೆಯನ್ನು ಒಡಿಯಾ, ಮಲಯಾಳಂ, ಉರ್ದು ಮತ್ತು ಅಸ್ಸಾಮಿ ಭಾಷೆಗಳಲ್ಲಿಯೂ ಬಿಡುಗಡೆ ಮಾಡಲಾಗುತ್ತಿದೆ.

ಉತ್ತರ ಪ್ರದೇಶದ ಸಂಸ್ಕೃತಿ ಇಲಾಖೆ, ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ, ವಿಶ್ವದ ಹಲವಾರು ದೇಶಗಳಿಂದ ರಾಮಾಯಣದ ಸ್ಪಷ್ಟವಾದ ಮತ್ತು ಅಸ್ಪಷ್ಟ ಪರಂಪರೆಯನ್ನು ಒಟ್ಟುಗೂಡಿಸುವ ಮೂಲಕ ಈ ಮೆಗಾ ಯೋಜನೆಯಲ್ಲಿ ತೊಡಗಿಸಿಕೊಂಡಿದೆ.


ಇದನ್ನೂ ಓದಿ: ಇಂದು ಬಂಗಾಳಕ್ಕೆ ಸರ್ಕಾರ ಹೋಗಿದೆ, ಮಾರ್ಚ್ 13ಕ್ಕೆ ನಾವು ಹೋಗುತ್ತೇವೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Sir nange Ramayana Mahabharata bekagilla moodanambikeyannu naanu oppalare ekendare idu vygnanika Yuga illi moodanabikege Jaga illa Indian Constitution idre saaku ee Ramayana Mahabharata bekagilla jai bheem

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...