Homeಮುಖಪುಟಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಪೋಸ್ಟರ್‌ಗಳನ್ನು ಹಿಡಿದುಕೊಳ್ಳುವುದು, ಅಂಟಿಸುವುದು, ಘೋಷಣೆಗಳನ್ನು ಕೂಗುವುದು, ಸಾಮಾಜಿಕ  ಜಾಲತಾಣದಲ್ಲಿ ಬರೆಯುವುದು ಸಹ ’ದೇಶದ್ರೋಹ’ ಎಂದು ಪರಿಣಿಸಲಾಗಿದೆ

- Advertisement -
- Advertisement -

ಕಳೆದ ಒಂದು ದಶಕದಲ್ಲಿ ರಾಜಕಾರಣಿಗಳು ಮತ್ತು ಸರ್ಕಾರಗಳ ವಿರುದ್ದ ಟೀಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ 405 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 96% ಪ್ರಕರಣಗಳು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಾಖಲಾಗಿರುವುದಾಗಿದೆ.

ಕಾನೂನು ಸುದ್ದಿ ವೆಬ್‌ಸೈಟ್ ಆಗಿರುವ ’ಆರ್ಟಿಕಲ್ 14’ ಜನವರಿ 1, 2010 ರಿಂದ 2020 ರ ಡಿಸೆಂಬರ್ 31 ರವರೆಗೆ ದಾಖಲಾಗಿರುವ ಎಲ್ಲಾ ದೇಶದ್ರೋಹ ಪ್ರಕರಣಗಳನ್ನು ಕಲೆಹಾಕದೆ. ಆದರೆ ವಿಪರ್ಯಾಸವೆಂದರೆ ಸರ್ಕಾರದ ವಿರುದ್ದದ ಟೀಕೆಗಳು ದೇಶದ್ರೋಹ ಆಗುವುದಿಲ್ಲ ಎಂದು ಕೋರ್ಟುಗಳು ತೀರ್ಪಿತ್ತಿವೆ. ಆದರೂ ದೇಶದ್ರೋಹ ಪ್ರಕರಣಗಳನ್ನು ದಾಖಲಿಸುವ ಪರಿಪಾಠ ಹೆಚ್ಚಾಗಿದೆ.

’ಆರ್ಟಿಕಲ್ 14’ ಸಂಗ್ರಹಿಸಿದ ದತ್ತಾಂಶದ ವಿಶ್ಲೇಷಣೆಯು, “ಪೋಸ್ಟರ್‌ಗಳನ್ನು ಹಿಡಿದುಕೊಳ್ಳುವುದು, ಅಂಟಿಸುವುದು, ಘೋಷಣೆಗಳನ್ನು ಕೂಗುವುದು, ಸಾಮಾಜಿಕ  ಜಾಲತಾಣದಲ್ಲಿ ಬರೆಯುವುದು ಮತ್ತು ಪರಸ್ಪರ ವೈಯಕ್ತಿಕ ಸಂಭಾಷಣೆಗಳನ್ನು ಸಹ ’ದೇಶದ್ರೋಹ’ ಎಂದು ಪರಿಣಿಸಲಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಯುಪಿಎಯ ಎರಡನೆ ಅವಧಿಗೆ ಹೋಲಿಸಿದರೆ ಎನ್‌ಡಿಎ ಆಡಳಿತದಲ್ಲಿ ದೇಶದ್ರೋಹ ಪ್ರಕರಣಗಳನ್ನು ದಾಖಲಿಸುವುದು 28% ಹೆಚ್ಚಾಗಿದೆ. ಸಿಎಎ-ಎನ್‌ಆರ್‌ಸಿ ಆಂದೋಲನಗಳ ಸಂದರ್ಭದಲ್ಲಿ, ಹತ್ರಾಸ್ ಅತ್ಯಾಚಾರದ ನಂತರ ಹಲವಾರು ದೇಶದ್ರೋಹದ ಪ್ರಕರಣಗಳು ದಾಖಲಾಗಿವೆ.

ಮೋದಿ ಸರ್ಕಾರದ ಮೊದಲ ಆರು ವರ್ಷಗಳಲ್ಲಿ 519 ದೇಶದ್ರೋಹ ಪ್ರಕರಣಗಳು ದಾಖಲಾಗಿದೆ. 2010 ರಿಂದ ಮೇ 2014 ರವರೆಗೆ ಯುಪಿಎ ಸರ್ಕಾರದ ಅವಧಿಯಲ್ಲಿ 279 ದೇಶದ್ರೋಹ ಪ್ರಕರಣಗಳು ದಾಖಲಾಗಿದ್ದವು. ಈ 279 ಪ್ರಕರಣಗಳಲ್ಲಿ 39% ಪ್ರಕರಣಗಳು ತಮಿಳುನಾಡಿನ ಕೂಡಂಕುಲಂನ ಪರಮಾಣು ವಿದ್ಯುತ್ ಸ್ಥಾವರ ವಿರುದ್ಧ ನಡೆದ ಹೋರಾಟ ನಡೆದಾಗ ದಾಖಲಾದವುಗಳು ಮತ್ತು ಭಾರತದ ಕೆಲವು ಪ್ರದೇಶಗಳಲ್ಲಿ ಮಾವೋವಾದದ ಹೆಸರಲ್ಲಿ ದಾಖಲಾದ ಪ್ರಕರಣಗಳಾಗಿದೆ.

ಪ್ರಸ್ತುತ ಸಂಗ್ರಹಿಸಿದ ಮಾಹಿತಿಯಂತೆ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ 6 ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಲಾಗಿದೆ. ಹತ್ರಾಸ್ ಅತ್ಯಾಚಾರದ ನಂತರ 22 ಪ್ರಕರಣಗಳು ಮತ್ತು ಸಿಎಎ-ಎನ್ಆರ್‌ಸಿ ಪ್ರತಿಭಟನೆಯ ಸಂದರ್ಭದಲ್ಲಿ 25 ದೇಶದ್ರೋಹದ ಪ್ರಕರಣಗಳು ದಾಖಲಾಗಿವೆ. ಇವುಗಳು ಮಾತ್ರವಲ್ಲದೆ, ಪುಲ್ವಾಮಾ ದಾಳಿಯ ನಂತರ 27 ಪ್ರಕರಣಗಳು ದಾಖಲಾಗಿವೆ. ಸಿಎಎ-ಎನ್ಆರ್‌ಸಿ ವಿರುದ್ದ ಪ್ರತಿಭಟನೆ ನಡೆದಾಗ ದಾಖಲಾದ 25 ಪ್ರಕರಣಗಳಲ್ಲಿ 22 ಪ್ರಕರಣಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲೆ ದಾಖಲಾಗಿವೆ. ಪುಲ್ವಾಮಾ ದಾಳಿಯ ನಂತರ ದಾಖಲಾದ 27 ಪ್ರಕರಣಗಳಲ್ಲಿ 26 ಪ್ರಕರಣಗಳು ದಾಖಲಾಗಿದ್ದು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ.

ಇದನ್ನೂ ಓದಿ: ದೇಶದ್ರೋಹ ಎನ್ನಲಾಗುವುದಿಲ್ಲ: ಯುಎಪಿಎ ಅಡಿ ಬಂಧಿತರಾಗಿದ್ದ ಕೇರಳದ ಯುವಕರಿಗೆ ಜಾಮೀನು

ಬಿಹಾರ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಜಾರ್ಖಂಡ್‌ ಒಟ್ಟು ಐದು ರಾಜ್ಯಗಳಲ್ಲಿ ಕಳೆದ 10 ವರ್ಷಗಳಲ್ಲಿ 65% ದೇಶದ್ರೋಹ ಪ್ರಕರಣಗಳನ್ನು ದಾಖಲಿಸಲಾಗಿದೆ. ಇವುಗಳಲ್ಲಿ ಹೆಚ್ಚಿನ ರಾಜ್ಯಗಳು ಬಿಜೆಪಿ ತೆಕ್ಕೆಯಲ್ಲಿದೆ. ಇವುಗಳಲ್ಲಿ 30% ಪ್ರಕರಣಗಳು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(UAPA), ಸಾರ್ವಜನಿಕ ಆಸ್ತಿಗೆ ಹಾನಿ (ತಡೆಗಟ್ಟುವಿಕೆ) ಕಾಯ್ದೆ, ಮತ್ತು ರಾಷ್ಟ್ರೀಯ ಗೌರವ ಮತ್ತು ಹಿತಾಸಕ್ತಿಗೆ ಹಾನಿಯಾಗುವುದನ್ನು ತಡೆಗಟ್ಟುವ ಕಾಯಿದೆಗಳನ್ನು ದೇಶದ್ರೋಹದ ಆರೋಪದ ಜೊತೆಗೆ ದಾಖಲಿಸಲಾಗಿದೆ.

ದೇಶದ್ರೋಹ ಎಂಬುದು ತನ್ನ ವಿರುದ್ದ ಟೀಕೆ ಮತ್ತು ವಿರೋಧ ಮಾಡುವವರ ವಿರುದ್ದ ದಾಖಲಿಸಬಹುದಾದ ಸರ್ಕಾರಗಳಿಗೆ ಅತಿ ಪ್ರಿಯವಾದ ಒಂದು ಕಾನೂನಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಯುಪಿಎ ಎರಡೂ ಆಡಳಿತದ ಅವಧಿಯಲ್ಲಿ ಇದು ಸಂಭವಿಸಿದೆ. ಅಸೀಮ್ ತ್ರಿವೇದಿ, ಅರುಂಧತಿ ರಾಯ್ ಯುಪಿಎ ಸರ್ಕಾರವು ದೇಶದ್ರೋಹಿ ಎಂದು ಹಣೆಪಟ್ಟಿ ಕಟ್ಟಿದ ಕೆಲವು ವ್ಯಕ್ತಿಗಳಾಗಿದ್ದಾರೆ.

ಇದನ್ನೂ ಓದಿ: ತುರ್ತು ಪರಿಸ್ಥಿತಿಯ ಆರಾಧಕರ ಮುದ್ದಿನ ಕಾನೂನು-‘ದೇಶದ್ರೋಹ’

ಗಣರಾಜ್ಯೋತ್ಸವದಂದು ಸಂಭವಿಸಿದ ಅಹಿತಕರ ಘಟನೆಯ ನಂತರ ಕಾಂಗ್ರೆಸ್ ಸಂಸದ ಶಶಿ ತರೂರ್, ಇಂಡಿಯಾ ಟುಡೇ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಮತ್ತು ನ್ಯಾಷನಲ್‌ ಹೆರಾಲ್ಡ್‌ನ ಹಿರಿಯ ಸಲಹಾ ಸಂಪಾದಕ ಮೃಣಾಲ್ ಪಾಂಡೆ ಮುಂತಾದವರ ಮೇಲೆ ದೇಶದ್ರೋಹದ ಪ್ರಕರಣಗಳು ದಾಖಲಾಗಿದೆ. ಇವರುಗಳ ಜೊತೆಗೆ, ನ್ಯಾಷನಲ್ ಹೆರಾಲ್ಡ್‌ನ ಸಂಪಾದಕ ಜಾಫರ್ ಆಗಾ, ದಿ ಕಾರವಾನ್‌ನ ಸಂಸ್ಥಾಪಕ ಮತ್ತು ಸಂಪಾದಕ ಪರೇಶ್ ನಾಥ್ ಮತ್ತು ಅನಂತ್ ನಾಥ್, ಮತ್ತು ಕಾರ್ಯನಿರ್ವಾಹಕ ಸಂಪಾದಕ ವಿನೋದ್ ಕೆ ಜೋಸ್ ಅವರ ಮೇಲೆ ಕೂಡಾ ಸುಳ್ಳು ಸುದ್ದಿಗಳನ್ನು ವರದಿ ಮಾಡಿದ್ದಾರೆ ಎಂಬ ಆರೋಪದ ಮೇಲೆ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಲಾಗಿದೆ.

‘ಆರ್ಟಿಕಲ್ 14’ ವೆಬ್‌ಸೈಟ್ ಪ್ರಕಾರ, ಪ್ರಧಾನಿ ಮೋದಿಯವರ ವಿರುದ್ಧ ‘ಅನುಚಿತ’ ಅಥವಾ ‘ಅವಮಾನಕರ’ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಸುಮಾರು 149 ಜನರ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಿದೆ. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಟೀಕಿಸಿದ್ದಕ್ಕಾಗಿ ಒಟ್ಟು 144 ಪ್ರಕರಣಗಳು ದಾಖಲಾಗಿದೆ.

ಇದನ್ನೂ ಓದಿ: ತಿಲಕ್‌ ಮತ್ತು ಗಾಂಧಿ ಮೇಲೆ ದೇಶದ್ರೋಹದ ಪ್ರಕರಣಗಳು – ಮೃದುಲಾ ಮುಖರ್ಜಿ ಭಾಷಣ ಭಾಗ-2

ರಾಜದ್ರೋಹ ಕಾಯ್ದೆಯ ಇತಿಹಾಸ : ತಿಲಕ್‌ & ಗಾಂಧಿ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿತ್ತೇಕೆ?

ಕೃಪೆ: ಜನಪತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...