Homeಮುಖಪುಟಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಪೋಸ್ಟರ್‌ಗಳನ್ನು ಹಿಡಿದುಕೊಳ್ಳುವುದು, ಅಂಟಿಸುವುದು, ಘೋಷಣೆಗಳನ್ನು ಕೂಗುವುದು, ಸಾಮಾಜಿಕ  ಜಾಲತಾಣದಲ್ಲಿ ಬರೆಯುವುದು ಸಹ ’ದೇಶದ್ರೋಹ’ ಎಂದು ಪರಿಣಿಸಲಾಗಿದೆ

- Advertisement -
- Advertisement -

ಕಳೆದ ಒಂದು ದಶಕದಲ್ಲಿ ರಾಜಕಾರಣಿಗಳು ಮತ್ತು ಸರ್ಕಾರಗಳ ವಿರುದ್ದ ಟೀಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ 405 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 96% ಪ್ರಕರಣಗಳು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಾಖಲಾಗಿರುವುದಾಗಿದೆ.

ಕಾನೂನು ಸುದ್ದಿ ವೆಬ್‌ಸೈಟ್ ಆಗಿರುವ ’ಆರ್ಟಿಕಲ್ 14’ ಜನವರಿ 1, 2010 ರಿಂದ 2020 ರ ಡಿಸೆಂಬರ್ 31 ರವರೆಗೆ ದಾಖಲಾಗಿರುವ ಎಲ್ಲಾ ದೇಶದ್ರೋಹ ಪ್ರಕರಣಗಳನ್ನು ಕಲೆಹಾಕದೆ. ಆದರೆ ವಿಪರ್ಯಾಸವೆಂದರೆ ಸರ್ಕಾರದ ವಿರುದ್ದದ ಟೀಕೆಗಳು ದೇಶದ್ರೋಹ ಆಗುವುದಿಲ್ಲ ಎಂದು ಕೋರ್ಟುಗಳು ತೀರ್ಪಿತ್ತಿವೆ. ಆದರೂ ದೇಶದ್ರೋಹ ಪ್ರಕರಣಗಳನ್ನು ದಾಖಲಿಸುವ ಪರಿಪಾಠ ಹೆಚ್ಚಾಗಿದೆ.

’ಆರ್ಟಿಕಲ್ 14’ ಸಂಗ್ರಹಿಸಿದ ದತ್ತಾಂಶದ ವಿಶ್ಲೇಷಣೆಯು, “ಪೋಸ್ಟರ್‌ಗಳನ್ನು ಹಿಡಿದುಕೊಳ್ಳುವುದು, ಅಂಟಿಸುವುದು, ಘೋಷಣೆಗಳನ್ನು ಕೂಗುವುದು, ಸಾಮಾಜಿಕ  ಜಾಲತಾಣದಲ್ಲಿ ಬರೆಯುವುದು ಮತ್ತು ಪರಸ್ಪರ ವೈಯಕ್ತಿಕ ಸಂಭಾಷಣೆಗಳನ್ನು ಸಹ ’ದೇಶದ್ರೋಹ’ ಎಂದು ಪರಿಣಿಸಲಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಯುಪಿಎಯ ಎರಡನೆ ಅವಧಿಗೆ ಹೋಲಿಸಿದರೆ ಎನ್‌ಡಿಎ ಆಡಳಿತದಲ್ಲಿ ದೇಶದ್ರೋಹ ಪ್ರಕರಣಗಳನ್ನು ದಾಖಲಿಸುವುದು 28% ಹೆಚ್ಚಾಗಿದೆ. ಸಿಎಎ-ಎನ್‌ಆರ್‌ಸಿ ಆಂದೋಲನಗಳ ಸಂದರ್ಭದಲ್ಲಿ, ಹತ್ರಾಸ್ ಅತ್ಯಾಚಾರದ ನಂತರ ಹಲವಾರು ದೇಶದ್ರೋಹದ ಪ್ರಕರಣಗಳು ದಾಖಲಾಗಿವೆ.

ಮೋದಿ ಸರ್ಕಾರದ ಮೊದಲ ಆರು ವರ್ಷಗಳಲ್ಲಿ 519 ದೇಶದ್ರೋಹ ಪ್ರಕರಣಗಳು ದಾಖಲಾಗಿದೆ. 2010 ರಿಂದ ಮೇ 2014 ರವರೆಗೆ ಯುಪಿಎ ಸರ್ಕಾರದ ಅವಧಿಯಲ್ಲಿ 279 ದೇಶದ್ರೋಹ ಪ್ರಕರಣಗಳು ದಾಖಲಾಗಿದ್ದವು. ಈ 279 ಪ್ರಕರಣಗಳಲ್ಲಿ 39% ಪ್ರಕರಣಗಳು ತಮಿಳುನಾಡಿನ ಕೂಡಂಕುಲಂನ ಪರಮಾಣು ವಿದ್ಯುತ್ ಸ್ಥಾವರ ವಿರುದ್ಧ ನಡೆದ ಹೋರಾಟ ನಡೆದಾಗ ದಾಖಲಾದವುಗಳು ಮತ್ತು ಭಾರತದ ಕೆಲವು ಪ್ರದೇಶಗಳಲ್ಲಿ ಮಾವೋವಾದದ ಹೆಸರಲ್ಲಿ ದಾಖಲಾದ ಪ್ರಕರಣಗಳಾಗಿದೆ.

ಪ್ರಸ್ತುತ ಸಂಗ್ರಹಿಸಿದ ಮಾಹಿತಿಯಂತೆ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ 6 ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಲಾಗಿದೆ. ಹತ್ರಾಸ್ ಅತ್ಯಾಚಾರದ ನಂತರ 22 ಪ್ರಕರಣಗಳು ಮತ್ತು ಸಿಎಎ-ಎನ್ಆರ್‌ಸಿ ಪ್ರತಿಭಟನೆಯ ಸಂದರ್ಭದಲ್ಲಿ 25 ದೇಶದ್ರೋಹದ ಪ್ರಕರಣಗಳು ದಾಖಲಾಗಿವೆ. ಇವುಗಳು ಮಾತ್ರವಲ್ಲದೆ, ಪುಲ್ವಾಮಾ ದಾಳಿಯ ನಂತರ 27 ಪ್ರಕರಣಗಳು ದಾಖಲಾಗಿವೆ. ಸಿಎಎ-ಎನ್ಆರ್‌ಸಿ ವಿರುದ್ದ ಪ್ರತಿಭಟನೆ ನಡೆದಾಗ ದಾಖಲಾದ 25 ಪ್ರಕರಣಗಳಲ್ಲಿ 22 ಪ್ರಕರಣಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲೆ ದಾಖಲಾಗಿವೆ. ಪುಲ್ವಾಮಾ ದಾಳಿಯ ನಂತರ ದಾಖಲಾದ 27 ಪ್ರಕರಣಗಳಲ್ಲಿ 26 ಪ್ರಕರಣಗಳು ದಾಖಲಾಗಿದ್ದು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ.

ಇದನ್ನೂ ಓದಿ: ದೇಶದ್ರೋಹ ಎನ್ನಲಾಗುವುದಿಲ್ಲ: ಯುಎಪಿಎ ಅಡಿ ಬಂಧಿತರಾಗಿದ್ದ ಕೇರಳದ ಯುವಕರಿಗೆ ಜಾಮೀನು

ಬಿಹಾರ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಜಾರ್ಖಂಡ್‌ ಒಟ್ಟು ಐದು ರಾಜ್ಯಗಳಲ್ಲಿ ಕಳೆದ 10 ವರ್ಷಗಳಲ್ಲಿ 65% ದೇಶದ್ರೋಹ ಪ್ರಕರಣಗಳನ್ನು ದಾಖಲಿಸಲಾಗಿದೆ. ಇವುಗಳಲ್ಲಿ ಹೆಚ್ಚಿನ ರಾಜ್ಯಗಳು ಬಿಜೆಪಿ ತೆಕ್ಕೆಯಲ್ಲಿದೆ. ಇವುಗಳಲ್ಲಿ 30% ಪ್ರಕರಣಗಳು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(UAPA), ಸಾರ್ವಜನಿಕ ಆಸ್ತಿಗೆ ಹಾನಿ (ತಡೆಗಟ್ಟುವಿಕೆ) ಕಾಯ್ದೆ, ಮತ್ತು ರಾಷ್ಟ್ರೀಯ ಗೌರವ ಮತ್ತು ಹಿತಾಸಕ್ತಿಗೆ ಹಾನಿಯಾಗುವುದನ್ನು ತಡೆಗಟ್ಟುವ ಕಾಯಿದೆಗಳನ್ನು ದೇಶದ್ರೋಹದ ಆರೋಪದ ಜೊತೆಗೆ ದಾಖಲಿಸಲಾಗಿದೆ.

ದೇಶದ್ರೋಹ ಎಂಬುದು ತನ್ನ ವಿರುದ್ದ ಟೀಕೆ ಮತ್ತು ವಿರೋಧ ಮಾಡುವವರ ವಿರುದ್ದ ದಾಖಲಿಸಬಹುದಾದ ಸರ್ಕಾರಗಳಿಗೆ ಅತಿ ಪ್ರಿಯವಾದ ಒಂದು ಕಾನೂನಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಯುಪಿಎ ಎರಡೂ ಆಡಳಿತದ ಅವಧಿಯಲ್ಲಿ ಇದು ಸಂಭವಿಸಿದೆ. ಅಸೀಮ್ ತ್ರಿವೇದಿ, ಅರುಂಧತಿ ರಾಯ್ ಯುಪಿಎ ಸರ್ಕಾರವು ದೇಶದ್ರೋಹಿ ಎಂದು ಹಣೆಪಟ್ಟಿ ಕಟ್ಟಿದ ಕೆಲವು ವ್ಯಕ್ತಿಗಳಾಗಿದ್ದಾರೆ.

ಇದನ್ನೂ ಓದಿ: ತುರ್ತು ಪರಿಸ್ಥಿತಿಯ ಆರಾಧಕರ ಮುದ್ದಿನ ಕಾನೂನು-‘ದೇಶದ್ರೋಹ’

ಗಣರಾಜ್ಯೋತ್ಸವದಂದು ಸಂಭವಿಸಿದ ಅಹಿತಕರ ಘಟನೆಯ ನಂತರ ಕಾಂಗ್ರೆಸ್ ಸಂಸದ ಶಶಿ ತರೂರ್, ಇಂಡಿಯಾ ಟುಡೇ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಮತ್ತು ನ್ಯಾಷನಲ್‌ ಹೆರಾಲ್ಡ್‌ನ ಹಿರಿಯ ಸಲಹಾ ಸಂಪಾದಕ ಮೃಣಾಲ್ ಪಾಂಡೆ ಮುಂತಾದವರ ಮೇಲೆ ದೇಶದ್ರೋಹದ ಪ್ರಕರಣಗಳು ದಾಖಲಾಗಿದೆ. ಇವರುಗಳ ಜೊತೆಗೆ, ನ್ಯಾಷನಲ್ ಹೆರಾಲ್ಡ್‌ನ ಸಂಪಾದಕ ಜಾಫರ್ ಆಗಾ, ದಿ ಕಾರವಾನ್‌ನ ಸಂಸ್ಥಾಪಕ ಮತ್ತು ಸಂಪಾದಕ ಪರೇಶ್ ನಾಥ್ ಮತ್ತು ಅನಂತ್ ನಾಥ್, ಮತ್ತು ಕಾರ್ಯನಿರ್ವಾಹಕ ಸಂಪಾದಕ ವಿನೋದ್ ಕೆ ಜೋಸ್ ಅವರ ಮೇಲೆ ಕೂಡಾ ಸುಳ್ಳು ಸುದ್ದಿಗಳನ್ನು ವರದಿ ಮಾಡಿದ್ದಾರೆ ಎಂಬ ಆರೋಪದ ಮೇಲೆ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಲಾಗಿದೆ.

‘ಆರ್ಟಿಕಲ್ 14’ ವೆಬ್‌ಸೈಟ್ ಪ್ರಕಾರ, ಪ್ರಧಾನಿ ಮೋದಿಯವರ ವಿರುದ್ಧ ‘ಅನುಚಿತ’ ಅಥವಾ ‘ಅವಮಾನಕರ’ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಸುಮಾರು 149 ಜನರ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಿದೆ. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಟೀಕಿಸಿದ್ದಕ್ಕಾಗಿ ಒಟ್ಟು 144 ಪ್ರಕರಣಗಳು ದಾಖಲಾಗಿದೆ.

ಇದನ್ನೂ ಓದಿ: ತಿಲಕ್‌ ಮತ್ತು ಗಾಂಧಿ ಮೇಲೆ ದೇಶದ್ರೋಹದ ಪ್ರಕರಣಗಳು – ಮೃದುಲಾ ಮುಖರ್ಜಿ ಭಾಷಣ ಭಾಗ-2

ರಾಜದ್ರೋಹ ಕಾಯ್ದೆಯ ಇತಿಹಾಸ : ತಿಲಕ್‌ & ಗಾಂಧಿ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿತ್ತೇಕೆ?

ಕೃಪೆ: ಜನಪತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...