Homeಮುಖಪುಟರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಬಿಜೆಪಿ ಸರಕಾರಗಳಿಂದ ಹರಸಾಹಸ: ಅಶ್ರುವಾಯು ಪ್ರಯೋಗ, ಗಡಿ ಪ್ರದೇಶದಲ್ಲಿ ಹೈ...

ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಬಿಜೆಪಿ ಸರಕಾರಗಳಿಂದ ಹರಸಾಹಸ: ಅಶ್ರುವಾಯು ಪ್ರಯೋಗ, ಗಡಿ ಪ್ರದೇಶದಲ್ಲಿ ಹೈ ಅಲರ್ಟ್‌

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಮಖಂಡರು ಮತ್ತು ಕೇಂದ್ರ ಸರಕಾರದ ನಡುವಿನ ನಾಲ್ಕನೇ ಸುತ್ತಿನ ಮಾತುಕತೆ ವಿಫಲವಾದ ಬೆನ್ನಲ್ಲಿ ಕೇಂದ್ರದ ಐದು ವರ್ಷಗಳ ಎಂಎಸ್‌ಪಿ ಗ್ಯಾರೆಂಟಿಯನ್ನು ತಿರಸ್ಕರಿಸಿ ರೈತ ಮುಖಂಡರು ದೆಹಲಿ ಚಲೋ ಪ್ರತಿಭಟನೆಯನ್ನು ಮತ್ತೆ ಮುಂದುವರಿಸಿದ್ದು, ಪಂಜಾಬ್-ಹರ್ಯಾಣ ಗಡಿಯಲ್ಲಿ ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಬಳಸಲಾಗಿದೆ. ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಹರ್ಯಾಣದ ಬಿಜೆಪಿ ಸರಕಾರ ಮತ್ತು ಕೇಂದ್ರ ಸರಕಾರ ಸತಾಯಗತಾಯ ಪ್ರಯತ್ನಿಸುತ್ತಿದೆ.

ಪ್ರತಿಭಟನೆಯಿಂದಾಗಿ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಟ್ರಾಫಿಕ್ ಜಾಮ್‌ಗಳು ಉಂಟಾಗಿದೆ. ದೆಹಲಿಯಲ್ಲಿ ಕೂಡ ಭಾರೀ ಜನಸಂದಣಿ ಕಂಡು ಬಂದಿದೆ. ಶಂಭು ಗಡಿಯಲ್ಲಿ 14,000 ಜನರು ಮತ್ತು 1,200 ಟ್ರಾಕ್ಟರ್‌ಗಳಿದೆ. ರೈತರ ದೆಹಲಿ ಚಲೋ ಹಿನ್ನೆಲೆ ರೈತರಿಂದ ಮಣ್ಣು ತೆಗೆಯುವ ಉಪಕರಣಗಳನ್ನು ವಶಪಡಿಸಿಕೊಳ್ಳಿ ಎಂದು ಪಂಜಾಬ್‌ ಪೊಲೀಸರಿಗೆ ಹರ್ಯಾಣ ಡಿಜಿಪಿ ಆಗ್ರಹಿಸಿದ್ದಾರೆ.

ರೈತರು ಶಂಭು ಗಡಿಯಿಂದ ದೆಹಲಿಯತ್ತ ಮೆರವಣಿಗೆ ಆರಂಭಿಸಿದಾಗ ಹರಿಯಾಣ ಪೊಲೀಸರು ಯಾವುದೇ ಪ್ರಚೋದನೆ ಇಲ್ಲದೆ 14 ಅಶ್ರುವಾಯು ಶೆಲ್‌ಗಳನ್ನು ಬಳಸಿದ್ದಾರೆ ಎಂದು ಪಟಿಯಾಲಾ ರೇಂಜ್‌ನ ಡಿಐಜಿ ಎಚ್‌ಎಸ್ ಭುಲ್ಲಾರ್ ಬುಧವಾರ ಹೇಳಿದ್ದಾರೆ.

ಈ ಮಧ್ಯೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಬುಧವಾರ ಮತ್ತೆ ರೈತ ಮುಖಂಡರನ್ನು ಎಂಎಸ್‌ಪಿ ವಿಷಯದ ಕುರಿತು ಚರ್ಚೆಗೆ ಆಹ್ವಾನಿಸಿದ್ದಾರೆ. ಐದನೇ ಸುತ್ತಿನಲ್ಲಿ ಎಂಎಸ್‌ಪಿ ಬೇಡಿಕೆ, ಬೆಳೆ ವೈವಿಧ್ಯೀಕರಣ, ರೈತರ ಮೇಲಿನ ಎಫ್‌ಐಆರ್‌ ಸೇರಿ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್, ಶಂಭು ಗಡಿಯಲ್ಲಿ ರೈತರೊಂದಿಗೆ ಮಾತನಾಡುತ್ತಾ, ನೀವು ಹಿಂದೆ ಇರಿ, ನಾವು ಮೆರವಣಿಗೆಯನ್ನು ಮುನ್ನಡೆಸುತ್ತೇವೆ. ಯಂತ್ರಗಳನ್ನು ನಿಲ್ಲಿಸೋಣ ಮತ್ತು ನಾವು ನಡೆಯೋಣ ಎಂದು ಹೇಳಿದ್ದಾರೆ.

ಎಲ್ಲ ಕಡೆಯೂ ರಾಜಕೀಯ ನಡೆಯುತ್ತಿದೆ. ಪಂಜಾಬ್ ಈ ಯಂತ್ರಗಳನ್ನು/ಪ್ರತಿಭಟನಕಾರರನ್ನು ಮೊದಲೇ ಏಕೆ ನಿಲ್ಲಿಸಲಿಲ್ಲ? ಎಂದು ಪಂಜಾಬ್‌ ಹರ್ಯಾಣ ಹೈಕೋರ್ಟ್‌ ಪ್ರಶ್ನಿಸಿತ್ತು. ಹರ್ಯಾಣ ಸರ್ಕಾರವು ಬುಧವಾರ ಮತ್ತೆ ಹೈಕೋರ್ಟ್‌ ಮೊರೆ ಹೋಗಿದ್ದು, ರೈತರು ತಮ್ಮ ಉಪಕರಣಗಳೊಂದಿಗೆ ಮುಂದುವರಿಯುವುದನ್ನು ತಡೆಯಲು ನಿರ್ದೇಶನಗಳನ್ನು ಕೋರಿದೆ.

ಪ್ರತಿಭಟನೆಯ ಬಗ್ಗೆ ಮಾದ್ಯಮವನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡರಾದ ಸರ್ವಾನ್ ಸಿಂಗ್ ಪಂಧೇರ್ ಮತ್ತು ದಲ್ಲೆವಾಲ್ ಅವರು ಶಂಭು ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಲು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರಿಂದಾಗಿ ದೆಹಲಿಗೆ ಶಾಂತಿಯುತವಾಗಿ ಮೆರವಣಿಗೆ ನಡೆಸಬಹುದು. ಇದಲ್ಲದೆ ರಾಷ್ಟ್ರದ ಹಿತಾಸಕ್ತಿಗಾಗಿ ಸಾಯಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಬುಧವಾರ ಬೆಳಗ್ಗೆ 11 ಗಂಟೆಗೆ ಗಡಿ ಪ್ರದೇಶವಾದ ಶಂಭು ಮತ್ತು ಖಾನೌರಿಯಿಂದ ದೆಹಲಿಗೆ ರೈತರ ಪ್ರತಿಭಟನಾ ಮೆರವಣಿಗೆ ಆರಂಭವಾದ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರ ಭದ್ರತಾ ಕ್ರಮಗಳನ್ನು ಹೆಚ್ಚಿಸಿದೆ.

ರೈತ ಸಂಘಟನೆಗಳು ದೆಹಲಿಯತ್ತ ಪಾದಯಾತ್ರೆಗೆ ಸಿದ್ಧತೆ ನಡೆಸಿದ್ದು, ಶಂಭು ಗಡಿಯಲ್ಲಿ ರೈತ ಸಂಘಟನೆಗಳು ಮಾನವ ಸರಪಳಿ ನಿರ್ಮಿಸಿವೆ. ಒಂದು ಕಡೆ, ಅಗೆಯುವ ಯಂತ್ರಗಳು ಮತ್ತು ಟ್ರ್ಯಾಕ್ಟರ್‌ಗಳ ಸಾಲು ನಿಂತಿದ್ದರೆ, ಇನ್ನೊಂದು ಕಡೆ ಬ್ಯಾರಿಕೇಡ್‌ಗಳನ್ನು ಮುರಿದು ರೈತರು ಹರ್ಯಾಣಕ್ಕೆ ಪ್ರವೇಶಿಸುವ ಬಗ್ಗೆ ಪೊಲೀಸರು ಅಲರ್ಟ್‌ನಲ್ಲಿದ್ದಾರೆ.

ಗಡಿ ಪ್ರದೇಶಗಳಲ್ಲಿ ಭಾರೀ ಭದ್ರತಾ ಕ್ರಮವನ್ನು ಕೈಗೊಳ್ಳಲಾಗಿದ್ದು, ದೆಹಲಿ ಪೊಲೀಸ್ ಸಿಬ್ಬಂದಿಗಳ ಎಲ್ಲಾ ರಜೆಗಳನ್ನು ರದ್ದುಗೊಳಿಸಲಾಗಿದೆ. ಕೆಂಪು ಕೋಟೆ ಮತ್ತು ಇಂಡಿಯಾ ಗೇಟ್‌ನಂತಹ ಐತಿಹಾಸಿಕ ಸ್ಥಳಗಳಿಗೆ ಭಾರೀ ಭದ್ರತೆ ಒದಗಿಸಲಾಗಿದೆ. ಪಂಜಾಬ್ ಮತ್ತು ಹರ್ಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಗಡಿಗಳು ಸಂಘರ್ಷದ ಕೇಂದ್ರ ಬಿಂದುಗಳಾಗಿವೆ. ಅಗೆಯುವ ಯಂತ್ರಗಳನ್ನು ಹೊಂದಿದ ರೈತರು, ಹರ್ಯಾಣ ಭದ್ರತಾ ಸಿಬ್ಬಂದಿ ನಿರ್ಮಿಸಿದ ಬ್ಯಾರಿಕೇಡ್‌ಗಳನ್ನು ಭೇದಿಸಲು ನಿರ್ಧರಿಸಿದ್ದಾರೆ.

ರೈತರ ಬೇಡಿಕೆಯೇನು? 

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಫೆಬ್ರವರಿ 13ರಿಂದ ಪಂಜಾಬ್-ಹರಿಯಾಣ ಗಡಿ ಪ್ರದೇಶಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ರೈತರು ಉದ್ದೇಶಿಸಿದ್ದ ದೆಹಲಿ ಚಲೋಗೆ ಬಿಜೆಪಿ ಸರಕಾರ ತಡೆದಿದ್ದು, ಸಿಂಘು ಬಾರ್ಡರ್, ಟಿಕ್ರಿ ಬಾರ್ಡರ್ ಮತ್ತು ಘಾಜಿಪುರ ಬಾರ್ಡರ್‌ಗಳಲ್ಲಿ ಮುಳ್ಳುತಂತಿ, ಮೊಳೆಗಳು, ಸಿಮೆಂಟ್ ಮತ್ತು ಕಲ್ಲಿನ ಗೋಡೆಗಳನ್ನು, ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ರೈತರು ದೆಹಲಿಗೆ ತೆರಳದಂತೆ ತಡೆದಿದ್ದರು.

23 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ರೈತರ ಸಾಲ ಮನ್ನಾ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರ ಹೆಚ್ಚಳ ಬೇಡ, ರೈತರ  ಮೇಲಿನ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು, ಭೂ ಸ್ವಾಧೀನ ಕಾಯಿದೆ ಮತ್ತು 2020-21ರ ಪ್ರತಿಭಟನೆ ವೇಳೆ ಮೃತ ರೈತರಿಗೆ ಪರಿಹಾರವನ್ನು ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಇದನ್ನು ಓದಿ: Fact check: ರಾಜ್ಯ ಬಜೆಟ್‌ಗೆ ಕೋಮು ಬಣ್ಣ ಬಳಿದ ಸಂಪಾದಕ, ಸತ್ಯಾಂಶ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...