Homeಮುಖಪುಟರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಬಿಜೆಪಿ ಸರಕಾರಗಳಿಂದ ಹರಸಾಹಸ: ಅಶ್ರುವಾಯು ಪ್ರಯೋಗ, ಗಡಿ ಪ್ರದೇಶದಲ್ಲಿ ಹೈ...

ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಬಿಜೆಪಿ ಸರಕಾರಗಳಿಂದ ಹರಸಾಹಸ: ಅಶ್ರುವಾಯು ಪ್ರಯೋಗ, ಗಡಿ ಪ್ರದೇಶದಲ್ಲಿ ಹೈ ಅಲರ್ಟ್‌

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಮಖಂಡರು ಮತ್ತು ಕೇಂದ್ರ ಸರಕಾರದ ನಡುವಿನ ನಾಲ್ಕನೇ ಸುತ್ತಿನ ಮಾತುಕತೆ ವಿಫಲವಾದ ಬೆನ್ನಲ್ಲಿ ಕೇಂದ್ರದ ಐದು ವರ್ಷಗಳ ಎಂಎಸ್‌ಪಿ ಗ್ಯಾರೆಂಟಿಯನ್ನು ತಿರಸ್ಕರಿಸಿ ರೈತ ಮುಖಂಡರು ದೆಹಲಿ ಚಲೋ ಪ್ರತಿಭಟನೆಯನ್ನು ಮತ್ತೆ ಮುಂದುವರಿಸಿದ್ದು, ಪಂಜಾಬ್-ಹರ್ಯಾಣ ಗಡಿಯಲ್ಲಿ ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಬಳಸಲಾಗಿದೆ. ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಹರ್ಯಾಣದ ಬಿಜೆಪಿ ಸರಕಾರ ಮತ್ತು ಕೇಂದ್ರ ಸರಕಾರ ಸತಾಯಗತಾಯ ಪ್ರಯತ್ನಿಸುತ್ತಿದೆ.

ಪ್ರತಿಭಟನೆಯಿಂದಾಗಿ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಟ್ರಾಫಿಕ್ ಜಾಮ್‌ಗಳು ಉಂಟಾಗಿದೆ. ದೆಹಲಿಯಲ್ಲಿ ಕೂಡ ಭಾರೀ ಜನಸಂದಣಿ ಕಂಡು ಬಂದಿದೆ. ಶಂಭು ಗಡಿಯಲ್ಲಿ 14,000 ಜನರು ಮತ್ತು 1,200 ಟ್ರಾಕ್ಟರ್‌ಗಳಿದೆ. ರೈತರ ದೆಹಲಿ ಚಲೋ ಹಿನ್ನೆಲೆ ರೈತರಿಂದ ಮಣ್ಣು ತೆಗೆಯುವ ಉಪಕರಣಗಳನ್ನು ವಶಪಡಿಸಿಕೊಳ್ಳಿ ಎಂದು ಪಂಜಾಬ್‌ ಪೊಲೀಸರಿಗೆ ಹರ್ಯಾಣ ಡಿಜಿಪಿ ಆಗ್ರಹಿಸಿದ್ದಾರೆ.

ರೈತರು ಶಂಭು ಗಡಿಯಿಂದ ದೆಹಲಿಯತ್ತ ಮೆರವಣಿಗೆ ಆರಂಭಿಸಿದಾಗ ಹರಿಯಾಣ ಪೊಲೀಸರು ಯಾವುದೇ ಪ್ರಚೋದನೆ ಇಲ್ಲದೆ 14 ಅಶ್ರುವಾಯು ಶೆಲ್‌ಗಳನ್ನು ಬಳಸಿದ್ದಾರೆ ಎಂದು ಪಟಿಯಾಲಾ ರೇಂಜ್‌ನ ಡಿಐಜಿ ಎಚ್‌ಎಸ್ ಭುಲ್ಲಾರ್ ಬುಧವಾರ ಹೇಳಿದ್ದಾರೆ.

ಈ ಮಧ್ಯೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಬುಧವಾರ ಮತ್ತೆ ರೈತ ಮುಖಂಡರನ್ನು ಎಂಎಸ್‌ಪಿ ವಿಷಯದ ಕುರಿತು ಚರ್ಚೆಗೆ ಆಹ್ವಾನಿಸಿದ್ದಾರೆ. ಐದನೇ ಸುತ್ತಿನಲ್ಲಿ ಎಂಎಸ್‌ಪಿ ಬೇಡಿಕೆ, ಬೆಳೆ ವೈವಿಧ್ಯೀಕರಣ, ರೈತರ ಮೇಲಿನ ಎಫ್‌ಐಆರ್‌ ಸೇರಿ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್, ಶಂಭು ಗಡಿಯಲ್ಲಿ ರೈತರೊಂದಿಗೆ ಮಾತನಾಡುತ್ತಾ, ನೀವು ಹಿಂದೆ ಇರಿ, ನಾವು ಮೆರವಣಿಗೆಯನ್ನು ಮುನ್ನಡೆಸುತ್ತೇವೆ. ಯಂತ್ರಗಳನ್ನು ನಿಲ್ಲಿಸೋಣ ಮತ್ತು ನಾವು ನಡೆಯೋಣ ಎಂದು ಹೇಳಿದ್ದಾರೆ.

ಎಲ್ಲ ಕಡೆಯೂ ರಾಜಕೀಯ ನಡೆಯುತ್ತಿದೆ. ಪಂಜಾಬ್ ಈ ಯಂತ್ರಗಳನ್ನು/ಪ್ರತಿಭಟನಕಾರರನ್ನು ಮೊದಲೇ ಏಕೆ ನಿಲ್ಲಿಸಲಿಲ್ಲ? ಎಂದು ಪಂಜಾಬ್‌ ಹರ್ಯಾಣ ಹೈಕೋರ್ಟ್‌ ಪ್ರಶ್ನಿಸಿತ್ತು. ಹರ್ಯಾಣ ಸರ್ಕಾರವು ಬುಧವಾರ ಮತ್ತೆ ಹೈಕೋರ್ಟ್‌ ಮೊರೆ ಹೋಗಿದ್ದು, ರೈತರು ತಮ್ಮ ಉಪಕರಣಗಳೊಂದಿಗೆ ಮುಂದುವರಿಯುವುದನ್ನು ತಡೆಯಲು ನಿರ್ದೇಶನಗಳನ್ನು ಕೋರಿದೆ.

ಪ್ರತಿಭಟನೆಯ ಬಗ್ಗೆ ಮಾದ್ಯಮವನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡರಾದ ಸರ್ವಾನ್ ಸಿಂಗ್ ಪಂಧೇರ್ ಮತ್ತು ದಲ್ಲೆವಾಲ್ ಅವರು ಶಂಭು ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಲು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರಿಂದಾಗಿ ದೆಹಲಿಗೆ ಶಾಂತಿಯುತವಾಗಿ ಮೆರವಣಿಗೆ ನಡೆಸಬಹುದು. ಇದಲ್ಲದೆ ರಾಷ್ಟ್ರದ ಹಿತಾಸಕ್ತಿಗಾಗಿ ಸಾಯಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಬುಧವಾರ ಬೆಳಗ್ಗೆ 11 ಗಂಟೆಗೆ ಗಡಿ ಪ್ರದೇಶವಾದ ಶಂಭು ಮತ್ತು ಖಾನೌರಿಯಿಂದ ದೆಹಲಿಗೆ ರೈತರ ಪ್ರತಿಭಟನಾ ಮೆರವಣಿಗೆ ಆರಂಭವಾದ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರ ಭದ್ರತಾ ಕ್ರಮಗಳನ್ನು ಹೆಚ್ಚಿಸಿದೆ.

ರೈತ ಸಂಘಟನೆಗಳು ದೆಹಲಿಯತ್ತ ಪಾದಯಾತ್ರೆಗೆ ಸಿದ್ಧತೆ ನಡೆಸಿದ್ದು, ಶಂಭು ಗಡಿಯಲ್ಲಿ ರೈತ ಸಂಘಟನೆಗಳು ಮಾನವ ಸರಪಳಿ ನಿರ್ಮಿಸಿವೆ. ಒಂದು ಕಡೆ, ಅಗೆಯುವ ಯಂತ್ರಗಳು ಮತ್ತು ಟ್ರ್ಯಾಕ್ಟರ್‌ಗಳ ಸಾಲು ನಿಂತಿದ್ದರೆ, ಇನ್ನೊಂದು ಕಡೆ ಬ್ಯಾರಿಕೇಡ್‌ಗಳನ್ನು ಮುರಿದು ರೈತರು ಹರ್ಯಾಣಕ್ಕೆ ಪ್ರವೇಶಿಸುವ ಬಗ್ಗೆ ಪೊಲೀಸರು ಅಲರ್ಟ್‌ನಲ್ಲಿದ್ದಾರೆ.

ಗಡಿ ಪ್ರದೇಶಗಳಲ್ಲಿ ಭಾರೀ ಭದ್ರತಾ ಕ್ರಮವನ್ನು ಕೈಗೊಳ್ಳಲಾಗಿದ್ದು, ದೆಹಲಿ ಪೊಲೀಸ್ ಸಿಬ್ಬಂದಿಗಳ ಎಲ್ಲಾ ರಜೆಗಳನ್ನು ರದ್ದುಗೊಳಿಸಲಾಗಿದೆ. ಕೆಂಪು ಕೋಟೆ ಮತ್ತು ಇಂಡಿಯಾ ಗೇಟ್‌ನಂತಹ ಐತಿಹಾಸಿಕ ಸ್ಥಳಗಳಿಗೆ ಭಾರೀ ಭದ್ರತೆ ಒದಗಿಸಲಾಗಿದೆ. ಪಂಜಾಬ್ ಮತ್ತು ಹರ್ಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಗಡಿಗಳು ಸಂಘರ್ಷದ ಕೇಂದ್ರ ಬಿಂದುಗಳಾಗಿವೆ. ಅಗೆಯುವ ಯಂತ್ರಗಳನ್ನು ಹೊಂದಿದ ರೈತರು, ಹರ್ಯಾಣ ಭದ್ರತಾ ಸಿಬ್ಬಂದಿ ನಿರ್ಮಿಸಿದ ಬ್ಯಾರಿಕೇಡ್‌ಗಳನ್ನು ಭೇದಿಸಲು ನಿರ್ಧರಿಸಿದ್ದಾರೆ.

ರೈತರ ಬೇಡಿಕೆಯೇನು? 

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಫೆಬ್ರವರಿ 13ರಿಂದ ಪಂಜಾಬ್-ಹರಿಯಾಣ ಗಡಿ ಪ್ರದೇಶಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ರೈತರು ಉದ್ದೇಶಿಸಿದ್ದ ದೆಹಲಿ ಚಲೋಗೆ ಬಿಜೆಪಿ ಸರಕಾರ ತಡೆದಿದ್ದು, ಸಿಂಘು ಬಾರ್ಡರ್, ಟಿಕ್ರಿ ಬಾರ್ಡರ್ ಮತ್ತು ಘಾಜಿಪುರ ಬಾರ್ಡರ್‌ಗಳಲ್ಲಿ ಮುಳ್ಳುತಂತಿ, ಮೊಳೆಗಳು, ಸಿಮೆಂಟ್ ಮತ್ತು ಕಲ್ಲಿನ ಗೋಡೆಗಳನ್ನು, ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ರೈತರು ದೆಹಲಿಗೆ ತೆರಳದಂತೆ ತಡೆದಿದ್ದರು.

23 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ರೈತರ ಸಾಲ ಮನ್ನಾ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರ ಹೆಚ್ಚಳ ಬೇಡ, ರೈತರ  ಮೇಲಿನ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು, ಭೂ ಸ್ವಾಧೀನ ಕಾಯಿದೆ ಮತ್ತು 2020-21ರ ಪ್ರತಿಭಟನೆ ವೇಳೆ ಮೃತ ರೈತರಿಗೆ ಪರಿಹಾರವನ್ನು ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಇದನ್ನು ಓದಿ: Fact check: ರಾಜ್ಯ ಬಜೆಟ್‌ಗೆ ಕೋಮು ಬಣ್ಣ ಬಳಿದ ಸಂಪಾದಕ, ಸತ್ಯಾಂಶ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...