Homeಚಳವಳಿಕೈರುನ್ನಿಸಾ ಬಾಬಯ್ಯ ; ಸೆಕ್ಯುಲರಿಸಂನ ನೈಜ ಸಂಕೇತ

ಕೈರುನ್ನಿಸಾ ಬಾಬಯ್ಯ ; ಸೆಕ್ಯುಲರಿಸಂನ ನೈಜ ಸಂಕೇತ

- Advertisement -
- Advertisement -

ಈ ತಿಂಗಳು ಜುಲೈ ಎರಡನೇ ತಾರೀಕು ಕೈರುನ್ನಿಸಾ ತೀರಿಕೊಂಡರು. ಅವರ ಬಗ್ಗೆ ಹೊರಗಿನ ಪಪಂಚಕ್ಕ್ರೆ ಹೆಚ್ಚಿಗೆ ಗೊತ್ತಿಲ್ಲದಿರಬಹುದು. ಆದರೆ ಆಕೆಗೆ ಈ ಪ್ರಪಂಚದ ಬಗ್ಗೆ ಸ್ಪಷ್ಟ ದೃಷ್ಟಿಕೋನವಿತ್ತು. ಸೆಕ್ಯುಲರ್ ಜೀವನ ವಿಧಾನದಿಂದ ಹಿಡಿದು ಕ್ರಾಂತಿಕಾರಿ ರಾಜಕೀಯದವರೆಗೆ ಆಕೆ ವಿಶಾಲ ಮೈದಾನವನ್ನು ಕಂಡಿದ್ದರು. ಆ ಮೈದಾನದಲ್ಲಿ ಒಂದಷ್ಟು ದೂರ ಸಾಗಿದ್ದರು.
ಕೈರುನ್ನಿಸಾ ಆಂಧ್ರದ ರಾಯಲಸೀಮಾ ಪ್ರದೇಶದಲ್ಲಿ ಹುಟ್ಟಿ ಬೆಳೆದವರು. ರಾಯಲಸೀಮ ಫ್ಯಾಕ್ಷನಿಸಂ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ, ನಡೆಯುತ್ತಿದೆ. ಆದರೆ ದೇಶಾದ್ಯಂತ ಕೋಮುವಾದಿ ಗಲಭೆಗಳು ನಡೆಯುತ್ತಿದ್ದರೂ ರಾಯಲಸೀಮದಲ್ಲಿ ಈ ಪಿಡುಗಿನ ಪ್ರಭಾವ ಬಹಳ ಕಡಿಮೆ. ಈ ಪ್ರದೇಶದಲ್ಲಿ ಹಿಂದೂ ಮುಸ್ಲಿಂ ಕ್ರಿಶ್ಚಿಯನ್ನರ ನಡುವೆ ನೆಲೆಸಿರುವ ಸಾಮಾಜಿಕ ಸಾಮರಸ್ಯ ಬಹಳ ವಿಶೇಷವಾದುದು. ಕೋಮುವಾದಿ ಗಲಭೆಗಳ ಕೊಚ್ಚಿ ಹೋಗುತ್ತಿರುವ ನಮ್ಮ ದೇಶಕ್ಕೆ ರಾಯಲಸೀಮೆಯ ಅನುಭವದಲ್ಲಿ ಒಂದಷ್ಟು ಪರಿಹಾರ ಕಾಣಬಹುದು. ಕೈರುನ್ನೀಸಾ ಅವರ ವ್ಯಕ್ತಿತ್ವದ ಮೇಲೆ ಈ ಸೀಮೆಯ ಧಾರ್ಮಿಕ ಸಾಮರಸ್ಯದ ಪ್ರಭಾವ ಗಾಡವಾಗಿತ್ತು.
ಆಕೆಯ ತಮ್ಮ ಹೇಳುವ ಪ್ರಕಾರ ಆಕೆ ಚಿಕ್ಕಂದಿನಿಂದಲೂ ರೆಬೆಲ್ ಮನಸ್ಥಿತಿಯ ಹುಡುಗಿ. ತಾನು ಇತರರ ಆಸರೆಯಿಲ್ಲದೆ ತನ್ನ ಕಾಲ ಮೇಲೆ ತಾನು ನಿಲ್ಲಬೇಕೆಂಬ ಛಲ ಆಕೆಯದು. ತನ್ನ ಕೌಟುಂಬಿಕ ಪರಿಸರ ಓದಿನ ಬಗ್ಗೆ ವಿಶೇಷ ಆಸಕ್ತಿ ತಾಳಿದ ಅವರು ವಿಶಾಖಪಟ್ಟಣದಲ್ಲಿ ನರ್ಸಿಂಗ್ ಕೋರ್ಸ್ ಮುಗಿಸಿ, ಬೆಂಗಳೂರಿನ ಎಚ್‍ಎಎಲ್‍ನ ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿದರು. ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗಬೇಕೆಂಬುದು ಆಕೆಯ ದೃಡವಾದ ನಿಲುವಾಗಿತ್ತು. ಆಕೆ ನರ್ಸಿಂಗ್ ಕೋರ್ಸ್‍ನಲ್ಲಿದ್ದಾಗಲೇ ಬಾಬಯ್ಯನವರ ಸ್ನೇಹವಾಗಿ, ನಂತರ ಅವರ ಬಾಳ ಸಂಗಾತಿಯೂ ಆದರು. ಬಾಬಯ್ಯನವರಿಗೆ ಚಿಕ್ಕಂದಿನಲ್ಲೇ ತಂದೆ ತಾಯಿಗಳು ತೀರಿಕೊಂಡಿದ್ದರಿಂದಾಗಿ ಕೆಲವು ವರ್ಷಗಳು ಅವರ ಜೀವನ ದಾರವಿಲ್ಲದ ಗಾಳಿಪಟದಂತಾಗಿತ್ತು. ಆದರೆ ಕೈರುನ್ನಿಸಾ ಅವರ ಪರಿಚಯವಾಗಿದ್ದು, ಆಗಲೇ ಆಕೆ ಉದ್ಯೋಗ ಮಾಡುತ್ತಿದ್ದುದರಿಂದ ಬಾಬಯ್ಯನವರ ಉನ್ನತ ವ್ಯಾಸಂಗಕ್ಕೆ ಆಕೆ ಬೆಂಬಲವಾಗಿ ನಿಂತರು.
ಬಾಬಯ್ಯನವರ ಬಾಲ್ಯದ ಬಗ್ಗೆ ಕೇಳಿದರೆ ಮಕ್ಸಿಂಗಾರ್ಕಿಯವರ ಬಾಲ್ಯ ನೆನಪಾಗುತ್ತದೆ. ಬಹಳ ಸಣ್ಣ ವಯಸ್ಸಿನಲ್ಲೇ ಯಾರದೋ ಮನೆಯಲ್ಲಿ ಏನೇನೋ ಚಾಕರಿ ಮಾಡುತ್ತಾ ಬೆಳೆದರೂ ಗಾರ್ಕಿಯಂತೆಯೇ ಜೀವನವನ್ನು ತೀಕ್ಷ್ಣವಾಗಿ ಅವಲೋಕಿಸುತ್ತಾ ಅವರಲ್ಲಿ ಮಾನವೀಯ ಗುಣಗಳು ಮೈದುಂಬಿವೆ. ಮಾನವೀಯ ಸಂಬಂಧಗಳಿಗೆ ಅಡ್ಡಗೋಡೆಯಾಗಿರುವ ಜಾತಿ, ಧರ್ಮ, ವರ್ಗಗಳನ್ನು ಮೀರುವ ಹಾದಿಯಲ್ಲಿ ಕೈರುನ್ನಿಸಾ ಅವರನ್ನು ವಿವಾಹವಾಗಿದ್ದು ಅತ್ಯಂತ ಸಹಜವಾಗಿತ್ತು. ಇವರದು ಅಂತರ್‍ಧರ್ಮೀಯ ಸೆಕ್ಯುಲರ್ ಮದುವೆ. ಕೈರುನ್ನಿಸಾ ಅವರ ರೆಬೆಲ್ ಸ್ವಭಾವಕ್ಕೂ ಬಾಬಯ್ಯನವರ ಮಾನವೀಯ ಸ್ವಭಾವಕ್ಕೂ ಮಧ್ಯೆ ಏರ್ಪಟ್ಟ ಅನುಬಂಧ ಇದು.
ಈ ಇಬ್ಬರ ದೃಡ ನಿರ್ಧಾರದ ಈ ಮದುವೆ ಅರ್ಧ ಶತಮಾನದ ಹಿಂದೆ ಯಾವುದೇ ವಿವಾದವಿಲ್ಲದೆ, ನಿರಾಡಂಬರವಾಗಿ ನಡೆಯಿತು. ಆಗ ದೇಶದ ಸ್ಥಿತಿ ಇಷ್ಟು ಹದಗೆಟ್ಟಿರಲಿಲ್ಲ. ಜಾತಿ ಧರ್ಮಗಳು ಹುಟ್ಟುವ ಮುಂಚಿನಿಂದಲೂ ನಾವೆಲ್ಲರೂ ಮನುಷ್ಯರು ಎಂಬ ಸತ್ಯವನ್ನು ಮನುಷ್ಯರು ಮರೆಯುತ್ತಿದ್ದಾರೆ. ಧರ್ಮ ಎಂಬುದು ಒಂದು ವ್ಯಕ್ತಿಗತ ನಂಬಿಕೆ, ಅದನ್ನು ಮೀರಿ ಧರ್ಮ ಮನುಷ್ಯ ಸಂಬಂಧಗಳ ನಡುವೆ ವಿಷಸರ್ಪವಾಗಿ ಬದಲಾಗಬಾರದು. ಈ ಇಬ್ಬರ ಮದುವೆ ಇಂದಿನ ಸಮಾಜಕ್ಕೆ ಒಂದು ಮಾದರಿಯಾಗಿ, ಸ್ಪೂರ್ತಿಯಾಗಿ ನಿಲ್ಲಬೇಕು.
ಕೈರುನ್ನಿಸಾ ವೈಯುಕ್ತಿಕವಾಗಿ ತನ್ನ ಧಾರ್ಮಿಕ ನಂಬಿಕೆಯನ್ನು ತೊರೆದುಕೊಳ್ಳಲಿಲ್ಲ. ಪ್ರತಿನಿತ್ಯ ಮನೆಯಲ್ಲೇ ನಮಾಜು ಮಾಡುತ್ತಿದ್ದರು. ತನ್ನ ಉಳಿತಾಯದ ಹಣದಿಂದ ಒಂದು ಮಸೀದಿಗೆ ದೇಣಿಗೆಯನ್ನೂ ಕೊಟ್ಟಿದ್ದರು. ಹಾಗೆಂದು ತನ್ನ ಧಾರ್ಮಿಕ ನಂಬಿಕೆಯನ್ನು ತನ್ನ ಗಂಡನ ಮೇಲಾಗಲಿ, ತನ್ನ ಮೂವರು ಮಕ್ಕಳ ಮೇಲಾಗಲಿ ಹೇರಿಕೆ ಮಾಡುವ ಆಲೋಚನೆ ಎಂದಿಗೂ ಆಕೆಗೆ ಬರಲಿಲ್ಲ. ಒಂದು ಸಂದರ್ಭದಲ್ಲಿ ಆಕೆ ತನ್ನ ಹೆಸರನ್ನು ರಾಧ ಎಂದು ಬದಲಾಯಿಸಿಕೊಳ್ಳಬೇಕು ಅಂದುಕೊಂಡರು. ಆಗಾಗ ಹಣೆ ಮೇಲೆ ಬೊಟ್ಟನ್ನೂ ಇಡುತ್ತಿದ್ದರು. ಆ ಬೊಟ್ಟು ಅಲಂಕಾರಿಕವಾಗಿತ್ತೆ ಹೊರತು ಹಿಂದು ಧಾರ್ಮಿಕ ಸಂಕೇತವೆಂದು ಆಕೆಗೆ ಅನಿಸಲಿಲ್ಲ.
ಬಾಬಯ್ಯ ಕೈರುನ್ನಿಸಾ ಮಧ್ಯೆ ಸ್ನೇಹಭಾವವಿತ್ತು ಅಂದರೆ ಭೀನ್ನಾಭಿಪ್ರಾಯಗಳಿರಲಿಲ್ಲ ಎಂದರ್ಥವಲ್ಲ. ಬಾಬಯ್ಯನವರ ಚಳವಳಿಗಳ ಒಡನಾಟದ ಪರಿಣಾಮವಾಗಿ,
ಅದೆಷ್ಟೋ ಕ್ರಾಂತಿಕಾರಿಗಳು ಬಾಬಯ್ಯ ಕೈರುನ್ನಿಸಾ ಕುಟುಂಬದ ಆಸರೆಯನ್ನು ಪಡೆದುಕೊಂಡಿದ್ದಾರೆ. ಆದರೆ ಈ ಕ್ರಾಂತಿಕಾರಿ ರಾಜಕೀಯದ ಸಹವಾಸ ಕೈರುನ್ನಿಸಾ ಅವರಲ್ಲಿ ಸ್ವಲ್ಪಮಟ್ಟಿನ ಅಭದ್ರತೆಯ ಭಾವಕ್ಕೆ ಕಾರಣವಾಗಿತ್ತು. ಇದು ಅವರ ವ್ಯಕ್ತಿಗತ ಸಮಸ್ಯೆಯಾಗಿರಲಿಲ್ಲ; ಸಾಮಾಜಿಕ ಬದಲಾವಣೆಗಾಗಿ ನಡೆಯುವ ರಾಜಿರಹಿತ ಹೋರಾಟಕ್ಕೂ ಕುಟುಂಬ ಸಂಬಂಧಗಳಿಗೂ ನಡುವೆ ಸದಾಕಾಲ ತಿಕ್ಕಾಟ ಇದ್ದೇ ಇರುತ್ತದೆ. ಇಂಥಾ ಸಾಮಾಜಿಕ ವ್ಯವಸ್ಥಾಗತ ಸಮಸ್ಯೆಗಳನ್ನು ಒಂದಲ್ಲಾ ಒಂದು ಕುಟುಂಬ ಎದುರಿಸಲೇಬೇಕಾಗುತ್ತೆ. ಕೈರುನ್ನಿಸಾ ಕೂಡ ಈ ಸಮಸ್ಯೆಯನ್ನು ಎದುರಿಸುತ್ತಲೇ ನಮ್ಮೆಲ್ಲರನ್ನೂ ಗೌರವಿಸುತ್ತಿದ್ದರು. ಆಂಧ್ರದ ಪ್ರಸಿದ್ಧ ಮಾನವಹಕ್ಕು ಹೋರಾಟಗಾರ ಪ್ರೊ.ಬಾಲಗೋಪಾಲ್ ಕಾನೂನು ಶಿಕ್ಷಣವನ್ನು ಈ ಮನೆಯಲ್ಲಿದ್ದುಕೊಂಡೇ ಪಡೆದುಕೊಂಡರು. ಹಾಗೆ ನೋಡಿದರೆ ತೆಲುಗುನಾಡಿನ ಬಹುತೇಕ ಖ್ಯಾತನಾಮರಿಗೆ, ಅವರ ಕುಟುಂಬಗಳಿಗೆ ಈ ಮನೆ ಆತ್ಮೀಯ ತಾಣವಾಗಿತ್ತು.
ಅವರ ಮೂರೂ ಮಕ್ಕಳು ಇಂದು ಉನ್ನತ ವಿದ್ಯಾಭ್ಯಾಸ ಮಾಡಿ, ಘನತೆಯ ಜೀವನವನ್ನು ರೂಪಿಸಿಕೊಳ್ಳುವುದರಲ್ಲಿ ಕೈರುನ್ನಿಸಾ ಅವರ ಅಪಾರ ಶ್ರಮವಿದೆ. ಹಿರಿ ಮಗಳು ಪ್ರಣವ ದೆಹಲಿಯಲ್ಲಿ ಅಧ್ಯಾಪಕಿಯಾಗಿದ್ದಾಳೆ, ಕಿರಿ ಮಗಳು ಜಗತಿ ವೈದ್ಯೆಯಾಗಿದ್ದು ಹೈದರಾಬಾದ್‍ನಲ್ಲಿ ನೆಲೆಸಿದ್ದಾರೆ. ಬೆಂಗಳೂರಿನಲ್ಲಿರುವ ಮಗ ಭಾನುತೇಜ್ ಪತ್ರಕರ್ತರಾಗಿ ಹೆಸರು ಗಳಿಸಿದ್ದಾರೆ. ಇಲ್ಲಿ ಒಂದು ವಿಶೇಷವನ್ನು ಹೇಳಲೇಬೇಕು. ಈ ಮೂವರೂ ಮಕ್ಕಳು ಅಂತರ್‍ಜಾತೀಯ ಮದುವೆಯಾಗಿದ್ದಾರೆ. ಹೀಗೆ ಈ ಕುಟುಂಬ ನಮ್ಮನ್ನು ಆವರಿಸಿರುವ ಜಾತಿ ಧರ್ಮಗಳ ಗೋಡೆಯನ್ನು ಕೆಡವಿಹಾಕಿದೆ.
ಕೈರುನ್ನಿಸಾ ಸೆಕ್ಯುಲರ್ ದೃಷ್ಟಿಕೋನದ ಕಾರಣಕ್ಕಾಗಿಯೇ ಇರಬಹುದು, ತಮ್ಮ ಮಗ ಮತ್ತು ಹೆಣ್ಣು ಮಕ್ಕಳಲ್ಲಿ ಯಾವುದೇ ಬೇಧವಿಲ್ಲದಂತೆ ಸಮಾನವಾಗಿ ನೋಡಿಕೊಂಡರು. ತನ್ನ ಉಳಿತಾಯದ ಹಣವನ್ನು ಮೂವರಿಗೂ ಸಮಾನವಾಗಿ ಹಂಚಿದ್ದರು. ‘ಅಣ್ಣಾ, ನನಗೆ ಹೆಣ್ಣು ಮಕ್ಕಳಾದರೂ, ಗಂಡು ಮಕ್ಕಳಾದರೂ ಒಂದೇ, ಅದಕ್ಕೆ ಎಲ್ಲರಿಗೂ ಸಮಾನವಾಗಿ ಹಂಚಿದ್ದೇನೆ’ ಅಂತ ಬಹಳ ಹೆಮ್ಮೆಯಿಂದ ಹೇಳಿದ್ದರು. ಆಕೆಯ ಕೊನೆಗಾಲದಲ್ಲಿ ಉಳಿದ ಆಸ್ತಿಪಾಸ್ತಿಯನ್ನು ತಮ್ಮ ಮೊಮ್ಮಕ್ಕಳಿಗೆ ಹಂಚಬೇಕೆಂದು ತೀರ್ಮಾನಿಸಿದ್ದರು. ಇದು ಅವರ ದೂರದೃಷ್ಟಿ ಕೂಡ.
ಕೈರುನ್ನಿಸಾ ಜಾತಿ ಮತ ಬೇಧಗಳನ್ನು ವಿರೋಧಿಸಿದ್ದರೆಂಬುದು ಮಾತ್ರವಲ್ಲ; ಲಿಂಗ ತಾರತಮ್ಯವನ್ನೂ ವಿರೋಧಿಸುತ್ತಿದ್ದರು. ಅದು ಬಾಯಿಮಾತಿನಲ್ಲಿ ಮಾತ್ರವಲ್ಲ. ತಮ್ಮ ನಿಜ ಜೀವನದ ಉದಾಹರಣೆ ಮೂಲಕ. ಮನುಷ್ಯರು ಮನುಷ್ಯರಾಗಿ ಬದಲಾದರೆ ಎಷ್ಟೋ ಸಂಕುಚಿತ ಸಂಬಂಧಗಳನ್ನು ಮೀರಬಹುದೆಂಬ ಸತ್ಯವನ್ನು ಕೈರುನ್ನಿಸಾ ನೋಡಿ ಕಲಿಯಬಹುದು. ತನ್ನ ಅಂತ್ಯಸಂಸ್ಕಾರದ ಬಗ್ಗೆ ಆಕೆ ಕೈಗೊಂಡ ತೀರ್ಮಾನ ಇವೆಲ್ಲವನ್ನೂ ಮೀರಿದ್ದು. ಅವರು ಸ್ವಲ್ಪವೂ ಹಿಂಜರಿಕೆಯಿಲ್ಲದೆ, ತನ್ನ ದೇಹವನ್ನು ತನ್ನದೇ ವೃತ್ತಿಯಾದ ವೈದ್ಯಕೀಯ ಸಂಶೋಧನೆಗಾಗಿ ಸರ್ಕಾರಿ ಮೆಡಿಕಲ್ ಕಾಲೇಜಿಗೆ ದಾನ ಮಾಡಿದ್ದರು. ಇದು ಆಕೆಯ ಸೆಕ್ಯುಲರ್ ಪ್ರಪಂಚ ದೃಷ್ಟಿಯ ಪರಾಕಾಷ್ಠೆ.
ಬಾಬಯ್ಯ ಕೈರುನ್ನಿಸಾ ಕುಟಂಬ ಇಂದಿನ ಕೋಮುವಾದಿ ಕಲುಷಿತ ವಾತಾವರಣಕ್ಕೆ ಒಂದು ದಿಟ್ಟ ಪರಿಹಾರ. ಆನರೇ ಚರಿತ್ರೆಯ ನಿರ್ಮಾಪಕರು ಎಂದು ಮಾಕ್ರ್ಸ್ ಹೇಳಿದಂತೆ, ಚರಿತ್ರೆ ನಿರ್ಮಾಣದಲ್ಲಿ ಯಾವುದೇ ಅಬ್ಬರವಿಲ್ಲದೆ, ಪ್ರಚಾರವಿಲ್ಲದೆ ಪಾಲಿಸುವ ಜೀವನದ ಆಚರಣೆಗಳೇ ಸಾಮಾಜಿಕ ಬದಲಾವಣೆಗೆ ಮಾರ್ಗದರ್ಶಿ ಸೂತ್ರಗಳಂತೆ ಕೆಲಸ ಮಾಡುತ್ತವೆ. ಸಾಮಾನ್ಯ ಮನುಷ್ಯರಲ್ಲಿ ಕೆಲವರು ಅಸಾಮಾನ್ಯವಾಗಿ ಜೀವಿಸುತ್ತಾರೆ ಎಂದರೆ ಇದೇ ಅನಿಸುತ್ತೆ.

– ಪ್ರೊ.ಹರಗೋಪಾಲ್
ಕನ್ನಡಕ್ಕೆ : ದೊಡ್ಡಿಪಾಳ್ಯ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...