Homeಮುಖಪುಟಆದಿವಾಸಿ ಯುವತಿ ಮೇಲೆ ಭದ್ರತಾ ಪಡೆಗಳಿಂದ ಅತ್ಯಾಚಾರ, ಕೊಲೆ ಆರೋಪ: ಮೃತಳಿಗೆ ಮಾವೋವಾದಿ ಪಟ್ಟ!

ಆದಿವಾಸಿ ಯುವತಿ ಮೇಲೆ ಭದ್ರತಾ ಪಡೆಗಳಿಂದ ಅತ್ಯಾಚಾರ, ಕೊಲೆ ಆರೋಪ: ಮೃತಳಿಗೆ ಮಾವೋವಾದಿ ಪಟ್ಟ!

- Advertisement -
- Advertisement -

ಆದಿವಾಸಿ ಯುವತಿಯ ಮೇಲೆ ಮೃಗೀಯ ಅತ್ಯಾಚಾರ ನಡೆಸಿ ಕೊಂದು, ನಂತರ ಮಾವೋವಾದಿಯಾಗಿದ್ದ ಯುವತಿ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾಳೆ ಎಂದು ಭದ್ರತಾ ಪಡೆಗಳು ಘೋಷಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಛತ್ತೀಸಗಡದ ಬಿಜಾಪುರ ಜಿಲ್ಲೆಯ ನೀರಂ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಬಸ್ತರ್ ಪ್ರದೇಶದಲ್ಲಿ ಇಂತಹ ಘಟನೆಗಳು ಹೊಸ ಪ್ರಕರಣವಲ್ಲ ಎನ್ನಲಾಗಿದೆ. ಈ ಹಿಂದೆ ಬಿಜೆಪಿಯ ಹಿಂಸಾತ್ಮಕ ಆಡಳಿತದಿಂದ ಮುಕ್ತವಾಗಲು ರಾಜ್ಯದ ಜನಸಾಮಾನ್ಯರು ಭಾರಿ ಬಹುಮತದಿಂದ ಕಾಂಗ್ರೆಸ್ ಅನ್ನು ಅಧಿಕಾರ ನೀಡಿದ್ದಾರೆ. ಆದರೆ ಆಡಳಿತ ಪಕ್ಷ ಕಾಂಗ್ರೆಸ್ ನೀಡಿದ ರಾಜಕೀಯ ಭರವಸೆಗಳನ್ನು ಅದರ ನಾಯಕರು ಈಗ ಮರೆತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇ 30ರ ರಾತ್ರಿ 11- 12ರ ನಡುವೆ, 24 ವರ್ಷದ ಆದಿವಾಸಿ ಯುವತಿ ಪೈಕೆ ವೆಕ್ಕೊ, ತಾಯಿ ಸುಕ್ಕಿ ವೆಕ್ಕೊ ಸೇರಿದಂತೆ ಇನ್ನೊಬ್ಬರ ಕುಟುಂದ ಸದಸ್ಯರ ಜೊತೆ ತಮ್ಮ ಮನೆಯ ಅಂಗಳದಲ್ಲಿ ಮಲಗಿದ್ದರು. ಮನೆ ಸುತ್ತುವರೆದ ಜಿಲ್ಲಾ ಮೀಸಲು ಕಾವಲುಗಾರ ಪಡೆಯ ಸಿಬ್ಬಂದಿ ಅಂಗಳಕ್ಕೆ ಪ್ರವೇಶಿಸಿ ಪೈಕೆ ಮೇಲೆ ಹಲ್ಲೆ ನಡೆಸಿದ್ದಾರೆ. ಆಕೆಯ ರಕ್ಷಣೆಗೆ ಹೋದ ಕುಟುಂಬ ಸದಸ್ಯರನ್ನು ಭೀಕರವಾಗಿ ಥಳಿಸಲಾಗಿತು. ನಂತರ ಯುವತಿಯನ್ನು ಸಿಬ್ಬಂದಿ ಕಾಡಿಗೆ ಎಳೆದೊಯ್ದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಡಿಜಿಆರ್‌ ಸದಸ್ಯರು ರಾಜ್ಯ ಭದ್ರತಾ ಪಡೆಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿರುವುದರಿಂದ, ಪೈಕೆ ಅವರನ್ನು ಬಂಧಿಸಿರಬಹುದು ಎಂದು ಭಾವಿಸಿದ ಆಕೆಯ ಪೋಷಕರು ಮತ್ತು ನೆರೆಹೊರೆಯವರು ಮೇ 31 ರಂದು ದಂತೇವಾಡ ಜೈಲಿಗೆ ಹೋಗಿದ್ದಾರೆ. ನಂತರ ನೆಲಾಸ್ನರ್ ಪೊಲೀಸ್ ಠಾಣೆಯಲ್ಲಿ ಮಾವೋವಾದಿ ಎಂಬ ಕಾರಣಕ್ಕೆ ಪೈಕೆ ಅವರನ್ನು ‘ಎನ್‌ಕೌಂಟರ್‌’ನಲ್ಲಿ ಕೊಲ್ಲಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುವತಿ ಪೈಕೆ ಅವರ ಮೃತ ದೇಹವನ್ನು ನೋಡಿದ ಪೋಷಕರು ಮತ್ತು ಸಂಬಂಧಿಕರು, ಆಕೆಯ ಮೇಲೆ ಅತ್ಯಾಚಾರ ನಡೆಸಿ, ಡಿಜಿಆರ್‌ ಸಿಬ್ಬಂದಿ ಆಕೆಯ ದೇಹವನ್ನು ತೀವ್ರವಾಗಿ ವಿರೂಪಗೊಳಿಸಿದ್ದಾರೆ. ಸಂತ್ರಸ್ತೆಯ ಪೋಷಕರು ಮತ್ತು ಪ್ರದೇಶದ ಇತರ ಸ್ಥಳೀಯ ಆದಿವಾಸಿಗಳು ಪೈಕೆ ಯಾವುದೇ ಮಾವೋವಾದಿ ಬಣಕ್ಕೆ ಸೇರಿಲ್ಲ ಮತ್ತು ಆಕೆಯ ಹತ್ಯೆಯನ್ನು ಎನ್‌ಕೌಂಟರ್‌ ಎಂದು ತಪ್ಪಾಗಿ ನಿರೂಪಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ಎತ್ತರ ಮರ, ಬಾಗಿದ ಕೊಂಬೆ: ಪ್ರೊ. ರಹಮತ್ ತರೀಕೆರೆ

ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿದೆ ಎಂದಿರುವ ಸ್ಥಳೀಯ ಗುಂಪು ನ್ಯಾಯಕ್ಕಾಗಿ ಒತ್ತಾಯಿಸುತ್ತಿದೆ. ಐಪಿಸಿಯ ಸೆಕ್ಷನ್ 302 (ಕೊಲೆ), 316 (ಅತ್ಯಾಚಾರ)  ಮತ್ತು ಇತರ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿ ಭದ್ರತಾ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದಿದೆ.

ಜಿಲ್ಲಾ ಮೀಸಲು ಕಾವಲುಗಾರರು ಅಂದರೆ ಡಿಜಿಆರ್‌ ಎಂಬುದು ಒಂದು ಮಿಲಿಟಂಟ್ ಗುಂಪು, ಆದಿವಾಸಿಗಳ ವಿರುದ್ಧ ಆದಿವಾಸಿಗಳನ್ನು ಎತ್ತಿ ಕಟ್ಟಲು ಕಾಂಗ್ರೆಸ್ ಆಡಳಿತ ಮಾಡಿರುವ ಸೃಷ್ಟಿ ಇದಾಗಿದೆ. ಇದು ಶರಣಾದ ಮಾವೋವಾದಿಗಳು ಮತ್ತು ಹಳ್ಳಿಗಳ ಮಾವೋವಾದಿ ವಿರೋಧಿಗಳನ್ನು ಒಳಗೊಂಡಿದೆ. ವಾಸ್ತವವಾಗಿ, ಡಿಜಿಆರ್‌ ತಂಡವನ್ನು ಬಿಜೆಪಿಯ ಆಳ್ವಿಕೆಯಲ್ಲಿನ ಸಾಲ್ವಾ ಜುಡಮ್‌ಗೆ ಹೋಲಿಸಲಾಗಿದೆ. ಡಿಜಿಆರ್‌ ಸದಸ್ಯರು ಬಹುತೇಕ ಆದಿವಾಸಿಗಳೇ ಆಗಿದ್ದಾರೆ.

ಮೃತ ಸಂತ್ರಸ್ಥ ಯುವತಿಯ ಸಾವಿಗೆ ನ್ಯಾಯ ಬೇಕು ಎಂದು ಸ್ಥಳೀಯ ಆದಿವಾಸಿಗಳು ಪ್ರತಿಭಟನೆ ನಡೆಸಿ, ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....