Homeಮುಖಪುಟಸಿಕಂದರಾಬಾದ್‌: ಇ-ಬೈಕ್ ಶೋ ರೂಂ ಸ್ಫೋಟ: ಮಹಿಳೆ ಸೇರಿದಂತೆ ಎಂಟು ಮಂದಿ ಸಾವು

ಸಿಕಂದರಾಬಾದ್‌: ಇ-ಬೈಕ್ ಶೋ ರೂಂ ಸ್ಫೋಟ: ಮಹಿಳೆ ಸೇರಿದಂತೆ ಎಂಟು ಮಂದಿ ಸಾವು

- Advertisement -
- Advertisement -

ತೆಲಂಗಾಣದ ಸಿಕಂದರಾಬಾದ್‌ನ ರೂಬಿ ಪ್ರೈಡ್ ಐಷಾರಾಮಿ ಹೋಟೆಲ್‌ನ ಕಟ್ಟಡದ ನೆಲ ಮಹಡಿಯಲ್ಲಿರುವ ಇ-ಬೈಕ್ ಶೋರೂಮ್‌ನಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಸ್ಫೋಟದಿಂದಾಗಿ ಉಂಟಾದ ಬೆಂಕಿ ಅವಘಡದಲ್ಲಿ ಮಹಿಳೆ ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಅಪಘಾತದ ವೇಳೆ ಹೋಟೆಲ್‌ನಲ್ಲಿ 25 ಮಂದಿ ಇದ್ದರು ಎನ್ನಲಾಗಿದ್ದು, ಮೃತಪಟ್ಟವರಲ್ಲಿ ಹೆಚ್ಚಿನವರು ಉಸಿರುಕಟ್ಟಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೂಬಿ ಮೋಟಾರ್ಸ್ ಶೋರೂಂನಲ್ಲಿ ಇರಿಸಲಾಗಿದ್ದ ಇ-ಬೈಕ್ ಅಥವಾ ಜನರೇಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ ಎಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿದ್ದಾರೆ. ಬೆಂಕಿಯ ಜ್ವಾಲೆಯು ಮೆಟ್ಟಿಲನ್ನು ಮೀರಿ ಹರಿಡಿದ್ದರಿಂದ ಕಟ್ಟಡದ ನೆಲಮಾಳಿಗೆ, ನೆಲ ಮಹಡಿ, ಮೊದಲ ಮತ್ತು ಎರಡನೇ ಮಹಡಿಗಳನ್ನು ಆವರಿಸಿದೆ. ಬೆಂಕಿಗಿಂತ ಅಫಘಾತದಲ್ಲಿ ಉಂಟಾದ ಹೊಗೆಯಿಂದಾಗಿಯೆ ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:  ಭಾರತ್ ಜೋಡೋ ಯಾತ್ರೆ: ಆರೆಸ್ಸೆಸ್‌‌ ಚಡ್ಡಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್; ಬಿಜೆಪಿ ಟೀಕೆ

ಶೋರೂಮ್‌ನಿಂದ ಭುಗಿಲೆದ್ದ ಬೆಂಕಿ ಮತ್ತು ಹೊಗೆಯಿಂದಾಗಿ ಶೋರೂಮ್‌ನ ಮೇಲೆ ಇದ್ದ ಹೋಟೆಲ್ ರೂಬಿ ಪ್ರೈಡ್ ಅನ್ನು ಆವರಿಸಿ ಅಲ್ಲಿರುವ ಜನರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಕೆಲವು ಗಂಟೆಗಳ ನಂತರ ದಟ್ಟವಾದ ಹೊಗೆ ಹೊರಹೊಮ್ಮುತ್ತಲೇ ಇತ್ತು ಎಂದು ವರದಿ ಉಲ್ಲೇಖಿಸಿದೆ. ಸ್ಥಳೀಯರು ಕೂಡ ಜೀವ ರಕ್ಷಣೆಗೆ ಸಹಕರಿಸಿದ್ದಾರೆ ಎಂದು ಅದು ಹೇಳಿದೆ.

“ಹೋಟೆಲ್‌ನ ಎಲ್ಲಾ ನಾಲ್ಕು ಮಹಡಿಗಳಲ್ಲಿ 23 ಕೊಠಡಿಗಳಿವೆ ಎಂದು ತೋರುತ್ತಿದೆ. ಹೊಗೆ ಕೆಳಗಿನಿಂದ ಮೇಲಿನ ಮಹಡಿಯವರೆಗೆ ಮೆಟ್ಟಿಲುಗಳ ಮೂಲಕ ಹಾದುಹೋಯಿತು ಮತ್ತು ಎಲ್ಲಾ ಮಹಡಿಗಳನ್ನು ಸಂಪೂರ್ಣವಾಗಿ ಆವರಿಸಿದೆ. ಮೊದಲ ಮತ್ತು ಎರಡನೇ ಮಹಡಿಯಲ್ಲಿ ಮಲಗಿದ್ದ ಕೆಲವರು ದಟ್ಟ ಹೊಗೆಯ ಕಾರಣಕ್ಕೆ ಕಾರಿಡಾರ್‌ಗೆ ಬಂದು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ” ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣವೋ ಅಥವಾ ನೆಲಮಾಳಿಗೆಯ ಬ್ಯಾಟರಿಗಳ ಚಾರ್ಜ್‌‌ನಿಂದಾಗಿ ಆಗಿದೆಯೊ ಅಥವಾ ಮೊದಲ ಮಹಡಿಯಲ್ಲಿ ಇರುವ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆಯೆ ಎಂದು ಅಗ್ನಿಶಾಮಕ ಇಲಾಖೆಯ ತನಿಖೆಯ ನಂತರ ತಿಳಿಯುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಾಸಕ ಜಿಗ್ನೇಶ್‌‌ ಮೇವಾನಿ ಮೇಲೆ ಗುಜರಾತ್‌ ಮಾಜಿ ಗೃಹ ಸಚಿವರ ಗೂಂಡಾಗಳಿಂದ ಹಲ್ಲೆ

“ಸಾಮಾನ್ಯವಾಗಿ ಪಾರ್ಕಿಂಗ್‌ಗೆ ಬಳಸಬೇಕಾದ ನೆಲಮಾಳಿಗೆಯನ್ನು ನಿಸ್ಸಂಶಯವಾಗಿ ಅವರು ಬೇರೆ ಯಾವುದಕ್ಕೊ ಬಳಸುತ್ತಿದ್ದರು. ಅದನ್ನು ವಿಚಾರಣೆ ನಡೆಸುತ್ತೇವೆ” ಎಂದು ಅಧಿಕಾರಿ ಹೇಳಿದ್ದಾರೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಕಟ್ಟಡದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಿದ್ದಾರೆ. “ರಾತ್ರಿ 9.20 ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಎರಡು ಅಗ್ನಿಶಾಮಕ ಟೆಂಡರ್‌ಗಳನ್ನು ಇಲ್ಲಿ ಬಳಸಲಾಗಿದೆ. ಕಟ್ಟಡದಲ್ಲಿ ಫೈರ್ ಸ್ಪ್ರಿಂಕ್ಲರ್‌ಗಳಿವೆ ಆದರೆ ಆ ಸಮಯದಲ್ಲಿ ಅವು ಕಾರ್ಯನಿರ್ವಹಿಸಲಿಲ್ಲ. ಗಾಯಾಳುಗಳನ್ನು ಗಾಂಧಿ ಆಸ್ಪತ್ರೆ ಮತ್ತು ಯಶೋದಾ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ಅಗ್ನಿಶಾಮಕ ಇಲಾಖೆ ಡಿಜಿ ಸಂಜಯ್ ಜೈನ್ ಹೇಳಿದ್ದಾರೆ.

ಹೋಟೆಲ್ 23 ಕೊಠಡಿಗಳನ್ನು ಹೊಂದಿದ್ದು, ಬೆಂಕಿ ಕಾಣಿಸಿಕೊಂಡಾಗ ಸರಿಸುಮಾರು 50% ಕೊಠಡಿಗಳಲ್ಲಿ ಜನರಿದ್ದರು ಎಂದು TNIE ವರದಿ ಹೇಳಿದೆ. ಸಚಿವ ಹಾಗೂ ಸನತ್‌ನಗರ ಶಾಸಕ ತಲಸಾನಿ ಶ್ರೀನಿವಾಸ್ ಯಾದವ್‌ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಏಷ್ಯಾಕಪ್‌: ಶ್ರೀಲಂಕಾ ಭಾವುಟ ಹಿಡಿದು ಸಂಭ್ರಮಿಸಿದ ಗೌತಮ್‌ ಗಂಭೀರ್‌

ನೆಲ ಮಹಡಿ ಸೇರಿದಂತೆ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ತುರ್ತು ನಿರ್ಗಮನದ ಮಾರ್ಗವಿಲ್ಲದ ಕಾರಣ ಏಳು ಮಂದಿ ವಿವಿಧ ಮಹಡಿಗಳಿಂದ ಜಿಗಿದಿದ್ದಾರೆ. ಕೆಲವರು ಪೈಪ್‌ಲೈನ್‌ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳ ಹೈಡ್ರಾಲಿಕ್ ಎಲಿವೇಟರ್ ಬಳಸಿ ನಾಲ್ವರನ್ನು ರಕ್ಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...