Homeಮುಖಪುಟಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ...10 ಪಾಯಿಂಟ್ಸ್‌‌

ಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ…10 ಪಾಯಿಂಟ್ಸ್‌‌

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬುಧವಾರದಂದು ಪ್ರತಿಭಟನೆಗಳ ಮಧ್ಯೆ ಪಂಜಾಬ್‌‌ ಚುನಾವಣಾ ಪ್ರಚಾರ ರ್‍ಯಾಲಿಯನ್ನು ರದ್ದುಗೊಳಿಸಿ ವಾಪಾಸಾಗಿದ್ದಾರೆ. ಒಕ್ಕೂಟ ಸರ್ಕಾರದ ಗೃಹ ಸಚಿವಾಲಯ ಇದನ್ನು ‘ಭದ್ರತಾ ಲೋಪ’ ಎಂದು ಕರೆದಿದ್ದು, ಇದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ದೂರಿದೆ. ಆದರೆ ಇದನ್ನು ನಿರಾಕರಿಸಿರುವ ಪಂಜಾಬ್‌ ಮುಖ್ಯಮಂತ್ರಿ, ತಮ್ಮ ಸರ್ಕಾರದ ಕಡೆಯಿಂದ ಯಾವುದೇ ಭದ್ರತಾ ಲೋಪ ಆಗಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದೀಗ ವಿವಾದ ಸುಪ್ರೀಂ ಕೋರ್ಟ್‌ಗೆ ತಲುಪಿದ್ದು, ಶುಕ್ರವಾರ ವಿಚಾರಣೆ ನಡೆಯುವ ಸಾಧ್ಯತೆಯಿದೆ. ಈ ಮಧ್ಯೆ, ರಾಜ್ಯ ಸರ್ಕಾರವು ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ತಂಡವನ್ನು ರಚಿಸಿದೆ.

ಸುದ್ದಿಯ ಟಾಪ್ 10 ಅಂಶಗಳು ಹೀಗಿವೆ:

  • ಹಿರಿಯ ವಕೀಲ ಮಣಿಂದರ್ ಸಿಂಗ್ ಅವರು ಘಟನೆಗೆ ಪಂಜಾಬ್ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಿ, ತಕ್ಷಣವೇ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ಕ್ರಮ ಗೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಮುಂದಕ್ಕೆ ಹೀಗಾಗದಂತೆ ನೋಡಿಕೊಳ್ಳಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
  • ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಅರ್ಜಿಯ ಪ್ರತಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಮಣಿಂದರ್‌‌ ಸಿಂಗ್ ಅವರನ್ನು ಕೇಳಿದ್ದು, ಅರ್ಜಿಯನ್ನು ನಾಳೆ (ಶುಕ್ರವಾರ) ವಿಚಾರಣೆ ನಡೆಸಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

  • ಪಂಜಾಬ್ ಸರ್ಕಾರ ಕೂಡಾ ಘಟನೆಯ ಬಗ್ಗೆ ತನಿಖೆ ನಡೆಸಲು ಇಬ್ಬರು ಸದಸ್ಯರ ಸಮಿತಿಯನ್ನು ರಚಿಸಿದೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಮೆಹ್ತಾಬ್ ಗಿಲ್ ಹಾಗೂ ಗೃಹ ವ್ಯವಹಾರಗಳು ಮತ್ತು ನ್ಯಾಯಾಂಗ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನುರಾಗ್ ವರ್ಮಾ ಅವರು ಈ ಸಮಿತಿಯಲ್ಲಿದ್ದು ಮೂರು ದಿನಗಳಲ್ಲಿ ವರದಿ ಸಲ್ಲಿಸಲಿದ್ದಾರೆ.
  • ಚುನಾವಣಾ ರ್‍ಯಾಲಿಗಾಗಿ ತೆರಳುತ್ತಿದ್ದ ಪ್ರಧಾನಿ ಮೋದಿ ಫ್ಲೈಓವರ್‌ನಲ್ಲಿ 20 ನಿಮಿಷಗಳ ಕಾಲ ತಡೆಯಲ್ಪಟ್ಟಿದ್ದರು.
  • ಈ ಮೊದಲು ಹೆಲಿಕಾಪ್ಟರ್ ಮೂಲಕ ರ್‍ಯಾಲಿಗೆ ತೆರಳುವುದು ಎಂದು ನಿರ್ಧರಿಸಲಾಗಿತ್ತು. ಆದರೆ ಮೋಡ ಕವಿದ ವಾತಾವರಣದ ಕಾರಣ ಅದನ್ನು ಕೈಬಿಟ್ಟು, ಸುಮಾರು ಎರಡು ಗಂಟೆಗಳ ಕಾಲ 111 ಕಿಮೀ ರಸ್ತೆ ಮಾರ್ಗದಿಂದ ತೆರಳುವುದಾಗಿ ನಿರ್ಧರಿಸಲಾಗಿತ್ತು. ಆದರೆ ಅವರ ಬೆಂಗಾವಲನ್ನು ರ್‍ಯಾಲಿಗಿಂತ 10 ಕಿ.ಮೀ ದೂರದಲ್ಲಿ ತಡೆಯಲಾಗಿತ್ತು.
  • ಪ್ರಧಾನಿಯ ಕಾರು ಫ್ಲೈಓವರ್‌ನಲ್ಲಿ ಕಾಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ವಿಡಿಯೊದಲ್ಲಿ, ಬಿಜೆಪಿಯ ದ್ವಜವನ್ನು ಬೀಸುತ್ತಾ, ನರೇಂದ್ರ ಮೋದಿ ಜಿಂದಾಬಾದ್ ಎಂದು ಘೋಷಣೆ ಕೂಗುವ ಗುಂಪೊಂದು ಪ್ರಧಾನಿಯ ಕಾರಿನ ಹತ್ತಿರದಲ್ಲೇ ಇರುವುದನ್ನು ಕಾಣಬಹುದು.

ಇದನ್ನೂ ಓದಿ:ಪ್ರಧಾನಿ ಭೇಟಿ ನೀಡಿದ ಒಂದು ದಿನದ ನಂತರ ಮಣಿಪುರದಲ್ಲಿ ಬಾಂಬ್ ಸ್ಪೋಟ; ಒಬ್ಬ ಯೋಧ ಸಾವು

  • ವಿಶೇಷ ರಕ್ಷಣಾ ಗುಂಪಿನ ಸದಸ್ಯರು ವಾಹನದ ಸುತ್ತಲೂ ವೃತ್ತಾಕಾರದಲ್ಲಿ ನಿಂತಿದ್ದರೆ, ಪ್ರಧಾನಿ ಒಳಗೆ ಕುಳಿತಿರುವುದನ್ನು ಕಾಣಬಹುದು. ಪ್ರಧಾನ ಮಂತ್ರಿಯವರ ಕಾರಿಗೆ ರಕ್ಷಣೆಯ ಮತ್ತೊಂದು ಪದರವನ್ನು ರೂಪಿಸಲು ಮೋಟಾರ್‌ಕೇಡ್‌ನಲ್ಲಿರುವ ಇತರ ಕಾರುಗಳನ್ನು ಸ್ಥಳಾಂತರಿಸಲಾಯಿತು.
  • ಪ್ರೋಟೋಕಾಲ್‌ಗೆ ಅನುಗುಣವಾಗಿ ಪ್ರಧಾನಿ ಭೇಟಿಗೆ ಆಕಸ್ಮಿಕ ಮಾರ್ಗವನ್ನು ಸಿದ್ಧಪಡಿಸುವಲ್ಲಿ ಪಂಜಾಬ್ ಪೊಲೀಸರು ವಿಫಲವಾಗಿದ್ದಾರೆ ಎಂದು ಗೃಹ ಸಚಿವಾಲಯ ಟೀಕಿಸಿದೆ.
  • ಸಚಿವೆ ಸ್ಮೃತಿ ಇರಾನಿ ಅವರು ಕಾಂಗ್ರೆಸ್‌ ಪಕ್ಷವು ಪ್ರಧಾನಿಯನ್ನು ಕೊಲ್ಲಲು ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ.
  • ಆದರೆ ಇದನ್ನು ಕಾಂಗ್ರೆಸ್ ನಿರಾಕರಿಸಿದ್ದು, ರ್‍ಯಾಲಿಗೆ ವಿಸ್ತಾರವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಆದರೆ ರಸ್ತೆ ಮಾರ್ಗವು ಅವರ ಮೂಲ ವೇಳಾಪಟ್ಟಿಯ ಭಾಗವಾಗಿ ಇರಲಿಲ್ಲ ಎಂದು ಹೇಳಿದೆ.
  • ಪಂಜಾಬ್ ಮುಖ್ಯಮಂತ್ರಿ ಚನ್ನಿ ಅವರು, “ಒಬ್ಬ ಪಂಜಾಬಿಯಾಗಿ, ಪ್ರಧಾನಿಯನ್ನು ರಕ್ಷಿಸಲು ನಾನು ಪ್ರಾಣ ಕೊಡಲು ತಯಾರಿದ್ದೇನೆ. …ಆದರೆ ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ. ಯಾವುದೇ ಭದ್ರತಾ ಲೋಪವಾಗಿಲ್ಲ” ಎಂದು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ:ಪಂಜಾಬ್: ಪ್ರಧಾನಿ ಕಾರ್ಯಕ್ರಮ ರದ್ದು; ಏನಂತಾರೆ ನೆಟ್ಟಿಗರು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...