Homeಚಳವಳಿಕೈರುನ್ನಿಸಾ ಬಾಬಯ್ಯ ; ಸೆಕ್ಯುಲರಿಸಂನ ನೈಜ ಸಂಕೇತ

ಕೈರುನ್ನಿಸಾ ಬಾಬಯ್ಯ ; ಸೆಕ್ಯುಲರಿಸಂನ ನೈಜ ಸಂಕೇತ

- Advertisement -
- Advertisement -

ಈ ತಿಂಗಳು ಜುಲೈ ಎರಡನೇ ತಾರೀಕು ಕೈರುನ್ನಿಸಾ ತೀರಿಕೊಂಡರು. ಅವರ ಬಗ್ಗೆ ಹೊರಗಿನ ಪಪಂಚಕ್ಕ್ರೆ ಹೆಚ್ಚಿಗೆ ಗೊತ್ತಿಲ್ಲದಿರಬಹುದು. ಆದರೆ ಆಕೆಗೆ ಈ ಪ್ರಪಂಚದ ಬಗ್ಗೆ ಸ್ಪಷ್ಟ ದೃಷ್ಟಿಕೋನವಿತ್ತು. ಸೆಕ್ಯುಲರ್ ಜೀವನ ವಿಧಾನದಿಂದ ಹಿಡಿದು ಕ್ರಾಂತಿಕಾರಿ ರಾಜಕೀಯದವರೆಗೆ ಆಕೆ ವಿಶಾಲ ಮೈದಾನವನ್ನು ಕಂಡಿದ್ದರು. ಆ ಮೈದಾನದಲ್ಲಿ ಒಂದಷ್ಟು ದೂರ ಸಾಗಿದ್ದರು.
ಕೈರುನ್ನಿಸಾ ಆಂಧ್ರದ ರಾಯಲಸೀಮಾ ಪ್ರದೇಶದಲ್ಲಿ ಹುಟ್ಟಿ ಬೆಳೆದವರು. ರಾಯಲಸೀಮ ಫ್ಯಾಕ್ಷನಿಸಂ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ, ನಡೆಯುತ್ತಿದೆ. ಆದರೆ ದೇಶಾದ್ಯಂತ ಕೋಮುವಾದಿ ಗಲಭೆಗಳು ನಡೆಯುತ್ತಿದ್ದರೂ ರಾಯಲಸೀಮದಲ್ಲಿ ಈ ಪಿಡುಗಿನ ಪ್ರಭಾವ ಬಹಳ ಕಡಿಮೆ. ಈ ಪ್ರದೇಶದಲ್ಲಿ ಹಿಂದೂ ಮುಸ್ಲಿಂ ಕ್ರಿಶ್ಚಿಯನ್ನರ ನಡುವೆ ನೆಲೆಸಿರುವ ಸಾಮಾಜಿಕ ಸಾಮರಸ್ಯ ಬಹಳ ವಿಶೇಷವಾದುದು. ಕೋಮುವಾದಿ ಗಲಭೆಗಳ ಕೊಚ್ಚಿ ಹೋಗುತ್ತಿರುವ ನಮ್ಮ ದೇಶಕ್ಕೆ ರಾಯಲಸೀಮೆಯ ಅನುಭವದಲ್ಲಿ ಒಂದಷ್ಟು ಪರಿಹಾರ ಕಾಣಬಹುದು. ಕೈರುನ್ನೀಸಾ ಅವರ ವ್ಯಕ್ತಿತ್ವದ ಮೇಲೆ ಈ ಸೀಮೆಯ ಧಾರ್ಮಿಕ ಸಾಮರಸ್ಯದ ಪ್ರಭಾವ ಗಾಡವಾಗಿತ್ತು.
ಆಕೆಯ ತಮ್ಮ ಹೇಳುವ ಪ್ರಕಾರ ಆಕೆ ಚಿಕ್ಕಂದಿನಿಂದಲೂ ರೆಬೆಲ್ ಮನಸ್ಥಿತಿಯ ಹುಡುಗಿ. ತಾನು ಇತರರ ಆಸರೆಯಿಲ್ಲದೆ ತನ್ನ ಕಾಲ ಮೇಲೆ ತಾನು ನಿಲ್ಲಬೇಕೆಂಬ ಛಲ ಆಕೆಯದು. ತನ್ನ ಕೌಟುಂಬಿಕ ಪರಿಸರ ಓದಿನ ಬಗ್ಗೆ ವಿಶೇಷ ಆಸಕ್ತಿ ತಾಳಿದ ಅವರು ವಿಶಾಖಪಟ್ಟಣದಲ್ಲಿ ನರ್ಸಿಂಗ್ ಕೋರ್ಸ್ ಮುಗಿಸಿ, ಬೆಂಗಳೂರಿನ ಎಚ್‍ಎಎಲ್‍ನ ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿದರು. ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗಬೇಕೆಂಬುದು ಆಕೆಯ ದೃಡವಾದ ನಿಲುವಾಗಿತ್ತು. ಆಕೆ ನರ್ಸಿಂಗ್ ಕೋರ್ಸ್‍ನಲ್ಲಿದ್ದಾಗಲೇ ಬಾಬಯ್ಯನವರ ಸ್ನೇಹವಾಗಿ, ನಂತರ ಅವರ ಬಾಳ ಸಂಗಾತಿಯೂ ಆದರು. ಬಾಬಯ್ಯನವರಿಗೆ ಚಿಕ್ಕಂದಿನಲ್ಲೇ ತಂದೆ ತಾಯಿಗಳು ತೀರಿಕೊಂಡಿದ್ದರಿಂದಾಗಿ ಕೆಲವು ವರ್ಷಗಳು ಅವರ ಜೀವನ ದಾರವಿಲ್ಲದ ಗಾಳಿಪಟದಂತಾಗಿತ್ತು. ಆದರೆ ಕೈರುನ್ನಿಸಾ ಅವರ ಪರಿಚಯವಾಗಿದ್ದು, ಆಗಲೇ ಆಕೆ ಉದ್ಯೋಗ ಮಾಡುತ್ತಿದ್ದುದರಿಂದ ಬಾಬಯ್ಯನವರ ಉನ್ನತ ವ್ಯಾಸಂಗಕ್ಕೆ ಆಕೆ ಬೆಂಬಲವಾಗಿ ನಿಂತರು.
ಬಾಬಯ್ಯನವರ ಬಾಲ್ಯದ ಬಗ್ಗೆ ಕೇಳಿದರೆ ಮಕ್ಸಿಂಗಾರ್ಕಿಯವರ ಬಾಲ್ಯ ನೆನಪಾಗುತ್ತದೆ. ಬಹಳ ಸಣ್ಣ ವಯಸ್ಸಿನಲ್ಲೇ ಯಾರದೋ ಮನೆಯಲ್ಲಿ ಏನೇನೋ ಚಾಕರಿ ಮಾಡುತ್ತಾ ಬೆಳೆದರೂ ಗಾರ್ಕಿಯಂತೆಯೇ ಜೀವನವನ್ನು ತೀಕ್ಷ್ಣವಾಗಿ ಅವಲೋಕಿಸುತ್ತಾ ಅವರಲ್ಲಿ ಮಾನವೀಯ ಗುಣಗಳು ಮೈದುಂಬಿವೆ. ಮಾನವೀಯ ಸಂಬಂಧಗಳಿಗೆ ಅಡ್ಡಗೋಡೆಯಾಗಿರುವ ಜಾತಿ, ಧರ್ಮ, ವರ್ಗಗಳನ್ನು ಮೀರುವ ಹಾದಿಯಲ್ಲಿ ಕೈರುನ್ನಿಸಾ ಅವರನ್ನು ವಿವಾಹವಾಗಿದ್ದು ಅತ್ಯಂತ ಸಹಜವಾಗಿತ್ತು. ಇವರದು ಅಂತರ್‍ಧರ್ಮೀಯ ಸೆಕ್ಯುಲರ್ ಮದುವೆ. ಕೈರುನ್ನಿಸಾ ಅವರ ರೆಬೆಲ್ ಸ್ವಭಾವಕ್ಕೂ ಬಾಬಯ್ಯನವರ ಮಾನವೀಯ ಸ್ವಭಾವಕ್ಕೂ ಮಧ್ಯೆ ಏರ್ಪಟ್ಟ ಅನುಬಂಧ ಇದು.
ಈ ಇಬ್ಬರ ದೃಡ ನಿರ್ಧಾರದ ಈ ಮದುವೆ ಅರ್ಧ ಶತಮಾನದ ಹಿಂದೆ ಯಾವುದೇ ವಿವಾದವಿಲ್ಲದೆ, ನಿರಾಡಂಬರವಾಗಿ ನಡೆಯಿತು. ಆಗ ದೇಶದ ಸ್ಥಿತಿ ಇಷ್ಟು ಹದಗೆಟ್ಟಿರಲಿಲ್ಲ. ಜಾತಿ ಧರ್ಮಗಳು ಹುಟ್ಟುವ ಮುಂಚಿನಿಂದಲೂ ನಾವೆಲ್ಲರೂ ಮನುಷ್ಯರು ಎಂಬ ಸತ್ಯವನ್ನು ಮನುಷ್ಯರು ಮರೆಯುತ್ತಿದ್ದಾರೆ. ಧರ್ಮ ಎಂಬುದು ಒಂದು ವ್ಯಕ್ತಿಗತ ನಂಬಿಕೆ, ಅದನ್ನು ಮೀರಿ ಧರ್ಮ ಮನುಷ್ಯ ಸಂಬಂಧಗಳ ನಡುವೆ ವಿಷಸರ್ಪವಾಗಿ ಬದಲಾಗಬಾರದು. ಈ ಇಬ್ಬರ ಮದುವೆ ಇಂದಿನ ಸಮಾಜಕ್ಕೆ ಒಂದು ಮಾದರಿಯಾಗಿ, ಸ್ಪೂರ್ತಿಯಾಗಿ ನಿಲ್ಲಬೇಕು.
ಕೈರುನ್ನಿಸಾ ವೈಯುಕ್ತಿಕವಾಗಿ ತನ್ನ ಧಾರ್ಮಿಕ ನಂಬಿಕೆಯನ್ನು ತೊರೆದುಕೊಳ್ಳಲಿಲ್ಲ. ಪ್ರತಿನಿತ್ಯ ಮನೆಯಲ್ಲೇ ನಮಾಜು ಮಾಡುತ್ತಿದ್ದರು. ತನ್ನ ಉಳಿತಾಯದ ಹಣದಿಂದ ಒಂದು ಮಸೀದಿಗೆ ದೇಣಿಗೆಯನ್ನೂ ಕೊಟ್ಟಿದ್ದರು. ಹಾಗೆಂದು ತನ್ನ ಧಾರ್ಮಿಕ ನಂಬಿಕೆಯನ್ನು ತನ್ನ ಗಂಡನ ಮೇಲಾಗಲಿ, ತನ್ನ ಮೂವರು ಮಕ್ಕಳ ಮೇಲಾಗಲಿ ಹೇರಿಕೆ ಮಾಡುವ ಆಲೋಚನೆ ಎಂದಿಗೂ ಆಕೆಗೆ ಬರಲಿಲ್ಲ. ಒಂದು ಸಂದರ್ಭದಲ್ಲಿ ಆಕೆ ತನ್ನ ಹೆಸರನ್ನು ರಾಧ ಎಂದು ಬದಲಾಯಿಸಿಕೊಳ್ಳಬೇಕು ಅಂದುಕೊಂಡರು. ಆಗಾಗ ಹಣೆ ಮೇಲೆ ಬೊಟ್ಟನ್ನೂ ಇಡುತ್ತಿದ್ದರು. ಆ ಬೊಟ್ಟು ಅಲಂಕಾರಿಕವಾಗಿತ್ತೆ ಹೊರತು ಹಿಂದು ಧಾರ್ಮಿಕ ಸಂಕೇತವೆಂದು ಆಕೆಗೆ ಅನಿಸಲಿಲ್ಲ.
ಬಾಬಯ್ಯ ಕೈರುನ್ನಿಸಾ ಮಧ್ಯೆ ಸ್ನೇಹಭಾವವಿತ್ತು ಅಂದರೆ ಭೀನ್ನಾಭಿಪ್ರಾಯಗಳಿರಲಿಲ್ಲ ಎಂದರ್ಥವಲ್ಲ. ಬಾಬಯ್ಯನವರ ಚಳವಳಿಗಳ ಒಡನಾಟದ ಪರಿಣಾಮವಾಗಿ,
ಅದೆಷ್ಟೋ ಕ್ರಾಂತಿಕಾರಿಗಳು ಬಾಬಯ್ಯ ಕೈರುನ್ನಿಸಾ ಕುಟುಂಬದ ಆಸರೆಯನ್ನು ಪಡೆದುಕೊಂಡಿದ್ದಾರೆ. ಆದರೆ ಈ ಕ್ರಾಂತಿಕಾರಿ ರಾಜಕೀಯದ ಸಹವಾಸ ಕೈರುನ್ನಿಸಾ ಅವರಲ್ಲಿ ಸ್ವಲ್ಪಮಟ್ಟಿನ ಅಭದ್ರತೆಯ ಭಾವಕ್ಕೆ ಕಾರಣವಾಗಿತ್ತು. ಇದು ಅವರ ವ್ಯಕ್ತಿಗತ ಸಮಸ್ಯೆಯಾಗಿರಲಿಲ್ಲ; ಸಾಮಾಜಿಕ ಬದಲಾವಣೆಗಾಗಿ ನಡೆಯುವ ರಾಜಿರಹಿತ ಹೋರಾಟಕ್ಕೂ ಕುಟುಂಬ ಸಂಬಂಧಗಳಿಗೂ ನಡುವೆ ಸದಾಕಾಲ ತಿಕ್ಕಾಟ ಇದ್ದೇ ಇರುತ್ತದೆ. ಇಂಥಾ ಸಾಮಾಜಿಕ ವ್ಯವಸ್ಥಾಗತ ಸಮಸ್ಯೆಗಳನ್ನು ಒಂದಲ್ಲಾ ಒಂದು ಕುಟುಂಬ ಎದುರಿಸಲೇಬೇಕಾಗುತ್ತೆ. ಕೈರುನ್ನಿಸಾ ಕೂಡ ಈ ಸಮಸ್ಯೆಯನ್ನು ಎದುರಿಸುತ್ತಲೇ ನಮ್ಮೆಲ್ಲರನ್ನೂ ಗೌರವಿಸುತ್ತಿದ್ದರು. ಆಂಧ್ರದ ಪ್ರಸಿದ್ಧ ಮಾನವಹಕ್ಕು ಹೋರಾಟಗಾರ ಪ್ರೊ.ಬಾಲಗೋಪಾಲ್ ಕಾನೂನು ಶಿಕ್ಷಣವನ್ನು ಈ ಮನೆಯಲ್ಲಿದ್ದುಕೊಂಡೇ ಪಡೆದುಕೊಂಡರು. ಹಾಗೆ ನೋಡಿದರೆ ತೆಲುಗುನಾಡಿನ ಬಹುತೇಕ ಖ್ಯಾತನಾಮರಿಗೆ, ಅವರ ಕುಟುಂಬಗಳಿಗೆ ಈ ಮನೆ ಆತ್ಮೀಯ ತಾಣವಾಗಿತ್ತು.
ಅವರ ಮೂರೂ ಮಕ್ಕಳು ಇಂದು ಉನ್ನತ ವಿದ್ಯಾಭ್ಯಾಸ ಮಾಡಿ, ಘನತೆಯ ಜೀವನವನ್ನು ರೂಪಿಸಿಕೊಳ್ಳುವುದರಲ್ಲಿ ಕೈರುನ್ನಿಸಾ ಅವರ ಅಪಾರ ಶ್ರಮವಿದೆ. ಹಿರಿ ಮಗಳು ಪ್ರಣವ ದೆಹಲಿಯಲ್ಲಿ ಅಧ್ಯಾಪಕಿಯಾಗಿದ್ದಾಳೆ, ಕಿರಿ ಮಗಳು ಜಗತಿ ವೈದ್ಯೆಯಾಗಿದ್ದು ಹೈದರಾಬಾದ್‍ನಲ್ಲಿ ನೆಲೆಸಿದ್ದಾರೆ. ಬೆಂಗಳೂರಿನಲ್ಲಿರುವ ಮಗ ಭಾನುತೇಜ್ ಪತ್ರಕರ್ತರಾಗಿ ಹೆಸರು ಗಳಿಸಿದ್ದಾರೆ. ಇಲ್ಲಿ ಒಂದು ವಿಶೇಷವನ್ನು ಹೇಳಲೇಬೇಕು. ಈ ಮೂವರೂ ಮಕ್ಕಳು ಅಂತರ್‍ಜಾತೀಯ ಮದುವೆಯಾಗಿದ್ದಾರೆ. ಹೀಗೆ ಈ ಕುಟುಂಬ ನಮ್ಮನ್ನು ಆವರಿಸಿರುವ ಜಾತಿ ಧರ್ಮಗಳ ಗೋಡೆಯನ್ನು ಕೆಡವಿಹಾಕಿದೆ.
ಕೈರುನ್ನಿಸಾ ಸೆಕ್ಯುಲರ್ ದೃಷ್ಟಿಕೋನದ ಕಾರಣಕ್ಕಾಗಿಯೇ ಇರಬಹುದು, ತಮ್ಮ ಮಗ ಮತ್ತು ಹೆಣ್ಣು ಮಕ್ಕಳಲ್ಲಿ ಯಾವುದೇ ಬೇಧವಿಲ್ಲದಂತೆ ಸಮಾನವಾಗಿ ನೋಡಿಕೊಂಡರು. ತನ್ನ ಉಳಿತಾಯದ ಹಣವನ್ನು ಮೂವರಿಗೂ ಸಮಾನವಾಗಿ ಹಂಚಿದ್ದರು. ‘ಅಣ್ಣಾ, ನನಗೆ ಹೆಣ್ಣು ಮಕ್ಕಳಾದರೂ, ಗಂಡು ಮಕ್ಕಳಾದರೂ ಒಂದೇ, ಅದಕ್ಕೆ ಎಲ್ಲರಿಗೂ ಸಮಾನವಾಗಿ ಹಂಚಿದ್ದೇನೆ’ ಅಂತ ಬಹಳ ಹೆಮ್ಮೆಯಿಂದ ಹೇಳಿದ್ದರು. ಆಕೆಯ ಕೊನೆಗಾಲದಲ್ಲಿ ಉಳಿದ ಆಸ್ತಿಪಾಸ್ತಿಯನ್ನು ತಮ್ಮ ಮೊಮ್ಮಕ್ಕಳಿಗೆ ಹಂಚಬೇಕೆಂದು ತೀರ್ಮಾನಿಸಿದ್ದರು. ಇದು ಅವರ ದೂರದೃಷ್ಟಿ ಕೂಡ.
ಕೈರುನ್ನಿಸಾ ಜಾತಿ ಮತ ಬೇಧಗಳನ್ನು ವಿರೋಧಿಸಿದ್ದರೆಂಬುದು ಮಾತ್ರವಲ್ಲ; ಲಿಂಗ ತಾರತಮ್ಯವನ್ನೂ ವಿರೋಧಿಸುತ್ತಿದ್ದರು. ಅದು ಬಾಯಿಮಾತಿನಲ್ಲಿ ಮಾತ್ರವಲ್ಲ. ತಮ್ಮ ನಿಜ ಜೀವನದ ಉದಾಹರಣೆ ಮೂಲಕ. ಮನುಷ್ಯರು ಮನುಷ್ಯರಾಗಿ ಬದಲಾದರೆ ಎಷ್ಟೋ ಸಂಕುಚಿತ ಸಂಬಂಧಗಳನ್ನು ಮೀರಬಹುದೆಂಬ ಸತ್ಯವನ್ನು ಕೈರುನ್ನಿಸಾ ನೋಡಿ ಕಲಿಯಬಹುದು. ತನ್ನ ಅಂತ್ಯಸಂಸ್ಕಾರದ ಬಗ್ಗೆ ಆಕೆ ಕೈಗೊಂಡ ತೀರ್ಮಾನ ಇವೆಲ್ಲವನ್ನೂ ಮೀರಿದ್ದು. ಅವರು ಸ್ವಲ್ಪವೂ ಹಿಂಜರಿಕೆಯಿಲ್ಲದೆ, ತನ್ನ ದೇಹವನ್ನು ತನ್ನದೇ ವೃತ್ತಿಯಾದ ವೈದ್ಯಕೀಯ ಸಂಶೋಧನೆಗಾಗಿ ಸರ್ಕಾರಿ ಮೆಡಿಕಲ್ ಕಾಲೇಜಿಗೆ ದಾನ ಮಾಡಿದ್ದರು. ಇದು ಆಕೆಯ ಸೆಕ್ಯುಲರ್ ಪ್ರಪಂಚ ದೃಷ್ಟಿಯ ಪರಾಕಾಷ್ಠೆ.
ಬಾಬಯ್ಯ ಕೈರುನ್ನಿಸಾ ಕುಟಂಬ ಇಂದಿನ ಕೋಮುವಾದಿ ಕಲುಷಿತ ವಾತಾವರಣಕ್ಕೆ ಒಂದು ದಿಟ್ಟ ಪರಿಹಾರ. ಆನರೇ ಚರಿತ್ರೆಯ ನಿರ್ಮಾಪಕರು ಎಂದು ಮಾಕ್ರ್ಸ್ ಹೇಳಿದಂತೆ, ಚರಿತ್ರೆ ನಿರ್ಮಾಣದಲ್ಲಿ ಯಾವುದೇ ಅಬ್ಬರವಿಲ್ಲದೆ, ಪ್ರಚಾರವಿಲ್ಲದೆ ಪಾಲಿಸುವ ಜೀವನದ ಆಚರಣೆಗಳೇ ಸಾಮಾಜಿಕ ಬದಲಾವಣೆಗೆ ಮಾರ್ಗದರ್ಶಿ ಸೂತ್ರಗಳಂತೆ ಕೆಲಸ ಮಾಡುತ್ತವೆ. ಸಾಮಾನ್ಯ ಮನುಷ್ಯರಲ್ಲಿ ಕೆಲವರು ಅಸಾಮಾನ್ಯವಾಗಿ ಜೀವಿಸುತ್ತಾರೆ ಎಂದರೆ ಇದೇ ಅನಿಸುತ್ತೆ.

– ಪ್ರೊ.ಹರಗೋಪಾಲ್
ಕನ್ನಡಕ್ಕೆ : ದೊಡ್ಡಿಪಾಳ್ಯ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...