Homeಮುಖಪುಟ'ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ': ಯೋಗಿ ಆದಿತ್ಯನಾಥ್!

‘ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ’: ಯೋಗಿ ಆದಿತ್ಯನಾಥ್!

"ತಮ್ಮ ಲಾಭಕ್ಕಾಗಿ ಜನರನ್ನು ದಾರಿ ತಪ್ಪಿಸುವ ಮತ್ತು ದೇಶಕ್ಕೆ ದ್ರೋಹ ಮಾಡುವವರನ್ನು ಸುಮ್ಮನೆ ಬಿಡಲಾಗದು" ಎಂದು ಅವರು ಎಚ್ಚರಿಸಿದ್ದಾರೆ.

- Advertisement -
- Advertisement -

ಜಾಗತಿಕ ವೇದಿಕೆಯಲ್ಲಿ ಭಾರತದ ಸಂಪ್ರದಾಯಕ್ಕೆ ಮಾನ್ಯತೆ ಪಡೆಯಲು ಜಾತ್ಯತೀತತೆಯು ದೊಡ್ಡ ಬೆದರಿಕೆಯಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ಹೇಳಿದ್ದಾರೆ.

“ತಮ್ಮ ಲಾಭಕ್ಕಾಗಿ ಜನರನ್ನು ದಾರಿ ತಪ್ಪಿಸುವ ಮತ್ತು ದೇಶಕ್ಕೆ ದ್ರೋಹ ಮಾಡುವವರನ್ನು ಸುಮ್ಮನೆ ಬಿಡಲಾಗದು” ಎಂದು ಅವರು ಎಚ್ಚರಿಸಿದ್ದಾರೆ. ಕ್ಷುಲ್ಲಕ, ಸಣ್ಣ ಕೋಮು ವಿವಾದಗಳಲ್ಲಿ ಸಿಲುಕುವ ಮೂಲಕ ರಾಷ್ಟ್ರದ ಸಾಮರಸ್ಯ ಮನೋಭಾವವನ್ನು ಕಳೆದುಕೊಳ್ಳದಂತೆ ಅವರು ಜನರನ್ನು ಕೋರಿದರು. ಅಲ್ಪ ಮೊತ್ತದ ಹಣಕ್ಕಾಗಿ ಭಾರತದ ಬಗ್ಗೆ ಸುಳ್ಳು ಪ್ರಚಾರವನ್ನು ಮಾಡುತ್ತಿರುವ ಜನರು ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಅಯೋಧ್ಯ ಸಂಶೋಧನಾ ಸಂಸ್ಥೆ ಸಿದ್ಧಪಡಿಸಿದ ಇ-ಪುಸ್ತಕವಾದ ರಾಮಾಯಣದ ಗ್ಲೋಬಲ್ ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯ ಬಿಡುಗಡೆ ಸಂದರ್ಭದಲ್ಲಿ ಮಾತನಾಡುತ್ತಾ, “ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವು ರಾಮಾಯಣದ ಗ್ಲೋಬಲ್ ಎನ್‌ಸೈಕ್ಲೋಪೀಡಿಯಾವನ್ನು ಹೆಚ್ಚು ವಿಶೇಷಗೊಳಿಸಿದೆ” ಎಂದು ಅವರು ಹೇಳಿದರು.

ಕಾಂಬೋಡಿಯಾ ಭೇಟಿಯ ಸಮಯದಲ್ಲಿ ಅಂಕೋರ್ ವಾಟ್ ದೇವಸ್ಥಾನದಲ್ಲಿ ದೊರೆತ ಬೌದ್ಧ ಮಾರ್ಗದರ್ಶಿಯೊಬ್ಬರ ಕಥೆಯನ್ನು ವಿವರಿಸಿದ ಆದಿತ್ಯನಾಥ್, ಹಿಂದೂ ಸಂಸ್ಕೃತಿಯನ್ನು ಪ್ರಶ್ನಿಸುವವರ ಮೇಲೆ ವಾಗ್ದಾಳಿ ನಡೆಸಿದರು. “ದೇವಾಲಯದ ಗೈಡ್ ಬೌದ್ಧನಾಗಿದ್ದ, ಆತ ಬೌದ್ಧಧರ್ಮ ಹಿಂದೂ ಧರ್ಮದಿಂದ ಹುಟ್ಟಿಕೊಂಡಿದೆ ಎಂದು ಒಪ್ಪಿಕೊಳ್ಳುವಷ್ಟು ವಿಶ್ವಾಸವಿದೆ ಎಂದು ಹೇಳಿದ” ಎಂದು ಯೋಗಿ ತಿಳಿಸಿದರು.

“ರಾಮಾಯಣ ಮತ್ತು ಮಹಾಭಾರತದ ಕಥೆಗಳು ನಮಗೆ ಉತ್ತಮವಾದ ಜೀವನದ ಪಾಠಗಳನ್ನು ಹೇಳಿಕೊಡುವುದಲ್ಲದೆ, ಭಾರತೀಯ ಗಡಿಗಳ ವಿಸ್ತರಣೆಯ ಬಗ್ಗೆಯೂ ಸಾಕಷ್ಟು ಹೇಳುತ್ತವೆ. ನಮ್ಮ ಮಹಾಕಾವ್ಯ, ಹಿಂದೂ ಸಾಹಿತ್ಯದ ಈ ಕಥೆಗಳು ಉತ್ತಮ ಭಾರತವನ್ನು ರೂಪಿಸಲು ನಮಗೆ ಸಹಾಯ ಮಾಡುತ್ತವೆ. 1947 ಕ್ಕಿಂತ ಮೊದಲು ಪಾಕಿಸ್ತಾನವು ಭಾರತದ ಒಂದು ಭಾಗವಾಗಿತ್ತು ಮತ್ತು ಮರ್ಯಾದಾ ಪುರುಷೋತ್ತಮ ಭಗವಾನ್ ಶ್ರೀ ರಾಮ ತಮ್ಮ ಸಹೋದರನ ಮಗನನ್ನು ಪಾಕಿಸ್ತಾನದ ಆಡಳಿತಗಾರರನ್ನಾಗಿ ಮಾಡುವ ಮೂಲಕ ಭಾರತದ ಗಡಿಯನ್ನು ವಿಸ್ತರಿಸಿದ್ದರು” ಎಂದು ಅವರು ಹೇಳಿದರು. ಅಯೋಧ್ಯೆಯಲ್ಲಿ ಶ್ರೀರಾಮನ ಅಸ್ತಿತ್ವದ ಬಗ್ಗೆ ಇನ್ನೂ ಕೆಲವು ಜನರು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಆದರೆ ಐತಿಹಾಸಿಕ ಸಂಗತಿಗಳನ್ನು ನಿರಾಕರಿಸಲಾಗುವುದಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ‘ಖೇಲಾ ಹೋಬೆ’ಗೆ ‘ಖೇಲ್ ಖತಂ’ ಎಂದ ಪ್ರಧಾನಿ: ‘ಉಜ್ವಲಾ-ಜುಮ್ಲಾ’ ಎಂದು ದಾಳಿ ಮಾಡಿದ ದೀದಿ

ರಾಮಾಯಣ, ರಾಮ ಮತ್ತು ಭಾರತದ ಬಗ್ಗೆ ಪೂಜ್ಯ ಭಾವನೆ ಇರುವ ಜನರು ವಿಶ್ವಕೋಶದ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮುಖ್ಯಮಂತ್ರಿ ಆಗ್ರಹಿಸಿದರು. ವಿಜ್ಞಾನ ಮತ್ತು ಆಧ್ಯಾತ್ಮಿಕತೆಯ ಕುರಿತು ಗೊತ್ತಿರದ ಅಂಶಗಳನ್ನು ಪರಿಚಯಿಸುವ ಕಾರಣ ವಿಶ್ವಕೋಶವು ಜನರನ್ನು ಅಯೋಧ್ಯೆಗೆ ಭೇಟಿ ನೀಡಲು ಪ್ರೇರೇಪಿಸುತ್ತದೆ ಎಂದು ಅವರು ಹೇಳಿದರು.

ಸಪ್ತ ಪುರಿಯ ಏಳು ಪವಿತ್ರ ನಗರಗಳಿವೆ. ಇವುಗಳನ್ನು ಪವಿತ್ರ ಹಿಂದೂ ತೀರ್ಥಗಳೆಂದು ಪರಿಗಣಿಸಲಾಗಿದೆ. ಇವುಗಳಲ್ಲಿ ಅಯೋಧ್ಯೆ, ಮಥುರಾ ಮತ್ತು ಕಾಶಿ ಉತ್ತರ ಪ್ರದೇಶದ ವ್ಯಾಪ್ತಿಯಲ್ಲಿವೆ. ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ ಸಂಸ್ಕೃತಿ ಇಲಾಖೆಯಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂಬುದು ನಮಗೆ ಹೆಮ್ಮೆಯ ವಿಷಯ. ರಾಮ್‌ಲೀಲಾವನ್ನು ಪ್ರಪಂಚದಾದ್ಯಂತ ಪ್ರದರ್ಶಿಸಲು ನಾವು ಪ್ರಯತ್ನಿಸುತ್ತೇವೆ.

ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ಬಿಡುಗಡೆ ಮಾಡಲಾಗಿದ್ದು, ಇದನ್ನು ಖರಗ್‌ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿನ್ಯಾಸಗೊಳಿಸಿದೆ. ಹಿಂದಿ ಮತ್ತು ತಮಿಳು ಭಾಷೆಗಳಲ್ಲಿ ಮೊದಲ ಆವೃತ್ತಿ ಮುಂಬರುವ ತಿಂಗಳಲ್ಲಿ ಪ್ರಕಟವಾಗಲಿದೆ. ರಾಮಾಯಣ ವಿಶ್ವಕೋಶವನ್ನು 200 ಕ್ಕೂ ಹೆಚ್ಚು ಸಂಪುಟಗಳಲ್ಲಿ ಪ್ರಕಟಿಸುವ ಯೋಜನೆ ಇದೆ ಎಂದು ರಾಜ್ಯ ಮಾಹಿತಿ ವಿಭಾಗದ ನಿರ್ದೇಶಕ ಶಿಶಿರ್ ಸಿಂಗ್ ಹೇಳಿದ್ದಾರೆ. ಇದಕ್ಕಾಗಿ ಅಯೋಧ್ಯ ಸಂಶೋಧನಾ ಸಂಸ್ಥೆ ದೇಶ ಮತ್ತು ವಿಶ್ವದಾದ್ಯಂತ ಸಂಪಾದಕರು ಮತ್ತು ಸಲಹೆಗಾರರ ಮಂಡಳಿಯನ್ನು ಸ್ಥಾಪಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗ್ಲೋಬಲ್ ರಾಮಾಯಣ ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯೊಂದಿಗೆ ರಾಮಾಯಣದ ಪ್ರಕಟಣೆಯನ್ನು ಒಡಿಯಾ, ಮಲಯಾಳಂ, ಉರ್ದು ಮತ್ತು ಅಸ್ಸಾಮಿ ಭಾಷೆಗಳಲ್ಲಿಯೂ ಬಿಡುಗಡೆ ಮಾಡಲಾಗುತ್ತಿದೆ.

ಉತ್ತರ ಪ್ರದೇಶದ ಸಂಸ್ಕೃತಿ ಇಲಾಖೆ, ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ, ವಿಶ್ವದ ಹಲವಾರು ದೇಶಗಳಿಂದ ರಾಮಾಯಣದ ಸ್ಪಷ್ಟವಾದ ಮತ್ತು ಅಸ್ಪಷ್ಟ ಪರಂಪರೆಯನ್ನು ಒಟ್ಟುಗೂಡಿಸುವ ಮೂಲಕ ಈ ಮೆಗಾ ಯೋಜನೆಯಲ್ಲಿ ತೊಡಗಿಸಿಕೊಂಡಿದೆ.


ಇದನ್ನೂ ಓದಿ: ಇಂದು ಬಂಗಾಳಕ್ಕೆ ಸರ್ಕಾರ ಹೋಗಿದೆ, ಮಾರ್ಚ್ 13ಕ್ಕೆ ನಾವು ಹೋಗುತ್ತೇವೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Sir nange Ramayana Mahabharata bekagilla moodanambikeyannu naanu oppalare ekendare idu vygnanika Yuga illi moodanabikege Jaga illa Indian Constitution idre saaku ee Ramayana Mahabharata bekagilla jai bheem

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...