Homeಮುಖಪುಟರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಬಿಜೆಪಿ ಸರಕಾರಗಳಿಂದ ಹರಸಾಹಸ: ಅಶ್ರುವಾಯು ಪ್ರಯೋಗ, ಗಡಿ ಪ್ರದೇಶದಲ್ಲಿ ಹೈ...

ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಬಿಜೆಪಿ ಸರಕಾರಗಳಿಂದ ಹರಸಾಹಸ: ಅಶ್ರುವಾಯು ಪ್ರಯೋಗ, ಗಡಿ ಪ್ರದೇಶದಲ್ಲಿ ಹೈ ಅಲರ್ಟ್‌

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಮಖಂಡರು ಮತ್ತು ಕೇಂದ್ರ ಸರಕಾರದ ನಡುವಿನ ನಾಲ್ಕನೇ ಸುತ್ತಿನ ಮಾತುಕತೆ ವಿಫಲವಾದ ಬೆನ್ನಲ್ಲಿ ಕೇಂದ್ರದ ಐದು ವರ್ಷಗಳ ಎಂಎಸ್‌ಪಿ ಗ್ಯಾರೆಂಟಿಯನ್ನು ತಿರಸ್ಕರಿಸಿ ರೈತ ಮುಖಂಡರು ದೆಹಲಿ ಚಲೋ ಪ್ರತಿಭಟನೆಯನ್ನು ಮತ್ತೆ ಮುಂದುವರಿಸಿದ್ದು, ಪಂಜಾಬ್-ಹರ್ಯಾಣ ಗಡಿಯಲ್ಲಿ ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಬಳಸಲಾಗಿದೆ. ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಹರ್ಯಾಣದ ಬಿಜೆಪಿ ಸರಕಾರ ಮತ್ತು ಕೇಂದ್ರ ಸರಕಾರ ಸತಾಯಗತಾಯ ಪ್ರಯತ್ನಿಸುತ್ತಿದೆ.

ಪ್ರತಿಭಟನೆಯಿಂದಾಗಿ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಟ್ರಾಫಿಕ್ ಜಾಮ್‌ಗಳು ಉಂಟಾಗಿದೆ. ದೆಹಲಿಯಲ್ಲಿ ಕೂಡ ಭಾರೀ ಜನಸಂದಣಿ ಕಂಡು ಬಂದಿದೆ. ಶಂಭು ಗಡಿಯಲ್ಲಿ 14,000 ಜನರು ಮತ್ತು 1,200 ಟ್ರಾಕ್ಟರ್‌ಗಳಿದೆ. ರೈತರ ದೆಹಲಿ ಚಲೋ ಹಿನ್ನೆಲೆ ರೈತರಿಂದ ಮಣ್ಣು ತೆಗೆಯುವ ಉಪಕರಣಗಳನ್ನು ವಶಪಡಿಸಿಕೊಳ್ಳಿ ಎಂದು ಪಂಜಾಬ್‌ ಪೊಲೀಸರಿಗೆ ಹರ್ಯಾಣ ಡಿಜಿಪಿ ಆಗ್ರಹಿಸಿದ್ದಾರೆ.

ರೈತರು ಶಂಭು ಗಡಿಯಿಂದ ದೆಹಲಿಯತ್ತ ಮೆರವಣಿಗೆ ಆರಂಭಿಸಿದಾಗ ಹರಿಯಾಣ ಪೊಲೀಸರು ಯಾವುದೇ ಪ್ರಚೋದನೆ ಇಲ್ಲದೆ 14 ಅಶ್ರುವಾಯು ಶೆಲ್‌ಗಳನ್ನು ಬಳಸಿದ್ದಾರೆ ಎಂದು ಪಟಿಯಾಲಾ ರೇಂಜ್‌ನ ಡಿಐಜಿ ಎಚ್‌ಎಸ್ ಭುಲ್ಲಾರ್ ಬುಧವಾರ ಹೇಳಿದ್ದಾರೆ.

ಈ ಮಧ್ಯೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಬುಧವಾರ ಮತ್ತೆ ರೈತ ಮುಖಂಡರನ್ನು ಎಂಎಸ್‌ಪಿ ವಿಷಯದ ಕುರಿತು ಚರ್ಚೆಗೆ ಆಹ್ವಾನಿಸಿದ್ದಾರೆ. ಐದನೇ ಸುತ್ತಿನಲ್ಲಿ ಎಂಎಸ್‌ಪಿ ಬೇಡಿಕೆ, ಬೆಳೆ ವೈವಿಧ್ಯೀಕರಣ, ರೈತರ ಮೇಲಿನ ಎಫ್‌ಐಆರ್‌ ಸೇರಿ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್, ಶಂಭು ಗಡಿಯಲ್ಲಿ ರೈತರೊಂದಿಗೆ ಮಾತನಾಡುತ್ತಾ, ನೀವು ಹಿಂದೆ ಇರಿ, ನಾವು ಮೆರವಣಿಗೆಯನ್ನು ಮುನ್ನಡೆಸುತ್ತೇವೆ. ಯಂತ್ರಗಳನ್ನು ನಿಲ್ಲಿಸೋಣ ಮತ್ತು ನಾವು ನಡೆಯೋಣ ಎಂದು ಹೇಳಿದ್ದಾರೆ.

ಎಲ್ಲ ಕಡೆಯೂ ರಾಜಕೀಯ ನಡೆಯುತ್ತಿದೆ. ಪಂಜಾಬ್ ಈ ಯಂತ್ರಗಳನ್ನು/ಪ್ರತಿಭಟನಕಾರರನ್ನು ಮೊದಲೇ ಏಕೆ ನಿಲ್ಲಿಸಲಿಲ್ಲ? ಎಂದು ಪಂಜಾಬ್‌ ಹರ್ಯಾಣ ಹೈಕೋರ್ಟ್‌ ಪ್ರಶ್ನಿಸಿತ್ತು. ಹರ್ಯಾಣ ಸರ್ಕಾರವು ಬುಧವಾರ ಮತ್ತೆ ಹೈಕೋರ್ಟ್‌ ಮೊರೆ ಹೋಗಿದ್ದು, ರೈತರು ತಮ್ಮ ಉಪಕರಣಗಳೊಂದಿಗೆ ಮುಂದುವರಿಯುವುದನ್ನು ತಡೆಯಲು ನಿರ್ದೇಶನಗಳನ್ನು ಕೋರಿದೆ.

ಪ್ರತಿಭಟನೆಯ ಬಗ್ಗೆ ಮಾದ್ಯಮವನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡರಾದ ಸರ್ವಾನ್ ಸಿಂಗ್ ಪಂಧೇರ್ ಮತ್ತು ದಲ್ಲೆವಾಲ್ ಅವರು ಶಂಭು ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಲು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರಿಂದಾಗಿ ದೆಹಲಿಗೆ ಶಾಂತಿಯುತವಾಗಿ ಮೆರವಣಿಗೆ ನಡೆಸಬಹುದು. ಇದಲ್ಲದೆ ರಾಷ್ಟ್ರದ ಹಿತಾಸಕ್ತಿಗಾಗಿ ಸಾಯಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಬುಧವಾರ ಬೆಳಗ್ಗೆ 11 ಗಂಟೆಗೆ ಗಡಿ ಪ್ರದೇಶವಾದ ಶಂಭು ಮತ್ತು ಖಾನೌರಿಯಿಂದ ದೆಹಲಿಗೆ ರೈತರ ಪ್ರತಿಭಟನಾ ಮೆರವಣಿಗೆ ಆರಂಭವಾದ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರ ಭದ್ರತಾ ಕ್ರಮಗಳನ್ನು ಹೆಚ್ಚಿಸಿದೆ.

ರೈತ ಸಂಘಟನೆಗಳು ದೆಹಲಿಯತ್ತ ಪಾದಯಾತ್ರೆಗೆ ಸಿದ್ಧತೆ ನಡೆಸಿದ್ದು, ಶಂಭು ಗಡಿಯಲ್ಲಿ ರೈತ ಸಂಘಟನೆಗಳು ಮಾನವ ಸರಪಳಿ ನಿರ್ಮಿಸಿವೆ. ಒಂದು ಕಡೆ, ಅಗೆಯುವ ಯಂತ್ರಗಳು ಮತ್ತು ಟ್ರ್ಯಾಕ್ಟರ್‌ಗಳ ಸಾಲು ನಿಂತಿದ್ದರೆ, ಇನ್ನೊಂದು ಕಡೆ ಬ್ಯಾರಿಕೇಡ್‌ಗಳನ್ನು ಮುರಿದು ರೈತರು ಹರ್ಯಾಣಕ್ಕೆ ಪ್ರವೇಶಿಸುವ ಬಗ್ಗೆ ಪೊಲೀಸರು ಅಲರ್ಟ್‌ನಲ್ಲಿದ್ದಾರೆ.

ಗಡಿ ಪ್ರದೇಶಗಳಲ್ಲಿ ಭಾರೀ ಭದ್ರತಾ ಕ್ರಮವನ್ನು ಕೈಗೊಳ್ಳಲಾಗಿದ್ದು, ದೆಹಲಿ ಪೊಲೀಸ್ ಸಿಬ್ಬಂದಿಗಳ ಎಲ್ಲಾ ರಜೆಗಳನ್ನು ರದ್ದುಗೊಳಿಸಲಾಗಿದೆ. ಕೆಂಪು ಕೋಟೆ ಮತ್ತು ಇಂಡಿಯಾ ಗೇಟ್‌ನಂತಹ ಐತಿಹಾಸಿಕ ಸ್ಥಳಗಳಿಗೆ ಭಾರೀ ಭದ್ರತೆ ಒದಗಿಸಲಾಗಿದೆ. ಪಂಜಾಬ್ ಮತ್ತು ಹರ್ಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಗಡಿಗಳು ಸಂಘರ್ಷದ ಕೇಂದ್ರ ಬಿಂದುಗಳಾಗಿವೆ. ಅಗೆಯುವ ಯಂತ್ರಗಳನ್ನು ಹೊಂದಿದ ರೈತರು, ಹರ್ಯಾಣ ಭದ್ರತಾ ಸಿಬ್ಬಂದಿ ನಿರ್ಮಿಸಿದ ಬ್ಯಾರಿಕೇಡ್‌ಗಳನ್ನು ಭೇದಿಸಲು ನಿರ್ಧರಿಸಿದ್ದಾರೆ.

ರೈತರ ಬೇಡಿಕೆಯೇನು? 

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಫೆಬ್ರವರಿ 13ರಿಂದ ಪಂಜಾಬ್-ಹರಿಯಾಣ ಗಡಿ ಪ್ರದೇಶಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ರೈತರು ಉದ್ದೇಶಿಸಿದ್ದ ದೆಹಲಿ ಚಲೋಗೆ ಬಿಜೆಪಿ ಸರಕಾರ ತಡೆದಿದ್ದು, ಸಿಂಘು ಬಾರ್ಡರ್, ಟಿಕ್ರಿ ಬಾರ್ಡರ್ ಮತ್ತು ಘಾಜಿಪುರ ಬಾರ್ಡರ್‌ಗಳಲ್ಲಿ ಮುಳ್ಳುತಂತಿ, ಮೊಳೆಗಳು, ಸಿಮೆಂಟ್ ಮತ್ತು ಕಲ್ಲಿನ ಗೋಡೆಗಳನ್ನು, ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ರೈತರು ದೆಹಲಿಗೆ ತೆರಳದಂತೆ ತಡೆದಿದ್ದರು.

23 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ರೈತರ ಸಾಲ ಮನ್ನಾ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರ ಹೆಚ್ಚಳ ಬೇಡ, ರೈತರ  ಮೇಲಿನ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು, ಭೂ ಸ್ವಾಧೀನ ಕಾಯಿದೆ ಮತ್ತು 2020-21ರ ಪ್ರತಿಭಟನೆ ವೇಳೆ ಮೃತ ರೈತರಿಗೆ ಪರಿಹಾರವನ್ನು ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಇದನ್ನು ಓದಿ: Fact check: ರಾಜ್ಯ ಬಜೆಟ್‌ಗೆ ಕೋಮು ಬಣ್ಣ ಬಳಿದ ಸಂಪಾದಕ, ಸತ್ಯಾಂಶ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...