Homeಮುಖಪುಟರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಬಿಜೆಪಿ ಸರಕಾರಗಳಿಂದ ಹರಸಾಹಸ: ಅಶ್ರುವಾಯು ಪ್ರಯೋಗ, ಗಡಿ ಪ್ರದೇಶದಲ್ಲಿ ಹೈ...

ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಬಿಜೆಪಿ ಸರಕಾರಗಳಿಂದ ಹರಸಾಹಸ: ಅಶ್ರುವಾಯು ಪ್ರಯೋಗ, ಗಡಿ ಪ್ರದೇಶದಲ್ಲಿ ಹೈ ಅಲರ್ಟ್‌

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಮಖಂಡರು ಮತ್ತು ಕೇಂದ್ರ ಸರಕಾರದ ನಡುವಿನ ನಾಲ್ಕನೇ ಸುತ್ತಿನ ಮಾತುಕತೆ ವಿಫಲವಾದ ಬೆನ್ನಲ್ಲಿ ಕೇಂದ್ರದ ಐದು ವರ್ಷಗಳ ಎಂಎಸ್‌ಪಿ ಗ್ಯಾರೆಂಟಿಯನ್ನು ತಿರಸ್ಕರಿಸಿ ರೈತ ಮುಖಂಡರು ದೆಹಲಿ ಚಲೋ ಪ್ರತಿಭಟನೆಯನ್ನು ಮತ್ತೆ ಮುಂದುವರಿಸಿದ್ದು, ಪಂಜಾಬ್-ಹರ್ಯಾಣ ಗಡಿಯಲ್ಲಿ ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಬಳಸಲಾಗಿದೆ. ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಹರ್ಯಾಣದ ಬಿಜೆಪಿ ಸರಕಾರ ಮತ್ತು ಕೇಂದ್ರ ಸರಕಾರ ಸತಾಯಗತಾಯ ಪ್ರಯತ್ನಿಸುತ್ತಿದೆ.

ಪ್ರತಿಭಟನೆಯಿಂದಾಗಿ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಟ್ರಾಫಿಕ್ ಜಾಮ್‌ಗಳು ಉಂಟಾಗಿದೆ. ದೆಹಲಿಯಲ್ಲಿ ಕೂಡ ಭಾರೀ ಜನಸಂದಣಿ ಕಂಡು ಬಂದಿದೆ. ಶಂಭು ಗಡಿಯಲ್ಲಿ 14,000 ಜನರು ಮತ್ತು 1,200 ಟ್ರಾಕ್ಟರ್‌ಗಳಿದೆ. ರೈತರ ದೆಹಲಿ ಚಲೋ ಹಿನ್ನೆಲೆ ರೈತರಿಂದ ಮಣ್ಣು ತೆಗೆಯುವ ಉಪಕರಣಗಳನ್ನು ವಶಪಡಿಸಿಕೊಳ್ಳಿ ಎಂದು ಪಂಜಾಬ್‌ ಪೊಲೀಸರಿಗೆ ಹರ್ಯಾಣ ಡಿಜಿಪಿ ಆಗ್ರಹಿಸಿದ್ದಾರೆ.

ರೈತರು ಶಂಭು ಗಡಿಯಿಂದ ದೆಹಲಿಯತ್ತ ಮೆರವಣಿಗೆ ಆರಂಭಿಸಿದಾಗ ಹರಿಯಾಣ ಪೊಲೀಸರು ಯಾವುದೇ ಪ್ರಚೋದನೆ ಇಲ್ಲದೆ 14 ಅಶ್ರುವಾಯು ಶೆಲ್‌ಗಳನ್ನು ಬಳಸಿದ್ದಾರೆ ಎಂದು ಪಟಿಯಾಲಾ ರೇಂಜ್‌ನ ಡಿಐಜಿ ಎಚ್‌ಎಸ್ ಭುಲ್ಲಾರ್ ಬುಧವಾರ ಹೇಳಿದ್ದಾರೆ.

ಈ ಮಧ್ಯೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಬುಧವಾರ ಮತ್ತೆ ರೈತ ಮುಖಂಡರನ್ನು ಎಂಎಸ್‌ಪಿ ವಿಷಯದ ಕುರಿತು ಚರ್ಚೆಗೆ ಆಹ್ವಾನಿಸಿದ್ದಾರೆ. ಐದನೇ ಸುತ್ತಿನಲ್ಲಿ ಎಂಎಸ್‌ಪಿ ಬೇಡಿಕೆ, ಬೆಳೆ ವೈವಿಧ್ಯೀಕರಣ, ರೈತರ ಮೇಲಿನ ಎಫ್‌ಐಆರ್‌ ಸೇರಿ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್, ಶಂಭು ಗಡಿಯಲ್ಲಿ ರೈತರೊಂದಿಗೆ ಮಾತನಾಡುತ್ತಾ, ನೀವು ಹಿಂದೆ ಇರಿ, ನಾವು ಮೆರವಣಿಗೆಯನ್ನು ಮುನ್ನಡೆಸುತ್ತೇವೆ. ಯಂತ್ರಗಳನ್ನು ನಿಲ್ಲಿಸೋಣ ಮತ್ತು ನಾವು ನಡೆಯೋಣ ಎಂದು ಹೇಳಿದ್ದಾರೆ.

ಎಲ್ಲ ಕಡೆಯೂ ರಾಜಕೀಯ ನಡೆಯುತ್ತಿದೆ. ಪಂಜಾಬ್ ಈ ಯಂತ್ರಗಳನ್ನು/ಪ್ರತಿಭಟನಕಾರರನ್ನು ಮೊದಲೇ ಏಕೆ ನಿಲ್ಲಿಸಲಿಲ್ಲ? ಎಂದು ಪಂಜಾಬ್‌ ಹರ್ಯಾಣ ಹೈಕೋರ್ಟ್‌ ಪ್ರಶ್ನಿಸಿತ್ತು. ಹರ್ಯಾಣ ಸರ್ಕಾರವು ಬುಧವಾರ ಮತ್ತೆ ಹೈಕೋರ್ಟ್‌ ಮೊರೆ ಹೋಗಿದ್ದು, ರೈತರು ತಮ್ಮ ಉಪಕರಣಗಳೊಂದಿಗೆ ಮುಂದುವರಿಯುವುದನ್ನು ತಡೆಯಲು ನಿರ್ದೇಶನಗಳನ್ನು ಕೋರಿದೆ.

ಪ್ರತಿಭಟನೆಯ ಬಗ್ಗೆ ಮಾದ್ಯಮವನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡರಾದ ಸರ್ವಾನ್ ಸಿಂಗ್ ಪಂಧೇರ್ ಮತ್ತು ದಲ್ಲೆವಾಲ್ ಅವರು ಶಂಭು ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಲು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರಿಂದಾಗಿ ದೆಹಲಿಗೆ ಶಾಂತಿಯುತವಾಗಿ ಮೆರವಣಿಗೆ ನಡೆಸಬಹುದು. ಇದಲ್ಲದೆ ರಾಷ್ಟ್ರದ ಹಿತಾಸಕ್ತಿಗಾಗಿ ಸಾಯಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಬುಧವಾರ ಬೆಳಗ್ಗೆ 11 ಗಂಟೆಗೆ ಗಡಿ ಪ್ರದೇಶವಾದ ಶಂಭು ಮತ್ತು ಖಾನೌರಿಯಿಂದ ದೆಹಲಿಗೆ ರೈತರ ಪ್ರತಿಭಟನಾ ಮೆರವಣಿಗೆ ಆರಂಭವಾದ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರ ಭದ್ರತಾ ಕ್ರಮಗಳನ್ನು ಹೆಚ್ಚಿಸಿದೆ.

ರೈತ ಸಂಘಟನೆಗಳು ದೆಹಲಿಯತ್ತ ಪಾದಯಾತ್ರೆಗೆ ಸಿದ್ಧತೆ ನಡೆಸಿದ್ದು, ಶಂಭು ಗಡಿಯಲ್ಲಿ ರೈತ ಸಂಘಟನೆಗಳು ಮಾನವ ಸರಪಳಿ ನಿರ್ಮಿಸಿವೆ. ಒಂದು ಕಡೆ, ಅಗೆಯುವ ಯಂತ್ರಗಳು ಮತ್ತು ಟ್ರ್ಯಾಕ್ಟರ್‌ಗಳ ಸಾಲು ನಿಂತಿದ್ದರೆ, ಇನ್ನೊಂದು ಕಡೆ ಬ್ಯಾರಿಕೇಡ್‌ಗಳನ್ನು ಮುರಿದು ರೈತರು ಹರ್ಯಾಣಕ್ಕೆ ಪ್ರವೇಶಿಸುವ ಬಗ್ಗೆ ಪೊಲೀಸರು ಅಲರ್ಟ್‌ನಲ್ಲಿದ್ದಾರೆ.

ಗಡಿ ಪ್ರದೇಶಗಳಲ್ಲಿ ಭಾರೀ ಭದ್ರತಾ ಕ್ರಮವನ್ನು ಕೈಗೊಳ್ಳಲಾಗಿದ್ದು, ದೆಹಲಿ ಪೊಲೀಸ್ ಸಿಬ್ಬಂದಿಗಳ ಎಲ್ಲಾ ರಜೆಗಳನ್ನು ರದ್ದುಗೊಳಿಸಲಾಗಿದೆ. ಕೆಂಪು ಕೋಟೆ ಮತ್ತು ಇಂಡಿಯಾ ಗೇಟ್‌ನಂತಹ ಐತಿಹಾಸಿಕ ಸ್ಥಳಗಳಿಗೆ ಭಾರೀ ಭದ್ರತೆ ಒದಗಿಸಲಾಗಿದೆ. ಪಂಜಾಬ್ ಮತ್ತು ಹರ್ಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಗಡಿಗಳು ಸಂಘರ್ಷದ ಕೇಂದ್ರ ಬಿಂದುಗಳಾಗಿವೆ. ಅಗೆಯುವ ಯಂತ್ರಗಳನ್ನು ಹೊಂದಿದ ರೈತರು, ಹರ್ಯಾಣ ಭದ್ರತಾ ಸಿಬ್ಬಂದಿ ನಿರ್ಮಿಸಿದ ಬ್ಯಾರಿಕೇಡ್‌ಗಳನ್ನು ಭೇದಿಸಲು ನಿರ್ಧರಿಸಿದ್ದಾರೆ.

ರೈತರ ಬೇಡಿಕೆಯೇನು? 

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಫೆಬ್ರವರಿ 13ರಿಂದ ಪಂಜಾಬ್-ಹರಿಯಾಣ ಗಡಿ ಪ್ರದೇಶಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ರೈತರು ಉದ್ದೇಶಿಸಿದ್ದ ದೆಹಲಿ ಚಲೋಗೆ ಬಿಜೆಪಿ ಸರಕಾರ ತಡೆದಿದ್ದು, ಸಿಂಘು ಬಾರ್ಡರ್, ಟಿಕ್ರಿ ಬಾರ್ಡರ್ ಮತ್ತು ಘಾಜಿಪುರ ಬಾರ್ಡರ್‌ಗಳಲ್ಲಿ ಮುಳ್ಳುತಂತಿ, ಮೊಳೆಗಳು, ಸಿಮೆಂಟ್ ಮತ್ತು ಕಲ್ಲಿನ ಗೋಡೆಗಳನ್ನು, ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ರೈತರು ದೆಹಲಿಗೆ ತೆರಳದಂತೆ ತಡೆದಿದ್ದರು.

23 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ರೈತರ ಸಾಲ ಮನ್ನಾ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರ ಹೆಚ್ಚಳ ಬೇಡ, ರೈತರ  ಮೇಲಿನ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು, ಭೂ ಸ್ವಾಧೀನ ಕಾಯಿದೆ ಮತ್ತು 2020-21ರ ಪ್ರತಿಭಟನೆ ವೇಳೆ ಮೃತ ರೈತರಿಗೆ ಪರಿಹಾರವನ್ನು ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಇದನ್ನು ಓದಿ: Fact check: ರಾಜ್ಯ ಬಜೆಟ್‌ಗೆ ಕೋಮು ಬಣ್ಣ ಬಳಿದ ಸಂಪಾದಕ, ಸತ್ಯಾಂಶ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...