Homeಮುಖಪುಟಸಿಕಂದರಾಬಾದ್‌: ಇ-ಬೈಕ್ ಶೋ ರೂಂ ಸ್ಫೋಟ: ಮಹಿಳೆ ಸೇರಿದಂತೆ ಎಂಟು ಮಂದಿ ಸಾವು

ಸಿಕಂದರಾಬಾದ್‌: ಇ-ಬೈಕ್ ಶೋ ರೂಂ ಸ್ಫೋಟ: ಮಹಿಳೆ ಸೇರಿದಂತೆ ಎಂಟು ಮಂದಿ ಸಾವು

- Advertisement -
- Advertisement -

ತೆಲಂಗಾಣದ ಸಿಕಂದರಾಬಾದ್‌ನ ರೂಬಿ ಪ್ರೈಡ್ ಐಷಾರಾಮಿ ಹೋಟೆಲ್‌ನ ಕಟ್ಟಡದ ನೆಲ ಮಹಡಿಯಲ್ಲಿರುವ ಇ-ಬೈಕ್ ಶೋರೂಮ್‌ನಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಸ್ಫೋಟದಿಂದಾಗಿ ಉಂಟಾದ ಬೆಂಕಿ ಅವಘಡದಲ್ಲಿ ಮಹಿಳೆ ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಅಪಘಾತದ ವೇಳೆ ಹೋಟೆಲ್‌ನಲ್ಲಿ 25 ಮಂದಿ ಇದ್ದರು ಎನ್ನಲಾಗಿದ್ದು, ಮೃತಪಟ್ಟವರಲ್ಲಿ ಹೆಚ್ಚಿನವರು ಉಸಿರುಕಟ್ಟಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೂಬಿ ಮೋಟಾರ್ಸ್ ಶೋರೂಂನಲ್ಲಿ ಇರಿಸಲಾಗಿದ್ದ ಇ-ಬೈಕ್ ಅಥವಾ ಜನರೇಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ ಎಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿದ್ದಾರೆ. ಬೆಂಕಿಯ ಜ್ವಾಲೆಯು ಮೆಟ್ಟಿಲನ್ನು ಮೀರಿ ಹರಿಡಿದ್ದರಿಂದ ಕಟ್ಟಡದ ನೆಲಮಾಳಿಗೆ, ನೆಲ ಮಹಡಿ, ಮೊದಲ ಮತ್ತು ಎರಡನೇ ಮಹಡಿಗಳನ್ನು ಆವರಿಸಿದೆ. ಬೆಂಕಿಗಿಂತ ಅಫಘಾತದಲ್ಲಿ ಉಂಟಾದ ಹೊಗೆಯಿಂದಾಗಿಯೆ ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:  ಭಾರತ್ ಜೋಡೋ ಯಾತ್ರೆ: ಆರೆಸ್ಸೆಸ್‌‌ ಚಡ್ಡಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್; ಬಿಜೆಪಿ ಟೀಕೆ

ಶೋರೂಮ್‌ನಿಂದ ಭುಗಿಲೆದ್ದ ಬೆಂಕಿ ಮತ್ತು ಹೊಗೆಯಿಂದಾಗಿ ಶೋರೂಮ್‌ನ ಮೇಲೆ ಇದ್ದ ಹೋಟೆಲ್ ರೂಬಿ ಪ್ರೈಡ್ ಅನ್ನು ಆವರಿಸಿ ಅಲ್ಲಿರುವ ಜನರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಕೆಲವು ಗಂಟೆಗಳ ನಂತರ ದಟ್ಟವಾದ ಹೊಗೆ ಹೊರಹೊಮ್ಮುತ್ತಲೇ ಇತ್ತು ಎಂದು ವರದಿ ಉಲ್ಲೇಖಿಸಿದೆ. ಸ್ಥಳೀಯರು ಕೂಡ ಜೀವ ರಕ್ಷಣೆಗೆ ಸಹಕರಿಸಿದ್ದಾರೆ ಎಂದು ಅದು ಹೇಳಿದೆ.

“ಹೋಟೆಲ್‌ನ ಎಲ್ಲಾ ನಾಲ್ಕು ಮಹಡಿಗಳಲ್ಲಿ 23 ಕೊಠಡಿಗಳಿವೆ ಎಂದು ತೋರುತ್ತಿದೆ. ಹೊಗೆ ಕೆಳಗಿನಿಂದ ಮೇಲಿನ ಮಹಡಿಯವರೆಗೆ ಮೆಟ್ಟಿಲುಗಳ ಮೂಲಕ ಹಾದುಹೋಯಿತು ಮತ್ತು ಎಲ್ಲಾ ಮಹಡಿಗಳನ್ನು ಸಂಪೂರ್ಣವಾಗಿ ಆವರಿಸಿದೆ. ಮೊದಲ ಮತ್ತು ಎರಡನೇ ಮಹಡಿಯಲ್ಲಿ ಮಲಗಿದ್ದ ಕೆಲವರು ದಟ್ಟ ಹೊಗೆಯ ಕಾರಣಕ್ಕೆ ಕಾರಿಡಾರ್‌ಗೆ ಬಂದು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ” ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣವೋ ಅಥವಾ ನೆಲಮಾಳಿಗೆಯ ಬ್ಯಾಟರಿಗಳ ಚಾರ್ಜ್‌‌ನಿಂದಾಗಿ ಆಗಿದೆಯೊ ಅಥವಾ ಮೊದಲ ಮಹಡಿಯಲ್ಲಿ ಇರುವ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆಯೆ ಎಂದು ಅಗ್ನಿಶಾಮಕ ಇಲಾಖೆಯ ತನಿಖೆಯ ನಂತರ ತಿಳಿಯುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಾಸಕ ಜಿಗ್ನೇಶ್‌‌ ಮೇವಾನಿ ಮೇಲೆ ಗುಜರಾತ್‌ ಮಾಜಿ ಗೃಹ ಸಚಿವರ ಗೂಂಡಾಗಳಿಂದ ಹಲ್ಲೆ

“ಸಾಮಾನ್ಯವಾಗಿ ಪಾರ್ಕಿಂಗ್‌ಗೆ ಬಳಸಬೇಕಾದ ನೆಲಮಾಳಿಗೆಯನ್ನು ನಿಸ್ಸಂಶಯವಾಗಿ ಅವರು ಬೇರೆ ಯಾವುದಕ್ಕೊ ಬಳಸುತ್ತಿದ್ದರು. ಅದನ್ನು ವಿಚಾರಣೆ ನಡೆಸುತ್ತೇವೆ” ಎಂದು ಅಧಿಕಾರಿ ಹೇಳಿದ್ದಾರೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಕಟ್ಟಡದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಿದ್ದಾರೆ. “ರಾತ್ರಿ 9.20 ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಎರಡು ಅಗ್ನಿಶಾಮಕ ಟೆಂಡರ್‌ಗಳನ್ನು ಇಲ್ಲಿ ಬಳಸಲಾಗಿದೆ. ಕಟ್ಟಡದಲ್ಲಿ ಫೈರ್ ಸ್ಪ್ರಿಂಕ್ಲರ್‌ಗಳಿವೆ ಆದರೆ ಆ ಸಮಯದಲ್ಲಿ ಅವು ಕಾರ್ಯನಿರ್ವಹಿಸಲಿಲ್ಲ. ಗಾಯಾಳುಗಳನ್ನು ಗಾಂಧಿ ಆಸ್ಪತ್ರೆ ಮತ್ತು ಯಶೋದಾ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ಅಗ್ನಿಶಾಮಕ ಇಲಾಖೆ ಡಿಜಿ ಸಂಜಯ್ ಜೈನ್ ಹೇಳಿದ್ದಾರೆ.

ಹೋಟೆಲ್ 23 ಕೊಠಡಿಗಳನ್ನು ಹೊಂದಿದ್ದು, ಬೆಂಕಿ ಕಾಣಿಸಿಕೊಂಡಾಗ ಸರಿಸುಮಾರು 50% ಕೊಠಡಿಗಳಲ್ಲಿ ಜನರಿದ್ದರು ಎಂದು TNIE ವರದಿ ಹೇಳಿದೆ. ಸಚಿವ ಹಾಗೂ ಸನತ್‌ನಗರ ಶಾಸಕ ತಲಸಾನಿ ಶ್ರೀನಿವಾಸ್ ಯಾದವ್‌ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಏಷ್ಯಾಕಪ್‌: ಶ್ರೀಲಂಕಾ ಭಾವುಟ ಹಿಡಿದು ಸಂಭ್ರಮಿಸಿದ ಗೌತಮ್‌ ಗಂಭೀರ್‌

ನೆಲ ಮಹಡಿ ಸೇರಿದಂತೆ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ತುರ್ತು ನಿರ್ಗಮನದ ಮಾರ್ಗವಿಲ್ಲದ ಕಾರಣ ಏಳು ಮಂದಿ ವಿವಿಧ ಮಹಡಿಗಳಿಂದ ಜಿಗಿದಿದ್ದಾರೆ. ಕೆಲವರು ಪೈಪ್‌ಲೈನ್‌ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳ ಹೈಡ್ರಾಲಿಕ್ ಎಲಿವೇಟರ್ ಬಳಸಿ ನಾಲ್ವರನ್ನು ರಕ್ಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...