Homeಮುಖಪುಟಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ...10 ಪಾಯಿಂಟ್ಸ್‌‌

ಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ…10 ಪಾಯಿಂಟ್ಸ್‌‌

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬುಧವಾರದಂದು ಪ್ರತಿಭಟನೆಗಳ ಮಧ್ಯೆ ಪಂಜಾಬ್‌‌ ಚುನಾವಣಾ ಪ್ರಚಾರ ರ್‍ಯಾಲಿಯನ್ನು ರದ್ದುಗೊಳಿಸಿ ವಾಪಾಸಾಗಿದ್ದಾರೆ. ಒಕ್ಕೂಟ ಸರ್ಕಾರದ ಗೃಹ ಸಚಿವಾಲಯ ಇದನ್ನು ‘ಭದ್ರತಾ ಲೋಪ’ ಎಂದು ಕರೆದಿದ್ದು, ಇದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ದೂರಿದೆ. ಆದರೆ ಇದನ್ನು ನಿರಾಕರಿಸಿರುವ ಪಂಜಾಬ್‌ ಮುಖ್ಯಮಂತ್ರಿ, ತಮ್ಮ ಸರ್ಕಾರದ ಕಡೆಯಿಂದ ಯಾವುದೇ ಭದ್ರತಾ ಲೋಪ ಆಗಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದೀಗ ವಿವಾದ ಸುಪ್ರೀಂ ಕೋರ್ಟ್‌ಗೆ ತಲುಪಿದ್ದು, ಶುಕ್ರವಾರ ವಿಚಾರಣೆ ನಡೆಯುವ ಸಾಧ್ಯತೆಯಿದೆ. ಈ ಮಧ್ಯೆ, ರಾಜ್ಯ ಸರ್ಕಾರವು ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ತಂಡವನ್ನು ರಚಿಸಿದೆ.

ಸುದ್ದಿಯ ಟಾಪ್ 10 ಅಂಶಗಳು ಹೀಗಿವೆ:

  • ಹಿರಿಯ ವಕೀಲ ಮಣಿಂದರ್ ಸಿಂಗ್ ಅವರು ಘಟನೆಗೆ ಪಂಜಾಬ್ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಿ, ತಕ್ಷಣವೇ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ಕ್ರಮ ಗೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಮುಂದಕ್ಕೆ ಹೀಗಾಗದಂತೆ ನೋಡಿಕೊಳ್ಳಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
  • ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಅರ್ಜಿಯ ಪ್ರತಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಮಣಿಂದರ್‌‌ ಸಿಂಗ್ ಅವರನ್ನು ಕೇಳಿದ್ದು, ಅರ್ಜಿಯನ್ನು ನಾಳೆ (ಶುಕ್ರವಾರ) ವಿಚಾರಣೆ ನಡೆಸಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

  • ಪಂಜಾಬ್ ಸರ್ಕಾರ ಕೂಡಾ ಘಟನೆಯ ಬಗ್ಗೆ ತನಿಖೆ ನಡೆಸಲು ಇಬ್ಬರು ಸದಸ್ಯರ ಸಮಿತಿಯನ್ನು ರಚಿಸಿದೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಮೆಹ್ತಾಬ್ ಗಿಲ್ ಹಾಗೂ ಗೃಹ ವ್ಯವಹಾರಗಳು ಮತ್ತು ನ್ಯಾಯಾಂಗ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನುರಾಗ್ ವರ್ಮಾ ಅವರು ಈ ಸಮಿತಿಯಲ್ಲಿದ್ದು ಮೂರು ದಿನಗಳಲ್ಲಿ ವರದಿ ಸಲ್ಲಿಸಲಿದ್ದಾರೆ.
  • ಚುನಾವಣಾ ರ್‍ಯಾಲಿಗಾಗಿ ತೆರಳುತ್ತಿದ್ದ ಪ್ರಧಾನಿ ಮೋದಿ ಫ್ಲೈಓವರ್‌ನಲ್ಲಿ 20 ನಿಮಿಷಗಳ ಕಾಲ ತಡೆಯಲ್ಪಟ್ಟಿದ್ದರು.
  • ಈ ಮೊದಲು ಹೆಲಿಕಾಪ್ಟರ್ ಮೂಲಕ ರ್‍ಯಾಲಿಗೆ ತೆರಳುವುದು ಎಂದು ನಿರ್ಧರಿಸಲಾಗಿತ್ತು. ಆದರೆ ಮೋಡ ಕವಿದ ವಾತಾವರಣದ ಕಾರಣ ಅದನ್ನು ಕೈಬಿಟ್ಟು, ಸುಮಾರು ಎರಡು ಗಂಟೆಗಳ ಕಾಲ 111 ಕಿಮೀ ರಸ್ತೆ ಮಾರ್ಗದಿಂದ ತೆರಳುವುದಾಗಿ ನಿರ್ಧರಿಸಲಾಗಿತ್ತು. ಆದರೆ ಅವರ ಬೆಂಗಾವಲನ್ನು ರ್‍ಯಾಲಿಗಿಂತ 10 ಕಿ.ಮೀ ದೂರದಲ್ಲಿ ತಡೆಯಲಾಗಿತ್ತು.
  • ಪ್ರಧಾನಿಯ ಕಾರು ಫ್ಲೈಓವರ್‌ನಲ್ಲಿ ಕಾಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ವಿಡಿಯೊದಲ್ಲಿ, ಬಿಜೆಪಿಯ ದ್ವಜವನ್ನು ಬೀಸುತ್ತಾ, ನರೇಂದ್ರ ಮೋದಿ ಜಿಂದಾಬಾದ್ ಎಂದು ಘೋಷಣೆ ಕೂಗುವ ಗುಂಪೊಂದು ಪ್ರಧಾನಿಯ ಕಾರಿನ ಹತ್ತಿರದಲ್ಲೇ ಇರುವುದನ್ನು ಕಾಣಬಹುದು.

ಇದನ್ನೂ ಓದಿ:ಪ್ರಧಾನಿ ಭೇಟಿ ನೀಡಿದ ಒಂದು ದಿನದ ನಂತರ ಮಣಿಪುರದಲ್ಲಿ ಬಾಂಬ್ ಸ್ಪೋಟ; ಒಬ್ಬ ಯೋಧ ಸಾವು

  • ವಿಶೇಷ ರಕ್ಷಣಾ ಗುಂಪಿನ ಸದಸ್ಯರು ವಾಹನದ ಸುತ್ತಲೂ ವೃತ್ತಾಕಾರದಲ್ಲಿ ನಿಂತಿದ್ದರೆ, ಪ್ರಧಾನಿ ಒಳಗೆ ಕುಳಿತಿರುವುದನ್ನು ಕಾಣಬಹುದು. ಪ್ರಧಾನ ಮಂತ್ರಿಯವರ ಕಾರಿಗೆ ರಕ್ಷಣೆಯ ಮತ್ತೊಂದು ಪದರವನ್ನು ರೂಪಿಸಲು ಮೋಟಾರ್‌ಕೇಡ್‌ನಲ್ಲಿರುವ ಇತರ ಕಾರುಗಳನ್ನು ಸ್ಥಳಾಂತರಿಸಲಾಯಿತು.
  • ಪ್ರೋಟೋಕಾಲ್‌ಗೆ ಅನುಗುಣವಾಗಿ ಪ್ರಧಾನಿ ಭೇಟಿಗೆ ಆಕಸ್ಮಿಕ ಮಾರ್ಗವನ್ನು ಸಿದ್ಧಪಡಿಸುವಲ್ಲಿ ಪಂಜಾಬ್ ಪೊಲೀಸರು ವಿಫಲವಾಗಿದ್ದಾರೆ ಎಂದು ಗೃಹ ಸಚಿವಾಲಯ ಟೀಕಿಸಿದೆ.
  • ಸಚಿವೆ ಸ್ಮೃತಿ ಇರಾನಿ ಅವರು ಕಾಂಗ್ರೆಸ್‌ ಪಕ್ಷವು ಪ್ರಧಾನಿಯನ್ನು ಕೊಲ್ಲಲು ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ.
  • ಆದರೆ ಇದನ್ನು ಕಾಂಗ್ರೆಸ್ ನಿರಾಕರಿಸಿದ್ದು, ರ್‍ಯಾಲಿಗೆ ವಿಸ್ತಾರವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಆದರೆ ರಸ್ತೆ ಮಾರ್ಗವು ಅವರ ಮೂಲ ವೇಳಾಪಟ್ಟಿಯ ಭಾಗವಾಗಿ ಇರಲಿಲ್ಲ ಎಂದು ಹೇಳಿದೆ.
  • ಪಂಜಾಬ್ ಮುಖ್ಯಮಂತ್ರಿ ಚನ್ನಿ ಅವರು, “ಒಬ್ಬ ಪಂಜಾಬಿಯಾಗಿ, ಪ್ರಧಾನಿಯನ್ನು ರಕ್ಷಿಸಲು ನಾನು ಪ್ರಾಣ ಕೊಡಲು ತಯಾರಿದ್ದೇನೆ. …ಆದರೆ ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ. ಯಾವುದೇ ಭದ್ರತಾ ಲೋಪವಾಗಿಲ್ಲ” ಎಂದು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ:ಪಂಜಾಬ್: ಪ್ರಧಾನಿ ಕಾರ್ಯಕ್ರಮ ರದ್ದು; ಏನಂತಾರೆ ನೆಟ್ಟಿಗರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...