Homeಮುಖಪುಟರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಬಿಜೆಪಿ ಸರಕಾರಗಳಿಂದ ಹರಸಾಹಸ: ಅಶ್ರುವಾಯು ಪ್ರಯೋಗ, ಗಡಿ ಪ್ರದೇಶದಲ್ಲಿ ಹೈ...

ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಬಿಜೆಪಿ ಸರಕಾರಗಳಿಂದ ಹರಸಾಹಸ: ಅಶ್ರುವಾಯು ಪ್ರಯೋಗ, ಗಡಿ ಪ್ರದೇಶದಲ್ಲಿ ಹೈ ಅಲರ್ಟ್‌

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಮಖಂಡರು ಮತ್ತು ಕೇಂದ್ರ ಸರಕಾರದ ನಡುವಿನ ನಾಲ್ಕನೇ ಸುತ್ತಿನ ಮಾತುಕತೆ ವಿಫಲವಾದ ಬೆನ್ನಲ್ಲಿ ಕೇಂದ್ರದ ಐದು ವರ್ಷಗಳ ಎಂಎಸ್‌ಪಿ ಗ್ಯಾರೆಂಟಿಯನ್ನು ತಿರಸ್ಕರಿಸಿ ರೈತ ಮುಖಂಡರು ದೆಹಲಿ ಚಲೋ ಪ್ರತಿಭಟನೆಯನ್ನು ಮತ್ತೆ ಮುಂದುವರಿಸಿದ್ದು, ಪಂಜಾಬ್-ಹರ್ಯಾಣ ಗಡಿಯಲ್ಲಿ ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಬಳಸಲಾಗಿದೆ. ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಹರ್ಯಾಣದ ಬಿಜೆಪಿ ಸರಕಾರ ಮತ್ತು ಕೇಂದ್ರ ಸರಕಾರ ಸತಾಯಗತಾಯ ಪ್ರಯತ್ನಿಸುತ್ತಿದೆ.

ಪ್ರತಿಭಟನೆಯಿಂದಾಗಿ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಟ್ರಾಫಿಕ್ ಜಾಮ್‌ಗಳು ಉಂಟಾಗಿದೆ. ದೆಹಲಿಯಲ್ಲಿ ಕೂಡ ಭಾರೀ ಜನಸಂದಣಿ ಕಂಡು ಬಂದಿದೆ. ಶಂಭು ಗಡಿಯಲ್ಲಿ 14,000 ಜನರು ಮತ್ತು 1,200 ಟ್ರಾಕ್ಟರ್‌ಗಳಿದೆ. ರೈತರ ದೆಹಲಿ ಚಲೋ ಹಿನ್ನೆಲೆ ರೈತರಿಂದ ಮಣ್ಣು ತೆಗೆಯುವ ಉಪಕರಣಗಳನ್ನು ವಶಪಡಿಸಿಕೊಳ್ಳಿ ಎಂದು ಪಂಜಾಬ್‌ ಪೊಲೀಸರಿಗೆ ಹರ್ಯಾಣ ಡಿಜಿಪಿ ಆಗ್ರಹಿಸಿದ್ದಾರೆ.

ರೈತರು ಶಂಭು ಗಡಿಯಿಂದ ದೆಹಲಿಯತ್ತ ಮೆರವಣಿಗೆ ಆರಂಭಿಸಿದಾಗ ಹರಿಯಾಣ ಪೊಲೀಸರು ಯಾವುದೇ ಪ್ರಚೋದನೆ ಇಲ್ಲದೆ 14 ಅಶ್ರುವಾಯು ಶೆಲ್‌ಗಳನ್ನು ಬಳಸಿದ್ದಾರೆ ಎಂದು ಪಟಿಯಾಲಾ ರೇಂಜ್‌ನ ಡಿಐಜಿ ಎಚ್‌ಎಸ್ ಭುಲ್ಲಾರ್ ಬುಧವಾರ ಹೇಳಿದ್ದಾರೆ.

ಈ ಮಧ್ಯೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಬುಧವಾರ ಮತ್ತೆ ರೈತ ಮುಖಂಡರನ್ನು ಎಂಎಸ್‌ಪಿ ವಿಷಯದ ಕುರಿತು ಚರ್ಚೆಗೆ ಆಹ್ವಾನಿಸಿದ್ದಾರೆ. ಐದನೇ ಸುತ್ತಿನಲ್ಲಿ ಎಂಎಸ್‌ಪಿ ಬೇಡಿಕೆ, ಬೆಳೆ ವೈವಿಧ್ಯೀಕರಣ, ರೈತರ ಮೇಲಿನ ಎಫ್‌ಐಆರ್‌ ಸೇರಿ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್, ಶಂಭು ಗಡಿಯಲ್ಲಿ ರೈತರೊಂದಿಗೆ ಮಾತನಾಡುತ್ತಾ, ನೀವು ಹಿಂದೆ ಇರಿ, ನಾವು ಮೆರವಣಿಗೆಯನ್ನು ಮುನ್ನಡೆಸುತ್ತೇವೆ. ಯಂತ್ರಗಳನ್ನು ನಿಲ್ಲಿಸೋಣ ಮತ್ತು ನಾವು ನಡೆಯೋಣ ಎಂದು ಹೇಳಿದ್ದಾರೆ.

ಎಲ್ಲ ಕಡೆಯೂ ರಾಜಕೀಯ ನಡೆಯುತ್ತಿದೆ. ಪಂಜಾಬ್ ಈ ಯಂತ್ರಗಳನ್ನು/ಪ್ರತಿಭಟನಕಾರರನ್ನು ಮೊದಲೇ ಏಕೆ ನಿಲ್ಲಿಸಲಿಲ್ಲ? ಎಂದು ಪಂಜಾಬ್‌ ಹರ್ಯಾಣ ಹೈಕೋರ್ಟ್‌ ಪ್ರಶ್ನಿಸಿತ್ತು. ಹರ್ಯಾಣ ಸರ್ಕಾರವು ಬುಧವಾರ ಮತ್ತೆ ಹೈಕೋರ್ಟ್‌ ಮೊರೆ ಹೋಗಿದ್ದು, ರೈತರು ತಮ್ಮ ಉಪಕರಣಗಳೊಂದಿಗೆ ಮುಂದುವರಿಯುವುದನ್ನು ತಡೆಯಲು ನಿರ್ದೇಶನಗಳನ್ನು ಕೋರಿದೆ.

ಪ್ರತಿಭಟನೆಯ ಬಗ್ಗೆ ಮಾದ್ಯಮವನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡರಾದ ಸರ್ವಾನ್ ಸಿಂಗ್ ಪಂಧೇರ್ ಮತ್ತು ದಲ್ಲೆವಾಲ್ ಅವರು ಶಂಭು ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಲು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರಿಂದಾಗಿ ದೆಹಲಿಗೆ ಶಾಂತಿಯುತವಾಗಿ ಮೆರವಣಿಗೆ ನಡೆಸಬಹುದು. ಇದಲ್ಲದೆ ರಾಷ್ಟ್ರದ ಹಿತಾಸಕ್ತಿಗಾಗಿ ಸಾಯಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಬುಧವಾರ ಬೆಳಗ್ಗೆ 11 ಗಂಟೆಗೆ ಗಡಿ ಪ್ರದೇಶವಾದ ಶಂಭು ಮತ್ತು ಖಾನೌರಿಯಿಂದ ದೆಹಲಿಗೆ ರೈತರ ಪ್ರತಿಭಟನಾ ಮೆರವಣಿಗೆ ಆರಂಭವಾದ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರ ಭದ್ರತಾ ಕ್ರಮಗಳನ್ನು ಹೆಚ್ಚಿಸಿದೆ.

ರೈತ ಸಂಘಟನೆಗಳು ದೆಹಲಿಯತ್ತ ಪಾದಯಾತ್ರೆಗೆ ಸಿದ್ಧತೆ ನಡೆಸಿದ್ದು, ಶಂಭು ಗಡಿಯಲ್ಲಿ ರೈತ ಸಂಘಟನೆಗಳು ಮಾನವ ಸರಪಳಿ ನಿರ್ಮಿಸಿವೆ. ಒಂದು ಕಡೆ, ಅಗೆಯುವ ಯಂತ್ರಗಳು ಮತ್ತು ಟ್ರ್ಯಾಕ್ಟರ್‌ಗಳ ಸಾಲು ನಿಂತಿದ್ದರೆ, ಇನ್ನೊಂದು ಕಡೆ ಬ್ಯಾರಿಕೇಡ್‌ಗಳನ್ನು ಮುರಿದು ರೈತರು ಹರ್ಯಾಣಕ್ಕೆ ಪ್ರವೇಶಿಸುವ ಬಗ್ಗೆ ಪೊಲೀಸರು ಅಲರ್ಟ್‌ನಲ್ಲಿದ್ದಾರೆ.

ಗಡಿ ಪ್ರದೇಶಗಳಲ್ಲಿ ಭಾರೀ ಭದ್ರತಾ ಕ್ರಮವನ್ನು ಕೈಗೊಳ್ಳಲಾಗಿದ್ದು, ದೆಹಲಿ ಪೊಲೀಸ್ ಸಿಬ್ಬಂದಿಗಳ ಎಲ್ಲಾ ರಜೆಗಳನ್ನು ರದ್ದುಗೊಳಿಸಲಾಗಿದೆ. ಕೆಂಪು ಕೋಟೆ ಮತ್ತು ಇಂಡಿಯಾ ಗೇಟ್‌ನಂತಹ ಐತಿಹಾಸಿಕ ಸ್ಥಳಗಳಿಗೆ ಭಾರೀ ಭದ್ರತೆ ಒದಗಿಸಲಾಗಿದೆ. ಪಂಜಾಬ್ ಮತ್ತು ಹರ್ಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಗಡಿಗಳು ಸಂಘರ್ಷದ ಕೇಂದ್ರ ಬಿಂದುಗಳಾಗಿವೆ. ಅಗೆಯುವ ಯಂತ್ರಗಳನ್ನು ಹೊಂದಿದ ರೈತರು, ಹರ್ಯಾಣ ಭದ್ರತಾ ಸಿಬ್ಬಂದಿ ನಿರ್ಮಿಸಿದ ಬ್ಯಾರಿಕೇಡ್‌ಗಳನ್ನು ಭೇದಿಸಲು ನಿರ್ಧರಿಸಿದ್ದಾರೆ.

ರೈತರ ಬೇಡಿಕೆಯೇನು? 

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಫೆಬ್ರವರಿ 13ರಿಂದ ಪಂಜಾಬ್-ಹರಿಯಾಣ ಗಡಿ ಪ್ರದೇಶಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ರೈತರು ಉದ್ದೇಶಿಸಿದ್ದ ದೆಹಲಿ ಚಲೋಗೆ ಬಿಜೆಪಿ ಸರಕಾರ ತಡೆದಿದ್ದು, ಸಿಂಘು ಬಾರ್ಡರ್, ಟಿಕ್ರಿ ಬಾರ್ಡರ್ ಮತ್ತು ಘಾಜಿಪುರ ಬಾರ್ಡರ್‌ಗಳಲ್ಲಿ ಮುಳ್ಳುತಂತಿ, ಮೊಳೆಗಳು, ಸಿಮೆಂಟ್ ಮತ್ತು ಕಲ್ಲಿನ ಗೋಡೆಗಳನ್ನು, ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ರೈತರು ದೆಹಲಿಗೆ ತೆರಳದಂತೆ ತಡೆದಿದ್ದರು.

23 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ರೈತರ ಸಾಲ ಮನ್ನಾ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರ ಹೆಚ್ಚಳ ಬೇಡ, ರೈತರ  ಮೇಲಿನ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು, ಭೂ ಸ್ವಾಧೀನ ಕಾಯಿದೆ ಮತ್ತು 2020-21ರ ಪ್ರತಿಭಟನೆ ವೇಳೆ ಮೃತ ರೈತರಿಗೆ ಪರಿಹಾರವನ್ನು ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಇದನ್ನು ಓದಿ: Fact check: ರಾಜ್ಯ ಬಜೆಟ್‌ಗೆ ಕೋಮು ಬಣ್ಣ ಬಳಿದ ಸಂಪಾದಕ, ಸತ್ಯಾಂಶ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...