Homeಮುಖಪುಟ'ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ': ಯೋಗಿ ಆದಿತ್ಯನಾಥ್!

‘ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ’: ಯೋಗಿ ಆದಿತ್ಯನಾಥ್!

"ತಮ್ಮ ಲಾಭಕ್ಕಾಗಿ ಜನರನ್ನು ದಾರಿ ತಪ್ಪಿಸುವ ಮತ್ತು ದೇಶಕ್ಕೆ ದ್ರೋಹ ಮಾಡುವವರನ್ನು ಸುಮ್ಮನೆ ಬಿಡಲಾಗದು" ಎಂದು ಅವರು ಎಚ್ಚರಿಸಿದ್ದಾರೆ.

- Advertisement -
- Advertisement -

ಜಾಗತಿಕ ವೇದಿಕೆಯಲ್ಲಿ ಭಾರತದ ಸಂಪ್ರದಾಯಕ್ಕೆ ಮಾನ್ಯತೆ ಪಡೆಯಲು ಜಾತ್ಯತೀತತೆಯು ದೊಡ್ಡ ಬೆದರಿಕೆಯಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ಹೇಳಿದ್ದಾರೆ.

“ತಮ್ಮ ಲಾಭಕ್ಕಾಗಿ ಜನರನ್ನು ದಾರಿ ತಪ್ಪಿಸುವ ಮತ್ತು ದೇಶಕ್ಕೆ ದ್ರೋಹ ಮಾಡುವವರನ್ನು ಸುಮ್ಮನೆ ಬಿಡಲಾಗದು” ಎಂದು ಅವರು ಎಚ್ಚರಿಸಿದ್ದಾರೆ. ಕ್ಷುಲ್ಲಕ, ಸಣ್ಣ ಕೋಮು ವಿವಾದಗಳಲ್ಲಿ ಸಿಲುಕುವ ಮೂಲಕ ರಾಷ್ಟ್ರದ ಸಾಮರಸ್ಯ ಮನೋಭಾವವನ್ನು ಕಳೆದುಕೊಳ್ಳದಂತೆ ಅವರು ಜನರನ್ನು ಕೋರಿದರು. ಅಲ್ಪ ಮೊತ್ತದ ಹಣಕ್ಕಾಗಿ ಭಾರತದ ಬಗ್ಗೆ ಸುಳ್ಳು ಪ್ರಚಾರವನ್ನು ಮಾಡುತ್ತಿರುವ ಜನರು ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಅಯೋಧ್ಯ ಸಂಶೋಧನಾ ಸಂಸ್ಥೆ ಸಿದ್ಧಪಡಿಸಿದ ಇ-ಪುಸ್ತಕವಾದ ರಾಮಾಯಣದ ಗ್ಲೋಬಲ್ ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯ ಬಿಡುಗಡೆ ಸಂದರ್ಭದಲ್ಲಿ ಮಾತನಾಡುತ್ತಾ, “ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವು ರಾಮಾಯಣದ ಗ್ಲೋಬಲ್ ಎನ್‌ಸೈಕ್ಲೋಪೀಡಿಯಾವನ್ನು ಹೆಚ್ಚು ವಿಶೇಷಗೊಳಿಸಿದೆ” ಎಂದು ಅವರು ಹೇಳಿದರು.

ಕಾಂಬೋಡಿಯಾ ಭೇಟಿಯ ಸಮಯದಲ್ಲಿ ಅಂಕೋರ್ ವಾಟ್ ದೇವಸ್ಥಾನದಲ್ಲಿ ದೊರೆತ ಬೌದ್ಧ ಮಾರ್ಗದರ್ಶಿಯೊಬ್ಬರ ಕಥೆಯನ್ನು ವಿವರಿಸಿದ ಆದಿತ್ಯನಾಥ್, ಹಿಂದೂ ಸಂಸ್ಕೃತಿಯನ್ನು ಪ್ರಶ್ನಿಸುವವರ ಮೇಲೆ ವಾಗ್ದಾಳಿ ನಡೆಸಿದರು. “ದೇವಾಲಯದ ಗೈಡ್ ಬೌದ್ಧನಾಗಿದ್ದ, ಆತ ಬೌದ್ಧಧರ್ಮ ಹಿಂದೂ ಧರ್ಮದಿಂದ ಹುಟ್ಟಿಕೊಂಡಿದೆ ಎಂದು ಒಪ್ಪಿಕೊಳ್ಳುವಷ್ಟು ವಿಶ್ವಾಸವಿದೆ ಎಂದು ಹೇಳಿದ” ಎಂದು ಯೋಗಿ ತಿಳಿಸಿದರು.

“ರಾಮಾಯಣ ಮತ್ತು ಮಹಾಭಾರತದ ಕಥೆಗಳು ನಮಗೆ ಉತ್ತಮವಾದ ಜೀವನದ ಪಾಠಗಳನ್ನು ಹೇಳಿಕೊಡುವುದಲ್ಲದೆ, ಭಾರತೀಯ ಗಡಿಗಳ ವಿಸ್ತರಣೆಯ ಬಗ್ಗೆಯೂ ಸಾಕಷ್ಟು ಹೇಳುತ್ತವೆ. ನಮ್ಮ ಮಹಾಕಾವ್ಯ, ಹಿಂದೂ ಸಾಹಿತ್ಯದ ಈ ಕಥೆಗಳು ಉತ್ತಮ ಭಾರತವನ್ನು ರೂಪಿಸಲು ನಮಗೆ ಸಹಾಯ ಮಾಡುತ್ತವೆ. 1947 ಕ್ಕಿಂತ ಮೊದಲು ಪಾಕಿಸ್ತಾನವು ಭಾರತದ ಒಂದು ಭಾಗವಾಗಿತ್ತು ಮತ್ತು ಮರ್ಯಾದಾ ಪುರುಷೋತ್ತಮ ಭಗವಾನ್ ಶ್ರೀ ರಾಮ ತಮ್ಮ ಸಹೋದರನ ಮಗನನ್ನು ಪಾಕಿಸ್ತಾನದ ಆಡಳಿತಗಾರರನ್ನಾಗಿ ಮಾಡುವ ಮೂಲಕ ಭಾರತದ ಗಡಿಯನ್ನು ವಿಸ್ತರಿಸಿದ್ದರು” ಎಂದು ಅವರು ಹೇಳಿದರು. ಅಯೋಧ್ಯೆಯಲ್ಲಿ ಶ್ರೀರಾಮನ ಅಸ್ತಿತ್ವದ ಬಗ್ಗೆ ಇನ್ನೂ ಕೆಲವು ಜನರು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಆದರೆ ಐತಿಹಾಸಿಕ ಸಂಗತಿಗಳನ್ನು ನಿರಾಕರಿಸಲಾಗುವುದಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ‘ಖೇಲಾ ಹೋಬೆ’ಗೆ ‘ಖೇಲ್ ಖತಂ’ ಎಂದ ಪ್ರಧಾನಿ: ‘ಉಜ್ವಲಾ-ಜುಮ್ಲಾ’ ಎಂದು ದಾಳಿ ಮಾಡಿದ ದೀದಿ

ರಾಮಾಯಣ, ರಾಮ ಮತ್ತು ಭಾರತದ ಬಗ್ಗೆ ಪೂಜ್ಯ ಭಾವನೆ ಇರುವ ಜನರು ವಿಶ್ವಕೋಶದ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮುಖ್ಯಮಂತ್ರಿ ಆಗ್ರಹಿಸಿದರು. ವಿಜ್ಞಾನ ಮತ್ತು ಆಧ್ಯಾತ್ಮಿಕತೆಯ ಕುರಿತು ಗೊತ್ತಿರದ ಅಂಶಗಳನ್ನು ಪರಿಚಯಿಸುವ ಕಾರಣ ವಿಶ್ವಕೋಶವು ಜನರನ್ನು ಅಯೋಧ್ಯೆಗೆ ಭೇಟಿ ನೀಡಲು ಪ್ರೇರೇಪಿಸುತ್ತದೆ ಎಂದು ಅವರು ಹೇಳಿದರು.

ಸಪ್ತ ಪುರಿಯ ಏಳು ಪವಿತ್ರ ನಗರಗಳಿವೆ. ಇವುಗಳನ್ನು ಪವಿತ್ರ ಹಿಂದೂ ತೀರ್ಥಗಳೆಂದು ಪರಿಗಣಿಸಲಾಗಿದೆ. ಇವುಗಳಲ್ಲಿ ಅಯೋಧ್ಯೆ, ಮಥುರಾ ಮತ್ತು ಕಾಶಿ ಉತ್ತರ ಪ್ರದೇಶದ ವ್ಯಾಪ್ತಿಯಲ್ಲಿವೆ. ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ ಸಂಸ್ಕೃತಿ ಇಲಾಖೆಯಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂಬುದು ನಮಗೆ ಹೆಮ್ಮೆಯ ವಿಷಯ. ರಾಮ್‌ಲೀಲಾವನ್ನು ಪ್ರಪಂಚದಾದ್ಯಂತ ಪ್ರದರ್ಶಿಸಲು ನಾವು ಪ್ರಯತ್ನಿಸುತ್ತೇವೆ.

ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ಬಿಡುಗಡೆ ಮಾಡಲಾಗಿದ್ದು, ಇದನ್ನು ಖರಗ್‌ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿನ್ಯಾಸಗೊಳಿಸಿದೆ. ಹಿಂದಿ ಮತ್ತು ತಮಿಳು ಭಾಷೆಗಳಲ್ಲಿ ಮೊದಲ ಆವೃತ್ತಿ ಮುಂಬರುವ ತಿಂಗಳಲ್ಲಿ ಪ್ರಕಟವಾಗಲಿದೆ. ರಾಮಾಯಣ ವಿಶ್ವಕೋಶವನ್ನು 200 ಕ್ಕೂ ಹೆಚ್ಚು ಸಂಪುಟಗಳಲ್ಲಿ ಪ್ರಕಟಿಸುವ ಯೋಜನೆ ಇದೆ ಎಂದು ರಾಜ್ಯ ಮಾಹಿತಿ ವಿಭಾಗದ ನಿರ್ದೇಶಕ ಶಿಶಿರ್ ಸಿಂಗ್ ಹೇಳಿದ್ದಾರೆ. ಇದಕ್ಕಾಗಿ ಅಯೋಧ್ಯ ಸಂಶೋಧನಾ ಸಂಸ್ಥೆ ದೇಶ ಮತ್ತು ವಿಶ್ವದಾದ್ಯಂತ ಸಂಪಾದಕರು ಮತ್ತು ಸಲಹೆಗಾರರ ಮಂಡಳಿಯನ್ನು ಸ್ಥಾಪಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗ್ಲೋಬಲ್ ರಾಮಾಯಣ ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯೊಂದಿಗೆ ರಾಮಾಯಣದ ಪ್ರಕಟಣೆಯನ್ನು ಒಡಿಯಾ, ಮಲಯಾಳಂ, ಉರ್ದು ಮತ್ತು ಅಸ್ಸಾಮಿ ಭಾಷೆಗಳಲ್ಲಿಯೂ ಬಿಡುಗಡೆ ಮಾಡಲಾಗುತ್ತಿದೆ.

ಉತ್ತರ ಪ್ರದೇಶದ ಸಂಸ್ಕೃತಿ ಇಲಾಖೆ, ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ, ವಿಶ್ವದ ಹಲವಾರು ದೇಶಗಳಿಂದ ರಾಮಾಯಣದ ಸ್ಪಷ್ಟವಾದ ಮತ್ತು ಅಸ್ಪಷ್ಟ ಪರಂಪರೆಯನ್ನು ಒಟ್ಟುಗೂಡಿಸುವ ಮೂಲಕ ಈ ಮೆಗಾ ಯೋಜನೆಯಲ್ಲಿ ತೊಡಗಿಸಿಕೊಂಡಿದೆ.


ಇದನ್ನೂ ಓದಿ: ಇಂದು ಬಂಗಾಳಕ್ಕೆ ಸರ್ಕಾರ ಹೋಗಿದೆ, ಮಾರ್ಚ್ 13ಕ್ಕೆ ನಾವು ಹೋಗುತ್ತೇವೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Sir nange Ramayana Mahabharata bekagilla moodanambikeyannu naanu oppalare ekendare idu vygnanika Yuga illi moodanabikege Jaga illa Indian Constitution idre saaku ee Ramayana Mahabharata bekagilla jai bheem

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...