Homeಮುಖಪುಟಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಪೋಸ್ಟರ್‌ಗಳನ್ನು ಹಿಡಿದುಕೊಳ್ಳುವುದು, ಅಂಟಿಸುವುದು, ಘೋಷಣೆಗಳನ್ನು ಕೂಗುವುದು, ಸಾಮಾಜಿಕ  ಜಾಲತಾಣದಲ್ಲಿ ಬರೆಯುವುದು ಸಹ ’ದೇಶದ್ರೋಹ’ ಎಂದು ಪರಿಣಿಸಲಾಗಿದೆ

- Advertisement -
- Advertisement -

ಕಳೆದ ಒಂದು ದಶಕದಲ್ಲಿ ರಾಜಕಾರಣಿಗಳು ಮತ್ತು ಸರ್ಕಾರಗಳ ವಿರುದ್ದ ಟೀಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ 405 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 96% ಪ್ರಕರಣಗಳು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಾಖಲಾಗಿರುವುದಾಗಿದೆ.

ಕಾನೂನು ಸುದ್ದಿ ವೆಬ್‌ಸೈಟ್ ಆಗಿರುವ ’ಆರ್ಟಿಕಲ್ 14’ ಜನವರಿ 1, 2010 ರಿಂದ 2020 ರ ಡಿಸೆಂಬರ್ 31 ರವರೆಗೆ ದಾಖಲಾಗಿರುವ ಎಲ್ಲಾ ದೇಶದ್ರೋಹ ಪ್ರಕರಣಗಳನ್ನು ಕಲೆಹಾಕದೆ. ಆದರೆ ವಿಪರ್ಯಾಸವೆಂದರೆ ಸರ್ಕಾರದ ವಿರುದ್ದದ ಟೀಕೆಗಳು ದೇಶದ್ರೋಹ ಆಗುವುದಿಲ್ಲ ಎಂದು ಕೋರ್ಟುಗಳು ತೀರ್ಪಿತ್ತಿವೆ. ಆದರೂ ದೇಶದ್ರೋಹ ಪ್ರಕರಣಗಳನ್ನು ದಾಖಲಿಸುವ ಪರಿಪಾಠ ಹೆಚ್ಚಾಗಿದೆ.

’ಆರ್ಟಿಕಲ್ 14’ ಸಂಗ್ರಹಿಸಿದ ದತ್ತಾಂಶದ ವಿಶ್ಲೇಷಣೆಯು, “ಪೋಸ್ಟರ್‌ಗಳನ್ನು ಹಿಡಿದುಕೊಳ್ಳುವುದು, ಅಂಟಿಸುವುದು, ಘೋಷಣೆಗಳನ್ನು ಕೂಗುವುದು, ಸಾಮಾಜಿಕ  ಜಾಲತಾಣದಲ್ಲಿ ಬರೆಯುವುದು ಮತ್ತು ಪರಸ್ಪರ ವೈಯಕ್ತಿಕ ಸಂಭಾಷಣೆಗಳನ್ನು ಸಹ ’ದೇಶದ್ರೋಹ’ ಎಂದು ಪರಿಣಿಸಲಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಯುಪಿಎಯ ಎರಡನೆ ಅವಧಿಗೆ ಹೋಲಿಸಿದರೆ ಎನ್‌ಡಿಎ ಆಡಳಿತದಲ್ಲಿ ದೇಶದ್ರೋಹ ಪ್ರಕರಣಗಳನ್ನು ದಾಖಲಿಸುವುದು 28% ಹೆಚ್ಚಾಗಿದೆ. ಸಿಎಎ-ಎನ್‌ಆರ್‌ಸಿ ಆಂದೋಲನಗಳ ಸಂದರ್ಭದಲ್ಲಿ, ಹತ್ರಾಸ್ ಅತ್ಯಾಚಾರದ ನಂತರ ಹಲವಾರು ದೇಶದ್ರೋಹದ ಪ್ರಕರಣಗಳು ದಾಖಲಾಗಿವೆ.

ಮೋದಿ ಸರ್ಕಾರದ ಮೊದಲ ಆರು ವರ್ಷಗಳಲ್ಲಿ 519 ದೇಶದ್ರೋಹ ಪ್ರಕರಣಗಳು ದಾಖಲಾಗಿದೆ. 2010 ರಿಂದ ಮೇ 2014 ರವರೆಗೆ ಯುಪಿಎ ಸರ್ಕಾರದ ಅವಧಿಯಲ್ಲಿ 279 ದೇಶದ್ರೋಹ ಪ್ರಕರಣಗಳು ದಾಖಲಾಗಿದ್ದವು. ಈ 279 ಪ್ರಕರಣಗಳಲ್ಲಿ 39% ಪ್ರಕರಣಗಳು ತಮಿಳುನಾಡಿನ ಕೂಡಂಕುಲಂನ ಪರಮಾಣು ವಿದ್ಯುತ್ ಸ್ಥಾವರ ವಿರುದ್ಧ ನಡೆದ ಹೋರಾಟ ನಡೆದಾಗ ದಾಖಲಾದವುಗಳು ಮತ್ತು ಭಾರತದ ಕೆಲವು ಪ್ರದೇಶಗಳಲ್ಲಿ ಮಾವೋವಾದದ ಹೆಸರಲ್ಲಿ ದಾಖಲಾದ ಪ್ರಕರಣಗಳಾಗಿದೆ.

ಪ್ರಸ್ತುತ ಸಂಗ್ರಹಿಸಿದ ಮಾಹಿತಿಯಂತೆ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ 6 ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಲಾಗಿದೆ. ಹತ್ರಾಸ್ ಅತ್ಯಾಚಾರದ ನಂತರ 22 ಪ್ರಕರಣಗಳು ಮತ್ತು ಸಿಎಎ-ಎನ್ಆರ್‌ಸಿ ಪ್ರತಿಭಟನೆಯ ಸಂದರ್ಭದಲ್ಲಿ 25 ದೇಶದ್ರೋಹದ ಪ್ರಕರಣಗಳು ದಾಖಲಾಗಿವೆ. ಇವುಗಳು ಮಾತ್ರವಲ್ಲದೆ, ಪುಲ್ವಾಮಾ ದಾಳಿಯ ನಂತರ 27 ಪ್ರಕರಣಗಳು ದಾಖಲಾಗಿವೆ. ಸಿಎಎ-ಎನ್ಆರ್‌ಸಿ ವಿರುದ್ದ ಪ್ರತಿಭಟನೆ ನಡೆದಾಗ ದಾಖಲಾದ 25 ಪ್ರಕರಣಗಳಲ್ಲಿ 22 ಪ್ರಕರಣಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲೆ ದಾಖಲಾಗಿವೆ. ಪುಲ್ವಾಮಾ ದಾಳಿಯ ನಂತರ ದಾಖಲಾದ 27 ಪ್ರಕರಣಗಳಲ್ಲಿ 26 ಪ್ರಕರಣಗಳು ದಾಖಲಾಗಿದ್ದು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ.

ಇದನ್ನೂ ಓದಿ: ದೇಶದ್ರೋಹ ಎನ್ನಲಾಗುವುದಿಲ್ಲ: ಯುಎಪಿಎ ಅಡಿ ಬಂಧಿತರಾಗಿದ್ದ ಕೇರಳದ ಯುವಕರಿಗೆ ಜಾಮೀನು

ಬಿಹಾರ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಜಾರ್ಖಂಡ್‌ ಒಟ್ಟು ಐದು ರಾಜ್ಯಗಳಲ್ಲಿ ಕಳೆದ 10 ವರ್ಷಗಳಲ್ಲಿ 65% ದೇಶದ್ರೋಹ ಪ್ರಕರಣಗಳನ್ನು ದಾಖಲಿಸಲಾಗಿದೆ. ಇವುಗಳಲ್ಲಿ ಹೆಚ್ಚಿನ ರಾಜ್ಯಗಳು ಬಿಜೆಪಿ ತೆಕ್ಕೆಯಲ್ಲಿದೆ. ಇವುಗಳಲ್ಲಿ 30% ಪ್ರಕರಣಗಳು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(UAPA), ಸಾರ್ವಜನಿಕ ಆಸ್ತಿಗೆ ಹಾನಿ (ತಡೆಗಟ್ಟುವಿಕೆ) ಕಾಯ್ದೆ, ಮತ್ತು ರಾಷ್ಟ್ರೀಯ ಗೌರವ ಮತ್ತು ಹಿತಾಸಕ್ತಿಗೆ ಹಾನಿಯಾಗುವುದನ್ನು ತಡೆಗಟ್ಟುವ ಕಾಯಿದೆಗಳನ್ನು ದೇಶದ್ರೋಹದ ಆರೋಪದ ಜೊತೆಗೆ ದಾಖಲಿಸಲಾಗಿದೆ.

ದೇಶದ್ರೋಹ ಎಂಬುದು ತನ್ನ ವಿರುದ್ದ ಟೀಕೆ ಮತ್ತು ವಿರೋಧ ಮಾಡುವವರ ವಿರುದ್ದ ದಾಖಲಿಸಬಹುದಾದ ಸರ್ಕಾರಗಳಿಗೆ ಅತಿ ಪ್ರಿಯವಾದ ಒಂದು ಕಾನೂನಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಯುಪಿಎ ಎರಡೂ ಆಡಳಿತದ ಅವಧಿಯಲ್ಲಿ ಇದು ಸಂಭವಿಸಿದೆ. ಅಸೀಮ್ ತ್ರಿವೇದಿ, ಅರುಂಧತಿ ರಾಯ್ ಯುಪಿಎ ಸರ್ಕಾರವು ದೇಶದ್ರೋಹಿ ಎಂದು ಹಣೆಪಟ್ಟಿ ಕಟ್ಟಿದ ಕೆಲವು ವ್ಯಕ್ತಿಗಳಾಗಿದ್ದಾರೆ.

ಇದನ್ನೂ ಓದಿ: ತುರ್ತು ಪರಿಸ್ಥಿತಿಯ ಆರಾಧಕರ ಮುದ್ದಿನ ಕಾನೂನು-‘ದೇಶದ್ರೋಹ’

ಗಣರಾಜ್ಯೋತ್ಸವದಂದು ಸಂಭವಿಸಿದ ಅಹಿತಕರ ಘಟನೆಯ ನಂತರ ಕಾಂಗ್ರೆಸ್ ಸಂಸದ ಶಶಿ ತರೂರ್, ಇಂಡಿಯಾ ಟುಡೇ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಮತ್ತು ನ್ಯಾಷನಲ್‌ ಹೆರಾಲ್ಡ್‌ನ ಹಿರಿಯ ಸಲಹಾ ಸಂಪಾದಕ ಮೃಣಾಲ್ ಪಾಂಡೆ ಮುಂತಾದವರ ಮೇಲೆ ದೇಶದ್ರೋಹದ ಪ್ರಕರಣಗಳು ದಾಖಲಾಗಿದೆ. ಇವರುಗಳ ಜೊತೆಗೆ, ನ್ಯಾಷನಲ್ ಹೆರಾಲ್ಡ್‌ನ ಸಂಪಾದಕ ಜಾಫರ್ ಆಗಾ, ದಿ ಕಾರವಾನ್‌ನ ಸಂಸ್ಥಾಪಕ ಮತ್ತು ಸಂಪಾದಕ ಪರೇಶ್ ನಾಥ್ ಮತ್ತು ಅನಂತ್ ನಾಥ್, ಮತ್ತು ಕಾರ್ಯನಿರ್ವಾಹಕ ಸಂಪಾದಕ ವಿನೋದ್ ಕೆ ಜೋಸ್ ಅವರ ಮೇಲೆ ಕೂಡಾ ಸುಳ್ಳು ಸುದ್ದಿಗಳನ್ನು ವರದಿ ಮಾಡಿದ್ದಾರೆ ಎಂಬ ಆರೋಪದ ಮೇಲೆ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಲಾಗಿದೆ.

‘ಆರ್ಟಿಕಲ್ 14’ ವೆಬ್‌ಸೈಟ್ ಪ್ರಕಾರ, ಪ್ರಧಾನಿ ಮೋದಿಯವರ ವಿರುದ್ಧ ‘ಅನುಚಿತ’ ಅಥವಾ ‘ಅವಮಾನಕರ’ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಸುಮಾರು 149 ಜನರ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಿದೆ. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಟೀಕಿಸಿದ್ದಕ್ಕಾಗಿ ಒಟ್ಟು 144 ಪ್ರಕರಣಗಳು ದಾಖಲಾಗಿದೆ.

ಇದನ್ನೂ ಓದಿ: ತಿಲಕ್‌ ಮತ್ತು ಗಾಂಧಿ ಮೇಲೆ ದೇಶದ್ರೋಹದ ಪ್ರಕರಣಗಳು – ಮೃದುಲಾ ಮುಖರ್ಜಿ ಭಾಷಣ ಭಾಗ-2

ರಾಜದ್ರೋಹ ಕಾಯ್ದೆಯ ಇತಿಹಾಸ : ತಿಲಕ್‌ & ಗಾಂಧಿ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿತ್ತೇಕೆ?

ಕೃಪೆ: ಜನಪತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...