Homeಮುಖಪುಟಸಿಕಂದರಾಬಾದ್‌: ಇ-ಬೈಕ್ ಶೋ ರೂಂ ಸ್ಫೋಟ: ಮಹಿಳೆ ಸೇರಿದಂತೆ ಎಂಟು ಮಂದಿ ಸಾವು

ಸಿಕಂದರಾಬಾದ್‌: ಇ-ಬೈಕ್ ಶೋ ರೂಂ ಸ್ಫೋಟ: ಮಹಿಳೆ ಸೇರಿದಂತೆ ಎಂಟು ಮಂದಿ ಸಾವು

- Advertisement -
- Advertisement -

ತೆಲಂಗಾಣದ ಸಿಕಂದರಾಬಾದ್‌ನ ರೂಬಿ ಪ್ರೈಡ್ ಐಷಾರಾಮಿ ಹೋಟೆಲ್‌ನ ಕಟ್ಟಡದ ನೆಲ ಮಹಡಿಯಲ್ಲಿರುವ ಇ-ಬೈಕ್ ಶೋರೂಮ್‌ನಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಸ್ಫೋಟದಿಂದಾಗಿ ಉಂಟಾದ ಬೆಂಕಿ ಅವಘಡದಲ್ಲಿ ಮಹಿಳೆ ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಅಪಘಾತದ ವೇಳೆ ಹೋಟೆಲ್‌ನಲ್ಲಿ 25 ಮಂದಿ ಇದ್ದರು ಎನ್ನಲಾಗಿದ್ದು, ಮೃತಪಟ್ಟವರಲ್ಲಿ ಹೆಚ್ಚಿನವರು ಉಸಿರುಕಟ್ಟಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೂಬಿ ಮೋಟಾರ್ಸ್ ಶೋರೂಂನಲ್ಲಿ ಇರಿಸಲಾಗಿದ್ದ ಇ-ಬೈಕ್ ಅಥವಾ ಜನರೇಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ ಎಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿದ್ದಾರೆ. ಬೆಂಕಿಯ ಜ್ವಾಲೆಯು ಮೆಟ್ಟಿಲನ್ನು ಮೀರಿ ಹರಿಡಿದ್ದರಿಂದ ಕಟ್ಟಡದ ನೆಲಮಾಳಿಗೆ, ನೆಲ ಮಹಡಿ, ಮೊದಲ ಮತ್ತು ಎರಡನೇ ಮಹಡಿಗಳನ್ನು ಆವರಿಸಿದೆ. ಬೆಂಕಿಗಿಂತ ಅಫಘಾತದಲ್ಲಿ ಉಂಟಾದ ಹೊಗೆಯಿಂದಾಗಿಯೆ ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:  ಭಾರತ್ ಜೋಡೋ ಯಾತ್ರೆ: ಆರೆಸ್ಸೆಸ್‌‌ ಚಡ್ಡಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್; ಬಿಜೆಪಿ ಟೀಕೆ

ಶೋರೂಮ್‌ನಿಂದ ಭುಗಿಲೆದ್ದ ಬೆಂಕಿ ಮತ್ತು ಹೊಗೆಯಿಂದಾಗಿ ಶೋರೂಮ್‌ನ ಮೇಲೆ ಇದ್ದ ಹೋಟೆಲ್ ರೂಬಿ ಪ್ರೈಡ್ ಅನ್ನು ಆವರಿಸಿ ಅಲ್ಲಿರುವ ಜನರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಕೆಲವು ಗಂಟೆಗಳ ನಂತರ ದಟ್ಟವಾದ ಹೊಗೆ ಹೊರಹೊಮ್ಮುತ್ತಲೇ ಇತ್ತು ಎಂದು ವರದಿ ಉಲ್ಲೇಖಿಸಿದೆ. ಸ್ಥಳೀಯರು ಕೂಡ ಜೀವ ರಕ್ಷಣೆಗೆ ಸಹಕರಿಸಿದ್ದಾರೆ ಎಂದು ಅದು ಹೇಳಿದೆ.

“ಹೋಟೆಲ್‌ನ ಎಲ್ಲಾ ನಾಲ್ಕು ಮಹಡಿಗಳಲ್ಲಿ 23 ಕೊಠಡಿಗಳಿವೆ ಎಂದು ತೋರುತ್ತಿದೆ. ಹೊಗೆ ಕೆಳಗಿನಿಂದ ಮೇಲಿನ ಮಹಡಿಯವರೆಗೆ ಮೆಟ್ಟಿಲುಗಳ ಮೂಲಕ ಹಾದುಹೋಯಿತು ಮತ್ತು ಎಲ್ಲಾ ಮಹಡಿಗಳನ್ನು ಸಂಪೂರ್ಣವಾಗಿ ಆವರಿಸಿದೆ. ಮೊದಲ ಮತ್ತು ಎರಡನೇ ಮಹಡಿಯಲ್ಲಿ ಮಲಗಿದ್ದ ಕೆಲವರು ದಟ್ಟ ಹೊಗೆಯ ಕಾರಣಕ್ಕೆ ಕಾರಿಡಾರ್‌ಗೆ ಬಂದು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ” ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣವೋ ಅಥವಾ ನೆಲಮಾಳಿಗೆಯ ಬ್ಯಾಟರಿಗಳ ಚಾರ್ಜ್‌‌ನಿಂದಾಗಿ ಆಗಿದೆಯೊ ಅಥವಾ ಮೊದಲ ಮಹಡಿಯಲ್ಲಿ ಇರುವ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆಯೆ ಎಂದು ಅಗ್ನಿಶಾಮಕ ಇಲಾಖೆಯ ತನಿಖೆಯ ನಂತರ ತಿಳಿಯುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಾಸಕ ಜಿಗ್ನೇಶ್‌‌ ಮೇವಾನಿ ಮೇಲೆ ಗುಜರಾತ್‌ ಮಾಜಿ ಗೃಹ ಸಚಿವರ ಗೂಂಡಾಗಳಿಂದ ಹಲ್ಲೆ

“ಸಾಮಾನ್ಯವಾಗಿ ಪಾರ್ಕಿಂಗ್‌ಗೆ ಬಳಸಬೇಕಾದ ನೆಲಮಾಳಿಗೆಯನ್ನು ನಿಸ್ಸಂಶಯವಾಗಿ ಅವರು ಬೇರೆ ಯಾವುದಕ್ಕೊ ಬಳಸುತ್ತಿದ್ದರು. ಅದನ್ನು ವಿಚಾರಣೆ ನಡೆಸುತ್ತೇವೆ” ಎಂದು ಅಧಿಕಾರಿ ಹೇಳಿದ್ದಾರೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಕಟ್ಟಡದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಿದ್ದಾರೆ. “ರಾತ್ರಿ 9.20 ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಎರಡು ಅಗ್ನಿಶಾಮಕ ಟೆಂಡರ್‌ಗಳನ್ನು ಇಲ್ಲಿ ಬಳಸಲಾಗಿದೆ. ಕಟ್ಟಡದಲ್ಲಿ ಫೈರ್ ಸ್ಪ್ರಿಂಕ್ಲರ್‌ಗಳಿವೆ ಆದರೆ ಆ ಸಮಯದಲ್ಲಿ ಅವು ಕಾರ್ಯನಿರ್ವಹಿಸಲಿಲ್ಲ. ಗಾಯಾಳುಗಳನ್ನು ಗಾಂಧಿ ಆಸ್ಪತ್ರೆ ಮತ್ತು ಯಶೋದಾ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ಅಗ್ನಿಶಾಮಕ ಇಲಾಖೆ ಡಿಜಿ ಸಂಜಯ್ ಜೈನ್ ಹೇಳಿದ್ದಾರೆ.

ಹೋಟೆಲ್ 23 ಕೊಠಡಿಗಳನ್ನು ಹೊಂದಿದ್ದು, ಬೆಂಕಿ ಕಾಣಿಸಿಕೊಂಡಾಗ ಸರಿಸುಮಾರು 50% ಕೊಠಡಿಗಳಲ್ಲಿ ಜನರಿದ್ದರು ಎಂದು TNIE ವರದಿ ಹೇಳಿದೆ. ಸಚಿವ ಹಾಗೂ ಸನತ್‌ನಗರ ಶಾಸಕ ತಲಸಾನಿ ಶ್ರೀನಿವಾಸ್ ಯಾದವ್‌ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಏಷ್ಯಾಕಪ್‌: ಶ್ರೀಲಂಕಾ ಭಾವುಟ ಹಿಡಿದು ಸಂಭ್ರಮಿಸಿದ ಗೌತಮ್‌ ಗಂಭೀರ್‌

ನೆಲ ಮಹಡಿ ಸೇರಿದಂತೆ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ತುರ್ತು ನಿರ್ಗಮನದ ಮಾರ್ಗವಿಲ್ಲದ ಕಾರಣ ಏಳು ಮಂದಿ ವಿವಿಧ ಮಹಡಿಗಳಿಂದ ಜಿಗಿದಿದ್ದಾರೆ. ಕೆಲವರು ಪೈಪ್‌ಲೈನ್‌ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳ ಹೈಡ್ರಾಲಿಕ್ ಎಲಿವೇಟರ್ ಬಳಸಿ ನಾಲ್ವರನ್ನು ರಕ್ಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...