Homeಮುಖಪುಟಸಿಐಎಸ್ಎಫ್ ಯೋಧರ ಹೆಗಲಿಗೆ ಸಂಸತ್ ಭದ್ರತಾ ಜವಾಬ್ದಾರಿ: ಕೇಂದ್ರ ಸರ್ಕಾರ

ಸಿಐಎಸ್ಎಫ್ ಯೋಧರ ಹೆಗಲಿಗೆ ಸಂಸತ್ ಭದ್ರತಾ ಜವಾಬ್ದಾರಿ: ಕೇಂದ್ರ ಸರ್ಕಾರ

- Advertisement -
- Advertisement -

ಡಿಸೆಂಬರ್ 13ರಂದು ಲೋಕಸಭೆಯಲ್ಲಿ ಸಂಭವಿಸಿದ ಭಾರಿ ಭದ್ರತಾ ಉಲ್ಲಂಘನೆ ನಂತರ ಎಚ್ಚೆತ್ತಿರುವ ಕೇಂದ್ರ ಸರ್ಕಾರ, ಇನ್ನು ಮುಂದೆ ದೆಹಲಿ ಪೊಲೀಸರ ಜತೆಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯನ್ನು (ಸಿಐಎಸ್ಎಫ್) ರಕ್ಷಣೆಗೆ ನಿಯೋಜಿಸಲು ಮುಂದಾಗಿದೆ.

ದೆಹಲಿ ಪೊಲೀಸರ ಬದಲಿಗೆ ಸಿಐಎಸ್ಎಫ್ ಅನ್ನು ಸಂಸತ್ ಉಸ್ತುವಾರಿ ಏಜೆನ್ಸಿಯಾಗಿ ಬದಲಾಯಿಸಲಾಗುತ್ತಿದ್ದು, ಆವರಣ ಪ್ರವೇಶಿಸುವ ಪ್ರತಿಯೊಬ್ಬರನ್ನು ಪರೀಕ್ಷಿಸುವುದು ಸೇರಿದಂತೆ ಎಲ್ಲ ಜವಾಬ್ದಾರಿಗಳನ್ನು ಈ ತಂಡ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವಾಲಯ ಬುಧವಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

ಕಟ್ಟಡದೊಳಗಿನ ಭದ್ರತೆಯು ಲೋಕಸಭೆಯ ಸಚಿವಾಲಯದ ಜವಾಬ್ದಾರಿಯಾಗಿ ಮುಂದುವರಿಯುತ್ತದೆ. ಆದರೆ, ಹೊರಗಿನ ರಕ್ಷಣಾ ಪರಿಧಿಯನ್ನು ಪೊಲೀಸರು ಮುಂದುವರಿಸುತ್ತಾರೆ. ವಿಭಿನ್ನ ಏಜೆನ್ಸಿಗಳು ಪರಸ್ಪರರ ಸಹಕಾರ ನೀಡುವ ಮೂಲಕ ಪ್ರೋಟೋಕಾಲ್‌ಗಳನ್ನು ಸುವ್ಯವಸ್ಥಿತಗೊಳಿಸುವ ಪ್ರಯತ್ನವೆಂದು ಈ ಬದಲಾವಣೆಯನ್ನು ಪರಿಗಣಿಸಲಾಗಿದ್ದು, ಗೃಹ ಸಚಿವಾಲಯದ ಆದೇಶದ ವಿವರ ‘ಭದ್ರತಾ ಸ್ವೀಪ್’ ನಂತರ ಇದನ್ನು ಜಾರಿಗೊಳಿಸಲಾಗುವುದು ಎನ್ನಲಾಗಿದೆ.

ಸಿಐಎಸ್ಎಫ್, ದೇಶದ ಸೂಕ್ಷ್ಮ ಸಾರ್ವಜನಿಕ ವಲಯದ ಉದ್ಯಮಗಳಿಗೆ ಸಮಗ್ರ ಭದ್ರತಾ ರಕ್ಷಣೆ ಒದಗಿಸುತ್ತದೆ. ಪ್ರಸ್ತುತ ವಿಮಾನ ನಿಲ್ದಾಣಗಳು, ಬಂದರುಗಳು, ಪ್ರಮುಖ ಐಟಿ ಕಾರಿಡಾರ್‌ಗಳು ಮತ್ತು ಪರಮಾಣು ಘಟಕಗಳು ಒಳಗೊಂಡಂತೆ 350ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಾವಲು ಕಾಯುತ್ತಿದೆ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಚೇರಿಯಿಂದ ಪ್ರವೇಶ ಪಾಸ್‌ಗಳ ಮೂಲಕ ಇಬ್ಬರು ಯುವಕರು, ಡಿಸೆಂಬರ್ 13 ರಂದು ಲೋಕಸಭೆಯ ಸಂದರ್ಶಕರ ಗ್ಯಾಲರಿ ಮೂಲಕ ಸದನ ಪ್ರವೇಶಿಸಿದ್ದರು. ಜತೆಗೆ, ಕೆಳ ಮನೆಯಲ್ಲಿ ಹಳದಿ ಹೊಗೆ ಡಬ್ಬಿಗಳನ್ನು ಹಾಕಿ ಸಂಸತ್ ಸದಸ್ಯರಿಗೆ ಆತಂಕ ಉಂಟು ಮಾಡಿದ್ದರು. ಉಳಿದ ಒಬ್ಬ ಪುರುಷ ಮತ್ತು ಮಹಿಳೆ ಸಂಸತ್ತಿನ ಹೊರಗಡೆ ಕೆಂಪು ಮತ್ತು ಹಳದಿ ಹೊಗೆ ಕ್ಯಾನ್‌ಗಳನ್ನು ಸ್ಪೋಟಿಸಿದ್ದರು.
ಉತ್ತರ ಪ್ರದೇಶದ ಸಾಗರ್ ಶರ್ಮಾ ಮತ್ತು ಕರ್ನಾಟಕದ ಡಿ. ಮನೋರಂಜನ್ ಲೋಕಸಭೆಯ ಒಳಗೆ ಪ್ರವೇಶಿಸಿ ಹಳದಿ ಹೊಗೆ ಡಬ್ಬಗಳನ್ನು ಸ್ಟೋಟಿಸಿದ್ದರು.

ಈಗಾಗಲೇ ಘಟನೆ ಸಂಬಂಧ ಏಳಕ್ಕೂ ಹೆಚ್ಚು ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಆಪಾದಿತ ಮಾಸ್ಟರ್ ಮೈಂಡ್ ಸೇರಿದಂತೆ ಇನ್ನಿಬ್ಬರು ಸಹ ಬಂಧನದಲ್ಲಿದ್ದಾರೆ. ಆದರೆ, ಇಡೀ ಘಟನೆಯು ಭಾರಿ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಉತ್ತರ ಕೊಡಬೇಕು ಎಂದು ಪ್ರತಿಪಕ್ಷಗಳು ಉಭಯ ಸದನಗಳಲ್ಲಿ ಧರಣಿ ನಡೆಸುತ್ತಿದ್ದು, 140ಕ್ಕೂ ಹೆಚ್ಚು ಸಂಸದರು ಈ ಗದ್ದಲದ ಕಾರಣಕ್ಕಾಗಿ ಚಳಿಗಾಲ ಅಧಿವೇಶನದಿಂದ ಅಮಾನತಾಗಿದ್ದಾರೆ.

ಇದನ್ನೂ ಓದಿ; ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...