Homeಮುಖಪುಟಸಿಐಎಸ್ಎಫ್ ಯೋಧರ ಹೆಗಲಿಗೆ ಸಂಸತ್ ಭದ್ರತಾ ಜವಾಬ್ದಾರಿ: ಕೇಂದ್ರ ಸರ್ಕಾರ

ಸಿಐಎಸ್ಎಫ್ ಯೋಧರ ಹೆಗಲಿಗೆ ಸಂಸತ್ ಭದ್ರತಾ ಜವಾಬ್ದಾರಿ: ಕೇಂದ್ರ ಸರ್ಕಾರ

- Advertisement -
- Advertisement -

ಡಿಸೆಂಬರ್ 13ರಂದು ಲೋಕಸಭೆಯಲ್ಲಿ ಸಂಭವಿಸಿದ ಭಾರಿ ಭದ್ರತಾ ಉಲ್ಲಂಘನೆ ನಂತರ ಎಚ್ಚೆತ್ತಿರುವ ಕೇಂದ್ರ ಸರ್ಕಾರ, ಇನ್ನು ಮುಂದೆ ದೆಹಲಿ ಪೊಲೀಸರ ಜತೆಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯನ್ನು (ಸಿಐಎಸ್ಎಫ್) ರಕ್ಷಣೆಗೆ ನಿಯೋಜಿಸಲು ಮುಂದಾಗಿದೆ.

ದೆಹಲಿ ಪೊಲೀಸರ ಬದಲಿಗೆ ಸಿಐಎಸ್ಎಫ್ ಅನ್ನು ಸಂಸತ್ ಉಸ್ತುವಾರಿ ಏಜೆನ್ಸಿಯಾಗಿ ಬದಲಾಯಿಸಲಾಗುತ್ತಿದ್ದು, ಆವರಣ ಪ್ರವೇಶಿಸುವ ಪ್ರತಿಯೊಬ್ಬರನ್ನು ಪರೀಕ್ಷಿಸುವುದು ಸೇರಿದಂತೆ ಎಲ್ಲ ಜವಾಬ್ದಾರಿಗಳನ್ನು ಈ ತಂಡ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವಾಲಯ ಬುಧವಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

ಕಟ್ಟಡದೊಳಗಿನ ಭದ್ರತೆಯು ಲೋಕಸಭೆಯ ಸಚಿವಾಲಯದ ಜವಾಬ್ದಾರಿಯಾಗಿ ಮುಂದುವರಿಯುತ್ತದೆ. ಆದರೆ, ಹೊರಗಿನ ರಕ್ಷಣಾ ಪರಿಧಿಯನ್ನು ಪೊಲೀಸರು ಮುಂದುವರಿಸುತ್ತಾರೆ. ವಿಭಿನ್ನ ಏಜೆನ್ಸಿಗಳು ಪರಸ್ಪರರ ಸಹಕಾರ ನೀಡುವ ಮೂಲಕ ಪ್ರೋಟೋಕಾಲ್‌ಗಳನ್ನು ಸುವ್ಯವಸ್ಥಿತಗೊಳಿಸುವ ಪ್ರಯತ್ನವೆಂದು ಈ ಬದಲಾವಣೆಯನ್ನು ಪರಿಗಣಿಸಲಾಗಿದ್ದು, ಗೃಹ ಸಚಿವಾಲಯದ ಆದೇಶದ ವಿವರ ‘ಭದ್ರತಾ ಸ್ವೀಪ್’ ನಂತರ ಇದನ್ನು ಜಾರಿಗೊಳಿಸಲಾಗುವುದು ಎನ್ನಲಾಗಿದೆ.

ಸಿಐಎಸ್ಎಫ್, ದೇಶದ ಸೂಕ್ಷ್ಮ ಸಾರ್ವಜನಿಕ ವಲಯದ ಉದ್ಯಮಗಳಿಗೆ ಸಮಗ್ರ ಭದ್ರತಾ ರಕ್ಷಣೆ ಒದಗಿಸುತ್ತದೆ. ಪ್ರಸ್ತುತ ವಿಮಾನ ನಿಲ್ದಾಣಗಳು, ಬಂದರುಗಳು, ಪ್ರಮುಖ ಐಟಿ ಕಾರಿಡಾರ್‌ಗಳು ಮತ್ತು ಪರಮಾಣು ಘಟಕಗಳು ಒಳಗೊಂಡಂತೆ 350ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಾವಲು ಕಾಯುತ್ತಿದೆ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಚೇರಿಯಿಂದ ಪ್ರವೇಶ ಪಾಸ್‌ಗಳ ಮೂಲಕ ಇಬ್ಬರು ಯುವಕರು, ಡಿಸೆಂಬರ್ 13 ರಂದು ಲೋಕಸಭೆಯ ಸಂದರ್ಶಕರ ಗ್ಯಾಲರಿ ಮೂಲಕ ಸದನ ಪ್ರವೇಶಿಸಿದ್ದರು. ಜತೆಗೆ, ಕೆಳ ಮನೆಯಲ್ಲಿ ಹಳದಿ ಹೊಗೆ ಡಬ್ಬಿಗಳನ್ನು ಹಾಕಿ ಸಂಸತ್ ಸದಸ್ಯರಿಗೆ ಆತಂಕ ಉಂಟು ಮಾಡಿದ್ದರು. ಉಳಿದ ಒಬ್ಬ ಪುರುಷ ಮತ್ತು ಮಹಿಳೆ ಸಂಸತ್ತಿನ ಹೊರಗಡೆ ಕೆಂಪು ಮತ್ತು ಹಳದಿ ಹೊಗೆ ಕ್ಯಾನ್‌ಗಳನ್ನು ಸ್ಪೋಟಿಸಿದ್ದರು.
ಉತ್ತರ ಪ್ರದೇಶದ ಸಾಗರ್ ಶರ್ಮಾ ಮತ್ತು ಕರ್ನಾಟಕದ ಡಿ. ಮನೋರಂಜನ್ ಲೋಕಸಭೆಯ ಒಳಗೆ ಪ್ರವೇಶಿಸಿ ಹಳದಿ ಹೊಗೆ ಡಬ್ಬಗಳನ್ನು ಸ್ಟೋಟಿಸಿದ್ದರು.

ಈಗಾಗಲೇ ಘಟನೆ ಸಂಬಂಧ ಏಳಕ್ಕೂ ಹೆಚ್ಚು ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಆಪಾದಿತ ಮಾಸ್ಟರ್ ಮೈಂಡ್ ಸೇರಿದಂತೆ ಇನ್ನಿಬ್ಬರು ಸಹ ಬಂಧನದಲ್ಲಿದ್ದಾರೆ. ಆದರೆ, ಇಡೀ ಘಟನೆಯು ಭಾರಿ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಉತ್ತರ ಕೊಡಬೇಕು ಎಂದು ಪ್ರತಿಪಕ್ಷಗಳು ಉಭಯ ಸದನಗಳಲ್ಲಿ ಧರಣಿ ನಡೆಸುತ್ತಿದ್ದು, 140ಕ್ಕೂ ಹೆಚ್ಚು ಸಂಸದರು ಈ ಗದ್ದಲದ ಕಾರಣಕ್ಕಾಗಿ ಚಳಿಗಾಲ ಅಧಿವೇಶನದಿಂದ ಅಮಾನತಾಗಿದ್ದಾರೆ.

ಇದನ್ನೂ ಓದಿ; ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...