Homeಮುಖಪುಟಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ...10 ಪಾಯಿಂಟ್ಸ್‌‌

ಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ…10 ಪಾಯಿಂಟ್ಸ್‌‌

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬುಧವಾರದಂದು ಪ್ರತಿಭಟನೆಗಳ ಮಧ್ಯೆ ಪಂಜಾಬ್‌‌ ಚುನಾವಣಾ ಪ್ರಚಾರ ರ್‍ಯಾಲಿಯನ್ನು ರದ್ದುಗೊಳಿಸಿ ವಾಪಾಸಾಗಿದ್ದಾರೆ. ಒಕ್ಕೂಟ ಸರ್ಕಾರದ ಗೃಹ ಸಚಿವಾಲಯ ಇದನ್ನು ‘ಭದ್ರತಾ ಲೋಪ’ ಎಂದು ಕರೆದಿದ್ದು, ಇದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ದೂರಿದೆ. ಆದರೆ ಇದನ್ನು ನಿರಾಕರಿಸಿರುವ ಪಂಜಾಬ್‌ ಮುಖ್ಯಮಂತ್ರಿ, ತಮ್ಮ ಸರ್ಕಾರದ ಕಡೆಯಿಂದ ಯಾವುದೇ ಭದ್ರತಾ ಲೋಪ ಆಗಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದೀಗ ವಿವಾದ ಸುಪ್ರೀಂ ಕೋರ್ಟ್‌ಗೆ ತಲುಪಿದ್ದು, ಶುಕ್ರವಾರ ವಿಚಾರಣೆ ನಡೆಯುವ ಸಾಧ್ಯತೆಯಿದೆ. ಈ ಮಧ್ಯೆ, ರಾಜ್ಯ ಸರ್ಕಾರವು ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ತಂಡವನ್ನು ರಚಿಸಿದೆ.

ಸುದ್ದಿಯ ಟಾಪ್ 10 ಅಂಶಗಳು ಹೀಗಿವೆ:

  • ಹಿರಿಯ ವಕೀಲ ಮಣಿಂದರ್ ಸಿಂಗ್ ಅವರು ಘಟನೆಗೆ ಪಂಜಾಬ್ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಿ, ತಕ್ಷಣವೇ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ಕ್ರಮ ಗೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಮುಂದಕ್ಕೆ ಹೀಗಾಗದಂತೆ ನೋಡಿಕೊಳ್ಳಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
  • ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಅರ್ಜಿಯ ಪ್ರತಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಮಣಿಂದರ್‌‌ ಸಿಂಗ್ ಅವರನ್ನು ಕೇಳಿದ್ದು, ಅರ್ಜಿಯನ್ನು ನಾಳೆ (ಶುಕ್ರವಾರ) ವಿಚಾರಣೆ ನಡೆಸಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

  • ಪಂಜಾಬ್ ಸರ್ಕಾರ ಕೂಡಾ ಘಟನೆಯ ಬಗ್ಗೆ ತನಿಖೆ ನಡೆಸಲು ಇಬ್ಬರು ಸದಸ್ಯರ ಸಮಿತಿಯನ್ನು ರಚಿಸಿದೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಮೆಹ್ತಾಬ್ ಗಿಲ್ ಹಾಗೂ ಗೃಹ ವ್ಯವಹಾರಗಳು ಮತ್ತು ನ್ಯಾಯಾಂಗ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನುರಾಗ್ ವರ್ಮಾ ಅವರು ಈ ಸಮಿತಿಯಲ್ಲಿದ್ದು ಮೂರು ದಿನಗಳಲ್ಲಿ ವರದಿ ಸಲ್ಲಿಸಲಿದ್ದಾರೆ.
  • ಚುನಾವಣಾ ರ್‍ಯಾಲಿಗಾಗಿ ತೆರಳುತ್ತಿದ್ದ ಪ್ರಧಾನಿ ಮೋದಿ ಫ್ಲೈಓವರ್‌ನಲ್ಲಿ 20 ನಿಮಿಷಗಳ ಕಾಲ ತಡೆಯಲ್ಪಟ್ಟಿದ್ದರು.
  • ಈ ಮೊದಲು ಹೆಲಿಕಾಪ್ಟರ್ ಮೂಲಕ ರ್‍ಯಾಲಿಗೆ ತೆರಳುವುದು ಎಂದು ನಿರ್ಧರಿಸಲಾಗಿತ್ತು. ಆದರೆ ಮೋಡ ಕವಿದ ವಾತಾವರಣದ ಕಾರಣ ಅದನ್ನು ಕೈಬಿಟ್ಟು, ಸುಮಾರು ಎರಡು ಗಂಟೆಗಳ ಕಾಲ 111 ಕಿಮೀ ರಸ್ತೆ ಮಾರ್ಗದಿಂದ ತೆರಳುವುದಾಗಿ ನಿರ್ಧರಿಸಲಾಗಿತ್ತು. ಆದರೆ ಅವರ ಬೆಂಗಾವಲನ್ನು ರ್‍ಯಾಲಿಗಿಂತ 10 ಕಿ.ಮೀ ದೂರದಲ್ಲಿ ತಡೆಯಲಾಗಿತ್ತು.
  • ಪ್ರಧಾನಿಯ ಕಾರು ಫ್ಲೈಓವರ್‌ನಲ್ಲಿ ಕಾಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ವಿಡಿಯೊದಲ್ಲಿ, ಬಿಜೆಪಿಯ ದ್ವಜವನ್ನು ಬೀಸುತ್ತಾ, ನರೇಂದ್ರ ಮೋದಿ ಜಿಂದಾಬಾದ್ ಎಂದು ಘೋಷಣೆ ಕೂಗುವ ಗುಂಪೊಂದು ಪ್ರಧಾನಿಯ ಕಾರಿನ ಹತ್ತಿರದಲ್ಲೇ ಇರುವುದನ್ನು ಕಾಣಬಹುದು.

ಇದನ್ನೂ ಓದಿ:ಪ್ರಧಾನಿ ಭೇಟಿ ನೀಡಿದ ಒಂದು ದಿನದ ನಂತರ ಮಣಿಪುರದಲ್ಲಿ ಬಾಂಬ್ ಸ್ಪೋಟ; ಒಬ್ಬ ಯೋಧ ಸಾವು

  • ವಿಶೇಷ ರಕ್ಷಣಾ ಗುಂಪಿನ ಸದಸ್ಯರು ವಾಹನದ ಸುತ್ತಲೂ ವೃತ್ತಾಕಾರದಲ್ಲಿ ನಿಂತಿದ್ದರೆ, ಪ್ರಧಾನಿ ಒಳಗೆ ಕುಳಿತಿರುವುದನ್ನು ಕಾಣಬಹುದು. ಪ್ರಧಾನ ಮಂತ್ರಿಯವರ ಕಾರಿಗೆ ರಕ್ಷಣೆಯ ಮತ್ತೊಂದು ಪದರವನ್ನು ರೂಪಿಸಲು ಮೋಟಾರ್‌ಕೇಡ್‌ನಲ್ಲಿರುವ ಇತರ ಕಾರುಗಳನ್ನು ಸ್ಥಳಾಂತರಿಸಲಾಯಿತು.
  • ಪ್ರೋಟೋಕಾಲ್‌ಗೆ ಅನುಗುಣವಾಗಿ ಪ್ರಧಾನಿ ಭೇಟಿಗೆ ಆಕಸ್ಮಿಕ ಮಾರ್ಗವನ್ನು ಸಿದ್ಧಪಡಿಸುವಲ್ಲಿ ಪಂಜಾಬ್ ಪೊಲೀಸರು ವಿಫಲವಾಗಿದ್ದಾರೆ ಎಂದು ಗೃಹ ಸಚಿವಾಲಯ ಟೀಕಿಸಿದೆ.
  • ಸಚಿವೆ ಸ್ಮೃತಿ ಇರಾನಿ ಅವರು ಕಾಂಗ್ರೆಸ್‌ ಪಕ್ಷವು ಪ್ರಧಾನಿಯನ್ನು ಕೊಲ್ಲಲು ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ.
  • ಆದರೆ ಇದನ್ನು ಕಾಂಗ್ರೆಸ್ ನಿರಾಕರಿಸಿದ್ದು, ರ್‍ಯಾಲಿಗೆ ವಿಸ್ತಾರವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಆದರೆ ರಸ್ತೆ ಮಾರ್ಗವು ಅವರ ಮೂಲ ವೇಳಾಪಟ್ಟಿಯ ಭಾಗವಾಗಿ ಇರಲಿಲ್ಲ ಎಂದು ಹೇಳಿದೆ.
  • ಪಂಜಾಬ್ ಮುಖ್ಯಮಂತ್ರಿ ಚನ್ನಿ ಅವರು, “ಒಬ್ಬ ಪಂಜಾಬಿಯಾಗಿ, ಪ್ರಧಾನಿಯನ್ನು ರಕ್ಷಿಸಲು ನಾನು ಪ್ರಾಣ ಕೊಡಲು ತಯಾರಿದ್ದೇನೆ. …ಆದರೆ ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ. ಯಾವುದೇ ಭದ್ರತಾ ಲೋಪವಾಗಿಲ್ಲ” ಎಂದು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ:ಪಂಜಾಬ್: ಪ್ರಧಾನಿ ಕಾರ್ಯಕ್ರಮ ರದ್ದು; ಏನಂತಾರೆ ನೆಟ್ಟಿಗರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...