Homeಮುಖಪುಟ'ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ': ಯೋಗಿ ಆದಿತ್ಯನಾಥ್!

‘ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ’: ಯೋಗಿ ಆದಿತ್ಯನಾಥ್!

"ತಮ್ಮ ಲಾಭಕ್ಕಾಗಿ ಜನರನ್ನು ದಾರಿ ತಪ್ಪಿಸುವ ಮತ್ತು ದೇಶಕ್ಕೆ ದ್ರೋಹ ಮಾಡುವವರನ್ನು ಸುಮ್ಮನೆ ಬಿಡಲಾಗದು" ಎಂದು ಅವರು ಎಚ್ಚರಿಸಿದ್ದಾರೆ.

- Advertisement -
- Advertisement -

ಜಾಗತಿಕ ವೇದಿಕೆಯಲ್ಲಿ ಭಾರತದ ಸಂಪ್ರದಾಯಕ್ಕೆ ಮಾನ್ಯತೆ ಪಡೆಯಲು ಜಾತ್ಯತೀತತೆಯು ದೊಡ್ಡ ಬೆದರಿಕೆಯಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ಹೇಳಿದ್ದಾರೆ.

“ತಮ್ಮ ಲಾಭಕ್ಕಾಗಿ ಜನರನ್ನು ದಾರಿ ತಪ್ಪಿಸುವ ಮತ್ತು ದೇಶಕ್ಕೆ ದ್ರೋಹ ಮಾಡುವವರನ್ನು ಸುಮ್ಮನೆ ಬಿಡಲಾಗದು” ಎಂದು ಅವರು ಎಚ್ಚರಿಸಿದ್ದಾರೆ. ಕ್ಷುಲ್ಲಕ, ಸಣ್ಣ ಕೋಮು ವಿವಾದಗಳಲ್ಲಿ ಸಿಲುಕುವ ಮೂಲಕ ರಾಷ್ಟ್ರದ ಸಾಮರಸ್ಯ ಮನೋಭಾವವನ್ನು ಕಳೆದುಕೊಳ್ಳದಂತೆ ಅವರು ಜನರನ್ನು ಕೋರಿದರು. ಅಲ್ಪ ಮೊತ್ತದ ಹಣಕ್ಕಾಗಿ ಭಾರತದ ಬಗ್ಗೆ ಸುಳ್ಳು ಪ್ರಚಾರವನ್ನು ಮಾಡುತ್ತಿರುವ ಜನರು ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಅಯೋಧ್ಯ ಸಂಶೋಧನಾ ಸಂಸ್ಥೆ ಸಿದ್ಧಪಡಿಸಿದ ಇ-ಪುಸ್ತಕವಾದ ರಾಮಾಯಣದ ಗ್ಲೋಬಲ್ ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯ ಬಿಡುಗಡೆ ಸಂದರ್ಭದಲ್ಲಿ ಮಾತನಾಡುತ್ತಾ, “ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವು ರಾಮಾಯಣದ ಗ್ಲೋಬಲ್ ಎನ್‌ಸೈಕ್ಲೋಪೀಡಿಯಾವನ್ನು ಹೆಚ್ಚು ವಿಶೇಷಗೊಳಿಸಿದೆ” ಎಂದು ಅವರು ಹೇಳಿದರು.

ಕಾಂಬೋಡಿಯಾ ಭೇಟಿಯ ಸಮಯದಲ್ಲಿ ಅಂಕೋರ್ ವಾಟ್ ದೇವಸ್ಥಾನದಲ್ಲಿ ದೊರೆತ ಬೌದ್ಧ ಮಾರ್ಗದರ್ಶಿಯೊಬ್ಬರ ಕಥೆಯನ್ನು ವಿವರಿಸಿದ ಆದಿತ್ಯನಾಥ್, ಹಿಂದೂ ಸಂಸ್ಕೃತಿಯನ್ನು ಪ್ರಶ್ನಿಸುವವರ ಮೇಲೆ ವಾಗ್ದಾಳಿ ನಡೆಸಿದರು. “ದೇವಾಲಯದ ಗೈಡ್ ಬೌದ್ಧನಾಗಿದ್ದ, ಆತ ಬೌದ್ಧಧರ್ಮ ಹಿಂದೂ ಧರ್ಮದಿಂದ ಹುಟ್ಟಿಕೊಂಡಿದೆ ಎಂದು ಒಪ್ಪಿಕೊಳ್ಳುವಷ್ಟು ವಿಶ್ವಾಸವಿದೆ ಎಂದು ಹೇಳಿದ” ಎಂದು ಯೋಗಿ ತಿಳಿಸಿದರು.

“ರಾಮಾಯಣ ಮತ್ತು ಮಹಾಭಾರತದ ಕಥೆಗಳು ನಮಗೆ ಉತ್ತಮವಾದ ಜೀವನದ ಪಾಠಗಳನ್ನು ಹೇಳಿಕೊಡುವುದಲ್ಲದೆ, ಭಾರತೀಯ ಗಡಿಗಳ ವಿಸ್ತರಣೆಯ ಬಗ್ಗೆಯೂ ಸಾಕಷ್ಟು ಹೇಳುತ್ತವೆ. ನಮ್ಮ ಮಹಾಕಾವ್ಯ, ಹಿಂದೂ ಸಾಹಿತ್ಯದ ಈ ಕಥೆಗಳು ಉತ್ತಮ ಭಾರತವನ್ನು ರೂಪಿಸಲು ನಮಗೆ ಸಹಾಯ ಮಾಡುತ್ತವೆ. 1947 ಕ್ಕಿಂತ ಮೊದಲು ಪಾಕಿಸ್ತಾನವು ಭಾರತದ ಒಂದು ಭಾಗವಾಗಿತ್ತು ಮತ್ತು ಮರ್ಯಾದಾ ಪುರುಷೋತ್ತಮ ಭಗವಾನ್ ಶ್ರೀ ರಾಮ ತಮ್ಮ ಸಹೋದರನ ಮಗನನ್ನು ಪಾಕಿಸ್ತಾನದ ಆಡಳಿತಗಾರರನ್ನಾಗಿ ಮಾಡುವ ಮೂಲಕ ಭಾರತದ ಗಡಿಯನ್ನು ವಿಸ್ತರಿಸಿದ್ದರು” ಎಂದು ಅವರು ಹೇಳಿದರು. ಅಯೋಧ್ಯೆಯಲ್ಲಿ ಶ್ರೀರಾಮನ ಅಸ್ತಿತ್ವದ ಬಗ್ಗೆ ಇನ್ನೂ ಕೆಲವು ಜನರು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಆದರೆ ಐತಿಹಾಸಿಕ ಸಂಗತಿಗಳನ್ನು ನಿರಾಕರಿಸಲಾಗುವುದಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ‘ಖೇಲಾ ಹೋಬೆ’ಗೆ ‘ಖೇಲ್ ಖತಂ’ ಎಂದ ಪ್ರಧಾನಿ: ‘ಉಜ್ವಲಾ-ಜುಮ್ಲಾ’ ಎಂದು ದಾಳಿ ಮಾಡಿದ ದೀದಿ

ರಾಮಾಯಣ, ರಾಮ ಮತ್ತು ಭಾರತದ ಬಗ್ಗೆ ಪೂಜ್ಯ ಭಾವನೆ ಇರುವ ಜನರು ವಿಶ್ವಕೋಶದ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮುಖ್ಯಮಂತ್ರಿ ಆಗ್ರಹಿಸಿದರು. ವಿಜ್ಞಾನ ಮತ್ತು ಆಧ್ಯಾತ್ಮಿಕತೆಯ ಕುರಿತು ಗೊತ್ತಿರದ ಅಂಶಗಳನ್ನು ಪರಿಚಯಿಸುವ ಕಾರಣ ವಿಶ್ವಕೋಶವು ಜನರನ್ನು ಅಯೋಧ್ಯೆಗೆ ಭೇಟಿ ನೀಡಲು ಪ್ರೇರೇಪಿಸುತ್ತದೆ ಎಂದು ಅವರು ಹೇಳಿದರು.

ಸಪ್ತ ಪುರಿಯ ಏಳು ಪವಿತ್ರ ನಗರಗಳಿವೆ. ಇವುಗಳನ್ನು ಪವಿತ್ರ ಹಿಂದೂ ತೀರ್ಥಗಳೆಂದು ಪರಿಗಣಿಸಲಾಗಿದೆ. ಇವುಗಳಲ್ಲಿ ಅಯೋಧ್ಯೆ, ಮಥುರಾ ಮತ್ತು ಕಾಶಿ ಉತ್ತರ ಪ್ರದೇಶದ ವ್ಯಾಪ್ತಿಯಲ್ಲಿವೆ. ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ ಸಂಸ್ಕೃತಿ ಇಲಾಖೆಯಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂಬುದು ನಮಗೆ ಹೆಮ್ಮೆಯ ವಿಷಯ. ರಾಮ್‌ಲೀಲಾವನ್ನು ಪ್ರಪಂಚದಾದ್ಯಂತ ಪ್ರದರ್ಶಿಸಲು ನಾವು ಪ್ರಯತ್ನಿಸುತ್ತೇವೆ.

ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ಬಿಡುಗಡೆ ಮಾಡಲಾಗಿದ್ದು, ಇದನ್ನು ಖರಗ್‌ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿನ್ಯಾಸಗೊಳಿಸಿದೆ. ಹಿಂದಿ ಮತ್ತು ತಮಿಳು ಭಾಷೆಗಳಲ್ಲಿ ಮೊದಲ ಆವೃತ್ತಿ ಮುಂಬರುವ ತಿಂಗಳಲ್ಲಿ ಪ್ರಕಟವಾಗಲಿದೆ. ರಾಮಾಯಣ ವಿಶ್ವಕೋಶವನ್ನು 200 ಕ್ಕೂ ಹೆಚ್ಚು ಸಂಪುಟಗಳಲ್ಲಿ ಪ್ರಕಟಿಸುವ ಯೋಜನೆ ಇದೆ ಎಂದು ರಾಜ್ಯ ಮಾಹಿತಿ ವಿಭಾಗದ ನಿರ್ದೇಶಕ ಶಿಶಿರ್ ಸಿಂಗ್ ಹೇಳಿದ್ದಾರೆ. ಇದಕ್ಕಾಗಿ ಅಯೋಧ್ಯ ಸಂಶೋಧನಾ ಸಂಸ್ಥೆ ದೇಶ ಮತ್ತು ವಿಶ್ವದಾದ್ಯಂತ ಸಂಪಾದಕರು ಮತ್ತು ಸಲಹೆಗಾರರ ಮಂಡಳಿಯನ್ನು ಸ್ಥಾಪಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗ್ಲೋಬಲ್ ರಾಮಾಯಣ ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯೊಂದಿಗೆ ರಾಮಾಯಣದ ಪ್ರಕಟಣೆಯನ್ನು ಒಡಿಯಾ, ಮಲಯಾಳಂ, ಉರ್ದು ಮತ್ತು ಅಸ್ಸಾಮಿ ಭಾಷೆಗಳಲ್ಲಿಯೂ ಬಿಡುಗಡೆ ಮಾಡಲಾಗುತ್ತಿದೆ.

ಉತ್ತರ ಪ್ರದೇಶದ ಸಂಸ್ಕೃತಿ ಇಲಾಖೆ, ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ, ವಿಶ್ವದ ಹಲವಾರು ದೇಶಗಳಿಂದ ರಾಮಾಯಣದ ಸ್ಪಷ್ಟವಾದ ಮತ್ತು ಅಸ್ಪಷ್ಟ ಪರಂಪರೆಯನ್ನು ಒಟ್ಟುಗೂಡಿಸುವ ಮೂಲಕ ಈ ಮೆಗಾ ಯೋಜನೆಯಲ್ಲಿ ತೊಡಗಿಸಿಕೊಂಡಿದೆ.


ಇದನ್ನೂ ಓದಿ: ಇಂದು ಬಂಗಾಳಕ್ಕೆ ಸರ್ಕಾರ ಹೋಗಿದೆ, ಮಾರ್ಚ್ 13ಕ್ಕೆ ನಾವು ಹೋಗುತ್ತೇವೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Sir nange Ramayana Mahabharata bekagilla moodanambikeyannu naanu oppalare ekendare idu vygnanika Yuga illi moodanabikege Jaga illa Indian Constitution idre saaku ee Ramayana Mahabharata bekagilla jai bheem

LEAVE A REPLY

Please enter your comment!
Please enter your name here

- Advertisment -

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...