Homeಮುಖಪುಟಛತ್ತೀಸ್‌ಗಢ-ತೆಲಂಗಾಣ ಗಡಿಯಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಮೂವರು ನಕ್ಸಲರ ಹತ್ಯೆ

ಛತ್ತೀಸ್‌ಗಢ-ತೆಲಂಗಾಣ ಗಡಿಯಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಮೂವರು ನಕ್ಸಲರ ಹತ್ಯೆ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಕರೇಗುಟ್ಟಾ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಬೃಹತ್ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ನಕ್ಸಲರು ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಗುರುವಾರ (ಏ.24) ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಏಪ್ರಿಲ್ 21ರಿಂದ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಛತ್ತೀಸ್‌ಗಢದ ನಾರಾಯಣಪುರದಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐವರು ನಕ್ಸಲರು ಶರಣಾದ ಬಳಿಕ ಏಪ್ರಿಲ್ 21 ಸೋಮವಾರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಇಂಡೋ ಟಿಬೆಟಿಯನ್ ಗಡಿ ಪೊಲೀಸರು (ಐಟಿಬಿಪಿ) ತಿಳಿಸಿದ್ದಾರೆ.

ಇಲ್ಲಿಯವರೆಗೆ, ಎನ್‌ಕೌಂಟರ್ ನಡೆದ ಸ್ಥಳದಿಂದ ಮೂವರು ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಭೀಕರ ಗುಂಡಿನ ಚಕಮಕಿಯಲ್ಲಿ ಹಲವಾರು ಇತರ ಮಾವೋವಾದಿಗಳು ಸಾವನ್ನಪ್ಪಿರುವ ಶಂಕೆಯಿದೆ ಎಂದು ವರದಿಗಳು ಹೇಳಿವೆ.

ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಪ್ರಾರಂಭಿಸಲಾದ ಅತಿದೊಡ್ಡ ದಂಗೆ ನಿಗ್ರಹ ಕಾರ್ಯಾಚರಣೆಗಳಲ್ಲಿ ಒಂದಾದ ಈ ಕಾರ್ಯಾಚರಣೆಯಲ್ಲಿ, ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ಬಸ್ತಾರ್ ಫೈಟರ್ಸ್, ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌), ರಾಜ್ಯ ಪೊಲೀಸರ ಎಲ್ಲಾ ಘಟಕಗಳು, ಹಾಗೆಯೇ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಅದರ ಕಮಾಂಡೋ ಬೆಟಾಲಿಯನ್ಸ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಸೇರಿದಂತೆ ವಿವಿಧ ಘಟಕಗಳಿಗೆ ಸೇರಿದ ಸುಮಾರು 10,000 ಭದ್ರತಾ ಸಿಬ್ಬಂದಿ ಭಾಗವಹಿಸಿದ್ದಾರೆ ಎಂದು ವರದಿಯಾಗಿದೆ.

ಈ ಕಾರ್ಯಾಚರಣೆಗೆ ತೆಲಂಗಾಣ ಪೊಲೀಸರು ಕೂಡ ಸಹಕಾರ ನೀಡಿದ್ದಾರೆ ಎಂದು ತಿಳಿದು ಬಂದಿದೆ.

“ಮಾವೋವಾದಿಗಳ ಪ್ರಬಲ ಮಿಲಿಟರಿ ಗುಂಪಾದ ಬೆಟಾಲಿಯನ್ ನಂ.1 ಮತ್ತು ತೆಲಂಗಾಣ ರಾಜ್ಯ ಮಾವೋವಾದಿಗಳ ಸಮಿತಿಯ ಹಿರಿಯ ಕೇಡರ್‌ಗಳ ಉಪಸ್ಥಿತಿಯ ಬಗ್ಗೆ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಇದು ಇನ್ನೂ ಹಲವು ದಿನಗಳವರೆಗೆ ಮುಂದುವರೆಯಲಿದೆ ಎಂದು ವರದಿಗಳು ಹೇಳಿವೆ.

“ದಟ್ಟ ಕಾಡು ಮತ್ತು ಬೆಟ್ಟಗಳಿಂದ ಆವೃತವಾದ ಪ್ರದೇಶವನ್ನು ಮಾವೋವಾದಿಗಳ ಬೆಟಾಲಿಯನ್ ನಂ. 1 ರ ನೆಲೆ ಎಂದು ಪರಿಗಣಿಸಲಾಗಿದೆ” ಎಂದು ವರದಿ ತಿಳಿಸಿದೆ.

“ಐವರು ಸಕ್ರಿಯ ನಕ್ಸಲರಾದ ದಾಸ್ರಿ ಧ್ರುವ (26), ಚನ್ನು ಗೋಟಾ (28), ಜ್ಯೋತಿ ವಡ್ಡೆ (19), ಸೀತಾ ವಡ್ಡೆ (19), ಸುನೀತಾ ವಡ್ಡೆ (25) ಶರಣಾಗಿದ್ದಾರೆ. ಅವರಿಗೆ ತಲಾ 50,000 ರೂಪಾಯಿ ಚೆಕ್ ಹಸ್ತಾಂತರಿಸಲಾಗಿದೆ,” ಎಂದು ಐಟಿಬಿಪಿ ಹೇಳಿದೆ.

ನಕ್ಸಲರ ಶರಣಾಗತಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಗಂಗಾರಾಮ್ ಚವಾಣ್, “ಶರಣಾದ ನಕ್ಸಲರು ಸರ್ಕಾರದ ಶರಣಾಗತಿ ನೀತಿಯಡಿಯಲ್ಲಿ ಎಲ್ಲಾ ಪ್ರಯೋಜನಗಳನ್ನು ಪಡೆಯಲಿದ್ದಾರೆ” ಎಂದಿದ್ದಾರೆ.

“ಶರಣಾದ ನಕ್ಸಲರು ಮಾದ್ (ಛತ್ತೀಸ್‌ಗಢ) ಮತ್ತು ನುವಾಪಾ (ಒಡಿಶಾ) ವಿಭಾಗಗಳಿಂದ ಬಂದವರು. ಸರ್ಕಾರದ ಎಲ್ಲಾ ಸವಲತ್ತುಗಳನ್ನು ಅವರಿಗೆ ನೀಡಲಾಗುವುದು. ಶರಣಾದವರಲ್ಲಿ ವಿವಿಧ ಶ್ರೇಣಿಯ ನಕ್ಸಲರಿದ್ದಾರೆ. ಕೆಲವು ನಕ್ಸಲರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಣೆಯಾಗಿದ್ದರೆ, ಇನ್ನು ಕೆಲವರಿಗೆ 8 ಲಕ್ಷ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ಸುಕ್ಮಾ ಎಸ್‌ಪಿ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ, ದಂತೇವಾಡದಲ್ಲಿ ಮೂವರು ನಗದು ಬಹುಮಾನ ಘೋಷಣೆಯಾದವರು ಸೇರಿದಂತೆ  26 ಮಾವೋವಾದಿಗಳು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಗಳ ಮುಂದೆ ಶರಣಾಗಿದ್ದರು.

ಪಹಲ್ಗಾಮ್ ಭಯೋತ್ಪಾದಕ ದಾಳಿ: ಪಾಕ್‌ ಜೊತೆಗಿನ ಸಂಬಂಧ ಕಡಿದುಕೊಂಡ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...