Homeಮುಖಪುಟಸಿಕಂದರಾಬಾದ್‌: ಇ-ಬೈಕ್ ಶೋ ರೂಂ ಸ್ಫೋಟ: ಮಹಿಳೆ ಸೇರಿದಂತೆ ಎಂಟು ಮಂದಿ ಸಾವು

ಸಿಕಂದರಾಬಾದ್‌: ಇ-ಬೈಕ್ ಶೋ ರೂಂ ಸ್ಫೋಟ: ಮಹಿಳೆ ಸೇರಿದಂತೆ ಎಂಟು ಮಂದಿ ಸಾವು

- Advertisement -
- Advertisement -

ತೆಲಂಗಾಣದ ಸಿಕಂದರಾಬಾದ್‌ನ ರೂಬಿ ಪ್ರೈಡ್ ಐಷಾರಾಮಿ ಹೋಟೆಲ್‌ನ ಕಟ್ಟಡದ ನೆಲ ಮಹಡಿಯಲ್ಲಿರುವ ಇ-ಬೈಕ್ ಶೋರೂಮ್‌ನಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಸ್ಫೋಟದಿಂದಾಗಿ ಉಂಟಾದ ಬೆಂಕಿ ಅವಘಡದಲ್ಲಿ ಮಹಿಳೆ ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಅಪಘಾತದ ವೇಳೆ ಹೋಟೆಲ್‌ನಲ್ಲಿ 25 ಮಂದಿ ಇದ್ದರು ಎನ್ನಲಾಗಿದ್ದು, ಮೃತಪಟ್ಟವರಲ್ಲಿ ಹೆಚ್ಚಿನವರು ಉಸಿರುಕಟ್ಟಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೂಬಿ ಮೋಟಾರ್ಸ್ ಶೋರೂಂನಲ್ಲಿ ಇರಿಸಲಾಗಿದ್ದ ಇ-ಬೈಕ್ ಅಥವಾ ಜನರೇಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ ಎಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿದ್ದಾರೆ. ಬೆಂಕಿಯ ಜ್ವಾಲೆಯು ಮೆಟ್ಟಿಲನ್ನು ಮೀರಿ ಹರಿಡಿದ್ದರಿಂದ ಕಟ್ಟಡದ ನೆಲಮಾಳಿಗೆ, ನೆಲ ಮಹಡಿ, ಮೊದಲ ಮತ್ತು ಎರಡನೇ ಮಹಡಿಗಳನ್ನು ಆವರಿಸಿದೆ. ಬೆಂಕಿಗಿಂತ ಅಫಘಾತದಲ್ಲಿ ಉಂಟಾದ ಹೊಗೆಯಿಂದಾಗಿಯೆ ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:  ಭಾರತ್ ಜೋಡೋ ಯಾತ್ರೆ: ಆರೆಸ್ಸೆಸ್‌‌ ಚಡ್ಡಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್; ಬಿಜೆಪಿ ಟೀಕೆ

ಶೋರೂಮ್‌ನಿಂದ ಭುಗಿಲೆದ್ದ ಬೆಂಕಿ ಮತ್ತು ಹೊಗೆಯಿಂದಾಗಿ ಶೋರೂಮ್‌ನ ಮೇಲೆ ಇದ್ದ ಹೋಟೆಲ್ ರೂಬಿ ಪ್ರೈಡ್ ಅನ್ನು ಆವರಿಸಿ ಅಲ್ಲಿರುವ ಜನರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಕೆಲವು ಗಂಟೆಗಳ ನಂತರ ದಟ್ಟವಾದ ಹೊಗೆ ಹೊರಹೊಮ್ಮುತ್ತಲೇ ಇತ್ತು ಎಂದು ವರದಿ ಉಲ್ಲೇಖಿಸಿದೆ. ಸ್ಥಳೀಯರು ಕೂಡ ಜೀವ ರಕ್ಷಣೆಗೆ ಸಹಕರಿಸಿದ್ದಾರೆ ಎಂದು ಅದು ಹೇಳಿದೆ.

“ಹೋಟೆಲ್‌ನ ಎಲ್ಲಾ ನಾಲ್ಕು ಮಹಡಿಗಳಲ್ಲಿ 23 ಕೊಠಡಿಗಳಿವೆ ಎಂದು ತೋರುತ್ತಿದೆ. ಹೊಗೆ ಕೆಳಗಿನಿಂದ ಮೇಲಿನ ಮಹಡಿಯವರೆಗೆ ಮೆಟ್ಟಿಲುಗಳ ಮೂಲಕ ಹಾದುಹೋಯಿತು ಮತ್ತು ಎಲ್ಲಾ ಮಹಡಿಗಳನ್ನು ಸಂಪೂರ್ಣವಾಗಿ ಆವರಿಸಿದೆ. ಮೊದಲ ಮತ್ತು ಎರಡನೇ ಮಹಡಿಯಲ್ಲಿ ಮಲಗಿದ್ದ ಕೆಲವರು ದಟ್ಟ ಹೊಗೆಯ ಕಾರಣಕ್ಕೆ ಕಾರಿಡಾರ್‌ಗೆ ಬಂದು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ” ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣವೋ ಅಥವಾ ನೆಲಮಾಳಿಗೆಯ ಬ್ಯಾಟರಿಗಳ ಚಾರ್ಜ್‌‌ನಿಂದಾಗಿ ಆಗಿದೆಯೊ ಅಥವಾ ಮೊದಲ ಮಹಡಿಯಲ್ಲಿ ಇರುವ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆಯೆ ಎಂದು ಅಗ್ನಿಶಾಮಕ ಇಲಾಖೆಯ ತನಿಖೆಯ ನಂತರ ತಿಳಿಯುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಾಸಕ ಜಿಗ್ನೇಶ್‌‌ ಮೇವಾನಿ ಮೇಲೆ ಗುಜರಾತ್‌ ಮಾಜಿ ಗೃಹ ಸಚಿವರ ಗೂಂಡಾಗಳಿಂದ ಹಲ್ಲೆ

“ಸಾಮಾನ್ಯವಾಗಿ ಪಾರ್ಕಿಂಗ್‌ಗೆ ಬಳಸಬೇಕಾದ ನೆಲಮಾಳಿಗೆಯನ್ನು ನಿಸ್ಸಂಶಯವಾಗಿ ಅವರು ಬೇರೆ ಯಾವುದಕ್ಕೊ ಬಳಸುತ್ತಿದ್ದರು. ಅದನ್ನು ವಿಚಾರಣೆ ನಡೆಸುತ್ತೇವೆ” ಎಂದು ಅಧಿಕಾರಿ ಹೇಳಿದ್ದಾರೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಕಟ್ಟಡದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಿದ್ದಾರೆ. “ರಾತ್ರಿ 9.20 ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಎರಡು ಅಗ್ನಿಶಾಮಕ ಟೆಂಡರ್‌ಗಳನ್ನು ಇಲ್ಲಿ ಬಳಸಲಾಗಿದೆ. ಕಟ್ಟಡದಲ್ಲಿ ಫೈರ್ ಸ್ಪ್ರಿಂಕ್ಲರ್‌ಗಳಿವೆ ಆದರೆ ಆ ಸಮಯದಲ್ಲಿ ಅವು ಕಾರ್ಯನಿರ್ವಹಿಸಲಿಲ್ಲ. ಗಾಯಾಳುಗಳನ್ನು ಗಾಂಧಿ ಆಸ್ಪತ್ರೆ ಮತ್ತು ಯಶೋದಾ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ಅಗ್ನಿಶಾಮಕ ಇಲಾಖೆ ಡಿಜಿ ಸಂಜಯ್ ಜೈನ್ ಹೇಳಿದ್ದಾರೆ.

ಹೋಟೆಲ್ 23 ಕೊಠಡಿಗಳನ್ನು ಹೊಂದಿದ್ದು, ಬೆಂಕಿ ಕಾಣಿಸಿಕೊಂಡಾಗ ಸರಿಸುಮಾರು 50% ಕೊಠಡಿಗಳಲ್ಲಿ ಜನರಿದ್ದರು ಎಂದು TNIE ವರದಿ ಹೇಳಿದೆ. ಸಚಿವ ಹಾಗೂ ಸನತ್‌ನಗರ ಶಾಸಕ ತಲಸಾನಿ ಶ್ರೀನಿವಾಸ್ ಯಾದವ್‌ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಏಷ್ಯಾಕಪ್‌: ಶ್ರೀಲಂಕಾ ಭಾವುಟ ಹಿಡಿದು ಸಂಭ್ರಮಿಸಿದ ಗೌತಮ್‌ ಗಂಭೀರ್‌

ನೆಲ ಮಹಡಿ ಸೇರಿದಂತೆ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ತುರ್ತು ನಿರ್ಗಮನದ ಮಾರ್ಗವಿಲ್ಲದ ಕಾರಣ ಏಳು ಮಂದಿ ವಿವಿಧ ಮಹಡಿಗಳಿಂದ ಜಿಗಿದಿದ್ದಾರೆ. ಕೆಲವರು ಪೈಪ್‌ಲೈನ್‌ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳ ಹೈಡ್ರಾಲಿಕ್ ಎಲಿವೇಟರ್ ಬಳಸಿ ನಾಲ್ವರನ್ನು ರಕ್ಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...