Homeಮುಖಪುಟಆದಿವಾಸಿ ಯುವತಿ ಮೇಲೆ ಭದ್ರತಾ ಪಡೆಗಳಿಂದ ಅತ್ಯಾಚಾರ, ಕೊಲೆ ಆರೋಪ: ಮೃತಳಿಗೆ ಮಾವೋವಾದಿ ಪಟ್ಟ!

ಆದಿವಾಸಿ ಯುವತಿ ಮೇಲೆ ಭದ್ರತಾ ಪಡೆಗಳಿಂದ ಅತ್ಯಾಚಾರ, ಕೊಲೆ ಆರೋಪ: ಮೃತಳಿಗೆ ಮಾವೋವಾದಿ ಪಟ್ಟ!

- Advertisement -
- Advertisement -

ಆದಿವಾಸಿ ಯುವತಿಯ ಮೇಲೆ ಮೃಗೀಯ ಅತ್ಯಾಚಾರ ನಡೆಸಿ ಕೊಂದು, ನಂತರ ಮಾವೋವಾದಿಯಾಗಿದ್ದ ಯುವತಿ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾಳೆ ಎಂದು ಭದ್ರತಾ ಪಡೆಗಳು ಘೋಷಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಛತ್ತೀಸಗಡದ ಬಿಜಾಪುರ ಜಿಲ್ಲೆಯ ನೀರಂ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಬಸ್ತರ್ ಪ್ರದೇಶದಲ್ಲಿ ಇಂತಹ ಘಟನೆಗಳು ಹೊಸ ಪ್ರಕರಣವಲ್ಲ ಎನ್ನಲಾಗಿದೆ. ಈ ಹಿಂದೆ ಬಿಜೆಪಿಯ ಹಿಂಸಾತ್ಮಕ ಆಡಳಿತದಿಂದ ಮುಕ್ತವಾಗಲು ರಾಜ್ಯದ ಜನಸಾಮಾನ್ಯರು ಭಾರಿ ಬಹುಮತದಿಂದ ಕಾಂಗ್ರೆಸ್ ಅನ್ನು ಅಧಿಕಾರ ನೀಡಿದ್ದಾರೆ. ಆದರೆ ಆಡಳಿತ ಪಕ್ಷ ಕಾಂಗ್ರೆಸ್ ನೀಡಿದ ರಾಜಕೀಯ ಭರವಸೆಗಳನ್ನು ಅದರ ನಾಯಕರು ಈಗ ಮರೆತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇ 30ರ ರಾತ್ರಿ 11- 12ರ ನಡುವೆ, 24 ವರ್ಷದ ಆದಿವಾಸಿ ಯುವತಿ ಪೈಕೆ ವೆಕ್ಕೊ, ತಾಯಿ ಸುಕ್ಕಿ ವೆಕ್ಕೊ ಸೇರಿದಂತೆ ಇನ್ನೊಬ್ಬರ ಕುಟುಂದ ಸದಸ್ಯರ ಜೊತೆ ತಮ್ಮ ಮನೆಯ ಅಂಗಳದಲ್ಲಿ ಮಲಗಿದ್ದರು. ಮನೆ ಸುತ್ತುವರೆದ ಜಿಲ್ಲಾ ಮೀಸಲು ಕಾವಲುಗಾರ ಪಡೆಯ ಸಿಬ್ಬಂದಿ ಅಂಗಳಕ್ಕೆ ಪ್ರವೇಶಿಸಿ ಪೈಕೆ ಮೇಲೆ ಹಲ್ಲೆ ನಡೆಸಿದ್ದಾರೆ. ಆಕೆಯ ರಕ್ಷಣೆಗೆ ಹೋದ ಕುಟುಂಬ ಸದಸ್ಯರನ್ನು ಭೀಕರವಾಗಿ ಥಳಿಸಲಾಗಿತು. ನಂತರ ಯುವತಿಯನ್ನು ಸಿಬ್ಬಂದಿ ಕಾಡಿಗೆ ಎಳೆದೊಯ್ದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಡಿಜಿಆರ್‌ ಸದಸ್ಯರು ರಾಜ್ಯ ಭದ್ರತಾ ಪಡೆಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿರುವುದರಿಂದ, ಪೈಕೆ ಅವರನ್ನು ಬಂಧಿಸಿರಬಹುದು ಎಂದು ಭಾವಿಸಿದ ಆಕೆಯ ಪೋಷಕರು ಮತ್ತು ನೆರೆಹೊರೆಯವರು ಮೇ 31 ರಂದು ದಂತೇವಾಡ ಜೈಲಿಗೆ ಹೋಗಿದ್ದಾರೆ. ನಂತರ ನೆಲಾಸ್ನರ್ ಪೊಲೀಸ್ ಠಾಣೆಯಲ್ಲಿ ಮಾವೋವಾದಿ ಎಂಬ ಕಾರಣಕ್ಕೆ ಪೈಕೆ ಅವರನ್ನು ‘ಎನ್‌ಕೌಂಟರ್‌’ನಲ್ಲಿ ಕೊಲ್ಲಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುವತಿ ಪೈಕೆ ಅವರ ಮೃತ ದೇಹವನ್ನು ನೋಡಿದ ಪೋಷಕರು ಮತ್ತು ಸಂಬಂಧಿಕರು, ಆಕೆಯ ಮೇಲೆ ಅತ್ಯಾಚಾರ ನಡೆಸಿ, ಡಿಜಿಆರ್‌ ಸಿಬ್ಬಂದಿ ಆಕೆಯ ದೇಹವನ್ನು ತೀವ್ರವಾಗಿ ವಿರೂಪಗೊಳಿಸಿದ್ದಾರೆ. ಸಂತ್ರಸ್ತೆಯ ಪೋಷಕರು ಮತ್ತು ಪ್ರದೇಶದ ಇತರ ಸ್ಥಳೀಯ ಆದಿವಾಸಿಗಳು ಪೈಕೆ ಯಾವುದೇ ಮಾವೋವಾದಿ ಬಣಕ್ಕೆ ಸೇರಿಲ್ಲ ಮತ್ತು ಆಕೆಯ ಹತ್ಯೆಯನ್ನು ಎನ್‌ಕೌಂಟರ್‌ ಎಂದು ತಪ್ಪಾಗಿ ನಿರೂಪಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ಎತ್ತರ ಮರ, ಬಾಗಿದ ಕೊಂಬೆ: ಪ್ರೊ. ರಹಮತ್ ತರೀಕೆರೆ

ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿದೆ ಎಂದಿರುವ ಸ್ಥಳೀಯ ಗುಂಪು ನ್ಯಾಯಕ್ಕಾಗಿ ಒತ್ತಾಯಿಸುತ್ತಿದೆ. ಐಪಿಸಿಯ ಸೆಕ್ಷನ್ 302 (ಕೊಲೆ), 316 (ಅತ್ಯಾಚಾರ)  ಮತ್ತು ಇತರ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿ ಭದ್ರತಾ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದಿದೆ.

ಜಿಲ್ಲಾ ಮೀಸಲು ಕಾವಲುಗಾರರು ಅಂದರೆ ಡಿಜಿಆರ್‌ ಎಂಬುದು ಒಂದು ಮಿಲಿಟಂಟ್ ಗುಂಪು, ಆದಿವಾಸಿಗಳ ವಿರುದ್ಧ ಆದಿವಾಸಿಗಳನ್ನು ಎತ್ತಿ ಕಟ್ಟಲು ಕಾಂಗ್ರೆಸ್ ಆಡಳಿತ ಮಾಡಿರುವ ಸೃಷ್ಟಿ ಇದಾಗಿದೆ. ಇದು ಶರಣಾದ ಮಾವೋವಾದಿಗಳು ಮತ್ತು ಹಳ್ಳಿಗಳ ಮಾವೋವಾದಿ ವಿರೋಧಿಗಳನ್ನು ಒಳಗೊಂಡಿದೆ. ವಾಸ್ತವವಾಗಿ, ಡಿಜಿಆರ್‌ ತಂಡವನ್ನು ಬಿಜೆಪಿಯ ಆಳ್ವಿಕೆಯಲ್ಲಿನ ಸಾಲ್ವಾ ಜುಡಮ್‌ಗೆ ಹೋಲಿಸಲಾಗಿದೆ. ಡಿಜಿಆರ್‌ ಸದಸ್ಯರು ಬಹುತೇಕ ಆದಿವಾಸಿಗಳೇ ಆಗಿದ್ದಾರೆ.

ಮೃತ ಸಂತ್ರಸ್ಥ ಯುವತಿಯ ಸಾವಿಗೆ ನ್ಯಾಯ ಬೇಕು ಎಂದು ಸ್ಥಳೀಯ ಆದಿವಾಸಿಗಳು ಪ್ರತಿಭಟನೆ ನಡೆಸಿ, ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...