Homeಮುಖಪುಟಭದ್ರತಾ ನಿಯಮ ಉಲ್ಲಂಘನೆ - ಮುಖ್ಯಮಂತ್ರಿಯ ಹೆಲಿಕಾಪ್ಟರ್‌‌ನಲ್ಲಿ ಪ್ರೀ ವೆಡ್ಡಿಂಗ್‌‌ ಶೂಟ್!

ಭದ್ರತಾ ನಿಯಮ ಉಲ್ಲಂಘನೆ – ಮುಖ್ಯಮಂತ್ರಿಯ ಹೆಲಿಕಾಪ್ಟರ್‌‌ನಲ್ಲಿ ಪ್ರೀ ವೆಡ್ಡಿಂಗ್‌‌ ಶೂಟ್!

- Advertisement -
- Advertisement -

ಭಾವಿ ದಂಪತಿಗಳು ತಮ್ಮ ಪ್ರೀ ವೆಡ್ಡಿಂಗ್‌ ಫೋಟೋಶೂಟ್‌‌ ಅನ್ನು ಚತ್ತೀಸ್‌ಘಡ ಮುಖ್ಯಮಂತ್ರಿಯ ಹೆಲಿಕಾಪ್ಟರ್‌‌ನಲ್ಲಿ ನಡೆಸಿದ್ದು ಇದೀಗ ಭಾರಿ ವಿವಾದ ಏರ್ಪಟ್ಟಿದೆ. ಫೋಟೋಶೂಟ್‌ಗೆ ರಾಜ್ಯದ ಹೆಲಿಕಾಪ್ಟರ್‌ನಲ್ಲಿ ಕೂತು ಪೋಸ್ ನೀಡುತ್ತಿರುವ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಚಾಲಕ ಯೋಗೇಶ್ವರ್ ಸಾಯಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಯೋಗೇಶ್ವರ್‌‌ ಸಾಯಿ ವರನ ಸ್ನೇಹಿತನಾಗಿದ್ದು, ರಾಜ್ಯ ಹ್ಯಾಂಗರ್‌ (ವಿಮಾನಗಳನ್ನು ನಿಲ್ಲಿಸುವ ಸ್ಥಳ) ನಲ್ಲಿ ಭಾವಿ ದಂಪತಿಗಳಿಗೆ ಫೋಟೋಶೂಟ್ ಮಾಡಲು ಅವಕಾಶ ನೀಡಿದ್ದರು. ಆದರೆ, ಹ್ಯಾಂಗರ್‌ನ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಾಯಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಗಾಂಧಿಯನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ?- ಸಿದ್ದರಾಮಯ್ಯ ಪ್ರಶ್ನೆ

ಪೊಲೀಸರ ಮಾಹಿತಿಯ ಪ್ರಕಾರ, ದಂಪತಿಗಳು ಜಶ್ಪುರ ಜಿಲ್ಲೆಗೆ ಸೇರಿದವರಾಗಿದ್ದು, ಕಳೆದ ತಿಂಗಳು ರಾಯ್‌ಪುರದ ಪೊಲೀಸ್ ಮಾರ್ಗಗಳಲ್ಲಿರುವ ರಾಜ್ಯ ಹೆಲಿಕಾಪ್ಟರ್ “ಎಡಬ್ಲ್ಯೂ 109 ಪವರ್ ಎಲೈಟ್” ನೊಂದಿಗೆ ಫೋಟೊಶೂಟ್ ಮಾಡಿದ್ದಾರೆ. ಈ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲಾದ ನಂತರ ವಿವಾದಕ್ಕೀಡಾಗಿದೆ.

“ಚಾಲಕ ಯೋಗೇಶ್ವರ್ ಸಾಯಿ ಅವರು ಭದ್ರತಾ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಜನವರಿ 21 ರಂದು ಅನಧಿಕೃತ ಜನರನ್ನು ಹ್ಯಾಂಗರ್‌ಗೆ ಪ್ರವೇಶಿಸಲು ಅನುಕೂಲ ಮಾಡಿಕೊಟ್ಟಿದ್ದಾರೆ” ಎಂದು ರಾಜ್ಯ ನಾಗರಿಕ ವಿಮಾನಯಾನ ವಿಭಾಗದ ನಿರ್ದೇಶಕ ನೀಲಂ ನಾಮದೇವ್ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.

ಜನವರಿ 20 ರಂದು ದಂಪತಿಗಳ  ಪ್ರೀ ವೆಡ್ಡಿಂಗ್ ಚಿತ್ರೀಕರಣ ನಡೆದಿದೆ ಎಂದು ರಾಯ್‌ಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಜಯ್ ಯಾದವ್ ಹೇಳಿದ್ದಾರೆಂದು ಹಿಂದೂಸ್ಥಾನ್ ಟೈಮ್ಸ್ ಉಲ್ಲೇಖಿಸಿದೆ. ವಿಮಾನಯಾನ ವಿಭಾಗದ ಚಾಲಕ ದಂಪತಿಗಳನ್ನು ಒಳಗೆ ಕರೆದೊಯ್ದಿದ್ದಾರೆ. ಗಾರ್ಡ್‌ಗಳಿಗೆ ಚಾಲಕನ ಪರಿಚಯ ಇದ್ದಿದ್ದರಿಂದ ಆಕ್ಷೇಪಿಸಲಿಲ್ಲ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಇದನ್ನೂ ಓದಿ: ‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

ಈ ಬಗ್ಗೆ ಚತ್ತೀಸ್‌ಘಡ ಮುಖ್ಯಮಂತ್ರಿ ಭೂಪೇಶ್ ಬಾಘೆಲ್, “ರಾಜ್ಯ ಸರ್ಕಾರದ ಹೆಲಿಕಾಪ್ಟರ್‌ನಲ್ಲಿ ಪ್ರೀ ವೆಡ್ಡಿಂಗ್‌ ಚಿತ್ರೀಕರಣದ ಘಟನೆ ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಬೇಕೆಂದು ನಾನು ಬಯಸುತ್ತೇನೆ. ಅಲ್ಲದೆ, ಈ ವಿಷಯದ ಬಗ್ಗೆ ಹೆಚ್ಚು ಗಮನ ಹರಿಸಬೇಡಿ. ದಂಪತಿಗೆ ಸಂತೋಷದ ದಾಂಪತ್ಯ ಜೀವನವನ್ನು ನಾನು ಬಯಸುತ್ತೇನೆ. ಸಂತೋಷವಾಗಿರಿ” ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರದ ಈ ಕ್ರಮದಿಂದ ಧರ್ಮನಿರಪೇಕ್ಷತೆಗೆ ಕತ್ತರಿ – ಡಾ.ಬಿ.ಪಿ.ಮಹೇಶ್‌ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...