Homeಮುಖಪುಟಸಿಐಎಸ್ಎಫ್ ಯೋಧರ ಹೆಗಲಿಗೆ ಸಂಸತ್ ಭದ್ರತಾ ಜವಾಬ್ದಾರಿ: ಕೇಂದ್ರ ಸರ್ಕಾರ

ಸಿಐಎಸ್ಎಫ್ ಯೋಧರ ಹೆಗಲಿಗೆ ಸಂಸತ್ ಭದ್ರತಾ ಜವಾಬ್ದಾರಿ: ಕೇಂದ್ರ ಸರ್ಕಾರ

- Advertisement -
- Advertisement -

ಡಿಸೆಂಬರ್ 13ರಂದು ಲೋಕಸಭೆಯಲ್ಲಿ ಸಂಭವಿಸಿದ ಭಾರಿ ಭದ್ರತಾ ಉಲ್ಲಂಘನೆ ನಂತರ ಎಚ್ಚೆತ್ತಿರುವ ಕೇಂದ್ರ ಸರ್ಕಾರ, ಇನ್ನು ಮುಂದೆ ದೆಹಲಿ ಪೊಲೀಸರ ಜತೆಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯನ್ನು (ಸಿಐಎಸ್ಎಫ್) ರಕ್ಷಣೆಗೆ ನಿಯೋಜಿಸಲು ಮುಂದಾಗಿದೆ.

ದೆಹಲಿ ಪೊಲೀಸರ ಬದಲಿಗೆ ಸಿಐಎಸ್ಎಫ್ ಅನ್ನು ಸಂಸತ್ ಉಸ್ತುವಾರಿ ಏಜೆನ್ಸಿಯಾಗಿ ಬದಲಾಯಿಸಲಾಗುತ್ತಿದ್ದು, ಆವರಣ ಪ್ರವೇಶಿಸುವ ಪ್ರತಿಯೊಬ್ಬರನ್ನು ಪರೀಕ್ಷಿಸುವುದು ಸೇರಿದಂತೆ ಎಲ್ಲ ಜವಾಬ್ದಾರಿಗಳನ್ನು ಈ ತಂಡ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವಾಲಯ ಬುಧವಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

ಕಟ್ಟಡದೊಳಗಿನ ಭದ್ರತೆಯು ಲೋಕಸಭೆಯ ಸಚಿವಾಲಯದ ಜವಾಬ್ದಾರಿಯಾಗಿ ಮುಂದುವರಿಯುತ್ತದೆ. ಆದರೆ, ಹೊರಗಿನ ರಕ್ಷಣಾ ಪರಿಧಿಯನ್ನು ಪೊಲೀಸರು ಮುಂದುವರಿಸುತ್ತಾರೆ. ವಿಭಿನ್ನ ಏಜೆನ್ಸಿಗಳು ಪರಸ್ಪರರ ಸಹಕಾರ ನೀಡುವ ಮೂಲಕ ಪ್ರೋಟೋಕಾಲ್‌ಗಳನ್ನು ಸುವ್ಯವಸ್ಥಿತಗೊಳಿಸುವ ಪ್ರಯತ್ನವೆಂದು ಈ ಬದಲಾವಣೆಯನ್ನು ಪರಿಗಣಿಸಲಾಗಿದ್ದು, ಗೃಹ ಸಚಿವಾಲಯದ ಆದೇಶದ ವಿವರ ‘ಭದ್ರತಾ ಸ್ವೀಪ್’ ನಂತರ ಇದನ್ನು ಜಾರಿಗೊಳಿಸಲಾಗುವುದು ಎನ್ನಲಾಗಿದೆ.

ಸಿಐಎಸ್ಎಫ್, ದೇಶದ ಸೂಕ್ಷ್ಮ ಸಾರ್ವಜನಿಕ ವಲಯದ ಉದ್ಯಮಗಳಿಗೆ ಸಮಗ್ರ ಭದ್ರತಾ ರಕ್ಷಣೆ ಒದಗಿಸುತ್ತದೆ. ಪ್ರಸ್ತುತ ವಿಮಾನ ನಿಲ್ದಾಣಗಳು, ಬಂದರುಗಳು, ಪ್ರಮುಖ ಐಟಿ ಕಾರಿಡಾರ್‌ಗಳು ಮತ್ತು ಪರಮಾಣು ಘಟಕಗಳು ಒಳಗೊಂಡಂತೆ 350ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಾವಲು ಕಾಯುತ್ತಿದೆ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಚೇರಿಯಿಂದ ಪ್ರವೇಶ ಪಾಸ್‌ಗಳ ಮೂಲಕ ಇಬ್ಬರು ಯುವಕರು, ಡಿಸೆಂಬರ್ 13 ರಂದು ಲೋಕಸಭೆಯ ಸಂದರ್ಶಕರ ಗ್ಯಾಲರಿ ಮೂಲಕ ಸದನ ಪ್ರವೇಶಿಸಿದ್ದರು. ಜತೆಗೆ, ಕೆಳ ಮನೆಯಲ್ಲಿ ಹಳದಿ ಹೊಗೆ ಡಬ್ಬಿಗಳನ್ನು ಹಾಕಿ ಸಂಸತ್ ಸದಸ್ಯರಿಗೆ ಆತಂಕ ಉಂಟು ಮಾಡಿದ್ದರು. ಉಳಿದ ಒಬ್ಬ ಪುರುಷ ಮತ್ತು ಮಹಿಳೆ ಸಂಸತ್ತಿನ ಹೊರಗಡೆ ಕೆಂಪು ಮತ್ತು ಹಳದಿ ಹೊಗೆ ಕ್ಯಾನ್‌ಗಳನ್ನು ಸ್ಪೋಟಿಸಿದ್ದರು.
ಉತ್ತರ ಪ್ರದೇಶದ ಸಾಗರ್ ಶರ್ಮಾ ಮತ್ತು ಕರ್ನಾಟಕದ ಡಿ. ಮನೋರಂಜನ್ ಲೋಕಸಭೆಯ ಒಳಗೆ ಪ್ರವೇಶಿಸಿ ಹಳದಿ ಹೊಗೆ ಡಬ್ಬಗಳನ್ನು ಸ್ಟೋಟಿಸಿದ್ದರು.

ಈಗಾಗಲೇ ಘಟನೆ ಸಂಬಂಧ ಏಳಕ್ಕೂ ಹೆಚ್ಚು ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಆಪಾದಿತ ಮಾಸ್ಟರ್ ಮೈಂಡ್ ಸೇರಿದಂತೆ ಇನ್ನಿಬ್ಬರು ಸಹ ಬಂಧನದಲ್ಲಿದ್ದಾರೆ. ಆದರೆ, ಇಡೀ ಘಟನೆಯು ಭಾರಿ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಉತ್ತರ ಕೊಡಬೇಕು ಎಂದು ಪ್ರತಿಪಕ್ಷಗಳು ಉಭಯ ಸದನಗಳಲ್ಲಿ ಧರಣಿ ನಡೆಸುತ್ತಿದ್ದು, 140ಕ್ಕೂ ಹೆಚ್ಚು ಸಂಸದರು ಈ ಗದ್ದಲದ ಕಾರಣಕ್ಕಾಗಿ ಚಳಿಗಾಲ ಅಧಿವೇಶನದಿಂದ ಅಮಾನತಾಗಿದ್ದಾರೆ.

ಇದನ್ನೂ ಓದಿ; ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...