Homeಮುಖಪುಟಭದ್ರತಾ ನಿಯಮ ಉಲ್ಲಂಘನೆ - ಮುಖ್ಯಮಂತ್ರಿಯ ಹೆಲಿಕಾಪ್ಟರ್‌‌ನಲ್ಲಿ ಪ್ರೀ ವೆಡ್ಡಿಂಗ್‌‌ ಶೂಟ್!

ಭದ್ರತಾ ನಿಯಮ ಉಲ್ಲಂಘನೆ – ಮುಖ್ಯಮಂತ್ರಿಯ ಹೆಲಿಕಾಪ್ಟರ್‌‌ನಲ್ಲಿ ಪ್ರೀ ವೆಡ್ಡಿಂಗ್‌‌ ಶೂಟ್!

- Advertisement -
- Advertisement -

ಭಾವಿ ದಂಪತಿಗಳು ತಮ್ಮ ಪ್ರೀ ವೆಡ್ಡಿಂಗ್‌ ಫೋಟೋಶೂಟ್‌‌ ಅನ್ನು ಚತ್ತೀಸ್‌ಘಡ ಮುಖ್ಯಮಂತ್ರಿಯ ಹೆಲಿಕಾಪ್ಟರ್‌‌ನಲ್ಲಿ ನಡೆಸಿದ್ದು ಇದೀಗ ಭಾರಿ ವಿವಾದ ಏರ್ಪಟ್ಟಿದೆ. ಫೋಟೋಶೂಟ್‌ಗೆ ರಾಜ್ಯದ ಹೆಲಿಕಾಪ್ಟರ್‌ನಲ್ಲಿ ಕೂತು ಪೋಸ್ ನೀಡುತ್ತಿರುವ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಚಾಲಕ ಯೋಗೇಶ್ವರ್ ಸಾಯಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಯೋಗೇಶ್ವರ್‌‌ ಸಾಯಿ ವರನ ಸ್ನೇಹಿತನಾಗಿದ್ದು, ರಾಜ್ಯ ಹ್ಯಾಂಗರ್‌ (ವಿಮಾನಗಳನ್ನು ನಿಲ್ಲಿಸುವ ಸ್ಥಳ) ನಲ್ಲಿ ಭಾವಿ ದಂಪತಿಗಳಿಗೆ ಫೋಟೋಶೂಟ್ ಮಾಡಲು ಅವಕಾಶ ನೀಡಿದ್ದರು. ಆದರೆ, ಹ್ಯಾಂಗರ್‌ನ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಾಯಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಗಾಂಧಿಯನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ?- ಸಿದ್ದರಾಮಯ್ಯ ಪ್ರಶ್ನೆ

ಪೊಲೀಸರ ಮಾಹಿತಿಯ ಪ್ರಕಾರ, ದಂಪತಿಗಳು ಜಶ್ಪುರ ಜಿಲ್ಲೆಗೆ ಸೇರಿದವರಾಗಿದ್ದು, ಕಳೆದ ತಿಂಗಳು ರಾಯ್‌ಪುರದ ಪೊಲೀಸ್ ಮಾರ್ಗಗಳಲ್ಲಿರುವ ರಾಜ್ಯ ಹೆಲಿಕಾಪ್ಟರ್ “ಎಡಬ್ಲ್ಯೂ 109 ಪವರ್ ಎಲೈಟ್” ನೊಂದಿಗೆ ಫೋಟೊಶೂಟ್ ಮಾಡಿದ್ದಾರೆ. ಈ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲಾದ ನಂತರ ವಿವಾದಕ್ಕೀಡಾಗಿದೆ.

“ಚಾಲಕ ಯೋಗೇಶ್ವರ್ ಸಾಯಿ ಅವರು ಭದ್ರತಾ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಜನವರಿ 21 ರಂದು ಅನಧಿಕೃತ ಜನರನ್ನು ಹ್ಯಾಂಗರ್‌ಗೆ ಪ್ರವೇಶಿಸಲು ಅನುಕೂಲ ಮಾಡಿಕೊಟ್ಟಿದ್ದಾರೆ” ಎಂದು ರಾಜ್ಯ ನಾಗರಿಕ ವಿಮಾನಯಾನ ವಿಭಾಗದ ನಿರ್ದೇಶಕ ನೀಲಂ ನಾಮದೇವ್ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.

ಜನವರಿ 20 ರಂದು ದಂಪತಿಗಳ  ಪ್ರೀ ವೆಡ್ಡಿಂಗ್ ಚಿತ್ರೀಕರಣ ನಡೆದಿದೆ ಎಂದು ರಾಯ್‌ಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಜಯ್ ಯಾದವ್ ಹೇಳಿದ್ದಾರೆಂದು ಹಿಂದೂಸ್ಥಾನ್ ಟೈಮ್ಸ್ ಉಲ್ಲೇಖಿಸಿದೆ. ವಿಮಾನಯಾನ ವಿಭಾಗದ ಚಾಲಕ ದಂಪತಿಗಳನ್ನು ಒಳಗೆ ಕರೆದೊಯ್ದಿದ್ದಾರೆ. ಗಾರ್ಡ್‌ಗಳಿಗೆ ಚಾಲಕನ ಪರಿಚಯ ಇದ್ದಿದ್ದರಿಂದ ಆಕ್ಷೇಪಿಸಲಿಲ್ಲ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಇದನ್ನೂ ಓದಿ: ‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

ಈ ಬಗ್ಗೆ ಚತ್ತೀಸ್‌ಘಡ ಮುಖ್ಯಮಂತ್ರಿ ಭೂಪೇಶ್ ಬಾಘೆಲ್, “ರಾಜ್ಯ ಸರ್ಕಾರದ ಹೆಲಿಕಾಪ್ಟರ್‌ನಲ್ಲಿ ಪ್ರೀ ವೆಡ್ಡಿಂಗ್‌ ಚಿತ್ರೀಕರಣದ ಘಟನೆ ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಬೇಕೆಂದು ನಾನು ಬಯಸುತ್ತೇನೆ. ಅಲ್ಲದೆ, ಈ ವಿಷಯದ ಬಗ್ಗೆ ಹೆಚ್ಚು ಗಮನ ಹರಿಸಬೇಡಿ. ದಂಪತಿಗೆ ಸಂತೋಷದ ದಾಂಪತ್ಯ ಜೀವನವನ್ನು ನಾನು ಬಯಸುತ್ತೇನೆ. ಸಂತೋಷವಾಗಿರಿ” ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರದ ಈ ಕ್ರಮದಿಂದ ಧರ್ಮನಿರಪೇಕ್ಷತೆಗೆ ಕತ್ತರಿ – ಡಾ.ಬಿ.ಪಿ.ಮಹೇಶ್‌ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...